Author: kannadanewsnow09

ಬೆಂಗಳೂರು: ಆ. 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ. ಈ ರೈಲುಗಳ ಸಂಚಾರ ರದ್ದು: ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದುಗೊಳ್ಳಲಿದೆ. ಆಗಸ್ಟ್ 24ರಂದು: ಮೈಸೂರು–ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ (06269), ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್‌ಪ್ರೆಸ್ (16226), ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (16225), ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56267), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56268), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56266) ಮತ್ತು ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56265) ರೈಲುಗಳು ಒಂದು ದಿನ ರದ್ದುಗೊಳ್ಳಲಿವೆ. ಭಾಗಶಃ ರದ್ದು: ಆಗಸ್ಟ್ 24ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್–ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ…

Read More

ಮಂಡ್ಯ : ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಅವರ ಅವೈಜ್ಞಾನಿಕ ಒಳ ಮೀಸಲಾತಿ ವರದಿ ತಿರಸ್ಕರಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕು ಬಲಗೈ ಜಾತಿಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಬೆಂಗಳೂರು ಚಲೋ ನಡೆಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ನೇತೃತ್ವದಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಒಕ್ಕೂಟದ ನೂರಾರು ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಉರಿಲಿಂಗಿ ಪೆದ್ದ ಮಠದ ಪೀಠಾಧ್ಯಕ್ಷ ಜ್ಞಾನ ಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಸ್ ಗಳಲ್ಲಿ ತೆರಳಿದರು. ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುರೇಶ್ ಕಂಠಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ರಾಜ್ಯ ಛಲವಾದಿ ಮಹಾಸಭಾದ ಮನವಿಯನ್ನು ಗಣನೆಗೆ ತೆಗೆದುಕೊಳ್ಳದೆ ಏಕ ಪಕ್ಷಿಯವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ, ಬಲಗೈ, ಛಲವಾದಿ ಸಮುದಾಯಕ್ಕೆ ಸೇರಿದ ಹಲವು ಜಾತಿಗಳನ್ನು ಶೇಕಡ 1 ಗುಂಪಿಗೆ ಸೇರಿಸಿರುವುದು ಛಲವಾದಿ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಹೀಗಾಗಿ ಸರ್ಕಾರ ಅವರ ವರದಿಯನ್ನು ತಿರಸ್ಕರಿಸುವಂತೆ ಸುರೇಶ್ ಕಂಠಿ…

Read More

ಮಂಡ್ಯ : ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ಸಹಾಯಕನನ್ನು ಭೀಕರವಾಗಿ ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಡ್ಯ ಜಿಲ್ಲಾ ಕಂದಾಯ ಇಲಾಖೆಯ ನೌಕರರ ಸಂಘ ಹಾಗೂ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಗದಗ ಜಿಲ್ಲೆಯ ಲಕ್ಷ್ಮಿಶ್ವರ ತಾಲೂಕಿನ ಹುಲ್ಲೂರು ಗ್ರಾಮದ ಸರಹದ್ದಿನಲ್ಲಿ ಅಕ್ರಮವಾಗಿ ಮರಳು ದಂಧೆ ನಿರಂತರವಾಗಿ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗ್ರಾಮ ಸಹಾಯಕ ರಫೀಕ್ ಹುಸೇನ್ ಸಾಬ್ ನದಾಫ್ ಕಳೆದ ಆಗಸ್ಟ್ 15 ರಂದು ಮರಳು ದಂಧೆಯನ್ನು ತಡೆಗಟ್ಟಲು ಹೋದಾಗ ದುಷ್ಕರ್ಮಿಗಳು ಹಾಗೂ ರಫೀಕ್ ನಡುವೆ ಮಾತಿನ ಚಕಮಕಿ ನಡೆಸಿ ಬಳಿಕ ಏಕಾಏಕಿ ಅವರ ಮೇಲೆ ಟ್ರಾಕ್ಟರ್ ಹರಿಸಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಿದರು. ಈ ಕೂಡಲೇ ಅಲ್ಲಿನ ಪೋಲೀಸ್ ಅಧಿಕಾರಿಗಳು ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು. ಮೃತ ಗ್ರಾಮ ಸಹಾಯಕನ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅವರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಅವರ ಕುಶಲೋಪರಿ ವಿಚಾರಿಸಿದಂತ ಅವರು ಹಣ್ಣು ನೀಡಿ, ಜೈಲಿನಿಂದ ವಾಪಾಸ್ ಆದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾದರು. ಸಾಮಾನ್ಯ ಎಂಟ್ರಿ ಹಿನ್ನಲೆಯಲ್ಲಿ ಅರ್ಧ ತಾಸು ಮಾತ್ರವೇ ಜೈಲು ಅಧಿಕಾರಿಗಳು ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿಗೆ ಅವಕಾಶ ಮಾಡಿಕೊಟ್ಟರು. ನಟ ದರ್ಶನ್ ಕುಶಲೋಪರಿ ವಿಚಾರಿಸಿದಂತ ಪತ್ನಿ ವಿಜಯಲಕ್ಷ್ಮಿ ಬಳಿಯಲ್ಲಿ ಮಗನ ಬಗ್ಗೆ ನಟ ದರ್ಶನ್ ವಿಚಾರಿಸಿದರು ಎನ್ನಲಾಗಿದೆ. ಆ ಬಳಿಕ ಅರ್ಧ ಗಂಟೆಯ ಸಮಯ ಮುಗಿದ ಕಾರಣ ಅಲ್ಲಿಂದ ವಾಪಾಸ್ ಆದರು ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/shivamogga-extension-of-the-application-deadline-for-admission-to-post-metric-hostels/ https://kannadanewsnow.com/kannada/complainant-b-y-vijayendra-insists-on-a-comprehensive-investigation-into-the-individuals-behind-the-complainant/

