Subscribe to Updates
Get the latest creative news from FooBar about art, design and business.
Author: kannadanewsnow09
ಪ್ಯಾರಿಸ್ : ಮಹಿಳೆಯರ 50 ಕೆಜಿ ವಿಭಾಗದಲ್ಲಿ ಅನುಮತಿಸಲಾದ ಮಿತಿಗಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ನಿಂದ ಆಘಾತದಿಂದ ಅನರ್ಹಗೊಂಡ ನಂತರ ತಮ್ಮನ್ನು ಭೇಟಿಯಾದ ಭಾರತೀಯ ತರಬೇತುದಾರರಿಗೆ “ಇದು ಆಟದ ಒಂದು ಭಾಗವಾಗಿದೆ” ಎಂದು ಧೈರ್ಯಶಾಲಿ ವಿನೇಶ್ ಫೋಗಟ್ ಬುಧವಾರ ಇಲ್ಲಿ ನಡೆದ ಭಾರತೀಯ ತರಬೇತುದಾರರಿಗೆ ತಿಳಿಸಿದರು. ಮಹಿಳಾ ರಾಷ್ಟ್ರೀಯ ತರಬೇತುದಾರ ವೀರೇಂದ್ರ ದಹಿಯಾ ಮತ್ತು ಮಂಜೀತ್ ರಾಣಿ ಮಂಗಳವಾರ ನಡೆದ ಆರಂಭಿಕ ಸುತ್ತಿನಲ್ಲಿ ವಿಶ್ವದ ನಂ.1 ಮತ್ತು ಹಾಲಿ ಚಾಂಪಿಯನ್ ಯುಯಿ ಸುಸಾಕಿ ಅವರನ್ನು ಸೋಲಿಸುವ ಮೂಲಕ ಕುಸ್ತಿ ಅಖಾಡದಲ್ಲಿ ಸಂಚಲನ ಮೂಡಿಸಿದ್ದ ಉತ್ಸಾಹಿ ಕುಸ್ತಿಪಟುವನ್ನು ಭೇಟಿಯಾದರು. ವಿನೇಶ್ ಅವರ ಪದಕ ವಿಜೇತ ಓಟವನ್ನು ಆಚರಿಸಲು ರಾಷ್ಟ್ರವು ತಯಾರಿ ನಡೆಸುತ್ತಿರುವಾಗ – ಅವರಿಗೆ ಕನಿಷ್ಠ ಬೆಳ್ಳಿ ಪದಕದ ಭರವಸೆ ನೀಡಲಾಯಿತು – ವಿನೇಶ್ ಎರಡನೇ ತೂಕವನ್ನು ಏರಲು ಸಾಧ್ಯವಾಗದಿದ್ದಾಗ ಅವರನ್ನು ಅನರ್ಹಗೊಳಿಸಲಾಯಿತು. ಇದು ಕುಸ್ತಿ ತಂಡದಲ್ಲಿ ಆಘಾತವನ್ನುಂಟು ಮಾಡಿತು. ಸುದ್ದಿ ಹೊರಬಂದ ನಂತರ ಹುಡುಗಿಯರು ತುಂಬಾ ಖಿನ್ನತೆಗೆ…
ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಮನೆ ಬದಲಿಸಿದರೂ ಮತ್ತೆ ಪಡೆಯುವಂತ ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ನೀವು ಮನೆ ಬದಲಿಸಿದ್ದೀರಾ? ಮತ್ತೆ ಗೃಹ ಜ್ಯೋತಿ ಯೋಜನೆ ಪ್ರಯೋಜನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಬಗ್ಗೆ ಮುಂದೆ ಓದಿ. ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಬಿಲ್ನ ಹಣವನ್ನು ಮಕ್ಕಳ ಟ್ಯೂಷನ್ ಫೀಸ್, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿ-ಲಿಂಕ್ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಈ ರೀತಿ ಮತ್ತೆ ಗೃಹ ಜ್ಯೋತಿ ಪ್ರಯೋಜನಕ್ಕೆ ಅರ್ಜಿ ಸಲ್ಲಿಸಿ ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ…
ಬೆಂಗಳೂರು: ನಟ ದರ್ಶನ್ ಅವರು ಜೈಲು ಊಟ ಬೇಡ, ಮನೆಯೂಟ ಬೇಕು ಅಂತ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೇ ಅದಕ್ಕೆ ನಿರಾಕರಿಸಿತ್ತು. ಅಲ್ಲದೇ ಜೈಲು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಹೀಗಾಗಿ ಜೈಲು ಅಧಿಕಾರಿಗಳಿಗೆ ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಆದರೇ ನಟ ದರ್ಶನ್ ಗೆ ಮತ್ತೆ ಶಾಕ್ ಎನ್ನುವಂತೆ ಜೈಲು ಅಧಿಕಾರಿಗಳು ಕೂಡ ಮನೆ ಊಟ ನೀಡಲು ನಿರಾಕರಿಸಿದ್ದಾರೆ. ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದಂತ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅಲ್ಲದೇ ಅವರಿಗೆ ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ ವಕೀಲರಿಗೆ ಸೂಚಿಸಿ, ಆಗಸ್ಟ್.20ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿತ್ತು. ಹೈಕೋರ್ಟ್ ನಿರ್ದೇಶನದಂತೆ ನಟ ದರ್ಶನ್ ಜೈಲು ಊಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ಮನವಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಶೀಲಿಸಿದಂತ ಜೈಲು…
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಒದಗಿಸುವಂತ ಗೃಹ ಆರೋಗ್ಯ ಯೋಜನೆ ಸೆಪ್ಟೆಂಬರ್ ನಿಂದ 8 ಜಿಲ್ಲೆಗಳಲ್ಲಿ ಆರಂಭಗೊಳ್ಳಲಿದೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಲ್ಲಿ ಕೆಲವರು ನಿಯಮಿತವಾಗಿ ಮಾತ್ರೆಗಳನ್ನು ಸೇವಿಸುತ್ತಿಲ್ಲ. ಆರ್ಥಿಕ ಹೊರೆ ಸೇರಿ ವಿವಿಧ ಕಾರಣಗಳಿಂದ ಮಾತ್ರೆಗಳನ್ನು ಖರೀದಿಸುತ್ತಿಲ್ಲ. ಗೃಹ ಆರೋಗ್ಯ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/fire-breaks-out-in-bmtc-electric-bus-in-bengaluru/ https://kannadanewsnow.com/kannada/flower-show-to-begin-at-lalbagh-in-bengaluru-from-tomorrow-heres-how-the-ticket-prices-are/
ಬೆಂಗಳೂರು : ಕನ್ನಡಿಗರಿಗೆ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಸಿಹಿಸುದ್ದಿ ನೀಡಿದ್ದು, ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯ ಎಲ್ಲಾ ನೇಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ರೈಲ್ವೆ ಮಂಡಳಿ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ ಇಲಾಖೆಯಲ್ಲಿ ಮುಂಬಡ್ತಿ ನೀಡಲು ನಡೆಸುತ್ತಿದ್ದ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆಯನ್ನು ಶೀಘ್ರವೇ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡುವ ಆದೇಶ ಹೊರಬೀಳಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಗೆ ಸುತ್ತೋಲೆ ಹೊರಡಿಸುವ ಸಂದರ್ಭದಲ್ಲಿ ಕನ್ನಡಕ್ಕೆ ಅವಕಾಶ ನೀಡಿ ನಂತರ ಹಾಲ್ ಟಿಕೆಟ್ ನಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ತಿಳಿಸಲಾಗಿತ್ತು. ಈ ಬಗ್ಗೆ ರೈಲ್ವೆ ನೌಕರರ ಸಂಘಟನೆಗಳು…
