Author: kannadanewsnow09

ಉಜಿರೆ: ಇಲ್ಲಿನ ಧರ್ಮಸ್ಥಳ ಸಮೀಪದ ರುಡ್ ಸೆಟ್ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 01-09-2025ರಿಂದ 30-09-2025ರವರೆಗೆ 30 ದಿನಗಳ ಕಾಲ ಉಚಿತ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿಯನ್ನು ಉಚಿತ ವಸತಿ, ಊಟದ ಜೊತೆಗೆ ನೀಡಲಾಗುತ್ತದೆ. 18ರಿಂದ 45 ವರ್ಷದ ಒಳಗಿನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಸಂಪೂರ್ಣ ಉಚಿತವಾಗಿದೆ. ತರಬೇತಿಯ ವೇಳೆಯಲ್ಲಿ ಸಂಸ್ಥೆಯ ಸಮವಸ್ತ್ರ ಮತ್ತು ಉದ್ಯೋಗ ಕೈಗೊಳ್ಳಲು ಟೂಲ್ ಕಿಟ್ ಉಚಿತವಾಗಿ ಕೊಡಲಾಗುತ್ತದೆ. ಅರ್ಜಿಯನ್ನು 6364561982 ಸಂಖ್ಯೆಗೆ ವಾಟ್ಸ್ ಅಪ್ ಮಾಡಿ. ಇಲ್ಲವೇ www.rudsetujire.com ವೆಬ್ ಸೈಟ್ ಗೆ ಭೇಟಿ ನೀಡಿಯೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9980885900, 9380626695, 8861514706, 8296770307, 9591044014 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. https://kannadanewsnow.com/kannada/shivamogga-in-sorabs-talebail-heavy-rain-caused-a-house-to-collapse-leaving-a-family-stranded-on-the-street/ https://kannadanewsnow.com/kannada/karnatakas-shakti-scheme-joins-the-world-record-transport-minister-said-it-brings-immense-joy/

Read More

ಬೆಂಗಳೂರು: ಶಕ್ತಿ ಯೋಜನೆಯು ( Shakti Scheme ) ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದೆ. Golden Book of World Records ನಲ್ಲಿ ದಾಖಲು ಮಾಡಿದೆ. ಇದು ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವಂತ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ( ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ ಎಂದಿದ್ದಾರೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ…

Read More

ನವದೆಹಲಿ: ಸೋಮವಾರ ಏರ್‌ಟೆಲ್ ನೆಟ್‌ವರ್ಕ್ ಕಡಿತವನ್ನು ಅನುಭವಿಸುತ್ತಿದೆ ಎಂದು ದೂರಸಂಪರ್ಕ ಕಂಪನಿಯು X ನಲ್ಲಿ ಅಳಿಸಲಾದ ಪೋಸ್ಟ್‌ನಲ್ಲಿ ತಿಳಿಸಿದೆ. ಏಕೆಂದರೆ ಹಲವಾರು ಬಳಕೆದಾರರು ಕರೆಗಳನ್ನು ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೆಹಲಿ NCR ನ ಏರ್‌ಟೆಲ್ ಮೊಬೈಲ್ ನೆಟ್‌ವರ್ಕ್ ಬಳಕೆದಾರರು ಕರೆಗಳನ್ನು ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳುವ X ನಲ್ಲಿ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಕಂಪನಿಯು, ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದೆ. “ನಾವು ಪ್ರಸ್ತುತ ನೆಟ್‌ವರ್ಕ್ ಕಡಿತವನ್ನು ಅನುಭವಿಸುತ್ತಿದ್ದೇವೆ, ನಮ್ಮ ತಂಡವು ಸಮಸ್ಯೆಯನ್ನು ಪರಿಹರಿಸಲು ಮತ್ತು ಸೇವೆಗಳನ್ನು ತ್ವರಿತವಾಗಿ ಪುನಃಸ್ಥಾಪಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಉಂಟಾದ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಧನ್ಯವಾದಗಳು, ತಂಡ ಏರ್‌ಟೆಲ್,” ಕಂಪನಿಯು ಪೋಸ್ಟ್‌ಗೆ ಪ್ರತ್ಯುತ್ತರವಾಗಿ X ನಲ್ಲಿ ಹೇಳಿದೆ ಆದರೆ ನಂತರ ಅದನ್ನು ಅಳಿಸಿದೆ. ಏರ್‌ಟೆಲ್ ನಂತರ ಸ್ಥಗಿತದ ಕುರಿತು ಕೆಲವು ಇತರ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿ ಪ್ರಶ್ನೆಗೆ ಡಿಎಂ ಮಾಡುವುದಾಗಿ ಹೇಳಿದೆ. https://kannadanewsnow.com/kannada/shivamogga-in-sorabs-talebail-heavy-rain-caused-a-house-to-collapse-leaving-a-family-stranded-on-the-street/ https://kannadanewsnow.com/kannada/breaking-fir-registered-against-mahesh-timarodi-arrest-possible-at-any-moment/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ಭಾರೀ ಮಳೆಯಿಂದಾಗಿ ಬಸಪ್ಪ ಕೋಂ ಮುತ್ತಪ್ಪ ಎಂಬುವರ ಮನೆಯ ಗೋಡೆ ಪಕ್ಕದ ಮನೆಯ ಹಾಲಮ್ಮ ಎಂಬುವರ ಮನೆಯ ಮೇಲೆ ಬಿದ್ದ ಪರಿಣಾಮ, ಒಂದು ಭಾಗದ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದೆ. ಇಂದು ಬೆಳಗ್ಗೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಮನೆ ಬಿದ್ದಂತ ಸಂದರ್ಭದಲ್ಲೇ ಹಾಲಮ್ಮ, ಮಗಳು, ಮೊಮ್ಮಕ್ಕಳು ವಾಸವಾಗಿದ್ದರು. ಆದರೇ ಮನೆಯ ಎಡಭಾಗದಲ್ಲಿ ಮಲಗಿದ್ದು. ಬಲಭಾಗದಲ್ಲಿನ ಮನೆಯ ಗೋಡೆ ಕುಸಿದು ಬಿದ್ದಿರುವ ಪರಿಣಾಮ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿತಗೊಂಡ ಪರಿಣಾಮ ಮಳೆಯ ನೀರು ಮನೆಯೊಳಗೆ ನುಗ್ಗಿದ್ದರಿಂದಾಗಿ ಮನೆಯಲ್ಲಿದ್ದಂತ ವಸ್ತುಗಳೆಲ್ಲ ಹಾನಿಗೊಂಡಿದ್ದಾವೆ. ಶೇಖರಿಸಿದ್ದಂತ ಪಾತ್ರೆ, ದವಸ-ಧಾನ್ಯಗಳು ಹಾಳಾಗಿದ್ದಾವೆ. ಹಾಲಮ್ಮ ಅವರ ಇಡೀ ಕುಟುಂಬವೇ ಬೀದಿಗೆ…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಒಂದೊಂದು ಹೇಳಿಕೆ ನೀಡಲಾಗುತ್ತಿದೆ. ಈಗ ಅನಗತ್ಯ ಚರ್ಚೆ ಬೇಡ, ತನಿಖೆ ಬಳಿಕ ಸತ್ಯಾಂಶ ಹೊರಬರುತ್ತೆ. ತನಿಖೆ ನಡೆಯುತ್ತಿರುವಾಗ ಏನೂ ಹೇಳಲು ಆಗಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ…

Read More

ಬೆಂಗಳೂರು:  ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿಪಂಜರ ಸಿಗುತ್ತೆ. ಅದರ ಬಗ್ಗೆ ತನಿಖೆ ನಡೆಸಲು ಎಫ್ಎಸ್ಎಲ್ ಗೆ ಕಳುಹಿಸಿಕೊಡಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ ಎಂದರು. ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ.…

Read More

ಚೆನ್ನೈ: ತೆರಿಗೆ ಸುಧಾರಣಾ ಘೋಷಣೆಗಳು ಮತ್ತು ಸಾರ್ವಭೌಮ ರೇಟಿಂಗ್ ಅಪ್‌ಗ್ರೇಡ್ ಹೂಡಿಕೆದಾರರ ಭಾವನೆಯನ್ನು ಹೆಚ್ಚಿಸಿದ್ದರಿಂದ, ಆಗಸ್ಟ್ 18, 2025 ರ ಸೋಮವಾರ ಭಾರತೀಯ ಷೇರು ಮಾರುಕಟ್ಟೆಗಳು ತೀವ್ರವಾಗಿ ಏರಿದವು. ಬಿಎಸ್‌ಇ ಸೆನ್ಸೆಕ್ಸ್ 676 ಅಂಕಗಳ ಏರಿಕೆಯೊಂದಿಗೆ ಸುಮಾರು 81,274 ಕ್ಕೆ ಮುಕ್ತಾಯವಾದರೆ, ಎನ್‌ಎಸ್‌ಇ ನಿಫ್ಟಿ 50 246 ಅಂಕಗಳ ಏರಿಕೆಯೊಂದಿಗೆ 24,877 ಕ್ಕೆ ಕೊನೆಗೊಂಡಿತು. ಇತ್ತೀಚಿನ ವಾರಗಳಲ್ಲಿ ಒತ್ತಡದಲ್ಲಿದ್ದ ಮಾರುಕಟ್ಟೆಗಳಿಗೆ ಈ ಲಾಭಗಳು ಬಲವಾದ ಚೇತರಿಕೆಯನ್ನು ಸೂಚಿಸಿದವು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹೊಸ ಜಿಎಸ್‌ಟಿ 2.0 ಚೌಕಟ್ಟಿನ ಘೋಷಣೆಯಿಂದ ಈ ಏರಿಕೆಗೆ ಕಾರಣವಾಯಿತು, ಇದು ಬಹು ತೆರಿಗೆ ಸ್ಲ್ಯಾಬ್‌ಗಳನ್ನು 5 ಪ್ರತಿಶತ ಮತ್ತು 18 ಪ್ರತಿಶತದ ಎರಡು ಮುಖ್ಯ ದರಗಳಾಗಿ ಏಕೀಕರಿಸುತ್ತದೆ, ಜೊತೆಗೆ ಪಾಪ ಮತ್ತು ಐಷಾರಾಮಿ ವಸ್ತುಗಳ ಮೇಲೆ ವಿಶೇಷ 40 ಪ್ರತಿಶತದಷ್ಟು ತೆರಿಗೆ ವಿಧಿಸುತ್ತದೆ. ಈ ಸುಧಾರಣೆಯು ತೆರಿಗೆ ರಚನೆಯನ್ನು ಸರಳಗೊಳಿಸುತ್ತದೆ, ವ್ಯವಹಾರಗಳಿಗೆ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಅನುಸರಣೆಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಎಸ್ &…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಇದರ ನಡುವೆ ಎಫ್ಎಸ್ಎಲ್ ಫಲಿತಾಂಶ ಬರುವವರೆಗೂ ಶೋಧ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲೇ ಉತ್ತರಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಅಪರಿಚಿತ ದೂರು ಕೊಟ್ಟಿದ್ದನು. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಹ ಕೇಳಿದ್ದನು ಎಂದರು. ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದನಕ್ಕೆ ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡುತ್ತಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಅಪರಿಚಿತ ದೂರು ಕೊಟ್ಟಿದ್ದನು. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಹ ಕೇಳಿದ್ದನು ಎಂದರು. ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಆ ನಂತ್ರ…

Read More

ಪ್ರತಿಯೊಬ್ಬರಿಗೂ ಕಾಯಿಲೆ ಬಂದಾಗ ಔಷಧಿಯ ಅಗತ್ಯವಿದೆ. ವೈದ್ಯರು ಕೂಡ ಅನೇಕ ಔಷಧಿಗಳನ್ನು ಶಿಫಾರಸು ಮಾಡುತ್ತಾರೆ. ಇಂತಹ ಮೆಡಿಕಲ್ ನಿಂದ ಅನೇಕ ಪ್ಯಾಕೆಟ್ ಮಾತ್ರೆಗಳು ಅಂದರೆ ಔಷಧಗಳನ್ನು ತರಲಾಗುತ್ತದೆ. ಆದರೆ ಜನರು ನಿಜವಾಗಿಯೂ ಪ್ಯಾಕೆಟ್‌ಗಳನ್ನು ನೋಡುತ್ತಾರೆಯೇ ಅಥವಾ ಅವುಗಳಲ್ಲಿರುವ ಮಾಹಿತಿಯನ್ನು ಓದುತ್ತಾರೆಯೇ? ಇದು ಪ್ರಶ್ನೆ. ಏಕೆಂದರೆ ಹೆಚ್ಚಿನ ಪ್ಯಾಕೆಟ್‌ಗಳು ಪ್ರಮುಖ ಮಾಹಿತಿ ಅಥವಾ ಕೆಲವು ಮಾಹಿತಿಯನ್ನು ಒಳಗೊಂಡಿರುತ್ತವೆ. ಕೆಲವು ಪ್ಯಾಕೆಟ್‌ಗಳು ಕೆಂಪು ಗೆರೆಯನ್ನು ಹೊಂದಿರುತ್ತವೆ. ಅದಕ್ಕೆ ಕಾರಣವನ್ನು ಇಂದು ನಾವು ನಿಮಗೆ ಹೇಳಲಿದ್ದೇವೆ. ಕೆಲವು ಮಾತ್ರೆಗಳ ಪಟ್ಟಿಯ ಮೇಲೆ ನೀವು ಆಗಾಗ್ಗೆ ಕೆಂಪು ಗೆರೆಯನ್ನು ನೋಡಿದ್ದೀರಿ. ಅನೇಕ ಜನರಿಗೆ ಅದರ ಅರ್ಥ ತಿಳಿದಿಲ್ಲ. ಅದನ್ನೇ ನಾವು ಇಂದು ನಿಮಗೆ ಹೇಳಲಿದ್ದೇವೆ. ಏಕೆಂದರೆ ನೀವು ಇದನ್ನು ತಿಳಿದುಕೊಳ್ಳಬೇಕು. ಕೆಂಪು ರೇಖೆ ವೈದ್ಯರು ಕೆಂಪು ರೇಖೆಯ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಇದರ ಅರಿವಿಲ್ಲ. ಅಂತಹವರು ವೈದ್ಯರ ಸಲಹೆಯಿಲ್ಲದೆ ವೈದ್ಯಕೀಯವಾಗಿ ಯಾವುದೇ ಔಷಧಿಯನ್ನು ಸೇವಿಸುತ್ತಾರೆ ಮತ್ತು ಅವರು ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಾಗಿ ಔಷಧ…

Read More