Read More

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ  ಅವಧಿಯನ್ನು ಆ.25 ರವರೆಗೆ ವಿಸ್ತರಿಸಲಾಗಿದೆ. ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1 ,  2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಇಲ್ಲಿ ಅರ್ಜಿ ಸಲ್ಲಿಸಬೇಕು. ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ‌. ಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.50 ಲಕ್ಷ ಹಾಗೂ ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಪೋಷಕರ ವಾರ್ಷಿಕ ಆದಾಯವು 1   ಲಕ್ಷದೊಳಗಿರಬೇಕು. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ‌ ನೀಡಬಹುದು. ಅರ್ಜಿ ಸಲ್ಲಿಸಲು…

Read More

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಶನಿವಾರ ರಾತ್ರಿ ಹೇಳಿಕೆ ಕೊಟ್ಟು ಯಾವುದೇ ಕಾರಣಕ್ಕೂ ಎಸ್‍ಐಟಿ ರಚಿಸುವುದಿಲ್ಲ ಎಂದಿದ್ದರು. ಮರುದಿನವೇ ಅಂದರೆ, ಭಾನುವಾರ ಬೆಳಿಗ್ಗೆ ಎಸ್‍ಐಟಿ ರಚನೆಯ ಹೇಳಿಕೆ ಕೊಟ್ಟಿದ್ದರು. ರಾತ್ರೋರಾತ್ರಿ ಮುಖ್ಯಮಂತ್ರಿಗಳ ಅಭಿಪ್ರಾಯ ಬದಲಾಗಲು ಅವರ ಮೇಲೆ ಒತ್ತಡ ಹೇರಿದ್ದು ಯಾರು ಎಂದು ಸದನದಲ್ಲೇ ಪ್ರಶ್ನಿಸಿದ್ದೆ ಎಂದು ಗಮನಕ್ಕೆ ತಂದರು. ಒತ್ತಡ ಹೇರಿದ ಸಂಘಟನೆಗಳು ಯಾವುವು ಎಂಬ ಕುರಿತು ಸದನದ ಗಮನಕ್ಕೆ ತರಬೇಕು; ಮುಖ್ಯಮಂತ್ರಿಗಳು ಉತ್ತರಿಸಬೇಕೆಂದು ಕೋರಿದ್ದಾಗಿ ತಿಳಿಸಿದರು. ಮುಸುಕುಧಾರಿಯು ಧರ್ಮಸ್ಥಳದ ವಿಷಯದಲ್ಲಿ ಸಾಕಷ್ಟು ಪ್ರಚಾರ ತೆಗೆದುಕೊಂಡು, ರಾಜ್ಯ ಸರಕಾರ ಎಸ್‍ಐಟಿ ಸ್ಥಾಪಿಸುವ ಮಟ್ಟಕ್ಕೂ ಹೋಗಿದ್ದ. ಕಳೆದ 2-3 ವಾರಗಳಿಂದ ತನಿಖೆಯ ಜೊತೆಗೇ ಧರ್ಮಸ್ಥಳ, ಶ್ರೀ ಮಂಜುನಾಥೇಶ್ವರನ ಕ್ಷೇತ್ರದ ಕುರಿತು ಸಾಕಷ್ಟು ಅಪಪ್ರಚಾರಗಳು ನಡೆದಿದ್ದವು. ರಾಜ್ಯ-…

