Author: kannadanewsnow09

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಬಿಜೆಪಿ ಘೋಷಿಸಿದೆ. ಈ ಮೂಲಕ ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ದೆಹಲಿ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಬುಧವಾರ ಸಂಜೆ ಪಕ್ಷದ ದೆಹಲಿ ಘಟಕದ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕರಾಗಿರುವ 50 ವರ್ಷದ ಗುಪ್ತಾ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಬಂದನಾ ಕುಮಾರಿ ಅವರನ್ನು ಸೋಲಿಸಿದ್ದರು. ರೇಖಾ ಗುಪ್ತಾ ಹೊರತುಪಡಿಸಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ; ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ; ಪವನ್ ಶರ್ಮಾ, ಆಶಿಶ್ ಸೂದ್ ಮತ್ತು ಶಿಖಾ ರಾಯ್ ಅವರಂತಹ…

Read More

ಬೆಂಗಳೂರು: ಕಂದಾಯ ಇಲಾಖೆಯ ಒತ್ತಡದ ಕೆಲಸವನ್ನು ಕೂಡಲೇ ಕೆಲಸ ಮಾಡಿ. ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಂಘ ಅಧ್ಯಕ್ಷ ಎ.ಅಮೃತ್ ರಾಜ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಇಲಾಖೆ ಕುಂದು ಕೊರತೆಗಳ ಸಭೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಸಮೂಖದಲ್ಲಿ ದಿನಾಂಕ: 18.02.2025 ರಂದು ಸಂಜೆ 6:00 ಗಂಟೆಗೆ ಸಂಘದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು ಸದರಿ ಸಭೆಯಲ್ಲಿ ಕಂದಾಯ ಅಧಿಕಾರಿಗಳು / ಸಹ ಕಂದಾಯ ಅಧಿಕಾರಿಗಳು ಮಾತ್ರ ಭಾಗವಹಿಸಿ ಸಭೆಯಲ್ಲಿ ಚರ್ಚಿಸಿ/ತೀರ್ಮಾನವನ್ನು ತೆಗೆದುಕೊಂಡು ಈ ಕೆಳಕಂಡ ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಲು ಪಾಲಿಕೆಯ ಮುಖ್ಯಸ್ಥರಿಗೆ ನಮ್ಮ ಸಂಘದ ಪತ್ರದ ಮೂಲಕ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಲು ತೀರ್ಮಾನಿಸಲಾಗಿರುತ್ತದೆ.…

Read More

ವಿಜಯಪುರ : ಜಿಲ್ಲೆಯಲ ಆಲ್ ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಘಟನೆ ನಡೆದಿದೆ ಎನ್ನಲಾಗಿತ್ತು. ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ಮಾಡಲಾಗಿ ಎಂಬುದಾಗಿ ವರದಿಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ವಿಜಯಪುರ ಜಿಲ್ಲಾಧಿಕಾರಿಗಳು, ಹಲ್ಲೆ ಮಾಡಿದಂತ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ವಿಜಯಪುರ ಜಿಲ್ಲಾಧಿಕಾರಿ, ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಅದೇ ಕಾಲೇಜಿನ 04 ಜನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂಬ ವರದಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿ ಹಮೀಮಗೆ ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ. ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್ ಅವರಿಗೆ…

Read More

ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಆ ಸಮಸ್ಯೆಯಿಂದ ಹೊರಬರುವುದೇ ಅವರ ಜೀವನವಾಗುತ್ತದೆ. ಒಂದು ಸಮಸ್ಯೆಯನ್ನು ಪರಿಹರಿಸಿದ ನಂತರ ಮತ್ತೊಂದು ಸಮಸ್ಯೆ ಬಂದರೆ ಆ ಸಮಸ್ಯೆಗಳನ್ನು ನಾವು ಸವಾಲಾಗಿ ತೆಗೆದುಕೊಳ್ಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More

ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಅನೇಕ ಸ್ಥಳಗಳಲ್ಲಿ ನೀರಿನಲ್ಲಿ ಮಲದ ಬ್ಯಾಕ್ಟೀರಿಯಾ ಇದೆ ಎಂಬ ವರದಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಳ್ಳಿಹಾಕಿದ್ದಾರೆ. ಸಂಗಮ್ ನೀರು ಕುಡಿಯಲು ಮತ್ತು ಸ್ನಾನ ಮಾಡಲು ಯೋಗ್ಯವಾಗಿದೆ ಎಂದು ಪ್ರತಿಪಾದಿಸಿದರು. ಮಹಾಕುಂಭ ಮೇಳದ ಅನೇಕ ಸ್ಥಳಗಳಲ್ಲಿ ಹೆಚ್ಚಿನ ಮಟ್ಟದ ಮಲ ಬ್ಯಾಕ್ಟೀರಿಯಾ ಮತ್ತು ಕೋಲಿಫಾರ್ಮ್ ಕಂಡುಬಂದಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೋಮವಾರ ಹೇಳಿದೆ. ವರದಿಯ ಪ್ರಕಾರ, ತ್ರಿವೇಣಿ ಸಂಗಮದಲ್ಲಿ ವಿಶೇಷವಾಗಿ ಶುಭ ದಿನಗಳಲ್ಲಿ ಹಲವಾರು ಜನರು ಸ್ನಾನ ಮಾಡುವುದರಿಂದ ಮಲದ ಬ್ಯಾಕ್ಟೀರಿಯಾ ಹೆಚ್ಚಾಗಲು ಕಾರಣವಾಯಿತು. ನಾವು ಇಲ್ಲಿ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, 56.25 ಕೋಟಿಗೂ ಹೆಚ್ಚು ಭಕ್ತರು ಈಗಾಗಲೇ ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ನಾವು ಸನಾತನ ಧರ್ಮ, ಗಂಗಾ ಮಾತೆ, ಭಾರತ ಅಥವಾ ಮಹಾ ಕುಂಭದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದಾಗ ಅಥವಾ ನಕಲಿ ವೀಡಿಯೊಗಳನ್ನು ಹರಡಿದಾಗ, ಅದು ಈ 56 ಕೋಟಿ ಜನರ…

