Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಬಿಎಂಟಿಸಿಯಿಂದ ಹೊಸ ಮೆಟ್ರೋ ಫೀಡರ್ ಮಾರ್ಗದ ಪರಿಚಯಿಸಲಾಗುತ್ತಿದೆ. ಈ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಟಿಸಿ ಅನುಕೂಲ ಮಾಡಿಕೊಟ್ಟಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ 15.07.2024 ರಿಂದ ಪರಿಚಯಿಸಲಾಗುತ್ತಿದೆ. ವಿವರ ಕೆಳಕಂಡಂತಿದೆ: ಕ್ರ.ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ/ಸುತ್ತುವಳಿ 1 ಎಂಎಫ್-43 ಕೋಣನಕುಂಟೆ ಕ್ರಾಸ್ ಕೋಣನಕುಂಟೆ ಕ್ರಾಸ್ ಉತ್ತರಹಳ್ಳಿ, ಇಂಡೋ ಅಮೇರಿಕನ್ ಹೈಬ್ರೀಡ್ ಕ್ರಾಸ್, ಕರಿಯನ ಪಾಳ್ಯ, ರಘುವನಹಳ್ಳಿ ಕ್ರಾಸ್ 1 ಬಸ್ಸು 10ಸುತ್ತುವಳಿಗಳು 2 ಎಂಎಫ್-43ಎ ಕೋಣನಕುಂಟೆ ಕ್ರಾಸ್ ಕೋಣನಕುಂಟೆ ಕ್ರಾಸ್ ರಘುವನಹಳ್ಳಿ ಕ್ರಾಸ್, ಕರಿಯನ ಪಾಳ್ಯ, ಇಂಡೋ…
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತದಲ್ಲಿ ಬಳಕೆ ಮಾಡುತ್ತಿರುವಂತ ಸಾಫ್ಟ್ ವೇರ್ ನಲ್ಲಿ ಕನ್ನಡವೇ ಇರಲಿಲ್ಲ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದಿನ ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂನಲ್ಲಿ ಗಮನಕ್ಕೆ ತರಲಾಯಿತು. ಕೂಡಲೇ ಕೆಎಂಎಫ್ ಎಂಡಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಹಾಲು ಉತ್ಪಾದಕರ ಸ್ನೇಹಿಯಾಗಿರುವಂತ ಸಾಫ್ಟ್ ವೇರ್ ಅಳವಡಿಸುವಂತೆ ಸೂಚಿಸಿದ್ದಾರೆ. ಹೌದು ಸದ್ಯ KMF ನಲ್ಲಿರುವ ಸಾಫ್ಟ್ ವೇರ್ ಹಾಲು ಉತ್ಪಾದಕರಿಗೆ ಅನುಕೂಲ ಆಗಿಲ್ಲದಿರುವುದರಿಂದ ಅನುಕೂಲವಾದ ಕನ್ನಡ ಸಾಫ್ಟ್ವೇರ್ ಅಳವಡಿಸುವಂತೆ ಮೈಸೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳದ ಎಸ್.ಶಿವನಾಗಪ್ಪ ಅವರು ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಥಳದಲ್ಲೇ KMF ಎಂಡಿ ಅವರಿಗೆ ಫೋನ್ ಮೂಲಕ ಸಂಪರ್ಕಿಸಿ, ಹಾಲು ಉತ್ಪಾದಕರ ಸ್ನೇಹಿಯಾಗಿರುವ ಸಾಫ್ಟ್ ವೇರ್ ಅನ್ನು ಅಳವಡಿಸುವಂತೆ ಸೂಚನೆ ನೀಡಿದರು. https://kannadanewsnow.com/kannada/cm-siddaramaiah-calls-dc-who-is-harassing-street-vendors/ https://kannadanewsnow.com/kannada/breaking-sinful-husband-escapes-after-killing-pregnant-wife-in-belagavi/
ಬೆಂಗಳೂರು: ಹುಬ್ಬಳ್ಳಿ-ಧಾರವಾಡದ ಜಿಲ್ಲಾಧಿಕಾರಿಗಳು ಬೀದಿ ಬದಿಯ ವ್ಯಾಪಾರಿಗಳಿಗೆ ಅನಗತ್ಯವಾಗಿ ತೊಂದರೆ ಕೊಡುತ್ತಿದ್ದಾರೆ ಅನ್ನುವ ದೂರವನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದರು. ಸ್ಥಳದಲ್ಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಪುಲ್ ಕ್ಲಾಸ್ ತಗೊಂಡರು. ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಇದಕ್ಕೆ ಗರಂ ಆದ ಸಿಎಂ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎನ್ನುವ ಸೂಚನೆ ನೀಡಿದರು. https://kannadanewsnow.com/kannada/running-of-special-train-between-yesvantpur-and-kalaburagi/ https://kannadanewsnow.com/kannada/breaking-sinful-husband-escapes-after-killing-pregnant-wife-in-belagavi/
ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರದಿಂದ ಕಲಬುರ್ಗಿ ನಡುವೆ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭಗೊಳ್ಳಲಿದೆ ಅಂತ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಅವರು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ಕಲಬುರಗಿ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಅಂತ ತಿಳಿಸಿದ್ದಾರೆ. ರೈಲು ಸಂಖ್ಯೆ 06519/06520 ಯಶವಂತಪುರ-ಕಲಬುರಗಿ-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 06519 ಜುಲೈ 13, 2024 ರಂದು (ಶನಿವಾರ) ರಾತ್ರಿ 08:40 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45 ಕ್ಕೆ ಕಲಬುರಗಿ ನಿಲ್ದಾಣವನ್ನು ತಲುಪಲಿದೆ. ರೈಲು ಸಂಖ್ಯೆ 06520 ಜುಲೈ 14, 2024 ರಂದು ಬೆಳಿಗ್ಗೆ 09:30 ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 09:40 ಕ್ಕೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ. ಈ ವಿಶೇಷ…
ಕಲಬುರ್ಗಿ: ರಾಜ್ಯ ಸರ್ಕಾರದಿಂದ ಆರು ತಿಂಗಳ ಹಿಂದೆ ಮೃತಪಟ್ಟಂತ ಅಧಿಕಾರಿಯನ್ನೇ ವರ್ಗಾವಣೆ ಮಾಡಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಕಳೆದ ಆರು ತಿಂಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿದ್ದಂತ ಅಶೋಕ ಪುಟಪಾಕ ಅವರು ಮೃತಪಟ್ಟಿದ್ದರು. ಇಂತಹ ಅಧಿಕಾರಿಗಳನ್ನು ಜುಲೈ.9ರಂದು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗಸಭೆಯ ಕಿರಿಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಅಂದಹಾಗೇ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಂತ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ಅಶೋಕ ಭೀಮರಾಯ ಪುಟಪಾಕ(54) ಅವರು ಜನವರಿ.12, 2024ರಂದು ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಚಿತ್ತಾಪುರ, ವಾಡಿ, ಸೇಡಂ ಪುರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಕೂಡ ಭಾಗಿಯಾಗಿದ್ದರು. ಹೀಗಿದ್ದೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ವಿಧಾನಸಭಾ ಕ್ಷೇತ್ರದಲ್ಲೇ ಮೃತಪಟ್ಟ ಅಧಿಕಾರಿಯನ್ನು ವರ್ಗಾವಣೆ ಆದೇಶ ಮಾಡಿ ಮಹಾ ಎಡವಟ್ಟು ಮಾಡಿದೆ. ಅಲ್ಲ ಮೃತ ನೌಕರರನ್ನೇ ವರ್ಗಾವಣೆ ಮಾಡಿ ಆದೇಶಿಸಿದೆಯಲ್ಲ ನಗರಾಭಿವೃದ್ಧಿ ಇಲಾಖೆಯವರಿಗೆ ಆ ಮಾಹಿತಿ ಇರಲಿವ್ವ?…
ಮಚ್ಚೆ ಶಾಸ್ತ್ರವು ನಮ್ಮ ದೇಹದ ವಿವಿಧ ಭಾಗಗಳಲ್ಲಿ ಮಚ್ಚೆಯು ವಿಭಿನ್ನ ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳುತ್ತದೆ. ಆ ಮೂಲಕ ಯಾವುದೇ ಬೆರಳಿನಲ್ಲಿ ಮಚ್ಚೆ ಇದ್ದರೆ ಏನು ಲಾಭ ಎಂದು ನೋಡೋಣ. ಬಲಗೈ: ಕಿರುಬೆರಳು: ಬಲಗೈಯ ಕಿರುಬೆರಳಿನಲ್ಲಿ ಮಚ್ಚೆ ಇರುವವರು ಪ್ರಭಾವದಿಂದ ಕೂಡಿರುತ್ತಾರೆ. ಯಾವುದಕ್ಕೂ ಚಿಂತಿಸದೆ ತಾಳ್ಮೆಯಿಂದ ಎಲ್ಲವನ್ನೂ ನಿಭಾಯಿಸುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…
ಮಂಗಳೂರು: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಮಣಿಪಾಲ್, ಉಡುಪಿ, ಕಾರ್ಕಳ, ಮೂಡಬಿದ್ರೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಜುಲೈ.14, 16ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 14-07-2024ರಂದು ಕಾರ್ಕಳ/ಹೆಬ್ರಿ/ಅಜೆಕಾರುನಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 14.07.2024 ರಂದು ಬೆಳಿಗ್ಗೆ 09.00 ರಿಂದ ಸಂಜೆ 05, 00 ಗಂಟೆಯವರೆಗೆ 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಅಜೆಕಾರು ಫೀಡರ್ ನಲ್ಲಿ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಜೆಕಾರು ಪೇಟೆ, ಕಾಡುಹೊಳೆ, ನಂದಾರು, ಸುಕುಡಿಬೆಟ್ಟು, ಗುಡ್ಡೆಯಂಗಡಿ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಜುಲೈ.16ರಂದು ಮಣಿಪಾಲ/ಮೂಡುಬೆಳ್ಳೆ/ಉದ್ಯಾವರ-2/ಇಂದ್ರಾಳಿ/ಪ್ರಗತಿನಗರದಲ್ಲಿ ಪವರ್ ಕಟ್ ದಿನಾಂಕ 16.07.2024 ರಂದು ಬೆಳಿಗ್ಗೆ 09.00 ರಿಂದ ಸಂಜೆ 05, 00 ಗಂಟೆಯವರೆಗೆ 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮೂಡುಬೆಳ್ಳೆ, ಉದ್ಯಾವರ-2, ಇಂದ್ರಾಳಿ ಮತ್ತು ಪ್ರಗತಿನಗರ ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳ, ಮರ್ಣೆ,…
ಬಳ್ಳಾರಿ : ನಗರದ ಜಿಲ್ಲಾ ಕೋರ್ಟ್ ಸಂಕೀರ್ಣ ವ್ಯಾಪ್ತಿಯಲ್ಲಿನ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಜು.13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 11.ಕೆ.ವಿ ಫೀಡರ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ್ ರೆಡ್ಡಿ ಅವರು ತಿಳಿಸಿದ್ದಾರೆ. ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಎಫ್-6 ಫೀಡರ್ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ ಮತ್ತು ಎಫ್-14 ಫೀಡರ್ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣ. ಎಫ್-13 ಫೀಡರ್ ವ್ಯಾಪ್ತಿಯ ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತ್ರೀನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ಸರ್ಕಲ್, ವೀರಣ್ಣಗೌಡ…