Read More

ಜಾಮ್‌ನಗರ : ಭಾರತದಲ್ಲಿ ಮೊದಲ ಬಾರಿಗೆ ಎಂಬಂತೆ ಉದ್ಯಮಿ ಅನಂತ್ ಅಂಬಾನಿ ಅವರು ಆರಂಭಿಸಿದ ವನ್ಯಜೀವಿ ರಕ್ಷಣಾ ಮತ್ತು ಸಂರಕ್ಷಣಾ ಉಪಕ್ರಮ ವಂತಾರ. ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರದ ಅತ್ಯಾಧುನಿಕ ಸೌಲಭ್ಯಗಳಲ್ಲಿ ಸೋಮವಾರದಂದು (ಆಗಸ್ಟ್ 18) ಸಂರಕ್ಷಣಾ ಔಷಧದ ಪರಿಚಯದ ಕುರಿತು ಪ್ರಮುಖ ಪಶುವೈದ್ಯಕೀಯ ತರಬೇತಿ ಕೋರ್ಸ್ ಅನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ವಿ. ಕ್ಲೆಮೆಂಟ್ ಬೆನ್, ಐಎಫ್‌ಎಸ್; ಉತ್ತರಾಖಂಡ ಸರ್ಕಾರದ ಮಾಜಿ ಪಿಸಿಸಿಎಫ್ ಮತ್ತು ಸಿಡಬ್ಲ್ಯೂಎಲ್‌ಡಬ್ಲ್ಯೂ ದಿಗ್ವಿಜಯ್ ಸಿಂಗ್ ಖಾಟಿ; ಭಾರತ ವನ್ಯಜೀವಿ ಸಂಸ್ಥೆಯ ಮಾಜಿ ಹಿರಿಯ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಪ್ರದೀಪ್ ಕೆ. ಮಲಿಕ್; ಮತ್ತು ಜಿಜೆಡ್‌ಆರ್‌ಆರ್‌ಸಿ ನಿರ್ದೇಶಕ ಡಾ. ಬ್ರಿಜ್ ಕಿಶೋರ್ ಗುಪ್ತಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಹೀಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅತಿಥಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಮತ್ತು ವನ್ಯಜೀವಿ ಆರೋಗ್ಯ ಮತ್ತು ಸಂರಕ್ಷಣೆಯನ್ನು ಮುನ್ನಡೆಸುವಲ್ಲಿ ಈ ಮೈಲುಗಲ್ಲು ಎನಿಸಿದಂಥ ಉಪಕ್ರಮದ ಮಹತ್ವವನ್ನು ಒತ್ತಿ ಹೇಳಿದರು.…

