Subscribe to Updates
Get the latest creative news from FooBar about art, design and business.
Author: kannadanewsnow09
ದಕ್ಷಿಣ ಕನ್ನಡ : ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಲ್ಲಿ ರುಡ್ ಸೆಟ್ ಸಂಸ್ಥೆಯ ಹುಟ್ಟುಹಬ್ಬ ಹಾಗೂ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಹಸಿದವರಿಗೆ ಆಹಾರ ನೀಡಿದರೆ ಆ ಕ್ಷಣದ ಹಸಿವು ನಿಗಾಬಹುದು ಆದರೆ ತನ್ನ ಆಹಾರವನ್ನು ತಾನೇ ಸಂಪಾದನೆ ಮಾಡುವ ದಾರಿ ಮತ್ತು ಕೌಶಲ ನೀಡಿದರೆ ಅದು ಅವನ ಜೀವನಕ್ಕೆ ದಾರಿ ಆಗುತ್ತದೆ ಎಂಬ ಮಾತಿನಂತೆ ನಮ್ಮನಾಡಿನ ಯುವಜನತೆಗೆ ಅವರ ಜೀವನಕ್ಕೆ ಬೇಕಾದ ಕೌಶಲ್ಯ ವನ್ನು ಕಲಿಸುವ ಈ ರುಡ್ ಸೆಟ್ ಸಂಸ್ಥೆಯನ್ನು ಆರಂಭಿಸಿ ಮಾರ್ಗದರ್ಶನ ನೀಡಿದರು. ಇದು ದೇಶ ಅಥವಾ ಜಗತ್ತು ಆಲೋಚುಸುವ ಮೊದಲು ಯೋಚಿಸಿದ ದಾರ್ಶನಿಕರು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು. ಈ ಹಿನ್ನಲೆಯಲ್ಲಿ ನಾವು ನಮ್ಮ ಕೌಶಲ್ಯದ ಬಲವರ್ಧನೆ ಪ್ರತಿ ನಿತ್ಯ ಮಾಡುತ್ತಿರುವ ಇರಬೇಕು ಎಂದರು. ಇವತ್ತು ನಮ್ಮ ಮುಂದೆ ಸಾಧನಾ ಇದೆ ಆದರೆ ಅದನ್ನು ಬಳಸಿಕೊಳ್ಳುವ ಕೌಶಲ್ಯ ಬೆಳಿಸಿಕೊಳ್ಳಬೇಕು, ನಾವು ಬದಲಾವಣೆಗೆ…
ಚಿತ್ರದುರ್ಗ : ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್ಸೆಟ್ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಹಾಲಿ ಇರುವ ಕೃಷಿ ಪಂಪ್ಸೆಟ್ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯಪತ್ರದ ದಾಖಲೆಯನ್ನು ಸಮೀಪದ ಬೆಸ್ಕಾಂ ಶಾಖಾ ಕಚೇರಿ ಅಥವಾ ಸಂಬಂಧಿಸಿದ ಪವರ್ ಮ್ಯಾನ್ ಅಥವಾ ಮೀಟರ್ ರೀಡರ್ಗಳಿಗೆ ಸಲ್ಲಿಸಿ ಹಾಲಿ ಆರ್.ಆರ್.ಸಂಖ್ಯೆಯಲ್ಲಿರುವ ಹೆಸರನ್ನು ಬದಲಾವಣೆ ಮಾಡಿಸಿಕೊಳ್ಳಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.\ https://kannadanewsnow.com/kannada/heavy-rains-all-schools-colleges-in-shivamogga-district-to-remain-closed-tomorrow-dc/ https://kannadanewsnow.com/kannada/schools-colleges-in-dakshina-kannada-district-to-remain-closed-tomorrow-due-to-heavy-rains/
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜುಲೈ.16ರ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ.16ರ ನಾಳೆ ರಜೆಯನ್ನು ನೀಡಲಾಗುತ್ತಿದೆ ಅಂತ ತಿಳಿಸಿದ್ದಾರೆ. ಅಂದಹಾಗೇ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಈಗ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿ ಆದೇಶಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/schools-and-colleges-in-the-state-will-remain-closed-tomorrow-in-the-wake-of-heavy-rains/ https://kannadanewsnow.com/kannada/schools-colleges-in-dakshina-kannada-district-to-remain-closed-tomorrow-due-to-heavy-rains/
