Author: kannadanewsnow09

ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಸಾಲ ಯೋಜನೆ ಅಡಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ಎಂಬಿಬಿಎಸ್ ಎಂಡಿ ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆಯುಷ್, ಮಾಸ್ಟರ್ ಆಫ್ ಆಯುಷ್, ಬಿ.ಇ. ಬಿ.ಟೆಕ್, ಎಂಇ, ಎಂ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬಿಎಸ್‌ಸಿ ಇನ್ ಹಾರ್ಟಿಕಲ್ಚರ್. ಕೃಷಿ ಇಂಜಿನಿಯರಿAಗ್, ಡೈರಿ ಟೆಕ್ನಾಲಜಿ, ಫಾರೆಸ್ಟರಿ, ಪಶುವೈದ್ಯಕೀಯ ಮತ್ತು ಪ್ರಾಣಿ ತಂತ್ರಜ್ಞಾನ, ಮೀನುಗಾರಿಕೆ, ಸಿರಿಕಲ್ಚರ್, ಗೃಹ/ಸಮುದಾಯ ವಿಜ್ಞಾನಗಳು ಆಹಾರ ಪೋಷಣೆ ಮತ್ತು ಆಹಾರ ಪದ್ಧತಿ, ಬಿ. ಫಾರ್ಮಾ, ಎಂ. ಫಾರ್ಮಾ, ಫಾರ್ಮಾ ಡಿ ಆಂಡ್ ಡಿ ಫಾರ್ಮಾ ಕೋರ್ಸ್ಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಸಾಲ ಯೋಜನೆಯಡಿಯಲ್ಲಿ ಆನ್‌ಲೈನ್ ಮೂಲಕ ದಿನಾಂಕ: 17-08-2024 ರಿಂದ ದಿನಾಂಕ:…

Read More

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಸ್.ಎಸ್.ಎಲ್.ಸಿ. ನಂತರದ (ಪೋಸ್ಟ್ ಮೆಟ್ರಿಕ್) ವಿಕಲಚೇತನ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್ https://ssp.postmatric.karnataka.gov.in ರ ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ್ ಪ್ರತಿಯೊಂದಿಗೆ ಯು.ಡಿ.ಐ.ಡಿ.ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ನಿವಾಸಿ ದೃಢೀಕರಣ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಲಗತ್ತಿಸಿ ಗ್ರಾಮ ಪಂಚಾಯಿತಿಯಲ್ಲಿನ ವಿ.ಆರ್.ಡಬ್ಲ್ಯೂ.ಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಯು.ಆರ್.ಡಬ್ಲ್ಯೂಗಳಿಗೆ ಹಾಗೂ ತಾಲೂಕು ಪಂಚಾಯಿತಿಯಲ್ಲಿನ ಎಂಆರ್.ಡಬ್ಲ್ಯೂಗಳಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295234 / 251676 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/applications-invited-for-state-level-bapuji-essay-competition-rs-31000-prize/ https://kannadanewsnow.com/kannada/bengaluru-traffic-diversion-diverted-near-iskcon-temple-on-account-of-krishna-janmashtami/ https://kannadanewsnow.com/kannada/this-is-a-shame-for-the-police-department-policeman-accepting-bribe-through-phonepe-from-oc-fraudsters/

Read More

ಬೆಂಗಳೂರು: ನಗರದ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ಮಾಡಿರುವಂತ ಘಟನೆ ನಡೆದಿದೆ. ಮಲತಂದೆಯಿಂದಲೇ ಇಬ್ಬರು ಹೆಣ್ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ದಾಸರಹಳ್ಳಿಯ ಕಾವೇರಿ ಲೇಔಟ್ ನಲ್ಲಿ ಮಲತಂದೆಯಿಂದಲೇ ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಉತ್ತರ ಭಾರತ ಮೂಲದ ವ್ಯಕ್ತಿಯಿಂದ ಇಬ್ಬರು ಹೆಣ್ಣುಮಕ್ಕಳನ್ನು ಮರ್ಡರ್ ಮಾಡಿರುವುದಾಗಿ ಹೇಳಲಾಗುತ್ತಿದೆ. ಸುಮಾರು 14 ವರ್ಷ ಹಾಗೂ 15 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಲಾಗಿದೆ. ಇಬ್ಬರನ್ನು ಮರ್ಡರ್ ಮಾಡಿರುವಂತ ಆರೋಪಿ ಅಲ್ಲಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/to-the-attention-of-high-school-students-participate-in-this-quiz-competition-and-win-a-prize-of-40000/ https://kannadanewsnow.com/kannada/bengaluru-traffic-diversion-diverted-near-iskcon-temple-on-account-of-krishna-janmashtami/

