Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ ಡೆಸ್ಕ್: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಟೀಮ್ ಇಂಡಿಯಾ (ಸೀನಿಯರ್ ಮಹಿಳಾ) ತಂಡಗಳನ್ನು ಬಿಸಿಸಿಐ ಪ್ರಕಟಿಸಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಬಿಸಿಸಿಐ ವುಮೆನ್ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಮುಂಬರುವಂತ ಇಂಗ್ಲೆಂಡ್ ವಿರುದ್ಜದದ ಟಿ20ಐ ಒನ್ ಡೇ ಕ್ರಿಕೆಟ್ ಪಂದ್ಯಾವಳಿಗೆ ತಂಡವನ್ನು ಪ್ರಕಟಿಸಿರುವುದಾಗಿ ತಿಳಿಸಿದೆ. https://twitter.com/BCCIWomen/status/1923001111452975106 ಇಂಗ್ಲೆಂಡ್ ವಿರುದ್ಧದ ಟೀಂ ಇಂಡಿಯಾ ಮಹಿಳಾ ತಂಡದ ಒನ್ ಡೇ ಪಂದ್ಯಾವಳಿಗೆ ಹರ್ಮನ್ ಪ್ರೀತ್ ಕೌರ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ಉಪ ನಾಯಕರನ್ನಾಗಿ ಸ್ಮೃತಿ ಮಧನ ಅವರನ್ನು ನೇಮಿಸಲಾಗಿದೆ. ಇನ್ನೂ ತಂಡದಲ್ಲಿ ಪ್ರತೀಕಾ ರಾವಲ್, ಹರ್ಲಿನ್ ಡಿಯೋಲ್, ಜಮೀಮಾ ರೋಡ್ರಿಗುಸ್, ರಿಚಾ ಘೋಷ್, ಯಸ್ತ್ರಿಕ ಭಾಟಿಯ, ತೇಜಲ್ ಹಸಬನ್ಸಿಸ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ಶ್ರೀ ಚರಣಿ, ಸುಚಿತ್ರ ಉಪಾಧ್ಯಾ, ಅಮಂಜೋತ್ ಕೌರ್, ಅರುಂದತಿ ರೆಡ್ಡಿ, ಕ್ರಾಂತಿ ಗೌಡ್, ಶಯಾಲಿ ಒಳಗೊಂಡಿದೆ. ಟಿ20ಐ ಪಂದ್ಯಾವಳಿಯ ಭಾರತದ ತಂಡ ಹೀಗಿದೆ ಹರ್ಮನ್ ಪ್ರೀತ್ ಕೌರ್ ಅವರನ್ನು ತಂಡದ ನಾಯಕಿಯನ್ನಾಗಿ ನೇಮಿಸಲಾಗಿದ್ದರೇ, ಸ್ಮೃತಿ ಮಂಧನ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದೆ. ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದ್ದು, ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಮೊತ್ತ 2 ಲಕ್ಷ ರೂಪಾಯಿ. https://kannadanewsnow.com/kannada/nothing-can-be-done-as-long-as-siddaramaiah-has-the-blessings-of-the-people-minister-bairathi-suresh/ https://kannadanewsnow.com/kannada/big-news-attention-to-the-rural-people-of-the-state-all-these-services-of-the-gram-panchayat-will-be-available-on-whatsapp-watch-video/
ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಸೇರಿದಂತೆ ಕೆಲವು ಸುಳ್ಳು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಮತ್ತು ಇತರರು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಸಿದರು. ಆದರೆ, ಅದು ಸಾಕಾರಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರು ರಾಜ್ಯವಷ್ಟೇ ಅಲ್ಲ, ಇಡೀ ದೇಶ ಕಂಡ ಅತ್ಯಂತ ಪ್ರಾಮಾಣಿಕ ರಾಜಕೀಯ ನೇತಾರರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 16 ಬಾರಿ ಬಜೆಟ್ ಅನ್ನು ಮಂಡಿಸುವ ಮೂಲಕ ತಳ ವರ್ಗದ ಸಮುದಾಯಗಳೂ ಸೇರಿದಂತೆ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಅನೇಕ ಕೊಡುಗೆ ನೀಡಿದ್ದಾರೆ. ಅವರ ಈ ಸೇವೆ ಅನನ್ಯವಾಗಿದೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಿದ್ದರಾಮಯ್ಯ ಅವರ ವರ್ಚಸ್ಸಿಗೆ…
ನವದೆಹಲಿ: ಪಾಕಿಸ್ತಾನಕ್ಕೆ ಸಹಾಯ ಮಾಡಿದಂತ ಟರ್ಕಿ ವಿರುದ್ಧ ಬಾಯ್ ಕಾಟ್ ಟರ್ಕಿ ಅಭಿಯಾನ ಆರಂಭಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರವು ಟರ್ಕಿಯ ಸೆಲೆಬಿ ವಿಮಾನ ನಿಲ್ದಾಣ ಸೇವೆಗಳಿಗೆ ಭದ್ರತಾ ಅನುಮತಿ ರದ್ದುಪಡಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ತಕ್ಷಣದಿಂದ ಜಾರಿಗೆ ಬರುವಂತೆ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ನೀಡಲಾಗಿದ್ದ ಭದ್ರತಾ ಅನುಮತಿಯನ್ನು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ರದ್ದುಗೊಳಿಸಿ ಆದೇಶಿಸಿದೆ. https://twitter.com/ANI/status/1923001283838910758 ಟ್ರಂಪ್ ಯು-ಟರ್ನ್: ಭಾರತ-ಪಾಕ್ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲವೆಂದು ಹೇಳಿಕೆ | Donald Trump U-turn ಅಮೇರಿಕಾ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದಾವೆ ಎಂಬುದಾಗಿ ತಿಳಿಸಿದ್ದಂತ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು, ಈಗ ಯು-ಟರ್ನ್ ಹೊಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ. ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ್ದೇನೆ ಎಂಬುದಾಗಿ ಹೇಳಿದ್ದಾರೆ. ಹೆಚ್ಚುತ್ತಿರುವ ಟೀಕೆಗಳ ಮಧ್ಯೆ, ಭಾರತ ಮತ್ತು ಪಾಕಿಸ್ತಾನ…
ಅಮೇರಿಕಾ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದಾವೆ ಎಂಬುದಾಗಿ ತಿಳಿಸಿದ್ದಂತ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು, ಈಗ ಯು-ಟರ್ನ್ ಹೊಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ. ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ್ದೇನೆ ಎಂಬುದಾಗಿ ಹೇಳಿದ್ದಾರೆ. ಹೆಚ್ಚುತ್ತಿರುವ ಟೀಕೆಗಳ ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ನೇರವಾಗಿ ಮಧ್ಯಸ್ಥಿಕೆ ವಹಿಸುವ ತಮ್ಮ ಹಿಂದಿನ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯು-ಟರ್ನ್ ಹೊಡೆದಿದ್ದಾರೆ. ಕತಾರ್ನಲ್ಲಿರುವ ಅಲ್-ಉದೈದ್ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, ನಾನು ಹಾಗೆ ಮಾಡಿದೆ ಎಂದು ಹೇಳಲು ಬಯಸುವುದಿಲ್ಲ, ಆದರೆ ನಾನು ಖಂಡಿತವಾಗಿಯೂ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡಿದೆ ಎಂದಿದ್ದಾರೆ. ಇದು ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಲ್ಲಿ ಹೆಚ್ಚು ಪರೋಕ್ಷ ಪಾತ್ರವನ್ನು ಸೂಚಿಸುತ್ತದೆ. ಹೆಚ್ಚುತ್ತಿರುವ ದ್ವೇಷವು ಕ್ಷಿಪಣಿ ಸಂಘರ್ಷಕ್ಕೆ ತಿರುಗಿರಬಹುದು ಎಂದು ಅವರು ಸೂಚಿಸಿದರು. ಆದರೆ ವಿಷಯಗಳು…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಮಥುರಾ ಜಿಲ್ಲಾ ಕಾರಾಗೃಹವು ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League – IPL) ಮಾದರಿಯಲ್ಲೇ ತನ್ನದೇ ಆದ ಆವೃತ್ತಿಯನ್ನು ಪ್ರಾರಂಭಿಸಿದೆ. ಐಪಿಎಲ್ನಂತೆಯೇ ಜೈಲ್ ಪ್ರೀಮಿಯರ್ ಲೀಗ್ (Jail Premier League -JPL) ಎಂಬ ಕ್ರಿಕೆಟ್ ಪಂದ್ಯಾವಳಿಯನ್ನು ಕೈದಿಗಳು ಫಿಟ್ ಆಗಿರಲು, ಸಂತೋಷವಾಗಿರಲು ಮತ್ತು ತಂಡವಾಗಿ ಕೆಲಸ ಮಾಡಲು ಸಹಾಯ ಮಾಡಲು ಪ್ರಾರಂಭಿಸಲಾಗಿದೆ. ಈ ಮೂಲಕ ಜೈಲಿನಲ್ಲೂ ಐಪಿಎಲ್ ಹವಾ ಉಂಟು ಮಾಡಲಾಗಿದೆ. ಈ ಕಾರ್ಯಕ್ರಮವು ಅನೇಕ ಕೈದಿಗಳು ಒಟ್ಟಿಗೆ ಆಡಿದಾಗ ಸ್ವಲ್ಪ ಸಮಯದವರೆಗೆ ತಮ್ಮ ಚಿಂತೆಗಳನ್ನು ಮರೆತು ನಗುವನ್ನು ತಂದಿತು. 2025 ರ ಜೆಪಿಎಲ್ ಏಪ್ರಿಲ್ನಲ್ಲಿ ಪ್ರಾರಂಭವಾಯಿತು. ವಿವಿಧ ಬ್ಯಾರಕ್ಗಳಿಂದ ಎಂಟು ತಂಡಗಳು 12 ಲೀಗ್ ಪಂದ್ಯಗಳು ಮತ್ತು ಎರಡು ಸೆಮಿಫೈನಲ್ಗಳನ್ನು ಆಡಿದವು. ಫೈನಲ್ನಲ್ಲಿ “ನೈಟ್ ರೈಡರ್ಸ್” “ಕ್ಯಾಪಿಟಲ್ಸ್” ವಿರುದ್ಧ ಗೆದ್ದಿತು ಎಂದು ಮೈಖೇಲ್ ವರದಿ ಮಾಡಿದೆ. ಕೈದಿ ಕೌಶಲ್ ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಎರಡನ್ನೂ ಗೆದ್ದರು. ಭುರಾ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ…
ಉಡುಪಿ: ಸಾಲ, ಬಡತದ ಸುಳಿಗೆ ಸಿಲುಕಿದಂತ ತಂದೆಯೊಬ್ಬ, ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಂದೆ ಬಾವಿಗೆ ಹಾರಿದ್ದನ್ನು ಕಂಡಂತ ಪುತ್ರ, ಅಪ್ಪನನ್ನು ರಕ್ಷಣೆಗೆ ಹೋಗಿ, ತಾನೂ ಸಾವನ್ನಪ್ಪಿರುವಂತ ಧಾರುಣ, ಮನ ಕಲಕುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕೋಟೇಶ್ವರದಲ್ಲಿ ಬಡತನ ಮತ್ತು ಸಾಲದ ಕಾರಣ ಮನನೊಂದು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಂತ ಮಾಧವ ದೇವಾಡಿಗ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಪ್ರಯತ್ನಿಸಿದ್ದರು. ಇಂದು ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ಮಾಧವ ದೇವಾಡಿಗ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಚಾರ ತಿಳಿದಂತ ಪುತ್ರ ಪ್ರಸಾದ್ ತಂದೆಯ ರಕ್ಷಣೆಗಾಗಿ ತಾನೂ ಬಾವಿಗೆ ಹಾರಿದ್ದಾನೆ. ಆದರೇ ಅಪ್ಪನನ್ನು ರಕ್ಷಿಸಲಾಗದೇ ತಂದೆ-ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ ಮಾಧವ ದೇವಾಡಿಗ ಹಾಗೂ ಪುತ್ರ ಪ್ರಸಾದ್ ಬಾವಿಯ ನೀರಲ್ಲಿ ಮುಳುಗಿ ಸಾವನ್ನಪ್ಪುತ್ತಿದ್ದು ಕಂಡ ಪತ್ನಿ ತಾರಾ ದೇವಾಡಿಗ ಅವರು ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಆದರೇ ಅಷ್ಟರಲ್ಲಿ ಪತಿ, ಮಗ ಸಾವನ್ನಪ್ಪಿದ್ದರಿಂದ ರಕ್ಷಿಸಲಾಗದೇ…
ನವದೆಹಲಿ: ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರುವುದಕ್ಕೆ ಟರ್ಕಿಯನ್ನು ಬಹಿಷ್ಕರಿಸಬೇಕೆಂಬ ರಾಷ್ಟ್ರವ್ಯಾಪಿ ಕರೆ ಮಧ್ಯೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಈಗ ಟರ್ಕಿ ಗಣರಾಜ್ಯದ ಸರ್ಕಾರದೊಂದಿಗೆ ಸಂಯೋಜಿತವಾಗಿರುವ ಯಾವುದೇ ಸಂಸ್ಥೆಯೊಂದಿಗಿನ ಯಾವುದೇ ತಿಳುವಳಿಕೆ ಒಪ್ಪಂದವನ್ನು (MoU) ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. “ಮುಂದಿನ ಆದೇಶದವರೆಗೆ” ಅಮಾನತು ಜಾರಿಯಲ್ಲಿರುತ್ತದೆ ಎಂದು ಜಾಮಿಯಾ ಹೇಳಿಕೆಯಲ್ಲಿ ತಿಳಿಸಿದೆ. “ರಾಷ್ಟ್ರೀಯ ಭದ್ರತೆ” ಕಾರಣ ನೀಡಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಮೇ 14 (ಬುಧವಾರ) ಟರ್ಕಿಯ ಇನೋನು ವಿಶ್ವವಿದ್ಯಾಲಯದೊಂದಿಗಿನ ಒಪ್ಪಂದವನ್ನು ರದ್ದುಗೊಳಿಸಿದ ನಂತರ ಇದು ಬಂದಿದೆ. ಜೆಎನ್ಯು “ರಾಷ್ಟ್ರದೊಂದಿಗೆ ನಿಲ್ಲುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. https://twitter.com/jmiu_official/status/1922961347123478852 ಭಾರತದೊಂದಿಗಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೂ ಪಾಕಿಸ್ತಾನಕ್ಕೆ ಅಗಾಧ ಬೆಂಬಲ ನೀಡಿದ ನಂತರ ಟರ್ಕಿಯನ್ನು ಬಹಿಷ್ಕರಿಸುವಂತೆ ದೇಶಾದ್ಯಂತ ಕರೆ ನೀಡಲಾಗಿದೆ. ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ತಮ್ಮ “ಅಮೂಲ್ಯ ಸಹೋದರ” ಎಂದು ಕರೆದರು. ಭಾರತದ ರಕ್ಷಣಾ ಸಚಿವಾಲಯದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ಪಂಜಾಬ್ ಮತ್ತು ಜಮ್ಮುವಿನ ಪ್ರದೇಶಗಳ ಮೇಲೆ…