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಬಿಎಂಟಿಸಿ ನೀಡಿದೆ. ಹಾಗಾದ್ರೇ ಬಿಎಂಟಿಸಿ ಸ್ಪಷ್ಟನೆ ಏನು ಎನ್ನುವ ಬಗ್ಗೆ ಮುಂದೆ ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಜಿಸಿಸಿ (Gross Cost Contract) ಆಧಾರದ ಮೇಲೆ 90 ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಿಸುತ್ತಿದೆ. ಸದರಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯು ಗುತ್ತಿಗೆದಾರ ಸಂಸ್ಥೆಯಾದ ಮೆ|| ಎನ್ವಿವಿಎನ್ಎಲ್ / ಜೆಬಿಎಂ ರವರ ಹೊಣೆಗಾರಿಕೆಯಾಗಿರುತ್ತದೆ. ಘಟನೆ ವರದಿ : ದಿನಾಂಕ-05-08-2024 ರಂದು ಸಮಯ ಸುಮಾರು 22.50 ಘಂಟೆಗೆ ಘಟಕ-08 ಕ್ಕೆ ಸಂಬಂಧಿಸಿದ ಮೆ|| ಎನ್ವಿವಿಎನ್ಎಲ್ / ಜೆಬಿಎಂ (ಬೆಂ.ಮ.ಸಾ.ಸಂಸ್ಥೆಯ ಎಲೆಕ್ಟ್ರಿಕ್ ವಾಹನಗಳ ಆಪರೇಟರ್) ವಾಹನ ಸಂಖ್ಯೆ ಕೆಎ 41 ಡಿ 2679 ರಾತ್ರಿ ಪಾಳಿ, ಮಾರ್ಗ ಸಂಖ್ಯೆ 500QA/9 ಟಿನ್ ಫ್ಯಾಕ್ಟರಿಯಿಂದ ಗೊರಗುಂಟೆಪಾಳ್ಯಕ್ಕೆ ಕಾರ್ಯಾಚರಣೆಯಲ್ಲಿದ್ದ ವಾಹನಕ್ಕೆ ಬೆಂಕಿ ತಗುಲಿ ಅವಘಡ ಸಂಭವಿಸಿರುತ್ತದೆ. ಘಟನೆ ವಿವರ : ಕೆಂಪಾಪುರದ ಹತ್ತಿರ…
ನವದೆಹಲಿ: ರಿಯಲ್ ಎಸ್ಟೇಟ್ ಮೇಲೆ ಇತ್ತೀಚೆಗೆ ಪರಿಚಯಿಸಲಾದ ಹೊಸ ಬಂಡವಾಳ ಲಾಭ ತೆರಿಗೆಯನ್ನು ಸರ್ಕಾರ ಸಡಿಲಿಸಿದ ನಂತರ ಲೋಕಸಭೆ ಬುಧವಾರ ಹಣಕಾಸು ಮಸೂದೆ 2024 ಅನ್ನು ಅಂಗೀಕರಿಸಿತು. ತೆರಿಗೆದಾರರಿಗೆ ಹೊಸ ಕಡಿಮೆ ತೆರಿಗೆ ದರಕ್ಕೆ ಬದಲಾಗಲು ಅಥವಾ ಸೂಚ್ಯಂಕ ಪ್ರಯೋಜನದೊಂದಿಗೆ ಹೆಚ್ಚಿನ ದರವನ್ನು ಹೊಂದಿರುವ ಹಳೆಯ ಆಡಳಿತದೊಂದಿಗೆ ಉಳಿಯಲು ಅವಕಾಶ ನೀಡುತ್ತದೆ. ಅಲ್ಲದೇ ಲೋಕಸಭೆಯಲ್ಲಿ ಇಂದು ಹಣಕಾಸು ಮಸೂದೆಗೆ ಆಂಗೀಕಾರ ದೊರೆತಿದೆ. 2024-25ರ ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಿಯಲ್ ಎಸ್ಟೇಟ್ ಮೇಲಿನ ದೀರ್ಘಕಾಲೀನ ಬಂಡವಾಳ ಲಾಭ ತೆರಿಗೆಯನ್ನು ಶೇಕಡಾ 20 ರಿಂದ 12.5 ಕ್ಕೆ ಇಳಿಸಲು ಪ್ರಸ್ತಾಪಿಸಿದ್ದರು. ಸೂಚ್ಯಂಕ ಪ್ರಯೋಜನವು ತೆರಿಗೆದಾರರಿಗೆ ಹಣದುಬ್ಬರವನ್ನು ಸರಿಹೊಂದಿಸಿದ ನಂತರ ಆಸ್ತಿಯ ವೆಚ್ಚದ ಬೆಲೆಯನ್ನು ತಲುಪಲು ಅನುವು ಮಾಡಿಕೊಡುತ್ತದೆ. ಹೊಸ ನಿಬಂಧನೆಯು ತೆರಿಗೆ ಪ್ರಮಾಣವನ್ನು ಹೆಚ್ಚಿಸಿದೆ ಮತ್ತು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆಗಳನ್ನು ಉತ್ತೇಜಿಸುತ್ತಿಲ್ಲ ಎಂದು ಟೀಕಿಸಿದ ನಂತರ ಈ ತಿದ್ದುಪಡಿ ಬಂದಿದೆ. ಮಸೂದೆಯ ಪ್ರಮುಖ ತಿದ್ದುಪಡಿಯು ಜುಲೈ 23, 2024 ಕ್ಕಿಂತ…
