Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು. ಜು.12 ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನಿವಾಸಿ ಭಾರತೀಯ ಸಮಿತಿಯನ್ನು ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2008 ರಲ್ಲಿ ಸ್ಥಾಪಿಸಲಾಗಿದೆ. ವಿಶ್ವದೆಲ್ಲೆಡೆ ನೆಲೆಸಿರುವ ಅನಿವಾಸಿ ಕನ್ನಡಿಗರ ಆಕಾಂಕ್ಷೆ, ಅವಶ್ಯಕತೆ ಮತ್ತು ನಿರೀಕ್ಷೆಗಳನ್ನು ಗಮನದಲ್ಲಿ ಇಟ್ಟುಕೊಂಡು 2016-17 ನೇ ಸಾಲಿನಲ್ಲಿ ಅನಿವಾಸಿ ಭಾರತೀಯ ನೀತಿಯನ್ನು ಹೊರತರಲಾಗಿದೆ. ಅನಿವಾಸಿ ಕನ್ನಡಿಗರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ದುಡಿಯುವ ವರ್ಗ ಹೆಚ್ಚಿನ ತೊಂದರೆ ಎದುರಿಸುತ್ತಾರೆ. ಗಲ್ಫ್ ದೇಶಗಳಿಗೆ ತೆರಳಿದ ಅನಿವಾಸಿ ಕನ್ನಡಿಗರಿಂದ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಹೊತ್ತ ಕರೆಗಳು ಬರುತ್ತಿರುತ್ತವೆ. ನಕಲಿ ಏಜೆನ್ಸಿ ಮೂಲಕ ತೆರಳಿದ ದುಡಿಯುವ ವರ್ಗ ಅಲ್ಲಿ ತೊಂದರೆಗಳೊಳಗಾಗಿ,…
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿಂದ ಕನ್ನಡದ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಆದೇಶಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಪವರ್ ಟಿವಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ನಿಂದ ಹೈಕೋರ್ಟ್ ನೀಡಿದ್ದಂತ ಪ್ರಸಾರ ಸ್ಥಗಿತದ ಆದೇಶಕ್ಕೆ ತಡೆ ನೀಡಿ, ಬಿಗ್ ರಿಲೀಫ್ ನೀಡಿದೆ. ಈ ಹಿಂದೆ ಪವರ್ ಟೀವಿ ಮೇಲೆ ಹೈಕೋರ್ಟ್ ಚಾಟಿ ಬೀಸಿತ್ತು. ಲೈಸೆನ್ಸ್ ರಿನಿವಲ್ ಮಾಡದ ಗಂಭೀರ ಆರೋಪದ ಹಿನ್ನಲೆಯಲ್ಲಿ ಪವರ್ ಟಿ ವಿ ಕಾರ್ಯ ಪ್ರಸಾರ ಚಟುವಟಿಕೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ ಮಾಡಿತ್ತು. ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ ಉಲ್ಲಂಘನೆ ಮಾಡಲಾಗಿದೆ. ತಕ್ಷಣದಿಂದಲೇ ಚಾನೆಲ್ನಲ್ಲಿ ಸುದ್ದಿಗಳು ಸೇರಿ ಯಾವುದೇ ಪ್ರಸಾರ ಮಾಡಬಾರದು ಅಂತ ಹೈಕೋರ್ಟ್ ನ್ಯಾಯಮೂರ್ತಿ. ಎಸ್ ಆರ್ ಕೃಷ್ಣಕುಮಾರ್ ರ ಏಕಸದಸ್ಯ ಪೀಠ ಆದೇಶ ಮಾಡಿದ್ದರು. ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಎಂ ರಮೇಶ್ ಗೌಡರ ಪತ್ನಿ ಡಾ.ಎ ರಮ್ಯಾ ರಮೇಶ್ & ಹಿರಿಯ ಐಪಿಎಸ್ ಅಧಿಕಾರಿ ಬಿ ಆರ್ ರವಿಕಾಂತೇಗೌಡ ಅರ್ಜಿಯನ್ನು ಹೈಕೋರ್ಟ್…
ಬೆಂಗಳೂರು: ರಾಜ್ಯದ ಕೆಲ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಿಲ್ಲ. ರಾಜ್ಯಾಧ್ಯಂತ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಕಡ್ಡಾಯಗೊಳಿಸಿದ್ದರೂ, ಕೆಲ ಅಧಿಕಾರಿಗಳು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದರು. ಇವರಿಗೆ ಬಿಗ್ ಶಾಕ್ ಎನ್ನುವಂತೆ ಕಂದಾಯ ಇಲಾಖೆಯು