Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಇ-ಕಾಮರ್ಸ್ ದೈತ್ಯ ಅಮೆಜಾನ್ ಇಂಡಿಯಾದಲ್ಲಿ ಎಂಟು ವರ್ಷಗಳ ಕಾಲ ಕೆಲಸ ಮಾಡಿದ ನಂತರ ಅಕ್ಟೋಬರ್ ನಲ್ಲಿ ಕಂಪನಿಯ ಮುಖ್ಯಸ್ಥ ಮನೀಶ್ ತಿವಾರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ತಿವಾರಿ ಬೇರೆಡೆ ಮತ್ತೊಂದು ಪಾತ್ರವನ್ನು ಹೊಂದಿದ್ದಾರೆ ಎಂದು ಅಮೆಜಾನ್ ವಿವರಿಸದೆ ಹೇಳಿದೆ. https://kannadanewsnow.com/kannada/heavy-rains-lash-bengaluru-from-today-till-august-10-red-alert-sounded-in-these-districts-of-the-state/ https://kannadanewsnow.com/kannada/all-departments-geared-up-for-disaster-management-in-the-state-cm-siddaramaiah/
ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಸಿಲಿಕಾನ್ ಸಿಟಿ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಈ ಬಗ್ಗೆ ಹವಾಮಾನ ತಜ್ಞ ಜಿಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಮಳೆ ಸಾಧ್ಯತೆ ಇದೆ. ಇವತ್ತು ಕರಾವಳಿ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದೆ ಎಂದರು. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿರಾಲಿಯಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಬೆಂಗಳೂರಲ್ಲಿ 4 ಸೆಂಟಿ ಮೀಟರ್ ಆಗಿದೆ ಎಂದು ತಿಳಿಸಿದರು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಾಳೆ, ನಾಡಿದ್ದು ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ನೀಡಲಾಗಿದೆ ಅಂತ ಹೇಳಿದರು. https://kannadanewsnow.com/kannada/breaking-ex-bangladesh-it-minister-arrested-for-trying-to-flee-the-country/ https://kannadanewsnow.com/kannada/all-departments-geared-up-for-disaster-management-in-the-state-cm-siddaramaiah/
ಆದಿ ಮಾಸ ಶ್ರಾವಣ ಮಾಸ ದಲ್ಲಿ ಅಂಬಾಲನ್ನು ಪೂಜಿಸುವುದರಿಂದ ಮಳೆಗಾಲ ಮಾತ್ರ ಬರುವುದಿಲ್ಲ. ನಮ್ಮ ಮನೆಯಲ್ಲೂ ಸಂಪತ್ತು ಮಳೆಯಾಗುತ್ತದೆ. ಅಂಬಾಲ್ ಮನಸ್ಸನ್ನು ತಂಪಾಗಿಸಲು ಮೂರು ಪ್ರಮುಖ ಪದಾರ್ಥಗಳನ್ನು ಹೊಂದಿದೆ. ಅದನ್ನು ಖರೀದಿಸಿ ನಾಳೆ ಅಂಬಾಲಿನ ಮುಂದೆ ಪೂಜಿಸಿದರೆ ದೇವಿಯು ಪ್ರಸನ್ನಳಾಗುತ್ತಾಳೆ ಮತ್ತು ನಮ್ಮ ಮನೆಯಲ್ಲಿ ಸಂಪತ್ತು ಮಳೆಯಾಗುತ್ತದೆ. ಆ ಮೂಲಕ ನಾಳೆ ನಮ್ಮ ಮನೆಯಲ್ಲಿ ಅಂಬಾಲನ ಮುಂದೆ ಇಡಬೇಕಾದ 3 ಪ್ರಮುಖ ವಸ್ತುಗಳು ಯಾವುವು ಎಂಬುದನ್ನು ತಿಳಿಯಲು ಈ ಆಧ್ಯಾತ್ಮಿಕ ಪೋಸ್ಟ್ ಆಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ರಾಜ್ಯದಲ್ಲಿ ವಿಪತ್ತು