ಬೆಂಗಳೂರು : ಮೊಬೈಲ್ ಫೋನ್ ಒಂದು ಉಪಯುಕ್ತ ಸಾಧನ. ಆದರೆ ಒಳಿತು ಕೆಡುಕು ಆಯ್ಕೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆದ್ದರಿಂದ, ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮೊಬೈಲ್ ಫೋನ್ ಬಳಸುವುದನ್ನು ತಿಳಿದಿರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು. ಶುಕ್ರವಾರ ನಗರದ ಬಾಲ್ಡ್ವಿನ್ ಬಾಲಕಿಯರ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಬಹುಮಾನ ಪ್ರಮಾಣ ಪತ್ರ ನೀಡುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. “ಶಾಲಾ ಶಿಕ್ಷಣವು ಹೈಟೆಕ್ ಆಗಿ ಮಾರ್ಪಟ್ಟಿದೆ, ಮತ್ತು ಅನೇಕರು ಮೊಬೈಲ್ ತಂತ್ರಜ್ಞಾನಕ್ಕೆ ವ್ಯಸನಿಯಾಗಿದ್ದಾರೆ. ನಾನು ಮೊಬೈಲ್ ಫೋನ್ಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದು ಎಂದು ಹೇಳುವುದಿಲ್ಲ. ಆದರೆ ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಾರದು. ಮೊಬೈಲ್ನ ದುಷ್ಪರಿಣಾಮಗಳ ಬಗ್ಗೆ ನಾವು ಪ್ರತಿದಿನ ಓದುತ್ತೇವೆ. ಆದ್ದರಿಂದ ಮೊಬೈಲ್ ಅನ್ನು ಅಗತ್ಯ ಕೆಲಸಕ್ಕೆ ಮಾತ್ರ ಬಳಸಿ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಪೋಷಕರ ಕನಸುಗಳನ್ನು ಈಡೇರಿಸುವುದು ಕರ್ತವ್ಯವಾಗಿದೆ. ನೀವು ಯಾವ ವೃತ್ತಿಯನ್ನು ಆರಿಸಿಕೊಂಡರೂ, ಮೊದಲು ಉತ್ತಮ ಮನುಷ್ಯನಾಗಲು ಶ್ರಮಿಸಿ ಮತ್ತು ಸಮಾಜಕ್ಕೆ…
ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ‘ಮುಡಾ’ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ಹೋದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಮತ್ತು ಅವರನ್ನು ಬಂಧಿಸಿದ ಕಾಂಗ್ರೆಸ್ ಸರಕಾರದ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪಕ್ಷದ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು, ಸಿದ್ದರಾಮಯ್ಯ ಸರಕಾರದ ದಬ್ಬಾಳಿಕೆ ನೀತಿಯನ್ನು ತೀವ್ರವಾಗಿ ಖಂಡಿಸಿದರು. ರಾಜ್ಯದಲ್ಲಿ ಸಂವಿಧಾನದ ನಿರ್ದೇಶನದಂತೆ ಪ್ರಜಾಪ್ರಭುತ್ವದ ಆಡಳಿತವಿದೆಯೇ ಅಥವಾ ಸರ್ವಾಧಿಕಾರಿ ಆಡಳಿತವಿದೆಯೇ ಎಂದು ಅವರು ಪ್ರಶ್ನಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷವನ್ನು ಶ್ಯಾಡೋ ಗವರ್ನಮೆಂಟ್ ಅಂತ ಕರೆಯುತ್ತಾರೆ. ಸರಕಾರದ ಜನವಿರೋಧಿ ನೀತಿಗಳು ಮತ್ತು ಸರಕಾರದಿಂದ ಆಗಿರುವಂತಹ ಭ್ರμÁ್ಟಚಾರ ಇದರ ವಿರುದ್ಧ ಪ್ರತಿಭಟನೆ, ಹೋರಾಟ ಮಾಡುವುದು ಪ್ರತಿಪಕ್ಷದ ಹಕ್ಕು ಎಂದ ಅವರು, ನಾಚಿಕೆಯಿಲ್ಲದ ಕಾಂಗ್ರೆಸಿಗರು ಡಾ. ಬಾಬಾ ಸಾಹೇಬ್ ಅಂಬೇಡ್ಕರರು ಕೊಟ್ಟಿರುವಂತಹ ಹಕ್ಕುಗಳನ್ನು ಒಳಗೊಂಡ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಓಡಾಡುತ್ತಾರೆ. ಆದರೆ ಸರ್ಕಾರ ಮಾಡಿರುವಂತಹ ಹಗರಣವನ್ನು ಪ್ರತಿಭಟಿಸುವ ಸಂದರ್ಭದಲ್ಲಿ…