Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದಂತ ಪೋಟೋಗಳು ವೈರಲ್ ಆಗಿದ್ದವು. ಈ ಬೆನ್ನಲ್ಲೇ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿವಂತ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಂತ ವ್ಯಕ್ತಿಯೊಬ್ಬ ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ. ಅಲ್ಲಿ ದುಡ್ಡು ಕೊಟ್ಟರೇ ಎಲ್ಲವೂ ಸಿಗುತ್ತದೆ. ಗಾಂಜಾ, ಸಿಗರೇಟ್ ಎಲ್ಲವೂ ಉಂಟು. ಅಲ್ಲಿನ ಖೈದಿಗಳು ಎಲ್ಲರೂ ಮೊಬೈಲ್ ಬಳಕೆ ಮಾಡುತ್ತಿರುವುದಾಗಿ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದರು. ಇದೀಗ ಈ ಘಟನೆಯ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಜೈಲು ಅಧಿಕಾರಿಗಳೊಂದಿಗೆ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರವಾಗಿ ಚರ್ಚಿಸುತ್ತಿದ್ದಾರೆ. ಮಾಹಿತಿ ಪಡೆಯುತ್ತಿದ್ದಾರೆ…
ಮಡಿಕೇರಿ : ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪ್ರಧಾನಮಂತ್ರಿ ಜನಜಾತಿಯ ಆದಿವಾಸಿ ನ್ಯಾಯ ಮಹಾ ಯೋಜನೆಯಡಿ(ಪಿಎಂ-ಜನ್ಮನ್) ಕಾರ್ಯಕ್ರಮಗಳನ್ನು ಪಿವಿಟಿಜಿ ಸಮುದಾಯವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯಲು ದೇಶದಾದ್ಯಂತ ಪಿಎಂ-ಜನ್ಮನ್ ಪೇಸ್ 2 (PMJANMAN Phase-II) ಕಾರ್ಯಕ್ರಮದಡಿ ಅರಿವು ಮೂಡಿಸುವ ಶಿಬಿರ/ಫಲಾನುಭವಿಗಳ ಸ್ಯಾಚುರೇಷನ್ ಕ್ಯಾಂಪ್ಗಳನ್ನು ಸೆಪ್ಟೆಂಬರ್, 10 ರವರೆಗೆ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯ ಬುಡಕಟ್ಟು ಸಮುದಾಯವಾದ ಜೇನುಕುರುಬ ಸಮುದಾಯದವರಿಗೆ ಪಿಎಂ-ಜನ್ಮನ್ ಪೇಸ್ 2 (PM-JANMAN phase II) ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು/ ಬ್ಲಾಕ್ ನೋಡೆಲ್ ಅಧಿಕಾರಿಗಳ ತಂಡ ರಚಿಸಲಾಗಿದೆ. ಆಗಸ್ಟ್, 23 ರಿಂದ ಸೆಪ್ಟೆಂಬರ್, 10 ರ ಅವಧಿಯಲ್ಲಿ ಜೇನುಕುರುಬ ಜನಾಂಗದವರಿಗೆ ಆಧಾರ್ ಕಾರ್ಡ್ ನೋಂದಣಿ, ಪಿ.ಎಂ ಜನ್ಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಕಾರ್ಡ್, ಸಿಕೆಲ್ಸೆಲ್ ಅನೆಮಿಯಾ ಖಾಯಿಲೆ ಸ್ಕ್ರೀನಿಂಗ್ ಪರೀಕ್ಷೆ, ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜೇನುಕುರುಬ…
ಬೆಂಗಳೂರು ; ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಡಿ ಸರ್ಕಾರದ ಸೇವಾ ಸಿಂಧು ಪೋರ್ಟ್ಲ್ https://sevasindhu.karnataka.gov.in ಅಂತರಜಾಲ ಜಾಲತಾಣದಲ್ಲಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್. ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರವರೆಗೆ ಅರ್ಜಿ ಸಲ್ಲಿಸುವ್ಯದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ತಿಳಿಸಿದೆ. https://kannadanewsnow.com/kannada/centre-to-take-steps-to-give-more-strength-to-bhel-hd-kumaraswamy/ https://kannadanewsnow.com/kannada/breaking-cm-siddaramaiah-may-resign-at-any-moment-b-y-vijayendra/
ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL)ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳು ಮತ್ತು ಕಾರ್ಮಿಕರ ಜತೆ ಸಂವಾದ ನಡೆಸುತ್ತಾ ಸಚಿವರು ಮಾತನಾಡಿದರು. ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿಗಳು ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಅವರನ್ನು ನಾವು ನಿಕಟವಾಗಿ ಹಿಂಬಾಲಿಸುತ್ತಿದ್ದೇವೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ನಿರಂತರವಾಗಿ ಚರ್ಚೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು. BHEL ಗೆ ಮತ್ತಷ್ಟು ಶಕ್ತಿ: ಪ್ರಧಾನಿಗಳ ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡಿದ್ದಾರೆ. ಭಾರತವನ್ನು ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಹಾಗೂ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಲು ಕೈಗಾರಿಕಾ ಉತ್ಪನ್ನವನ್ನು…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಕ್ರಿಸ್ಟಿಯಾನೊ ರೊನಾಲ್ಡೊ ಮುಂದಿನ ಮೂರು ವರ್ಷಗಳಲ್ಲಿ ನಿವೃತ್ತಿ ಹೊಂದಲು ಯೋಜಿಸಿದ್ದಾರೆ ಎಂದು ಘೋಷಿಸಿದ್ದಾರೆ. ಆದರೂ ಅವರು ಫುಟ್ಬಾಲ್ನಲ್ಲಿ ಅಪೂರ್ಣ ವ್ಯವಹಾರವನ್ನು ಹೊಂದಿದ್ದಾರೆ ಎಂದು ಅವರು ಭಾವಿಸುತ್ತಾರೆ ಎಂದಿದ್ದಾರೆ. ಪ್ರಸ್ತುತ ಸೌದಿ ಪ್ರೊ ಲೀಗ್ನಲ್ಲಿ ಅಲ್-ನಸ್ಸರ್ ಪರ ಆಡುತ್ತಿರುವ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ನಂತರ ಡಿಸೆಂಬರ್ 2022 ರಲ್ಲಿ ಕ್ಲಬ್ಗೆ ಸೇರಿದರು. 39ರ ಹರೆಯದ ರೊನಾಲ್ಡೊ ಫುಟ್ಬಾಲ್ ದಂತಕಥೆಯಾಗಿದ್ದು, ತಮ್ಮ ವೃತ್ತಿಜೀವನದ ಆರಂಭದಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ಮತ್ತು ರಿಯಲ್ ಮ್ಯಾಡ್ರಿಡ್ನಲ್ಲಿ ತಮ್ಮ ಛಾಪು ಮೂಡಿಸಿದ್ದರು. ರೊನಾಲ್ಡೊ ಯೂರೋ 2024 ನಲ್ಲಿ ಪೋರ್ಚುಗಲ್ ಅನ್ನು ಪ್ರತಿನಿಧಿಸಿದ್ದರು, ಇದು ಯುರೋಪಿಯನ್ ಪಂದ್ಯಾವಳಿಯಲ್ಲಿ ಅವರ ಕೊನೆಯ ಪ್ರದರ್ಶನವಾಗಬಹುದು ಎಂದು ಹಲವರು ಪರಿಗಣಿಸಿದ್ದಾರೆ. ಯುರೋಪ್ಗೆ, ವಿಶೇಷವಾಗಿ ತನ್ನ ಬಾಲ್ಯದ ಕ್ಲಬ್ ಸ್ಪೋರ್ಟಿಂಗ್ ಲಿಸ್ಬನ್ಗೆ ಮರಳುವ ಬಗ್ಗೆ ಊಹಾಪೋಹಗಳ ಹೊರತಾಗಿಯೂ, ರೊನಾಲ್ಡೊ ಅವರು ಅಲ್-ನಸ್ ನಲ್ಲಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಖಚಿತಪಡಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, ರೊನಾಲ್ಡೊ ನಿವೃತ್ತಿಯ ಬಗ್ಗೆ ತಮ್ಮ ಆಲೋಚನೆಗಳನ್ನು…
ದಾವಣೆಗೆರೆ: ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ ಎಂಬುದಾಗಿ ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿ ನುಡಿಯುವ ಮೂಲಕ, ಮುಂಬರುವ ದಿನಗಳಲ್ಲಿ ನಾಡಿಗೆ ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದಾಗಿ ಹೇಳಿದೆ. ಇಂದು ದಾವಣೆಗೆರೆ ಜಿಲ್ಲೆಯ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ದೇವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂಬುದಾಗಿ ಪೂಜಾರಪ್ಪ ಕಾರ್ಣಿಕ ನುಡಿ ನುಡಿದಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಣಿಕ ನುಡಿಯನ್ನು ಪೂಜಾರಿ ನುಡಿದಿದ್ದು, ಬರುವ ದಿನಗಳಲ್ಲಿ ನಾಡಿಗೆ, ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದು ಇದರ ಸಾರಾಂಶ ಎಂಬುದಾಗಿ ಜನರು ವಿಶ್ಲೇಷಿಸಿದ್ದಾರೆ. https://kannadanewsnow.com/kannada/breaking-cm-siddaramaiah-may-resign-at-any-moment-b-y-vijayendra/ https://kannadanewsnow.com/kannada/good-news-from-the-central-government-rs-72000-will-be-available-every-year-under-this-scheme-pension/
ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ ಎಂದರು. ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ…
ಬೆಂಗಳೂರು: ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸೆಪ್ಟೆಂಬರ್ 15 ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ…
ಕೇರಳ: ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ಇವರಲ್ಲದೇ ಎಲ್ಲಾ 17 ಕಾರ್ಯಕಾರಿ ಸಮಿತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅಮ್ಮಾದಲ್ಲಿ ಸಾಮೂಹಿಕ ರಾಜೀನಾಮೆಯನ್ನು ಪದಾಧಿಕಾರಿಗಳು ನೀಡಿದ್ದಾರೆ. ಮಲಯಾಳಂ ಮೂವಿ ಆರ್ಟಿಸ್ಟ್ಸ್ ಅಸೋಸಿಯೇಷನ್ (ಎಎಂಎಂಎ) ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಜಂಟಿ ರಾಜೀನಾಮೆಯನ್ನು ಸಲ್ಲಿಸಿದರು. ಮಹಿಳಾ ವೃತ್ತಿಪರರ ಮೇಲಿನ ಕಿರುಕುಳ ಮತ್ತು ದುರುಪಯೋಗದ ಬಗ್ಗೆ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ಸ್ಫೋಟಕ ಸಂಶೋಧನೆಗಳ ನಂತರ ಮಲಯಾಳಂ ಚಲನಚಿತ್ರ ಜಗತ್ತಿನಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.ಇದು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಇಬ್ಬರು ಉನ್ನತ ಮಟ್ಟದ ರಾಜೀನಾಮೆಗಳಿಗೆ ಕಾರಣವಾಯಿತು. ಚಲನಚಿತ್ರೋದ್ಯಮದಲ್ಲಿ ಪರಭಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು ಮತ್ತು ಮಹಿಳಾ ನಟರು ಎದುರಿಸುತ್ತಿರುವ ದೌರ್ಜನ್ಯಗಳ ಬಗ್ಗೆ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆರೋಪಿ ನಟ ದರ್ಶನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಲ್ಸನ್ ಗಾರ್ಡನ್ ನಾಗ ಜೊತೆಗೆ ದರ್ಶನ್ ಕಾಣಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು. ಜೈಲಲ್ಲಿ ಯಾರು ಇರ್ತಾರೆ? ಜೈಲಲ್ಲಿ ಇರೋದೇ ಕ್ರಿಮಿನಲ್ಸ್ ಅಲ್ವ ಎಂದು ಪ್ರಶ್ನಿಸಿದರು. ಜೈಲಿನಲ್ಲಿ ಓಡಾಡುವುದಕ್ಕೆ ಯಾರು ಸಿಗುತ್ತಾರೆ. ತಪ್ಪು ಮಾಡಿದವರೇ ಅಲ್ಲವೇ ಜೈಲಿಗೆ ಹೋಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ದರ್ಶನ್ ಆರೋಪಿ ಸ್ಥಾನದಲ್ಲಿ ಇದ್ದಾರೆ ಎಂಬುದಾಗಿ ಹೇಳಿದರು. ಈ ಘಟನೆಯ ಬಗ್ಗೆ ಉಳಿದವರನ್ನು ಬಿಟ್ಟು ದರ್ಶನ್ ಹೈಲೈಟ್ ಮಾಡುತ್ತಿದ್ದಾರೆ. ದರ್ಶನ್ ಹಾಗೆ ಕುಳಿತು ಮಾತನಾಡಿದ್ದು ಖಂಡಿತವಾಗಿ ತಪ್ಪೇ, ಆ ತಪ್ಪಿಗೆ ಜೈಲು ಅಧಿಕಾರಿಗಳು ಅಮಾನತು ಮಾಡಿದ್ದಾರೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವುದರ ಬಗ್ಗೆ ಗೊತ್ತಿಲ್ಲ ಎಂದರು. ನಾನು ದರ್ಶನ್ ಅವರನ್ನು ಭೇಟಿ ಆಗುವುದು ವೈಯಕ್ತಿಕ ವಿಚಾರವಾಗಿ…