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 ರ ನಂತರ ನಿಧನ, ನಿವೃತ್ತಿ, ರಾಜಿನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟಿಸಿದೆ. ಮಳೆಯ ಇಳಿಮುಖದ ನಡುವೆಯೂ ಇಂದು 279 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆ 20,202ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ರಿಪೋರ್ಟ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 1943 ಜನರನ್ನು ಡೆಂಗ್ಯೂ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 279 ಜನರಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 463 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ 104 ಜನರಿಗೆ, ಬೆಗಂಳೂರು ನಗರ ವ್ಯಾಪ್ತಿಯಲ್ಲಿ 150 ಪರೀಕ್ಷೆಯಲ್ಲಿ 18 ಮಂದಿಗೆ, ಕೋಲಾರದಲ್ಲಿ 11 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಅಂತ ತಿಳಿಸಿದೆ. ಇನ್ನೂ ಬಳ್ಳಾರಿಯಲ್ಲಿ 20, ವಿಜಯನಗರ 10, ಮಂಡ್ಯ 20, ಉಡುಪಿ 10, ಕಲಬುರ್ಗಿ 15, ಬೆಳಗಾವಿ 13 ಸೇರಿದಂತೆ ಇಂದು ಒಟ್ಟು 279 ಮಂದಿಗೆ ಡೆಂಗ್ಯೂ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಡೆಂಗ್ಯೂ ಕೇಸ್ ಸಂಖ್ಯೆ 20,202ಕ್ಕೆ ಏರಿಕೆಯಾಗಿದೆ. ಈವರೆಗೆ 10 ಮಂದಿ ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ…
ಕೋಲಾರ: ಮಧುವೆಯಾದಂತ ಕೆಲ ಗಂಟೆಯಲ್ಲೇ ವಧು ವರರಿಬ್ಬರು ಹೊಡೆದಾಡಿಕೊಂಡಿರುವಂತ ಘಟನೆ ಕೋಲಾರದಲ್ಲಿ ನಡೆದಿದೆ. ಅಲ್ಲದೇ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ವಧು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮದುವೆಯಾದಂತ ನಂತ್ರ ಕೊಠಡಿಗೆ ವಧು ಲಿಖಿತಶ್ರೀ ಹಾಗೂ ವರ ನವೀನ್ ತೆರಳಿದ್ದರು. ಈ ವೇಳೆಯಲ್ಲಿ ಜಗಳ ಆಡಿದ್ದಾರೆ. ಜಗಳ ತಾರಕಕ್ಕೇರಿದಾಗ ಹೊಡೆದಾಟಿಕೊಂಡಿದ್ದಾರೆ. ನೂತನ ವಧು-ವರರ ಹೊಡೆದಾಟದಲ್ಲಿ ವಧು ಲಿಖಿತಶ್ರೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರವಾಗಿ ಗಾಯಗೊಂಡಿದ್ದಂತ ವಧು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/strict-action-will-be-taken-against-those-found-supplying-substandard-medicines-minister-dinesh-gundu-rao/ https://kannadanewsnow.com/kannada/will-retire-from-politics-if-shantakumarswamys-allegations-against-me-are-proved-belur-gopalakrishna/