ಶಿವಮೊಗ್ಗ: ರಾಜ್ಯ ಸರ್ಕಾರ ಮಳೆಗಾಲ ಆರಂಭಕ್ಕೂ ಮುನ್ನವೇ ಡೆಂಗ್ಯೂ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೇ ಆ ಕೆಲಸ ಮಾಡಲಿಲ್ಲ. ಈಗ ಡೆಂಗ್ಯೂ ಹೆಚ್ಚಾದಾಗ ಕ್ರಮವಹಿಸುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಡೆಂಗ್ಯೂ ನಿಯಂತ್ರಣದಲ್ಲಿ ಫೇಲ್ ಆಗಿದೆ ಅಂತ ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ಡೆಂಗ್ಯೂ ವಾರ್ಡ್ ಗೆ ಭೇಟಿ ನೀಡಿ, ಡೆಂಗ್ಯೂ ಪೀಡಿತರಾದಂತ ಜನರ ಆರೋಗ್ಯವನ್ನು ವಿಚಾರಿಸಿದರು. ಜೊತೆಗೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪರಪ್ಪ ಅವರಿಗೆ ಸೂಕ್ತ ರೀತಿಯ ಚಿಕಿತ್ಸೆಯನ್ನು ನೀಡುವಂತೆಯೂ ಸೂಚಿಸಿದರು. ಕೆಲವೇ ದಿನಗಳಲ್ಲಿ ಅಪೆಕ್ಸ್ ಬ್ಯಾಂಕ್ ಹಗರಣವೂ ಹೊರ ಬರುತ್ತೆ ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಡಾ ಅಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಕುಟುಂಬ ಭಾಗಿಯಾಗಿದೆ. ಬರೋಬ್ಬರಿ 14 ನಿವೇಶನಗಳನ್ನು ಮುಡಾದಿಂದ ಪಡೆದಿದೆ. ಮುಡಾ ಅಷ್ಟೇ ಅಲ್ಲ ಅಪೆಕ್ಸ್ ಬ್ಯಾಂಕ್ ಹಗರಣ ಕೂಡ ಹೊರ ಬರುತ್ತೆ. ಅಪೆಕ್ಸ್ ಬ್ಯಾಂಕ್ ನಿಂದ ಅಪಾತ್ರರಿಗೂ ಸಾಲ ಕೊಟ್ಟಿದ್ದಾರೆ ಅಂತ…
ಮಂಗಳೂರು: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. ನಾಳೆ ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಅನ್ನು ನೀಡಲಾಗಿದೆ. ಈಗಾಗಲೇ ಭಾನುವಾರ ರಾತ್ರಿಯಿಂದಲೇ ಮಳೆಯಾಗುತ್ತಿದ್ದು, ನಾಳೆ ಇನ್ನೂ ಹೆಚ್ಚಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿರುವುದಾಗಿ ಹೇಳಿದ್ದಾರೆ. https://kannadanewsnow.com/kannada/nithya-sumangali-word-echoed-in-legislative-council-women-members-object/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/
ಚಿದಂಬರಂ ನಟರಾಜ ದೇಗುಲದಲ್ಲಿ ಹಲವು ರಹಸ್ಯಗಳು ಹುದುಗಿವೆ ಎಂದು ಅನಾದಿ ಕಾಲದಿಂದಲೂ ಹೇಳಲಾಗುತ್ತಿದೆ. ಅಲ್ಲಿ ಅಸಂಖ್ಯಾತ ರಹಸ್ಯಗಳು ಹುದುಗಿವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅಂತಹ ಕೆಲವು ರಹಸ್ಯಗಳನ್ನು ಈ ಪೋಸ್ಟ್ನಲ್ಲಿ ನೋಡೋಣ. ಚಿದಂಬರಂ ನಟರಾಜ ದೇವಾಲಯವು ಮಾನವ ದೇಹವನ್ನು ಆಧರಿಸಿ ನಿರ್ಮಿಸಲಾಗಿದೆ ಎಂದು ತೋರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…
ಬೆಂಗಳೂರು: ಇಂದು ವಿಧಾನಪರಿಷತ್ತಿನಲ್ಲಿ ನಿತ್ಯ ಸುಮಂಗಲಿ ಪದ ಪ್ರತಿಧ್ವನಿಸಿತು. ವಿಪಕ್ಷ ಸದಸ್ಯ ಸಿ.ಟಿ ರವಿ ಅವರ ಪದ ಬಳಕೆಗೆ ಆಡಳಿತ ಪಕ್ಷದ ಮಹಿಳಾ ಸದಸ್ಯರು ಆಕ್ಷೇಪ ಕೂಡ ವ್ಯಕ್ತಪಡಿಸಿದ್ರು. ವಿಧಾನಪರಿಷತ್ತಿನಲ್ಲಿ ಇಂದು ಬಿಜೆಪಿಯ ಸದಸ್ಯ ಸಿಟಿ ರವಿ ಅವರು ತಮ್ಮ ಭಾಷಣದ ವೇಳೆಯಲ್ಲಿ ನಿತ್ಯ ಸುಮಂಗಲಿ ಪದವನ್ನು ಬಳಸಿದ್ರು. ವಕ್ಫ್ ಬೋರ್ಡ್ ಅಕ್ರಮದ ಬಗ್ಗೆ ನಿನ್ನೆ ಆರೋಪ ಕೇಳಿ ಬಂದಿದೆ. ದಲಿತರ ಹಣ ಅಕ್ರವಾಗಿ ವರ್ಗಾವಣೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲದ ರೂಪದಲ್ಲಿ ಎಲ್ಲದ್ರಲ್ಲೂ ಲೂಟಿ ಮಾಡಿದ್ದಾರೆ. ಸತ್ಯ ಮರೆಮಾಚಲು ಕಾಂಗ್ರೆಸ್ ಪಕ್ಷದವರು ಅಡ್ಡಿಪಡಿಸುತ್ತಿದ್ದಾರೆ ಎಂದರು. ಇಂತಹ ಸಿ.ಟಿ ರವಿ ಅವರ ಮಾತಿಗೆ ಪದೇ ಪದೇ ಕಾಂಗ್ರೆಸ್ ಸದಸ್ಯರು ಅಡ್ಡಿ ಪಡಿಸುತ್ತಿದ್ದರು. ಅಲ್ಲದೇ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರು ಕೂಡ ಅಡ್ಡಿಪಡಿಸಿದರು. ಬಿಜೆಪಿ ಸರ್ಕಾರ ಹೇಗೆ ಬಂತು ಅಂತ ಹೇಳಿ ನೋಡೋಣ ಎಂಬುದಾಗಿ ಚೇಡಿಸಿದರು. ಜೊತೆಗೆ ಬಿಜೆಪಿ ಸದಸ್ಯ ವಿಶ್ವನಾಥ್ ಅವರ ಕಾಲೆಳೆದರು. ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರ ಮಾತಿಗೆ ಸಿಟ್ಟಾದಂತ ಸಿ.ಟಿ…
ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ”ಮಾರ್ಗದಲ್ಲಿ ಕರ್ನಾಟಕ ಸಾರಿಗೆ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ & ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ 20/07/2024 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುತ್ತದೆ ಅಂತ ತಿಳಿಸಿದೆ. “ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ” ಪ್ಯಾಕೇಜ್ ಟೂರ್ ವೇಳಾಪಟ್ಟಿ ಬೆಂಗಳೂರಿನಿಂದ ಮದ್ದೂರು 0630-0830 ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಮದ್ದೂರಿನಲ್ಲಿ ಉಪಹಾರದ ಸಮಯ 0830-0900 ಮದ್ದೂರಿನಿಂದ ಸೋಮನಾಥಪುರ 0900-0945 ಸೋಮನಾಥೇಶ್ವರ ದರ್ಶನ 0945-1045 ಸೋಮನಾಥಪುರದಿಂದ ತಲಕಾಡು 1045-1130 ತಲಕಾಡು ಪಂಚಲಿಂಗ ದರ್ಶನ/ಮಧ್ಯಾಹ್ನದ ಊಟ 1130-1500 ತಲಕಾಡಿನಿಂದ ಮಧ್ಯರಂಗ 1500-1545 ರಂಗನಾಥ ಸ್ವಾಮಿ ದರ್ಶನ 1545-1555 ಮಧ್ಯರಂಗದಿಂದ…
ಬೆಂಗಳೂರು: ಜೋಗ್ ಫಾಲ್ಸ್ ಗೆ ತೆರಳುವಂತ ಪ್ರವಾಸಿಗರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಈ ಮೂಲಕ ಜೋಗದ ಜಲಪಾತ ವೀಕ್ಷಣೆಗೆ ತೆರಳುವಂತ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಜೋಗ ಜಲಪಾತ” ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ಯಾಕೇಜ್ಟೂರ್ನ್ನು ದಿನಾಂಕ 19/07/2024 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುತ್ತದೆ. ಬೆಂಗಳೂರು-ಜೋಗ ಜಲಪಾತ ಪ್ಯಾಕೇಜ್ ಟೂರ್ ವೇಳಾಪಟ್ಟಿ ಬೆಂಗಳೂರಿನಿಂದ ಸಾಗರ 2230-0530 ಹೋಟೆಲ್ನಲ್ಲಿ ಫ್ರೆಶ್ ಅಪ್ ಹಾಗೂ ವಿಶ್ರಾಂತಿ ಸಮಯ 0530-0700 ಉಪಹಾರ 0700-0715 ಸಾಗರದಿಂದ-ವರದಹಳ್ಳಿ 0715-0730 ವರದಹಳ್ಳಿಯಿಂದ ವರದಮೂಲ 0830-0900 ವರದಮೂಲದಿಂದ ಇಕ್ಕೇರಿ 0915-0930 ಇಕ್ಕೇರಿಯಿಂದ…
ಹಾಸನ: ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಇಂದು ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಜ್ವರದಿಂದ ಬಳಲುತ್ತಿದ್ದಂತ 9 ವರ್ಷದ ಬಾಲಕ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದ 9 ವರ್ಷದ ಬಾಲಕ ರಾಜೇಶ್ ಎಂಬಾತ ತೀವ್ರ ಜ್ವರದಿಂದ ಬಳಲುತ್ತಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ 9 ವರ್ಷದ ಬಾಲಕ ಸಾವನ್ನಪ್ಪಿರೋದ್ದಾರೆ. ಮಾಡಾಳುವಿನ ಗೌರಮ್ಮ ಹಾಗೂ ನಾಗರಾಜು ದಂಪತಿಗಳ ಪುತ್ರ ರಾಜೇಶ್(9) ಇಂದು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾನೆ. ಈ ಮೂಲಕ ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾದಂತೆ ಆಗಿದೆ. https://kannadanewsnow.com/kannada/note-applications-invited-for-free-classes-for-bank-exams/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/