Author: kannadanewsnow09

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ಸರ್ಜರಿ ಆಗಲಿದೆ ಎನ್ನಲಾಗುತ್ತಿತ್ತು. ಹಲವು ಸಚಿವರು ಕೂಡ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದರು. ಆದರೇ ಸಿದ್ಧರಾಮಯ್ಯ ಮಾತ್ರ ನಾನು ಸಿಎಂ ಹೇಳ್ತಾ ಇದ್ದೀನಿ, ಸಂಪುಟ ಪುನರ್ ರಚನೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದಂತ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಅವಧಿಯವರೆಗೆ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ನಾನೇ ಚೀಫ್ ಮಿನಿಸ್ಟರ್ ಎಂಬುದಾಗಿ ಸ್ಪಷ್ಟ ಪಡಿಸಿದರು. ಇನ್ನೂ ಸಂಪುಟ ಪುನರ್ ರಚನೆ ಆಗಲಿದ್ಯಾ ಎನ್ನುವ ಮಾತಿಗೆ ಪ್ರತಿಕಿರ್ಯಿಸಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆಯಿಲ್ಲ. ಸಂಪುಟ ಸರ್ಜರಿಯೂ ಇಲ್ಲ. ನಾನೇ ಸಿಎಂ ಹೇಳ್ತಾ ಇದ್ದೀನಿ ಅಂತ ತಿಳಿಸಿದರು. ಮುಡಾ ಅಕ್ರಮ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ನಡೆಸುತ್ತಿರುವಂತ ಮೈೂರು ಪಾದಯಾತ್ರೆಯೆಲ್ಲ ರಾಜಕೀಯ ಪ್ರೇರಿತವಾಗಿದೆ. ಇದು ರಾಜಕೀಯ…

Read More

ಬೆಂಗಳೂರು: ರಾಜ್ಯದ 12 ಕ್ರೀಡಾ ಪಟುಗಳು ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪದಕ ಗೆದ್ದು, ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದರು. ಇಂತಹ ರಾಜ್ಯದ 12 ಕ್ರೀಡಾಪಟುಗಳಿಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು. ಈ ಬಳಿಕ ಮಾತನಾಡಿದಂತ ಅವರು ನಾನು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗೆಲುವು ಸಾಧಿಸುವಂತ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದೆ. 2016-17ರಲ್ಲಿ ಒಲಂಪಿಕ್ಸ್ ಗೇಮ್ಸ್ ನಲ್ಲಿ ಗೆದ್ದಂತವರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದೆ. ನನ್ನ ಅಧಿಕಾರಾವಧಿಯ ಬಳಿಕ ಆ ಕಾರ್ಯ ಅಲ್ಲಿಗೆ ನಿಂತಿತ್ತು ಎಂದರು. ನಾನು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಘೋಷಣೆ ಮಾಡಿದಂತ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದಂತ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದೇನೆ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದುಕೊಡುವಂತ ಕೆಲಸ ಮಾಡಬೇಕು ಎಂದರು. ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ನಡೆ ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ…

Read More

ರಾಮನಗರ: ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು. ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು ಅವರು. ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು. ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ಕಾರ್ಯವನ್ನು ಮಾಡಲಾಗಿದೆ. ರಾಜ್ಯದ ಕ್ರೀಡಾಪಟುಗಳಿಗೆ ಉದ್ಯೋಗ ಭಾಗ್ಯವನ್ನು ನೀಡಲಾಗಿದೆ. ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿಯನ್ನು ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ. ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು. ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/decision-to-remove-sirigere-swamiji-from-chair-coordination-committee-formed-under-the-chairmanship-of-shamanur/ https://kannadanewsnow.com/kannada/breaking-major-fire-breaks-out-at-andhra-pradeshs-visakhapatnam-railway-station-trains-gutted-in-fire/

Read More

ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿನ ತರಳಬಾಳು ಗುರುಪೀಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಪೀಠದಿಂದ ಕೆಳಗೆ ಇಳಿಸಲು ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಲ್ಲದೇ ಆಗಸ್ಟ್.18ರಂದು ಸಿರಿಗೆರೆ ಮಠಕ್ಕೆ ಹೋಗಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ತರಳಬಾಳು ಪೀಠ ಅಂದು-ಇಂದು-ಮುಂದು ಕುರಿತಂತೆ ಶ್ರೀಮಠದ ಸದ್ಭಕ್ತರ ಸಮಾಲೋಚನಾ ಸಭೆಯು, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಅಪೂರ್ವ ರೆಸಾರ್ಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯ ವಿರುದ್ಧ ಸ್ವ ಜಾತಿಯಿಂದಲೇ ಆಕ್ರೋಶ ವ್ಯಕ್ತವಾಯಿತು. ಈ ಸಭೆಯ ಬಳಿಕ ಮಾತನಾಡಿದಂತ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹತ್ತು ವರ್ಷಗಳ ಹಿಂದೆ ಸಿರಿಗೆರೆ ಸ್ವಾಮೀಜಿ ಪದತ್ಯಾಗ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೇ ಭಕ್ತರ ಆಗ್ರಹದಿಂದ ತ್ಯಾಗ ಮಾಡಲಿಲ್ಲ ಎಂದರು. ಇಂದಿನ ಸಭೆಯಲ್ಲಿ ಸಿರಿಗೆರೆ ಮಠದ ಸ್ವಾಮೀಜಿ ಬದಲಾವಣೆಗೆ ನಿರ್ಧರಿಸಲಾಗಿದೆ. ಅದಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/beware-of-selfie-lovers-read-this-news-before-you-go-for-a-selfie-near-the-abyss/ https://kannadanewsnow.com/kannada/breaking-major-fire-breaks-out-at-andhra-pradeshs-visakhapatnam-railway-station-trains-gutted-in-fire/

Read More

ಪುಣೆ: ಸುಂದರವಾಗಿ ಕಾಣುತ್ತಿದೆ ಅಂತ ಅಂದ್ರೆ ಅಲ್ಲೊಂದು ಪೋಟೋ ತೆಗೆದುಕೊಳ್ಳಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಅನ್ನೋದು ಹಲವರ ಹುಚ್ಚು. ಅದು ಪ್ರಪಾತ ಇರಲಿ, ನದಿ, ಜಲಪಾತವಿರಲೀ, ಸೆಲ್ಫಿಯ ಗೀಳು ಮಾತ್ರ ಬಿಡಲ್ಲ. ನೀವು ಪ್ರಪಾತದ ಬಳಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳೋದಕ್ಕೆ ಹೋಗ್ತಾ ಇದ್ದೀರಿ ಅಂದ್ರೆ, ಅದಕ್ಕೂ ಮುನ್ನಾ ಮುಂದೆ ಸುದ್ದಿ ಓದಿ. ಪುಣೆ ಮೂಲದ ನಸ್ರೀನ್ ಅಮೀರ್ ಕುರೇಶಿ ಎಂಬ 29 ವರ್ಷದ ಮಹಿಳೆ ಶನಿವಾರ ಬೋರ್ನ್ ಘಾಟ್ನಲ್ಲಿ ಫೋಟೋ ತೆಗೆಯಲು ಪ್ರಯತ್ನಿಸುವಾಗ ಸುಮಾರು 50 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ. ವಾರ್ಜೆಯಲ್ಲಿ ವಾಸಿಸುವ ನಸ್ರೀನ್ ತನ್ನ ಸ್ನೇಹಿತರೊಂದಿಗೆ ಥೋಸೆಘರ್ ಜಲಪಾತದಿಂದ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ತಂಡವು ಆರಂಭದಲ್ಲಿ ಥೋಸೆಘರ್ ಜಲಪಾತಕ್ಕೆ ಭೇಟಿ ನೀಡಲು ಯೋಜಿಸಿತ್ತು, ಆದರೆ ಭಾರಿ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಇದನ್ನು ಪ್ರವಾಸಿಗರಿಗೆ ಮುಚ್ಚಲಾಗಿತ್ತು. ಬದಲಾಗಿ, ಅವರು ಫೋಟೋ ಸೆಷನ್ಗಾಗಿ ಬೋರ್ನ್ ಘಾಟ್ನಲ್ಲಿ ನಿಲ್ಲಲು ನಿರ್ಧರಿಸಿದರು. ಫೋಟೋಗಳಿಗೆ ಪೋಸ್ ನೀಡುವಾಗ, ನಸ್ರೀನ್ ಅಂಚಿನಿಂದ ಜಾರಿ ದಟ್ಟವಾದ ಕಾಡಿನ ಕಮರಿಗೆ…

Read More

ವಿಶಾಖಪಟ್ಟಣಂ: ವಿಶಾಖಪಟ್ಟಣಂ-ಕೊರ್ಬಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭೀಕರ ಅಗ್ನಿ ಅವಘಟ ಸಂಭವಿಸಿದೆ. ಬೆಂಕಿಯಿಂದಾಗಿ 3 ಬೋಗಿಗಳಿಗೆ ಹಾನಿಗೊಂಡಿರುವುದಾಗಿ ತಿಳಿದು ಬಂದಿದೆ. ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಎಕ್ಸ್ ಪ್ರೆಸ್ ರೈಲಿನ ಮೂರು ಹವಾನಿಯಂತ್ರಿತ ಬೋಗಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ದುರಂತದಲ್ಲಿ ಎಲ್ಲಾ ಮೂರು ಬೋಗಿಗಳು ಸುಟ್ಟುಹೋಗಿವೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ಪ್ರೆಸ್ (18517) ನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್, ಬೆಂಕಿ ಅಪಘಾತದ ಸಮಯದಲ್ಲಿ ರೈಲು ಖಾಲಿಯಾಗಿತ್ತು, ಆದ್ದರಿಂದ ಎಲ್ಲಾ ಪ್ರಯಾಣಿಕರು ಇಳಿದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ಪ್ರೆಸ್ (18517) ಬೆಳಿಗ್ಗೆ ಕೊರ್ಬಾ ನಿಲ್ದಾಣದಿಂದ ಪ್ಲಾಟ್ಫಾರ್ಮ್ ಸಂಖ್ಯೆ 4 ರಲ್ಲಿ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣಕ್ಕೆ ಬಂದಿತ್ತು. ನಂತರ ತಿರುಪತಿಗೆ ಹೊರಡಲು ನಿರ್ಧರಿಸಲಾಗಿತ್ತು, ಆದರೆ ಬೆಂಕಿ ಅಪಘಾತ ಸಂಭವಿಸಿದ್ದರಿಂದ ರೈಲು ಸೇವೆಯನ್ನು ರದ್ದುಗೊಳಿಸಲಾಯಿತು. https://twitter.com/SajalD_IITKgP/status/1820036464425500876 ರೈಲ್ವೆ ಅಧಿಕಾರಿಯೊಬ್ಬರ ಪ್ರಕಾರ, ಕೊರ್ಬಾ ಎಕ್ಸ್ಪ್ರೆಸ್ ರೈಲು ಬೆಳಿಗ್ಗೆ 6: 30 ಕ್ಕೆ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣಕ್ಕೆ ಬಂದಿತ್ತು. ಅದರ ಪ್ರಯಾಣದ ನಂತರ, ಕೋಚಿಂಗ್ ಡಿಪೋದಲ್ಲಿ ಹೆಚ್ಚು…

Read More

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024ರ ಮಹಿಳೆಯರ 75 ಕೆಜಿ ವಿಭಾಗದಲ್ಲಿ ಲೊವ್ಲಿನಾ ಬೊರ್ಗೊಹೈನ್ ನಿರ್ಗಮಿಸಿದ್ದಾರೆ. 33 ನೇ ಬೇಸಿಗೆ ಕ್ರೀಡಾಕೂಟದಲ್ಲಿ ಬಾಕ್ಸಿಂಗ್ನಲ್ಲಿ ಭಾರತದ ಸವಾಲು ಕೊನೆಗೊಂಡಿದ್ದರಿಂದ ಏಸ್ ಬಾಕ್ಸರ್ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಲಿ ಕಿಯಾನ್ ವಿರುದ್ಧ 1-4 ಅಂತರದಿಂದ ಸೋಲನುಭವಿಸಿದರು. ಶನಿವಾರ ನಡೆದ ಪುರುಷರ 71 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ನಿಶಾಂತ್ ದೇವ್ ಕೇವಲ ಒಂದು ಅಂತರದಿಂದ ಪದಕದಿಂದ ನಿರ್ಗಮಿಸಿದರು. ಬಾಕ್ಸಿಂಗ್ನಲ್ಲಿ ಇತಿಹಾಸ ರಚಿಸಲು ಬೊರ್ಗೊಹೈನ್ಗೆ ಅವಕಾಶವಿತ್ತು ಆದರೆ ಅವರ ಎದುರಾಳಿ, ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಮತ್ತು ಮಾಜಿ ವಿಶ್ವ ಚಾಂಪಿಯನ್ ಲಿ ಕಿಯಾನ್ ಆರಂಭದಿಂದಲೂ ಪ್ರಬಲ ಪಿಂಚ್ ಗಳೊಂದಿಗೆ ತುಂಬಾ ಬಲಶಾಲಿ ಎಂದು ಸಾಬೀತುಪಡಿಸಿದರು. ಬೊರ್ಗೊಹೈನ್ ಮತ್ತು ದೇವ್ ಕ್ವಾರ್ಟರ್ ಫೈನಲ್ನಲ್ಲಿ ಹೊರಗುಳಿದಿರುವುದರಿಂದ, ಭಾರತೀಯ ತಂಡವು ಬಾಕ್ಸಿಂಗ್ನಲ್ಲಿ ಪದಕವಿಲ್ಲದೆ ಮರಳಲಿದೆ. ಅಮಿತ್ ಪಂಗಲ್, ನಿಖತ್ ಝರೀನ್, ಜೈಸ್ಮಿನ್ ಲಂಬೋರಿಯಾ ಮತ್ತು ಪ್ರೀತಿ ಪವಾರ್ ಪ್ಯಾರಿಸ್ನಲ್ಲಿ ನಡೆದ ಬಾಕ್ಸಿಂಗ್ ಅಭಿಯಾನದಲ್ಲಿ…

Read More

ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹಿಂದೆ ಬಿಜೆಪಿ ಜತೆ, ಆಮೇಲೆ ಕಾಂಗ್ರೆಸ್ ಜೊತೆ ಸೇರಿಕೊಂಡು ಸರಕಾರ ರಚಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. ಈಗ ಪುನಃ ಬಿಜೆಪಿ ಜೊತೆ ಹೋಗಿದ್ದಾರೆ. ಅವರದು ಅವಕಾಶವಾದಿ ಮೈತ್ರಿ. ಅವರು ತಮ್ಮ ಸರಕಾರವನ್ನೇ ಉಳಿಸಿಕೊಳ್ಳಲಿಲ್ಲ. ಈಗ ನಮ್ಮ ಸರಕಾರವನ್ನು ಉರುಳಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಟೀಕಿಸಿದ್ದಾರೆ. ಭಾನುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ‌ ನೈತಿಕ ಬೆಂಬಲವೂ ಇಲ್ಲ ಎಂದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರಷ್ಟೆ ಎಂದು ಅವರು ಕುಟುಕಿದರು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಯಾವ ತಪ್ಪೂ ಇಲ್ಲ. ಸ್ವತಃ ಮುಡಾ ತಪ್ಪು ಮಾಡಿ, ಅದನ್ನು ಒಪ್ಪಿಕೊಂಡಿದೆ. ನಿಯಮಗಳಂತೆಯೇ ಸಿಎಂ ಪತ್ನಿಗೆ ಬದಲಿ ನಿವೇಶನಗಳನ್ನು ಅದು ಕೊಟ್ಟಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ನಾಯಕ…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ 10 ಪ್ರಶ್ನೆಗಳನ್ನು ಮಾಜಿ ಪರಿಷತ್ ಸದಸ್ ರಮೇಶ್ ಬಾಬು ಕೇಳಿದ್ದಾರೆ. ಆ ಪ್ರಶ್ನೆಗಳು ಏನು ಅನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರು ಹಾಗೂ ಮಾಜಿ ಪರಿಷತ್ ಸದಸ್ಯರಾದಂತ ರಮೇಶ್ ಬಾಬು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ಜನನಾಯಕರಾಗುವುದಿಲ್ಲ ಎಂದಿದ್ದಾರೆ. ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಕುಮಾರ ಸ್ವಾಮಿ ಅವರೊಂದಿಗೆ ಸಮ್ಮಿಶ್ರ ಸರ್ಕಾರ ನಡೆಸಿದ ಯಡಿಯೂರಪ್ಪನವರು, ಕುಮಾರಸ್ವಾಮಿ ಅವರಿಂದ ಅಧಿಕಾರ ವಂಚಿತರಾಗಿ ವಚನ ಭ್ರಷ್ಟತೆಯ ಆರೋಪ ಮಾಡಿ ಇದೇ ಕಾರಣಕ್ಕಾಗಿ ಹೋರಾಟ ಮಾಡಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರು. ತದನಂತರ ಬೇರೆಬೇರೆ ಸಂದರ್ಭಗಳಲ್ಲಿ ಜೆಡಿಎಸ್ ಪಕ್ಷದ ಮೇಲೆ, ದೇವೇಗೌಡರ ಮೇಲೆ ಮತ್ತು ಅವರ ಕುಟುಂಬದ ಮೇಲೆ ವಿಧಾನ ಮಂಡಲದ…

Read More