Read More

ಬೆಂಗಳೂರು: ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವೊಂದು ಕುಸಿತಗೊಂಡಿದೆ. ಈ ಪರಿಣಾಮ ಮನೆಯ ಅವಶೇಷಗಳಡಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ಪಕ್ಕದ ಮನೆಯ ಕಟ್ಟಡದ ಪಾಯ ತೆಗೆಯುವಾಗ, ಎರಡು ಅಂತಸ್ತಿನ ಕಟ್ಟಡವೊಂದು ಕುಸಿತಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದಾರೆ. ಕುಸಿತಗೊಂಡ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲುಕಿದ್ದವರನ್ನು ಹೊರ ಕಳಿಸಿದ್ದಾರೆ. ಇನ್ನೂ ಅವಶೇಷಗಳ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರಾ ಅಂತ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. https://kannadanewsnow.com/kannada/important-information-for-railway-passengers-change-in-this-train-service-reschedule/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/

Read More

ಬೆಂಗಳೂರು: ಸುರಕ್ಷತಾ ಕ್ರಮಗಳು ಮತ್ತು ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ಕಾಮಗಾರಿಗಳ ಹಿನ್ನೆಲೆಯಲ್ಲಿ, ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ: ರೈಲುಗಳ ಸಂಚಾರ ಭಾಗಶಃ ರದ್ದು: 1. ಫೆಬ್ರವರಿ 24 ಮತ್ತು 27, 2025 ರಂದು ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ರೈಲು ಬೈಯ್ಯಪ್ಪನಹಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ. 2. ಫೆಬ್ರವರಿ 24 ಮತ್ತು 27, 2025 ರಂದು ರೈಲು ಸಂಖ್ಯೆ 56520 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ರೈಲು ಯಶವಂತಪುರ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ. 3. ಫೆಬ್ರವರಿ 25 ಮತ್ತು 28 ರಂದು ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್ಆರ್ ಬೆಂಗಳೂರಿನ…

Read More

ಮುಂಬೈ : ಸ್ಮಾರ್ಟ್ ಟಿವಿಗಳಿಗಾಗಿ ಭಾರತದ ಮೊದಲ ಆಪರೇಟಿಂಗ್ ಸಿಸ್ಟಮ್ ‘ಜಿಯೋಟೆಲಿ ಒಎಸ್’ ಅನ್ನು ರಿಲಯನ್ಸ್ ಜಿಯೋ ಘೋಷಣೆ ಮಾಡಿದೆ. ಇದು ನೆಕ್ಸ್ಟ್ ಜನರೇಷನ್ ಸ್ಮಾರ್ಟ್ ಟಿವಿ ಆಪರೇಟಿಂಗ್ ಸಿಸ್ಟಮ್ ಆಗಿದ್ದು, ಭಾರತೀಯ ಪ್ರೇಕ್ಷಕರ ವಿಶಿಷ್ಟ ಅಗತ್ಯಗಳನ್ನು ಪೂರೈಸುವುದಕ್ಕಾಗಿ ಇದನ್ನು ಸಿದ್ಧಪಡಿಸಲಾಗಿದೆ. ಭಾರತದಲ್ಲಿ ಅಂದಾಜು ಮೂರೂವರೆ ಕೋಟಿ ಮನರಂಜನೆಗೆ ಸಂಪರ್ಕ ಹೊಂದಿದ ಟಿವಿ ಕುಟುಂಬಗಳಿದ್ದು, ಡಿಜಿಟಲ್ ಮನರಂಜನೆಗೆ ಬೇಡಿಕೆ ನಿರಂತರವಾಗಿ ಹೆಚ್ಚಾಗುತ್ತಿದೆ. ಆದರೆ ಹಲವು ಗ್ರಾಹಕರಿಗೆ ಸವಾಲುಗಳು ಎದುರಾಗಿವೆ. ಏಕೆಂದರೆ ಅವರ ಟಿವಿಗಳ ಸೀಮಿತ ಸಾಮರ್ಥ್ಯದಿಂದಾಗಿ ಕಸ್ಟಮೈಸೇಷನ್ ಗೆ ನಿರ್ಬಂಧ, ಹೆಚ್ಚಿನ ಗುಣಮಟ್ಟದ ಪ್ರಾದೇಶಿಕ ಕಂಟೆಂಟ್ ಗೆ ಸೀಮಿತ ಸಂಪರ್ಕ, ಇವೆಲ್ಲದರ ಜೊತೆಗೆ ತಡೆರಹಿತ, ಪ್ರೀಮಿಯಂ ಬಳಕೆದಾರರ ಅನುಭವ ನೀಡುವಂಥದ್ದರ ಅನುಪಸ್ಥಿತಿ ತೊಡಕಾಗಿದೆ. ಭಾರತದಲ್ಲಿ ಹೀಗೆ ಮನರಂಜನೆಗೆ ಸಂಪರ್ಕ ಹೊಂದಿದ ಟೀವಿ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಅದರಲ್ಲಿ ಡಿಜಿಟಲ್ ಸಂಪರ್ಕ ಮತ್ತು ಮನರಂಜನೆಯಲ್ಲಿ ಜಿಯೋ ನಾಯಕತ್ವದ ಸ್ಥಾನ ವಹಿಸಿದೆ. ವಿಶ್ವಾಸಾರ್ಹವಾದ ಕನೆಕ್ಟಿವಿಟಿ, ವೈವಿಧ್ಯಮಯವಾದ ಕಂಟೆಂಟ್ ಸಹಯೋಗಗಳು ಇವುಗಳಿಂದ ದೃಢವಾದ ಎಕೋಸಿಸ್ಟಮ್ ರೂಪಿಸಿರುವುದಕ್ಕೆ ಜಿಯೋಗೆ…