ಇ-ಆಫೀಸ್ ಅನುಷ್ಠಾನಗೊಳಿಸದಂತ ಅಧಿಕಾರಿಗಳಿಗೆ ನೋಟಿಸ್ ನೀಡೋದಕ್ಕೆ ಮುಂದಾಗಿದೆ. ಹೌದು ಈ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿ, ಚರ್ಚಿಸಿದ್ದಾರೆ. ಇ- ಆಫೀಸ್ ಅನ್ನು ನಾಡಕಚೇರಿಗೂ ವಿಸ್ತರಿಸುವ ಹಾಗೂ ತಾಲೂಕು ಮಟ್ಟದಲ್ಲಿ ಈವರೆಗೆ ಇ-ಆಫೀಸನ್ನು ಅನುಷ್ಠಾನಗೊಳಿಸದ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸುವ ಸಂಬಂಧ ಇಂದು ಅಧಿಕಾರಿಗಳ ಜೊತೆ ಚರ್ಚಿಸಲಾಯಿತು. https://kannadanewsnow.com/kannada/will-discuss-cauvery-water-release-to-tamil-nadu-with-legal-experts-dk-shivakumar/ https://kannadanewsnow.com/kannada/aparnas-departed-aparna-immersed-in-panchabhutas-still-only-a-memory-of-acha-kannada-narrator/
ಬೆಂಗಳೂರು: “ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಶುಕ್ರವಾರ ಪ್ರಶ್ನಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, “ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ” ಎಂದು ತಿಳಿಸಿದರು. ಮುಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಮೂಡಾ ಹಗರಣದ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ” ಎಂದು…
ಬೆಂಗಳೂರು : “ಪ್ರಪಂಚವೇ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದೆ. ನಮ್ಮ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಉದ್ಯಮಿಗಳು, ನೌಕರರು ಬೆಂಗಳೂರು ಬಿಟ್ಟು ನೆರೆಯ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಬೇಕು. ಪ್ರಪಂಚದ, ದೇಶದ ಜನರನ್ನು ಕರ್ನಾಟಕ ಮುಕ್ತವಾಗಿ ಸ್ವಾಗತಿಸುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಶುಕ್ರವಾರ ನಡೆದ ʼಬೆಂಗಳೂರು ಟೆಕ್ ಸಮ್ಮಿಟ್ʼ ಅಂತರರಾಷ್ಟ್ರೀಯ ಶೃಂಗಮೇಳದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಯಾವ ಸರ್ಕಾರ ಈ ರೀತಿಯ ಬದ್ದತೆ ಹೊಂದಿದೆ ಎಂಬುದನ್ನು ನೀವು ಅರಿಯಬೇಕು. ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖೆಯಿಂದ ಕೈಗೊಂಡಿರುವ ಕಾರ್ಯಗಳ ಬಗ್ಗೆ ಹೊರ ತಂದಿರುವ ಕಿರುಹೊತ್ತಿಗೆ ಇದಕ್ಕೆ ಸಾಕ್ಷಿ. ಉದ್ಯೋಗದಾತರು ಬಲಗೊಂಡಷ್ಟು ನೌಕರರ ಶಕ್ತಿಯೂ ಹೆಚ್ಚುತ್ತದೆ. ಆರ್ಥಿಕತೆಯೂ ಬಲಗೊಳ್ಳುತ್ತದೆ, ದೇಶದ ಶಕ್ತಿಯೂ ಹೆಚ್ಚುತ್ತದೆ” ಎಂದು ತಿಳಿಸಿದರು. “ಉದ್ಯಮಿಗಳು ನಮ್ಮ ಶಕ್ತಿಯ ರಾಯಭಾರಿಗಳು. ಬೆಂಗಳೂರು ಕೈಗಾರಿಕಾ ಹಾಗೂ ಸೇವಾ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ನಾಡಪ್ರಭು…