ಚೈನ್ನೈ: ತಮಿಳುನಾಡಿನ ಕರೂರಿನ ಎಂಟು ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವೈಯಕ್ತಿಕ ಉಳಿತಾಯವನ್ನು ಭಾರತೀಯ ಸೇನೆಗೆ ದೇಣಿಗೆ ನೀಡಿದ್ದಾನೆ. ದೇಶದ ಸಶಸ್ತ್ರ ಪಡೆಗಳನ್ನು ಬೆಂಬಲಿಸುವ ಉದ್ದೇಶದಿಂದ ಕಳೆದ 10 ತಿಂಗಳುಗಳಲ್ಲಿ ಎರಡನೇ ತರಗತಿಯ ವಿದ್ಯಾರ್ಥಿ ತನ್ನ ಪಾಕೆಟ್ ಮನಿ ಮತ್ತು ಕುಟುಂಬ ಸದಸ್ಯರಿಂದ ಬಂದ ಸಣ್ಣ ಕೊಡುಗೆಗಳನ್ನು ಉಳಿಸಿದ್ದಾನೆ. ಅವನ ನಿಸ್ವಾರ್ಥ ಕಾರ್ಯವು ದೇಶದ ನಾಗರಿಕರ ಹೃದಯಗಳನ್ನು ಮುಟ್ಟಿದೆ. ಅವನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕರೂರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ವೈಯಕ್ತಿಕವಾಗಿ ದೇಣಿಗೆ ನೀಡಲಾಯಿತು. ಅಲ್ಲಿ ಹುಡುಗ ನಾಣ್ಯಗಳು ಮತ್ತು ನೋಟುಗಳಿಂದ ತುಂಬಿದ ನೀರಿನ ಟ್ಯಾಂಕ್ ಆಕಾರದ ಹಣದ ಹುಂಡಿಯನ್ನು ತೆಗೆದುಕೊಂಡು ಬಂದನು. ನಾನು ಎರಡನೇ ತರಗತಿಯಲ್ಲಿ ಓದುತ್ತಿದ್ದೇನೆ. ನಮ್ಮನ್ನು ರಕ್ಷಿಸುವವರಿಗೆ ಸಹಾಯ ಮಾಡಲು ನಾನು ಬಯಸುತ್ತೇನೆ. ಆದ್ದರಿಂದ ಸೇನಾ ಸೈನಿಕರಿಗೆ ನೀಡಲು ನನ್ನ ಎಲ್ಲಾ ಹಣವನ್ನು ಉಳಿಸಿದೆ ಎಂದು ಬಾಲಕ ಕಲೆಕ್ಟರ್ ಕಚೇರಿಯ ಹೊರಗೆ ಮಾಧ್ಯಮಗಳಿಗೆ ಹೇಳಿದನು. https://twitter.com/Hinduism_sci/status/1922334402404876739 ವರದಿಗಳ ಪ್ರಕಾರ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಸಾರ್ವಜನಿಕವಾಗಿ ದೇಣಿಗೆಯ ಮೊತ್ತವನ್ನು ಬಹಿರಂಗಪಡಿಸಲಿಲ್ಲ.…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ನೇರಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಪೈಕಿ ರೋಸ್ಟರ್ / ಮೀಸಲಾತಿ ನಿಯಮಾವಳಿಗಳನ್ವಯ 12,692 ಪೌರಕಾರ್ಮಿಕರ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ: 16-11-2024 ರಂದು ಪ್ರಚುರಪಡಿಸಲಾಗಿರುತ್ತದೆ. ಸದರಿ ಪೌರಕಾರ್ಮಿಕ ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿಯನ್ನು ಪಡೆಯುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ಈಗಾಗಲೇ ಅರ್ಜಿಗಳನ್ನು ಸಲ್ಲಿಸಲಾಗಿರುತ್ತದೆ. ಸೇವಾ ಸಿಂಧು ಅರ್ಜಿದಾರರ ಪ್ರಮಾಣ ಪತ್ರ ಪೋರ್ಟಲ್ನಲ್ಲಿ ಪ್ರಮಾಣ ಪತ್ರ-1, ಪ್ರಮಾಣ ಪತ್ರ-2 ಮತ್ತು ಇನ್ನಿತರೇ ದಾಖಲಾತಿಗಳನ್ನು ಆಪ್ಲೋಡ್ ಮಾಡಬೇಕಾಗಿರುವ ಅವಶ್ಯಕತೆಯಿರುತ್ತದೆ. ತತ್ಸಂಬಂಧ ಪ್ರಮಾಣ ಪತ್ರ-1 ಮತ್ತು ಪ್ರಮಾಣ ಪತ್ರ-2 ಗಳನ್ನು ಸಿದ್ದಪಡಿಸಲು ತಗಲುವ ವೆಚ್ಚವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದಲೇ ಭರಿಸಲು ಮಾನ್ಯ ಮುಖ್ಯ ಆಯುಕ್ತರು ತೀರ್ಮಾನಿಸಿರುತ್ತಾರೆ. ಆದ್ದರಿಂದ, ಸದರಿ ಪ್ರಮಾಣ ಪತ್ರಗಳನ್ನು ಸಿದ್ದಪಡಿಸಿ, ಆಪ್ಲೋಡ್ ಮಾಡಲು ಯಾವುದೇ ಅಮಿಷಗಳಿಗೆ ಒಳಗಾಗಬಾರದೆಂದು ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾಗಿರುವ, ಸಿಂಧುತ್ವ ಪ್ರಮಾಣ ಪತ್ರ ಅಗತ್ಯವಿರುವ ಅಭ್ಯರ್ಥಿಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು…