Author: kannadanewsnow09

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹಳೇ ಕೆ ಎಸ್ ಆರ್ ಟಿಸಿ ಬಸ್ಸುಗಳಿಗೆ ನಿಗಮದಿಂದ ಹೊಸ ರೂಪ ನೀಡಲಾಗುತ್ತಿದೆ. 1027 ಬಸ್ಸುಗಳನ್ನು ನವೀಕರಿಸಲಾಗುತ್ತಿದ್ದು, ಹೊಸ ಮಾದರಿಯ ಬಸ್ಸುಗಳ ರೂಪದಲ್ಲಿ ರಸ್ತೆಗೆ ಶೀಘ್ರದಲ್ಲೇ ಇಳಿಯಲಿದ್ದಾವೆ. ಹೌದು. ಕೆಎಸ್‌ಆರ್‌ಟಿಸಿಯ ಹಳೇ ಸಾರಿಗೆ ಬಸ್‌ಗಳನ್ನು ನವೀಕರಿಸಿ ಮತ್ತೆ ಬಳಸುವ ಯೋಜನೆಯಡಿ ನವೀಕೃತ ಬಸ್‌ಗಳ ಸಂಖ್ಯೆ ಸಾವಿರ ಗಡಿ ದಾಟಿದೆ. ಇಲ್ಲಿಯವರೆಗೆ 1,027 ಬಸ್‌ಗಳನ್ನು ನವೀಕರಿಸಲಾಗಿದೆ. ಈ ಮೊದಲು 10 ಲಕ್ಷ ಕಿ.ಮೀ ಸಂಚಾರ ಮಾಡಿದ ಬಸ್‌ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತಿತ್ತು. ಇದೀಗ ಈ ಬಸ್‌ಗಳು ಹೊಸ ಯೋಜನೆಯಿಂದಾಗಿ ನವೀಕರಣಗೊಂಡು ಮತ್ತೆ 3 ಲಕ್ಷ ಕಿ.ಮೀ ಸಂಚರಿಸಲಿವೆ. ಒಂದು ಸಾರಿಗೆ ಬಸ್‌ ಖರೀದಿಗೆ ಕನಿಷ್ಠ ರೂ. 40 ಲಕ್ಷ ಬೇಕಾಗುತ್ತದೆ. ಒಂದು ಬಸ್‌ ನವೀಕರಿಸಲು ರೂ. 3 ಲಕ್ಷದಿಂದ ರೂ. 4 ಲಕ್ಷ ಬೇಕಾಗುತ್ತದೆ. ಒಂದು ಹೊಸ ಬಸ್‌ ಖರೀದಿ ಮಾಡುವ ವೆಚ್ಚದಲ್ಲಿ 10 ಬಸ್‌ಗಳನ್ನು ನವೀಕರಿಸಲು ಸಾಧ್ಯವಾಗುತ್ತದೆ.ಇದರಿಂದಾಗಿ ಬಸ್‌ಗಳ ಬೇಡಿಕೆಯನ್ನು ಪೂರೈಸಲು ಸಹಾಯಕವಾಗುತ್ತದೆ. https://kannadanewsnow.com/kannada/veteran-theatre-personality-film-director-and-producer-sadananda-suvarna-passes-away/ https://kannadanewsnow.com/kannada/big-update-9-dead-7-dead-2-missing-in-karwar-landslide/

Read More

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ಅವರು ಇಂದು ವಿಧಿವಶರಾಗಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿ ಸಂತಾಪ ಸೂಚಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು ಅಂತ ತಿಳಿಸಿದ್ದಾರೆ. ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಲ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ ಎಂದು ಹೇಳಿದ್ದಾರೆ. ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ. ಸದಾನಂದ ಸುವರ್ಣರನ್ನು ಕಳೆದುಕೊಂಡಿರುವ ಅವರ ಶಿಷ್ಯವರ್ಗ ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಿ್ದದಾರೆ. https://twitter.com/CMofKarnataka/status/1813153007728820697 https://kannadanewsnow.com/kannada/mla-dinesh-gooligowda-urges-co-operative-minister-to-provide-100-loan-to-farmers/ https://kannadanewsnow.com/kannada/big-update-9-dead-7-dead-2-missing-in-karwar-landslide/

Read More

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಆಹಾರೋತ್ಪದನೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರೈತರಿಗೆ ಸಕಾಲಕ್ಕೆ ಸಾಲಸೌಲಭ್ಯವನ್ನು ನೀಡಲಾಗುವುದು. ಜತೆಗೆ ಈಗಾಗಲೇ ಹಾಕಿಕೊಳ್ಳಲಾಗಿರುವ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡುವ ಗುರಿಯನ್ನು ತಲುಪಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಪರಿಷತ್ತಿನಲ್ಲಿ ಶಾಸಕರಾದ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕದಲ್ಲಿ ಆಹಾರ ಉತ್ಪಾದನೆಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಕಳೆದ ವರ್ಷ 148 ಲಕ್ಷ ಟನ್ ಆಹಾರೋತ್ಪಾದನೆ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಆದರೆ, ಉತ್ಪಾದನೆಯಾಗಿದ್ದ 128 ಲಕ್ಷ ಟನ್ ಆಗಿದೆ. ಅಂದರೆ 20 ಲಕ್ಷ ಟನ್ ಆಹಾರೋತ್ಪಾದನೆಯ ಕೊರತೆ ಉಂಟಾಗಿದೆ. ಹೀಗಾಗಿ ಆಹಾರೋತ್ಪಾದನೆಯಲ್ಲಿ ಹೆಚ್ಚಳವಾಗಬೇಕೆಂದರೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕೃಷಿ ಉಪಕರಣಗಳು ಮತ್ತು ಕಾರ್ಮಿಕ ವೆಚ್ಚವನ್ನು ಭರಿಸಲು ರೈತರಿಗೆ ಸಕಾಲಕ್ಕೆ ಸಾಲ ಸಿಗಬೇಕು. ಹೀಗಾಗಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಹಕಾರಿ ಸಚಿವರಾದ…

Read More

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಕುರಿತು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತನಗರದ ಯೂನಿಯನ್‌ ಬ್ಯಾಂಕ್‌ ಹಾಗೂ ಎಂಜಿ ರಸ್ತೆಯ ಬ್ಯಾಂಕ್‌ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ. ಕಳ್ಳತನ ಆಗಿರುವುದೇ 187 ಕೋಟಿ ರೂ. ಎಂದಿರುವಾಗ ಅದು 89 ಕೋಟಿ ರೂ. ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕಾಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯವರು ತಮಗೆ ಗೊತ್ತಿರಲಿಲ್ಲ ಎಂದು ಹೇಳಿದರೂ ಅದು ದೊಡ್ಡ ತಪ್ಪು ಎಂದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ…

Read More

ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಮಿಹಿರ್ ಶಾ ಅವರನ್ನು ಜುಲೈ 30 ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಮಿಹಿರ್ ಶಾ ಅವರ ಪೊಲೀಸ್ ಕಸ್ಟಡಿ ಮಂಗಳವಾರ (ಜುಲೈ 16) ಕೊನೆಗೊಂಡಿತ್ತು, ಅದರ ನಂತರ, ಮುಂಬೈ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಆರೋಪಿಗಳನ್ನು ಶಿವದಿ ನ್ಯಾಯಾಲಯಕ್ಕೆ ಕರೆತಂದರು, ಅವರು ಕಸ್ಟಡಿಯನ್ನು ವಿಸ್ತರಿಸಿದರು. https://twitter.com/ANI/status/1813153270770123153 https://kannadanewsnow.com/kannada/good-news-for-the-people-of-the-state-revenue-departments-anywhere-registration-system-extended-to-districts/ https://kannadanewsnow.com/kannada/ii-puc-exam-3-result-declared-heres-how-to-check-result/

Read More

ಬೆಂಗಳೂರು : ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ʼಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಆಗಸ್ಟ್‌ ತಿಂಗಳಿನಿಂದ ಪ್ರತಿಯೊಂದು ಜಿಲ್ಲೆಗಳಿಗೂ ವಿಸ್ತರಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸಭಾ ಅಧಿವೇಶನದ ನಡುವೆ ಮಂಗಳವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಂಬಂಧಿತ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ ಅವರು,”ಉಪ ನೋಂದಣಾಧಿಕಾರಿ ಕಚೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರಕಾರಿ ಕಚೇರಿಗಳಲ್ಲಿ ಕಾಯಿಸುವುದೂ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ವ್ಯವಸ್ಥೆ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ಆಗಸ್ಟ್‌ ತಿಂಗಳಿನಿಂದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂದು ಸಮಯದ ಗಡುವು ನೀಡಿದರು. ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷ ಮಾ.14 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ.…

Read More

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಮಂಡ್ಲಿಯ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ.18ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಜುಲೈ.18ರಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು.18 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‍ಎಂ ವಿದ್ಯಾರ್ಹತೆ…

