Author: kannadanewsnow09

ನಾವೆಲ್ಲರೂ ಕಷ್ಟಪಟ್ಟು ದುಡಿದು ಸಂಪಾದಿಸುತ್ತೇವೆ. ಗಳಿಸಿದ ಹಣವೆಲ್ಲ ಒಂದಲ್ಲ ಒಂದು ರೂಪದಲ್ಲಿ ಖರ್ಚಾಗುತ್ತದೆ. ಶುಭ ಖರ್ಚುಗಳಾಗಿದ್ದರೆ ಅದರಿಂದ ನಮಗೆ ಸಂತೋಷವಾಗುತ್ತದೆ. ಆದರೆ ಅನೇಕವು ವ್ಯರ್ಥವಾಗುತ್ತವೆ. ತಿಂಗಳ ಆರಂಭದಲ್ಲಿ ಬರುವ ಸಂಬಳದಲ್ಲಿ ಅದೂ ಇದೂ ಮಾಡಬಹುದು ಎಂದು ಲೆಕ್ಕ ಇಡುತ್ತೇವೆ. ಆದರೆ ಇದ್ದಕ್ಕಿದ್ದಂತೆ ಕೆಲವು ಅನಿರೀಕ್ಷಿತ ವೆಚ್ಚಗಳು ಬಂದು ನಮ್ಮ ಎಲ್ಲಾ ಯೋಜನೆಗಳನ್ನು ಹಾಳುಮಾಡುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…

Read More

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರಿಂದ ಮೈಸೂರು ಪಾದಯಾತ್ರೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ರಾಜಭವನಕ್ಕೆ ಮುಡಾ ಹಗರಣ ಸಂಬಂಧ ದೂರುದಾರ ಟಿಜೆ ಅಬ್ರಾಹಂ ಅವರು ಭೇಟಿ ನೀಡಿದ್ದು, ತೀವ್ರ ಕುತೂಹಲ ಮೂಡಿಸಿದೆ. ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಾಹಂ ದೂರು ನೀಡಿದ್ದರು. ಈ ದೂರಿನ ಬಳಿಕ ಇಂದು ರಾಜಭವನಕ್ಕೆ ಭೇಟಿಯಾಗಿದ್ದಾರೆ. ಸಿಎಂ ವಿರುದ್ಧದ ದೂರುದಾರ ಟಿಜೆ ಅಬ್ರಾಹಂ ಅವರು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ, ಮುಡಾ ಹಗರಣದ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದೆಡೆ ಬಿಜೆಪಿ-ಜೆಡಿಎಸ್ ಮುಡಾ ಪಾದಯಾತ್ರೆಯನ್ನು ನಡೆಸುತ್ತಿದ್ದರೇ, ಮತ್ತೊಂದೆಡೆ ದೂರು ದಾರ ಅಬ್ರಾಹಂ ರಾಜಭವನಕ್ಕೆ ಭೇಟಿ ನೀಡಿದ್ದು ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೇ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೆ ಮುಡಾ ಹಗರಣ ಸಂಬಂಧ ಯಾವ ಕ್ರಮ ವಹಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/in-a-shocking-incident-four-men-arrested-for-attempting-to-rape-a-woman-in-a-pub/ https://kannadanewsnow.com/kannada/indian-womens-wrestler-vinesh-phogat-wins-bronze-medal-at-paris-olympics/ https://kannadanewsnow.com/kannada/breaking-another-complaint-filed-with-governor-against-cm-siddaramaiah/