Read More

ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಮಕ್ಸೂದ್ ಆಲಿ @ ಲಕ್ಕಿ ಆಲಿಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಬಂಧನದ ವಾರಂಟ್ ಜಾರಿಗೊಳಿಸಲಾಗಿದೆ. 2014ರಲ್ಲಿ ಸೈಯದ್ ರಿಜ್ವಾನ್ ಅವರಿಂದ ಗಾಯಕ ಲಕ್ಕಿ ಆಲಿ ವಿರುದ್ಧ ಖಾಸಗಿ ದೂರು ದಾಖಲಿಸಲಾಗಿತ್ತು. ಜಮೀನು ಮಾರುವುದಾಗಿ ಹಣ ಪಡೆದು ಹಿಂದಿರುಗಿಸದ ಆರೋಪ ಅವರ ಮೇಲಿತ್ತು. 27 ಲಕ್ಷ ರೂಪಾಯಿಯನ್ನು ಗಾಯಕ ಲಕ್ಕಿ ಆಲಿ ಹಿಂದಿರುಗಿಸಿರಲಿಲ್ಲ. ಈ ಪ್ರಕರಣದಲ್ಲಿ ಸಿವಿಲ್ ದಾವೆ ರಾಜಿ ಮಾಡಿಕೊಂಡು ಲಕ್ಕಿ ಆಲಿ ಚೆಕ್ ನೀಡಿದ್ದರು. 2002ರ ವ್ಯವಹಾರ ಸಂಬಂಧ 2013ರಲ್ಲಿ ಚೆಕ್ ನೀಡಿದ್ದರು. ಆದರೇ 92 ಲಕ್ಷದ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ಲಕ್ಕಿ ಆಲಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ 92.10 ಲಕ್ಷ ರೂಪಾಯಿ ದಂಡವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿತ್ತು. ದಂಡವನ್ನು ಪಾವತಿಸಿದೇ ಇದ್ದರೇ 6 ತಿಂಗಳ ಸೆರೆವಾಸ ಅನುಭವಿಸುವಂತೆ ಆದೇಶದಲ್ಲಿ ತಿಳಿಸಲಾಗಿತ್ತು. ಸುಪ್ರೀಂ ಕೋರ್ಟ್ ಕೂಡ ಆದೇಶ ರದ್ದುಪಡಿಸಲು ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಲಕ್ಕಿ ಆಲಿ ವಿರುದ್ಧ…

Read More

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಕಲಾಪದ ವೇಳೆ ನಡೆದ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ” ಎಂದರು. ಒಂದೆರಡು ದಿನ ಸುಮ್ಮನಿರಿ “ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ. ಗೃಹಸಚಿವರು ಇದಕ್ಕೆ ಬದ್ದವಾಗಿದ್ದಾರೆ. ಈ ವಿಚಾರದಲ್ಲಿ ಒಂದೆರಡು ದಿನ ಸುಮ್ಮನಿರಿ. ನೀವೆಲ್ಲರೂ ತಾಳ್ಮೆವಹಿಸಿ” ಎಂದು ಪ್ರತಿಪಕ್ಷಗಳಿಗೆ ಆಗ್ರಹಿಸಿದರು.…

Read More

ಬೆಂಗಳೂರು: ಭೂ ಹಾಗೂ ಗುಡ್ಡ ಕುಸಿತಗಳ ದೀರ್ಘಾವಧಿ ಉಪಶಮನಕ್ಕಾಗಿ 500 ಕೋಟಿ ರೂಪಾಯಿ ಖರ್ಚಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಮಡಿಕೇರಿ ಶಾಸಕ ಮಂತರ ಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, “ರಾಜ್ಯದಲ್ಲಿ ಯಾವ ಭಾಗದಲ್ಲಿ ಹೆಚ್ಚು ಭೂ-ಗುಡ್ಡ ಕುಸಿತ ಉಂಟಾಗುತ್ತೆ ಆ ಭಾಗವನ್ನು ಗುರುತಿಸಿ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗೆ ಶಾಶ್ವತ ಉಪಶಮನ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಆರು ಜಿಲ್ಲೆಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಭೂ ಕುಸಿತ ತಡೆಗೆ ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ” ಎಂದರು. “ಯಾವ ಭಾಗದಲ್ಲಿ ಹೆಚ್ಚು ಭೂ-ಗುಡ್ಡ ಕುಸಿತ ಉಂಟಾಗಲಿದೆ ಹಾಗೂ ಅಲ್ಲಿ ಯಾವ ಡಿಸೈನ್‌ನಲ್ಲಿ ತಡೆಗೋಡೆ ನಿರ್ಮಿಸಬೇಕು ಎಂಬುದನ್ನು ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಗುರುತಿಸಿ ಆ ಪಟ್ಟಿಯನ್ನು ನಮಗೆ ಕಳುಹಿಸುತ್ತದೆ. ನಾವು ಆ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇವೆ. ಜಿಲ್ಲಾಧಿಕಾರಿಗಳು ತಮ್ಮ…

Read More