Read More

ಶಿವಮೊಗ್ಗ: ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಆ ಪೊಲೀಸಪ್ಪ ಯಾರು.? ಎಲ್ಲಿ ಘಟನೆ ನಡೆದಿರುವುದು ಎನ್ನುವ ಬಗ್ಗೆ ಮುಂದೆ ಓದಿ. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ, ಕೇಶವಪುರ ಮತ್ತು ಬಟ್ಟೆಮಲ್ಲಪ್ಪ ಭಾಗಕ್ಕೆ ರೌಂಡ್ಸ್ ಹೋಗಿದ್ದಾರೆ. ಈ ವೇಳೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಆಡುವವರಿಂದ ಪೋನ್ ಪೇ ಮೂಲಕ ಹಣವನ್ನು ಸ್ವೀಕರಿಸಿದ್ದಾರೆ. ಹೆಚ್.ಸಿ ಪ್ರಕಾಶ್ ಅವರು ಪೋನ್ ಪೇ ಮೂಲಕ ಓಸಿ ದಂಧೆಕೋರರಿಂದ ಲಂಚವಾಗಿ ಪೋನ್ ಪೇ ಮೂಲಕ ಹಣ ಸ್ವೀಕರಿಸಿದಂತ ಸ್ಕ್ರೀನ್ ಶಾಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸೂಕ್ತ ತನಿಖೆಗೆ ಇಲಾಖೆ ಆದೇಶಿಸಿತ್ತು. ಹೊಸನಗರ ಠಾಣೆಯ ಪಿಎಸ್ಐ…

Read More

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶನಿವಾರ ಏಕೀಕೃತ ಪಿಂಚಣಿ ಯೋಜನೆ (Unified Pension Scheme -UPS) ಅನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಉಳಿಯಬೇಕೆ ಅಥವಾ ಏಕೀಕೃತ ಪಿಂಚಣಿ ಯೋಜನೆಗೆ ಸೇರಬೇಕೆ ಎಂದು ನಿರ್ಧರಿಸುವ ಹಕ್ಕನ್ನು ಚಲಾಯಿಸುತ್ತಾರೆ. ಅಂತೆಯೇ, ರಾಜ್ಯ ಸರ್ಕಾರಗಳು ಸಹ ಯುಪಿಎಸ್ನ ಈ ಹೊಸ ಮಾಡ್ಯೂಲ್ ಅನ್ನು ಅಳವಡಿಸಿಕೊಳ್ಳಲು ನಿರ್ಧರಿಸಬಹುದು. ಯುಪಿಎಸ್ ಏಪ್ರಿಲ್ 1, 2025 ರಿಂದ ಅನ್ವಯವಾಗಲಿದೆ. 2004 ರಿಂದ ಎನ್ಪಿಎಸ್ ಅಡಿಯಲ್ಲಿ ನಿವೃತ್ತರಾದ ಎಲ್ಲರಿಗೂ ಯುಪಿಎಸ್ ಅನ್ವಯಿಸುತ್ತದೆ. ಯುಪಿಎಸ್ ನ ಪ್ರಮುಖ ಮುಖ್ಯಾಂಶಗಳು ಖಾತರಿಪಡಿಸಿದ ಪಿಂಚಣಿ: ಕನಿಷ್ಠ 25 ವರ್ಷಗಳ ಅರ್ಹತಾ ಸೇವೆಗಾಗಿ ನಿವೃತ್ತಿಗೆ ಮುಂಚಿತವಾಗಿ ಕಳೆದ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ 50% .ಕನಿಷ್ಠ 10 ವರ್ಷಗಳ ಸೇವೆಯವರೆಗೆ ಕಡಿಮೆ ಸೇವಾ ಅವಧಿಗೆ ಪ್ರಮಾಣಾನುಗುಣ. ಭರವಸೆಯ ಕುಟುಂಬ ಪಿಂಚಣಿ: ಉದ್ಯೋಗಿಯ ಮರಣದ ಮೊದಲು ಅವರ ಪಿಂಚಣಿಯ @60% . ಕನಿಷ್ಠ ಪಿಂಚಣಿಯ ಭರವಸೆ: ಕನಿಷ್ಠ 10…