ನಿರ್ವಹಣೆಗಾಗಿ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸಜ್ಜುಗೊಳಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಸಮಸ್ಯೆಯಾದ ಎಲ್ಲ ಕಡೆ ಭೇಟಿ ನೀಡುತ್ತಿದ್ದೇನೆ. ರಸ್ತೆ, ವಿದ್ಯುತ್, ಕುಡಿಯುವ ನೀರು, ಕಾಳಜಿ ಕೇಂದ್ರ ಸೇರಿದಂತೆ ಅಗತ್ಯ ಪರಿಹಾರೋಪಾಯಗಳನ್ನು ಆರಂಭಿಸಲಾಗಿದೆ. ಮುಂದಿನ ವಾರ ಇನ್ನೂ ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ಇದೆ. ವಿಪತ್ತು ನಿರ್ವಹಣೆಗೆ ಎಲ್ಲ ಇಲಾಖೆಗಳನ್ನೂ ಸಜ್ಜುಗೊಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/applications-invited-for-state-level-best-teacher-award-heres-how-to-apply/ https://kannadanewsnow.com/kannada/we-did-not-take-out-padayatra-out-of-greed-for-power-by-vijayendra/ https://kannadanewsnow.com/kannada/breaking-another-complaint-filed-with-governor-against-cm-siddaramaiah/
ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಶಿಕ್ಷಕರು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್.16 ಕೊನೆಯ ದಿನಾಂಕವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಪ್ರತಿ ವರ್ಷದಂತೆ 2024 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಮತ್ತು ಶೈಕ್ಷಣಿಕ ಸರ್ವತೋಮುಖ ಅಭಿವೃದ್ದಿಗೆ ಅಹರ್ನಿಸಿ ತೊಡಗಿಸಿಕೊಂಡಿರುವ ಅತ್ತುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಗುರುತಿಸಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ. ಶಿಕ್ಷಕರು ಇದೆ ಆಗಸ್ಟ್ 16ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಮತ್ತು ಮಾನದಂಡಗಳನ್ನು ಇಲಾಖೆಯ ಜಾಲತಾಣ https://schooleducation.karnataka.gov.in ನೋಡಬಹುದಾಗಿದೆ ಎಂದು ಹೇಳಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಾಲಾ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 16ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಉತ್ತಮ ಬೋಧನೆಯ ಜೊತೆಗೆ ಮಕ್ಕಳ…
ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಆಗಸ್ಟ್ 12ರ – ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ಕುರಿತಂತೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಗಾಂಧೀ ಕೃಷಿ ವಿಜ್ಞಾನ ಕೇಂದ್ರ-ಜಿಕೆವಿಕೆ ಆವರಣದಲ್ಲಿ ಆಗಸ್ಟ್ 12ರಂದು ಅಂತಾರಾಷ್ಟ್ರೀಯ ಸಮ್ಮೇಳನ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ಒಂದು ದಿನದ ಅಂ.ರಾ.