Read More

ಮಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಪಬ್ ಗೆ ತೆರಳಿದ್ದಂತ ಯುವತಿಯ ಮೇಲೆ ಮಾನಭಂಗಕ್ಕೆ ಯುವಕರು ಯತ್ನಿಸಿದ್ದಾರೆ. ಇಂತಹ ಕೀಚಕ ಕೃತ್ಯ ವೆಸಗಲು ಮುಂದಾದಂತ ನಾಲ್ವರು ಕಾಮುಕರನ್ನು ಪೊಲೀಸರು ಬಂಧಿಸಿರುವಂತ ಘಟನೆ ಮಂಗಳೂರಿನ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಾಲ್ ಒಂದರ ಪಬ್ ಗೆ ಸ್ನೇಹಿತೆಯರೊಂದಿಗೆ ಯುವತಿಯೊಬ್ಬಳು ತೆರಳಿದ್ದಳು. ಈ ವೇಳೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂತಿಸಿದಂತ ಪುಂಡರು, ಬೈದು ಯುವತಿಗೆ ಬಿಯರ್ ಬಾಟಲಿಯಿಂದಲೂ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಇದಷ್ಟೇ ಅಲ್ಲದೇ ಯುವತಿಯ ಮಾನಭಂಗಕ್ಕೆ ಯತ್ನಿಸಲಾಗಿದೆ. ಜೊತೆಗೆ ಯುವತಿಗೆ ಕಿರುಕುಳ ಕೂಡ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಯುವತಿಯು ಪಾಂಡೇಶ್ವರ ಪೊಲೀಸ್ ಠಾಮೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು, ಪುತ್ತೂರಿನ ವಿನಯ್, ಮಹೇಶ್, ಪ್ರೀತೇಶ್ ಹಾಗೂ ನಿತೇಶ್ ಎಂಬ ನಾಲ್ವರು ಕಾಮಕುರನ್ನು ಬಂಧಿಸಿದ್ದಾರೆ. https://kannadanewsnow.com/kannada/bangladesh-cricketer-mashrafe-mortazas-house-set-on-fire/ https://kannadanewsnow.com/kannada/indian-womens-wrestler-vinesh-phogat-wins-bronze-medal-at-paris-olympics/ https://kannadanewsnow.com/kannada/breaking-another-complaint-filed-with-governor-against-cm-siddaramaiah/

Read More

ಪ್ಯಾರಿಸ್: ಭಾರತದ ನೀರಜ್ ಚೋಪ್ರಾ ಅವರು ಪ್ಯಾರಿಸ್ ಒಲಂಪಿಕ್ಸ್ 2024ರ ಸ್ಪರ್ಧೆಯಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸುವ ಮೂಲಕ, ಹೊಸ ದಾಖಲೆಯನ್ನು ಬರೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರ ಅದ್ಭುತ ಪ್ರದರ್ಶನದಿಂದಾಗಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ಗೆ ಪ್ರವೇಶಿಸಿದರು. ಅವರು ತಮ್ಮ ಮೊದಲ ಪ್ರಯತ್ನದಲ್ಲಿ 89.34 ಮೀಟರ್ ದೂರವನ್ನು ಎಸೆದು ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಕಾಯ್ದಿರಿಸಿದರು. ಅವರು ಆಗಸ್ಟ್ 8 ರಂದು ರಾತ್ರಿ 11:55 ಕ್ಕೆ ಫೈನಲ್ನಲ್ಲಿ ಸ್ಪರ್ಧಿಸಲಿದ್ದಾರೆ. ಒಟ್ಟಾರೆಯಾಗಿ ಭಾರತದ ನೀರಜ್ ಚೋಪ್ರಾ ಅವರು, ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಹೀಗಾಗಿ ಪದಕದ ನಿರೀಕ್ಷೆಯನ್ನು ಮೂಡಿಸಿದ್ದಾರೆ. https://twitter.com/sportwalkmedia/status/1820759989650354402 https://kannadanewsnow.com/kannada/bangladesh-cricketer-mashrafe-mortazas-house-set-on-fire/ https://kannadanewsnow.com/kannada/indian-womens-wrestler-vinesh-phogat-wins-bronze-medal-at-paris-olympics/

Read More

ಪ್ಯಾರಿಸ್: ವಿಶ್ವದ ನಂ.1 ಕುಸ್ತಿ ಪಟುವಾಗಿದ್ದಂತ ಯಿ ಸುಸಾಕಿ ವಿರುದ್ಧ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಕುಸ್ತಿ ಪಂದ್ಯಾವಳಿಯಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ. ಇಂದು ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್ ಹಾಗೂ ಜಪಾನ್ ನ ನಂಬರ್.1 ಕುಸ್ತಿ ಪಟು ಯಿ ಸುಸಾಕಿ ನಡುವೆ ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 3-2 ಅಂತರದಿಂದ ಭಾರತದ ವಿನೇಶ್ ಪೋಗಟ್ ಅವರು ಜಪಾನ್ ನ ಯಿ ಸುಸಾಕಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕ್ವಾಟರ್ ಫೈನಲ್ ಪ್ರವೇಶಿಸಿರುವಂತ ಅವರು ಭಾರತಕ್ಕೆ ಮತ್ತೊಂದು ಪದಕ ತಂದುಕೊಡುವುದು ಫಿಕ್ಸ್ ಆದಂತೆ ಆಗಿದೆ. https://twitter.com/sportwalkmedia/status/1820756004935438771 https://kannadanewsnow.com/kannada/bangladesh-cricketer-mashrafe-mortazas-house-set-on-fire/ https://kannadanewsnow.com/kannada/tollywood-producer-director-komari-janaiah-naidu-commits-suicide-by-hanging-himself/