Read More

ಬೆಂಗಳೂರು : “ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬೆಸ್ಕಾಂ ಸೇರಿದಂತೆ ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ 27 ರಂದು ನಡೆಸಲಾಗುವುದು”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಎಸ್. ಸುರೇಶ್ ಕುಮಾರ್, ರಾಮಮೂರ್ತಿ ಅವರ ಪ್ರಸ್ತಾವನೆಗೆ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು. ಇದಕ್ಕೂ ಮೊದಲು ಬಿಜೆಪಿ ನಾಯಕರು ಬೆಂಗಳೂರು ಅಭಿವೃದ್ದಿಗೆ ಇರುವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, “ಅಶೋಕ್, ಸುರೇಶ್ ಕುಮಾರ್ ಹಾಗೂ ರಾಮಮೂರ್ತಿ ಅವರ ಮಾತಿಗೆ ನನ್ನ ಸಹಮತವಿದೆ. ಕಳೆದ ಒಂದು ವರ್ಷದಿಂದ ಸಮನ್ವಯತೆ ಸಾಧಿಸಲು ನಾನೇ ಸಾಕಷ್ಟು ಕಸರತ್ತು ನಡೆಸಿದ್ದೇನೆ. ಇದರಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಆದರೆ ಒಂದು ಹಂತಕ್ಕೆ ಸಮಸ್ಯೆ ನಿವಾರಣೆ ಮಾಡಿದ್ದೇನೆ. ಆದರೆ ಪ್ರಯತ್ನ ಮುಂದುವರೆಸಿದ್ದೇನೆ. ಪ್ರತಿಪಕ್ಷದವರು ಸಹಕಾರ ನೀಡಿದರೆ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬೆಂಗಳೂರಿನ ಕೋರ್ಟ್ ನಲ್ಲಿ ದಾಖಲಿಸಿದ್ದಂತ ಖಾಸಗಿ ದೂರಿನ ಅರ್ಜಿಯನ್ನು ಕೋರ್ಟ್ ದೂರಿನ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ದೇಶದ ಸಂಪತ್ತು ಮುಸ್ಲೀಮರಿಗೆ ಮರು ಹಂಚಿಕೆ ಆಗುತ್ತದೆ ಅಂತ ಹೇಳಿಕೆ ನೀಡಿದ್ದಾರೆ. ಇದು ದ್ವೇಷ ಭಾಷಣದ ಹೇಳಿಕೆಯಾಗಿದ್ದೂ, ಅವರ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಜಿಯಾಉರ್ ರಹಮಾನ್ ನೊಮಾನಿ ಎಂಬುವರು ಖಾಸಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆಯೇ ಹೊರತು, ದ್ವೇಷ ಭಾಷಣದ ಹೇಳಿಕೆಯನ್ನು ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಅಲ್ಲದೇ ದ್ವೇಷ ಭಾಷಣದ ಯಾವುದೇ ಅಂಶಗಳು ಪ್ರಧಾನಿ ಮೋದಿ ಅವರ ಹೇಳಿಕೆಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗಾಂಗ ದಾನವನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಅದೇ ಇನ್ಮುಂದೆ ಅಂಗಾಂಗ ದಾನಿಗಳಿಗೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದಂದು ಪ್ರಶಂಸನಾ ಪತ್ರ ನೀಡಿ ಗೌರವ ಸಲ್ಲಿಸೋ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ State Organ Tissue Transplant Organization (SOTTO Karnataka) ಮುಖಾಂತರ ನೀಡುವ ಮಾಹಿತಿ ಆಧರಿಸಿ ಅಂಗಾಂಗ ದಾನ ಮಾಡಿದ ದಿನಾಂಕದಿಂದ 10 ದಿನಗಳ ಒಳಗೆ ರಾಜ್ಯ ಸರ್ಕಾರದ ಪರವಾಗಿ ಅಂಗದಾನಿಯ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲು ಸರ್ಕಾರದ ಆದೇಶ ಸಂಖ್ಯೆ: ಆಕುಕ 93 ಎಫ್‌ಪಿಆರ್ 2024, ದಿನಾಂಕ:01.3.2024 ರಲ್ಲಿ ಆದೇಶಿಸಲಾಗಿದೆ ಅಂತ ತಿಳಿಸಿದ್ದಾರೆ. ಸದರಿ ಆದೇಶದನ್ವಯ ಅಂಗಾಂಗದಾನ ಮಾಡಿದ 10 ದಿನಗಳ ಒಳಗೆ ಪ್ರಾಥಮಿಕವಾಗಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸುವ ಬಗ್ಗೆ, ಕ್ರಮವಹಿಸುವುದು. ತದನಂತರ ಸಾರ್ವಜನಿಕ…

Read More