ಸಮ್ಮೇಳನದಲ್ಲಿ ಅಮೆರಿಕಾ, ಜರ್ಮನಿ, ಜಪಾನ್, ಯುಕೆ ಸೇರಿದಂತೆ 11 ರಾಷ್ಟ್ರಗಳ ಸುಮಾರು 17ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ಭಾರತದ ವಿವಿಧ ರಾಜ್ಯಗಳ 660 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಅನ್ಯ ರಾಷ್ಟ್ರ, ರಾಜ್ಯಗಳ ಉತ್ತಮ ರೂಢಿಯ ಅಳವಡಿಕೆ: ಆನೆಗಳು ಮತ್ತು ಇತರ ವನ್ಯಜೀವಿಗಳು ನಾಡಿಗೆ ಬಾರದಂತೆ ಬೇರೆ ಬೇರೆ ರಾಜ್ಯಗಳಲ್ಲಿ, ವಿದೇಶಗಳಲ್ಲಿ ಯಾವ ತಂತ್ರಗಾರಿಕೆ, ಪದ್ಧತಿ ಅನುಸರಿಸಲಾಗುತ್ತಿದೆ. ಯಾವ ಕಾರ್ಯತಂತ್ರ ಅಳವಡಿಸಿಕೊಳ್ಳಲಾಗಿದೆ ಎಂಬುದರ ಬಗ್ಗೆ ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಚಿಂತನ ಮಂಥನ…
ಬೆಂಗಳೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸದಲ್ಲಿ ಇಂದು ಅವರ ಬರ್ತ್ ಡೇ ಆಚರಿಸೋದಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು ಕಾಯುತ್ತಿದ್ದರು. ಈ ವೇಳೆಯಲ್ಲೇ ಬುಡ ಸಹಿತ ತೆಂಗಿನ ಮರವೊಂದು ಮನೆಯ ಬಳಿಯಲ್ಲಿ ಹಾಕಿದ್ದಂತ ಟೆಂಟ್ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ, ಯಾವುದೇ ಪ್ರಣಾಪಾಯ ಆಗದೇ ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಹುಟ್ಟು ಹಬ್ಬ. ಈ ಹುಟ್ಟು ಹಬ್ಬ ಆಚರಣೆಗಾಗಿ ಸಕಲ ಸಿದ್ಧತೆಯನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಸರ್ಕಾರಿ ನಿವಾಸದಲ್ಲಿ ಮಾಡಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಭಾರೀ ಮಳೆ, ಗಾಳಿ ಬೀಸಿದ್ದರಿಂದ ಮನೆಯೊಳಗೆ ಟೆಂಟ್ ನಲ್ಲಿದ್ದಂತ ಕಾರ್ಯಕರ್ತರು, ಅಭಿಮಾನಿಗಳು ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ಮನೆಯ ಮುಂದಿದ್ದಂತ ತೆಂಗಿನ ಮರವೊಂದು ಬುಡ ಸಹಿತ ಭಾರೀ ಗಾಳಿ ಮಳೆಗೆ ಟೆಂಟ್ ಮೇಲೆ ಉರುಳಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಡಾ.ಜಿ ಪರಮೇಶ್ವರ್ ಅವರಿಗೆ ಕಾಯುತ್ತಿದ್ದಂತ ನೂರಾರು ಅಭಿಮಾನಿಗಳು, ಕಾರ್ಯಕರ್ತರಲ್ಲಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ಬೆಂಗಳೂರಿನ ಸದಾಶಿವನಗರದಲ್ಲಿನ…
ನವದೆಹಲಿ: ಆನ್ ಲೈನ್ ವಂಚಕರು ಈಗ ಮತ್ತೊಂದು ದಾರಿಯನ್ನು ಹಿಡಿದಿದ್ದಾರೆ. ಬ್ಯಾಂಕ್ ಗ್ರಾಹಕರನ್ನು ವಂಚಿಸುವಂತ ಮಗದೊಂದು ದಾರಿಯೇ ಸಿಬಿಐ ಸಮನ್ಸ್, ವಾರೆಂಟ್ ಅನ್ನುವಂತ ಸಂದೇಶವಾಗಿದೆ. ಒಂದು ವೇಳೆ ನೀವು ಆ ಸಮನ್ಸ್, ವಾರೆಂಟ್ ಗೆ ಬೆಚ್ಚಿ ಬಿದ್ದು, ಅಲ್ಲಿನ ಲಿಂಕ್ ಓಪನ್ ಮಾಡಿದ್ದೇ ಆದ್ರೇ ನಿಮ್ಮ ಖಾತೆಯೇ ಖಾಲಿಯಾಗಿಬಿಡುತ್ತದೆ. ಹಾಗಾದ್ರೇ ಅಂತದ ಸ್ಕ್ಯಾಮ್ ಏನು ಎನ್ನುವ ಬಗ್ಗೆ ಮುಂದೆ ಓದಿ. ಇಂದು ಸ್ವತಹ ಸಿಬಿಐ ಫೇಕ್ ನೋಟಿಸ್, ವಾರೆಂಟ್ ಬಗ್ಗೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ( Central Bureau of Investigation- CBI) ಸಾರ್ವಜನಿಕರಿಗೆ ಎಚ್ಚರಿಕೆಯ ಮಾಹಿತಿಯೊಂದನ್ನು ಎಕ್ಸ್ ನಲ್ಲಿ ವೀಡಿಯೋ ಸಹಿತ ಮಾಹಿತಿಯನ್ನು ಹಂಚಿಕೊಂಡಿದೆ. ಅದರಲ್ಲಿ ಹಿರಿಯ ಸಿಬಿಐ ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುವ ಹಗರಣಗಳ ಬಗ್ಗೆ ದಯವಿಟ್ಟು ಜಾಗರೂಕರಾಗಿರಿ. ಸಿಬಿಐ ನಿರ್ದೇಶಕರು ಸೇರಿದಂತೆ ಸಿಬಿಐ ಅಧಿಕಾರಿಗಳ ಸಹಿಯನ್ನು ಹೊಂದಿರುವ ನಕಲಿ ದಾಖಲೆಗಳು ಮತ್ತು ನಕಲಿ ವಾರಂಟ್ಗಳು / ಸಮನ್ಸ್ಗಳನ್ನು ವಂಚನೆ ( CBI fake warrants/summon…
ಬೆಂಗಳೂರು: ವಯನಾಡು ಭೂ ಕುಸಿತದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತದಂತ ಘಟನೆ ನಡೆಯೋ ಮುನ್ನವೇ ಎಚ್ಚೆತ್ತುಕೊಂಡು, ತಡೆಯುವ ಸಲುವಾಗಿ ಗುಡ್ಡ ಕುಸಿತ ತಡೆಗೆ 300 ಕೋಟಿ ವ್ಯಯಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಲಾಗಿದೆ. ಅದನ್ನು ತಡೆಯಲು ಮುಂದಿನ ಎರಡು ವರ್ಷಗಳಲ್ಲಿ ₹300 ಕೋಟಿ ವ್ಯಯಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಶಿರೂರು ಬಳಿಯಲ್ಲಿ ಗುಡ್ಡ ಕುಸಿತದಿಂದಾಗಿ 13 ಮಂದಿ ಸಾವನ್ನಪ್ಪಿದ್ದರು. ಕೆಲವರ ಮೃತದೇಹ ಪತ್ತೆಯಾದ್ರೇ, ಮತ್ತೆ ಕೆಲವರ ಮೃತದೇಹ ಈವರೆಗೆ ಪತ್ತೆಯಾಗಿಲ್ಲ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ಡ ಕುಸಿತ ತಡೆಗೆ 300 ಕೋಟಿ ವ್ಯಯಿಸಲು ನಿರ್ಧರಿಸಲಾಗಿದೆ. https://twitter.com/KarnatakaVarthe/status/1820765692280394188 https://kannadanewsnow.com/kannada/beware-of-school-vehicle-drivers-fir-lodged-against-72-drivers-for-consuming-liquor/ https://kannadanewsnow.com/kannada/we-did-not-take-out-padayatra-out-of-greed-for-power-by-vijayendra/
ಬೆಂಗಳೂರು: ನಗರದಲ್ಲಿ ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ಸಮರವನ್ನೇ ಸಾರಿದ್ದಾರೆ. ನಗರದಲ್ಲಿ ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ ಸಂಬಂಧ 72 ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದು, ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡಿದ 72 ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳನ್ನು ತಪಾಸಣೆ ಮಾಡಿರುವುದಾಗಿ ತಿಳಿಸಿದೆ. ಒಟ್ಟಾರೆಯಾಗಿ ಮದ್ಯ ಸೇವಿಸಿ ಬಸ್ ಸೇರಿದಂತೆ ಶಾಲಾ ವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1820773177812767066 https://kannadanewsnow.com/kannada/tj-abraham-complainant-against-cm-visits-raj-bhavan-after-muda-padayatra/ https://kannadanewsnow.com/kannada/we-did-not-take-out-padayatra-out-of-greed-for-power-by-vijayendra/