Read More

ಢಾಕಾ: ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಸೋಮವಾರ ದೇಶವನ್ನು ತೊರೆದ ನಂತರ ದೇಶದಲ್ಲಿ ಹಿಂಸಾಚಾರ ಮತ್ತು ಗೊಂದಲ ಮುಂದುವರೆದಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದಿಂದ ಸಂಸತ್ ಸದಸ್ಯರಾಗಿರುವ ಮೊರ್ತಾಜಾ, ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿಗೆ ಈ ಸ್ಥಾನವನ್ನು ಗೆದ್ದಿದ್ದರು. ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ದುಷ್ಕರ್ಮಿಗಳು ಮೊರ್ತಾಜಾ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೊರ್ತಾಜಾ 117 ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು ಮುನ್ನಡೆಸಿದ್ದಾರೆ. 36 ಟೆಸ್ಟ್, 220 ಏಕದಿನ ಮತ್ತು 54 ಟಿ 20 ಪಂದ್ಯಗಳಲ್ಲಿ 390 ಅಂತರರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿದ್ದಾರೆ ಮತ್ತು 2,955 ರನ್ ಗಳಿಸಿದ್ದಾರೆ. ಆಟವನ್ನು ತೊರೆದ ನಂತರ, ಅವರು…

Read More

ಹೈದರಾಬಾದ್: ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು (44) ಇನ್ನಿಲ್ಲ. ಅವರು ಮಂಗಳವಾರ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ನಲ್ಲಿ ನೇಣುಬಿದಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದೆ. ವರದಿಗಳ ಪ್ರಕಾರ, ನಾಯ್ಡು ತಮ್ಮ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿಬ್ಬಂದಿಯೊಬ್ಬರು ಮೃತಪಟ್ಟಿರುವುದನ್ನು ಗಮನಿಸಿದ ಹೋಟೆಲ್ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ ನಂತರ, ನಾಯ್ಡು ಅವರು ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದರು. ಅದರಲ್ಲಿ ಅವರು ಕೆಲವು ವರ್ಷಗಳ ಹಿಂದೆ ‘ಜಿಎಸ್ಟಿ (ಗಾಡ್ ಸೈಥಾನ್ ಟೆಕ್ನಾಲಜಿ)’ ಎಂಬ ಸಣ್ಣ ಚಲನಚಿತ್ರವನ್ನು ಮಾಡಿದರು. ಈ ಚಿತ್ರವು ವಿಫಲವಾಯಿತು. https://kannadanewsnow.com/kannada/good-news-for-maratha-community-in-the-state-applications-invited-for-loan-facility-under-various-schemes/ https://kannadanewsnow.com/kannada/new-company-to-be-set-up-in-mysuru-with-rs-600-crore-investment-5000-jobs-priyank-kharge/

Read More

ಬೆಂಗಳೂರು: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲಾ ಮತ್ತು ಸಹಾಯಧನ), ಜೀಜಾವುಜಲಭಾಗ್ಯ ಯೋಜನೆ (ಗಂಗಾಕಲ್ಯಾಣ ನೀರಾವರಿ ಯೋಜನೆ), ಅರಿವು ಶಿಕ್ಷಣ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಡಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಒಕ್ಕಲಿಗ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-3ಬಿ ಅಡಿಯಲ್ಲಿ 2(ಎ)ಯಿಂದ 2(ಎಫ್)ರವರೆಗೆ ಬರುವ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ…

Read More

ಬೆಂಗಳೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ, ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ,…

Read More

ಮಂಡ್ಯ: ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಯಜಮಾನಿ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ ಎಂದರು. ತನ್ನ…

Read More