Read More

ಪ್ರತಿ ಮನೆಯವರು ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ನೇತ್ರ ಶುದ್ಧೀಕರಣದ ಆಚರಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ನಮ್ಮ ಸುತ್ತ ಎಷ್ಟು ಒಳ್ಳೆಯ ಶಕ್ತಿಗಳಿವೆಯೋ ಅಷ್ಟೇ ಕೆಟ್ಟ ಶಕ್ತಿಗಳೂ ಇವೆ ಎಂಬುದು ನಿಜ. ಆ ಮೂಲಕ ನಮ್ಮ ಪ್ರಗತಿಯ ಬಗ್ಗೆ ಹೊಟ್ಟೆಕಿಚ್ಚುಪಡುವವರ ಆಲೋಚನೆಗಳು ಕಣ್ಣಿಗೆ ರಾಚುತ್ತವೆ ಮತ್ತು ನಮ್ಮ ಸುತ್ತಲಿನ ಚಲನಚಿತ್ರವಾಗುತ್ತವೆ. ಆಗ ನಮ್ಮ ಸೆಳವು ಕಡಿಮೆ ಪರಿಣಾಮಕಾರಿಯಾಗುತ್ತದೆ. ಆಲಸ್ಯ, ನಿದ್ದೆ, ಒಂದೇ ಒಂದು ಕೆಲಸವನ್ನೂ ಸರಿಯಾಗಿ ಮಾಡಲು ಆಗದಿರುವುದು. ಆಕಳಿಕೆ ಆಕಳಿಕೆಯಾಗುತ್ತದೆ. ದೇಹವು ಹೊಡೆದಂತೆ ಕಾಣುತ್ತದೆ. ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ವ್ಯಾಪಾರದಲ್ಲಿ ಕುಸಿತ ಉಂಟಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು: ನಗರದಲ್ಲಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಸಂಪಿಗೆಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿನ ಖಾಲಿ ಜಾಗದ ಶೆಡ್ ನಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಖಾಲಿ ಜಾಗದಲ್ಲಿ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯ ವೇಳೆಯಲ್ಲಿ ಉಂಟಾದಂತ ಜಗಳ ತಾರಕ್ಕೇರಿದಾಗ ಟೈಲ್ಸ್ ಕೆಲಸ ಮಾಡುತ್ತಿದ್ದಂತ ಪುಷ್ಪರಾಜ್(27) ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಸಂಜೆ 4.30ರ ವೇಳೆಗೆ ಪುಷ್ಪರಾಜ್ ಶವ ಪತ್ತೆಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-students-of-residential-schools-in-the-state-telescopes-supplied/ https://kannadanewsnow.com/kannada/to-the-attention-of-high-school-students-participate-in-this-quiz-competition-and-win-a-prize-of-40000/ https://kannadanewsnow.com/kannada/applications-invited-for-state-level-bapuji-essay-competition-rs-31000-prize/

Read More

ಬೆಂಗಳೂರು: ರಾಜ್ಯದ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರದಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ದೂರದರ್ಶಕ ಪೂರೈಕೆ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು, ವಿದ್ಯಾರ್ಥಿಗಳಲ್ಲಿನ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ರಾಜ್ಯದ 833 ವಸತಿ ಶಾಲೆಗಳಿಗೆ ದೂರದರ್ಶಕಗಳನ್ನು ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ವಿಜ್ಞಾನವನ್ನು ಚಟುವಟಿಕೆಯ ಮೂಲಕ ಕಲಿಯಲು ಅನುವು ಮಾಡಿಕೊಡುವ ಸ್ಟ್ರೀಮ್‌ ಲ್ಯಾಬ್‌ ಗಳನ್ನು ಪ್ರಾರಂಭಕ್ಕೂ ಯೋಜನೆ ರೂಪಿಸುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನ ಹಾಗೂ ಅರ್ಥ ಮಾಡಿಕೊಳ್ಳುವ ಶಕ್ತಿ ಇನ್ನಷ್ಟು ಮೊನಚಾಗುತ್ತದೆ ಎಂದು ಹೇಳಿದ್ದಾರೆ. ಸೂರ್ಯನ ಅಧ್ಯಯನಕ್ಕೆ ತೆರಳಿರುವ ಆದಿತ್ಯ ಎಲ್‌–1 ಉಪಗ್ರಹದ ಪ್ರತಿಕೃತಿಯನ್ನು ತಾರಾಲಯದ ಆವರಣದಲ್ಲಿ ಅಳವಡಿಸಲಾಗುತ್ತಿದೆ. ಈ ಸಂಬಂಧ ಇಸ್ರೊ ಜೊತೆ ಈಗಾಗಲೇ ತಾರಾಲಯದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಆವರಣದಲ್ಲಿ ಜಾಗ ಸಿದ್ದಗೊಂಡ ಬಳಿಕ ಪ್ರತಿಕೃತಿಯನ್ನು ತಂದು ಅಳವಡಿಸಲಾಗುತ್ತದೆ ಎಂದು…

Read More

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ನಿರ್ಣಾಯಕ ಘಟ್ಟ ತಲುಪಿದ್ದು, 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ (Projected population for 2023-24) ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವುದು. ಜೊತೆಗೆ 05 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು…

Read More

ಬೆಂಗಳೂರು: ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನಲೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 26-08-2024 ಸೋಮವಾರದಂದು “ಶ್ರೀ ಕೃಷ್ಣಾ ಜನ್ಮಾಷ್ಟಮಿ ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ…

Read More