ನವದೆಹಲಿ: ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ರೂಸ್ ಅವೆನ್ಯೂ ನ್ಯಾಯಾಲಯ ಜುಲೈ 25 ರವರೆಗೆ ವಿಸ್ತರಿಸಿದೆ ಎಂದು ಎಎನ್ಐ ವರದಿ ಮಾಡಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಉದ್ಭವಿಸುವ ಪ್ರಶ್ನೆಗಳನ್ನು ವಿಸ್ತೃತ ನ್ಯಾಯಪೀಠದ ಮುಂದೆ ಪರಿಗಣಿಸಲು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಇಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. https://twitter.com/ANI/status/1811681933643944243 ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ವಿಸ್ತರಣೆಯನ್ನು ಸಿಬಿಐ ಕೋರಿದ್ದರಿಂದ ನ್ಯಾಯಾಲಯದ ವಿಚಾರಣೆಯನ್ನು ಎದುರಿಸಬೇಕಾಯಿತು. ಈ ಪ್ರಕರಣವು ಅಕ್ರಮ ಲಾಭಕ್ಕಾಗಿ ದೆಹಲಿಯ ಮದ್ಯ ನೀತಿಗಳನ್ನು ತಿರುಚುವ ಪಿತೂರಿಯ ಆರೋಪಗಳ ಸುತ್ತ ಸುತ್ತುತ್ತದೆ. https://twitter.com/ANI/status/1811685384947949868 https://kannadanewsnow.com/kannada/akshay-kumar-tests-positive-for-covid-19/ https://kannadanewsnow.com/kannada/establishment-of-hindu-buddhist-and-jain-study-centres-in-jnu/
ನವದೆಹಲಿ: ಸರ್ಫಿರಾ ಪ್ರಚಾರದ ಮಧ್ಯೆ ಅಕ್ಷಯ್ ಕುಮಾರ್ ( Akshay Kumar ) ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅನಂತ್-ರಾಧಿಕಾ ಮದುವೆಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ಬೆಳವಣಿಗೆಯಲ್ಲಿ, ಅಕ್ಷಯ್ ಕುಮಾರ್ ಅವರಿಗೆ ಕೋವಿಡ್ -19 ಪಾಸಿಟಿವ್ ಬಂದಿದೆ. ಸೂಪರ್ಸ್ಟಾರ್ ತಮ್ಮ ಇತ್ತೀಚಿನ ಬಿಡುಗಡೆಯಾದ ಸರ್ಫಿರಾ ಪ್ರಚಾರದ ಸಮಯದಲ್ಲಿ ಭಯಾನಕ ವೈರಸ್ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಪ್ರೋಟೋಕಾಲ್ ಅನ್ನು ಅನುಸರಿಸಿ, ಅಕ್ಷಯ್ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದಾರೆ ಮತ್ತು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಭವ್ಯ ವಿವಾಹ ಆಚರಣೆಗಳಿಗೆ ಅಡ್ಡಿಪಡಿಸಲಿದ್ದಾರೆ. “ಅಕ್ಷಯ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ತಮ್ಮ ಇತ್ತೀಚಿನ ಚಿತ್ರ ಸರ್ಫಿರಾವನ್ನು ಪ್ರಚಾರ ಮಾಡುತ್ತಿದ್ದರು. ಅವರ ಪ್ರಚಾರ ತಂಡದ ಕೆಲವು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಹೇಳಿದ ನಂತರ ಪರೀಕ್ಷೆಗೆ ಒಳಗಾಗಲು ನಿರ್ಧರಿಸಿದರು” ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. “ನಟ ಶುಕ್ರವಾರ ಬೆಳಿಗ್ಗೆ ಧನಾತ್ಮಕ ಪರೀಕ್ಷೆ ನಡೆಸಿದರು. ಪ್ರಚಾರದ ಕೊನೆಯ ಹಂತವನ್ನು ಮತ್ತು ಅನಂತ್ ಅಂಬಾನಿ ಅವರ…
ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಸಫಾಯಿ ಕರ್ಮಚಾರಿ/ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್/ ಚಿಂದಿ ಆಯುವವರು / ಸ್ಮಶಾನ ಕಾರ್ಮಿಕರ ಮಕ್ಕಳು. ಬಾಲ ಕಾರ್ಮಿಕರು/ ಜೀತ ವಿಮುಕ್ತ ಕಾರ್ಮಿಕರ ಮಕ್ಕಳು/ ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು. 25% ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಮಕ್ಕಳು/ ಅನಾಥ ಮಕ್ಕಳು. ಗುರುತಿಸಿರುವ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ- ಅತೀ ಸೂಕ್ಷ್ಮ ಸಮುದಾಯದ/ಸೈನಿಕರ…
ವಿಜಯವಾಡ: ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ( former chief minister and YSRC president YS Jagan Mohan Reddy ) ಮತ್ತು ಇತರ ನಾಲ್ವರ ವಿರುದ್ಧ ಗುಂಟೂರು ಜಿಲ್ಲೆಯ ನಾಗರಂಪಲೆಂ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಟಿಡಿಪಿಯ ಉಂಡಿ ಶಾಸಕ ಕೆ.ರಘುರಾಮ ಕೃಷ್ಣಂ ರಾಜು (ಆರ್ಆರ್ಆರ್) ನೀಡಿದ ದೂರಿನ ಮೇರೆಗೆ ಮಾಜಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪಿಎಸ್ಆರ್ ಆಂಜನೇಯಲು, ಮಾಜಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಿಐಡಿ) ಮತ್ತು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಡಾ.ಜಿ.ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಮತ್ತು ಜಗನ್ ಮೋಹನ್ ರೆಡ್ಡಿ ವಿರುದ್ಧ ಕೊಲೆ ಯತ್ನ, ಕಸ್ಟಡಿ ಚಿತ್ರಹಿಂಸೆ ಮತ್ತು ಕ್ರಿಮಿನಲ್ ಪಿತೂರಿಯಂತಹ ಆರೋಪಗಳನ್ನು ಶಾಸಕರು ಪ್ರಸ್ತಾಪಿಸಿದರು. ಬಂಧನದ ಸಮಯದಲ್ಲಿ, ಅವರನ್ನು ಥಳಿಸುವುದು ಮತ್ತು ಎದೆಯ ಮೇಲೆ ಕುಳಿತು ಹೃದಯವನ್ನು ಉಸಿರುಗಟ್ಟಿಸುವ ಪ್ರಯತ್ನ ಸೇರಿದಂತೆ ದೈಹಿಕ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರು ಹೇಳಿದರು.…
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅಚ್ಚ ಕನ್ನಡದ ನಿರೂಪಕಿ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಇನ್ನೂ ಅಚ್ಚಕನ್ನಡದ ನಿರೂಪಕಿ ಅಪರ್ಣಾ ನೆನಪು ಮಾತ್ರವೇ ಆಗಿದ್ದಾರೆ. ಕನ್ನಡ ಭಾಷೆಗೆ ಸ್ವರವಾಗಿದ್ದಂತ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವಂತ ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ಅಪರ್ಣಾ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು. ಅಲ್ಲಿ ಸ್ಮಾರ್ತ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಈಗ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಹೀಗಿದೆ ಅಪರ್ಣಾ ಬದುಕಿನ ಜರ್ನಿಯ ಹಿನ್ನೋಟ ಕ್ಯಾನ್ಸರ್ ನಿಂದ ನಿಧನರಾಗಿರುವಂತ ಕನ್ನಡದ ಖ್ಯಾತ ನಿರೂಪಕಿ…