Read More

ಬೆಂಗಳೂರು: ಫ್ಯಾಸಿಟಿಸ್ ಎಂಬ ಮಾಂಸ ತಿನ್ನುವ ಸೋಂಕಿನಿಂದ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ , ಸರ್ಜಿಕಲ್‌ ಗ್ಯಾಸ್ಟ್ರೋಲಾಜಿ ಹಿರಿಯ ಸಲಹೆಗಾರ ಡಾ. ಸಂತೋಷ್ ಎಂ.ಪಿ, ಅವರ ತಂಡ ಈ ಯಶಸ್ವಿ ಚಿಕಿತ್ಸೆಯನ್ನು ನಡೆಸಿದೆ. ಈ ಕುರಿತು ಮಾತನಾಡಿದ ಡಾ. ಸಂತೋಷ್‌, 50 ವರ್ಷದ ರವಿ (ಹೆಸರು ಬದಲಾಗಿದೆ) ಎಂಬ ಪೊಲೀಸ್‌ ಅಧಿಕಾರಿಯು ತೀವ್ರ ಕಾಲಿನ ಊತದಿಂದ ಬಳಲುತ್ತಿದ್ದರು, ಇದರ ಜೊತೆಗೆ, ಅತಿಯಾದ ನೋವು ಜ್ವರವನ್ನು ಹೊಂದಿದ್ದರು. ಈ ಹಿಂದೆಯೇ ಅವರು ಹೃದಯ ಸಮಸ್ಯೆ ಹೊಂದಿದ್ದ ಇವರಿಗೆ ಮಧಮೇಹದ ಇತಿಹಾಸವೂ ಇತ್ತು. ಹೃದಯ ಕಾಯಿಲೆಗಾಗಿ ಅನೇಕ ಚಿಕಿತ್ಸೆಗೆ ಒಳಗಾಗಿದ್ದ ಅವರ ಸ್ಥಿತಿ, ಈ ಕಾಲಿನ ಊತ ಹಾಗೂ ಸೋಂಕಿನಿಂದ ಹದಗೆಡುತ್ತಾ ಬರುತ್ತಿತ್ತು. ಅವರ ಕೀಲುಗಳು ಮತ್ತು ಮೂಳೆಗಳಿಗೂ ಈ ಸೋಂಕು ಹರಡಿತು. ಅವರ ಪೊಲೀಸ್‌ ವೃತ್ತಿಯಲ್ಲಿ ಕಾಲು ಅತಿ ಅವಶ್ಯಕವಾದ್ದರಿಂದ ಎಚ್ಚತ್ತೆಕೊಂಡ ಅವರು, ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ರವಿ…

Read More

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಆ ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ಈ ವಿಷಯವನ್ನು ಜೀವಂತವಾಗಿಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದರು. 1984ರಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದು. ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದೇನೆ. ಅಂದಿನಿಂದಲೂ ಈ ಭೂಮಿಯ ಮೇಲೆ ಕೆಲವರ ಕಣ್ಣು ಬಿದ್ದಿದೆ. ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೇ ಮೂಲಕ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು. 2012ರಿಂದಲೂ ನನ್ನ…

Read More