Author: kannadanewsnow09

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿನ್ ಡೆತ್ ನೋಟ್ ಪ್ರದರ್ಶಿಸಿದರು. ಖರ್ಗೆಜೀ ಎಂದರೆ ಮಲ್ಲಿಕಾರ್ಜುನ ಖರ್ಗೆಯವರು. ಪ್ರಿಯಾಂಕ್ ಖರ್ಗೆ ಅಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು. ಸಚಿನ್ ಡೆತ್ ನೋಟಿನಲ್ಲಿ ಎಲ್ಲ ವಿವರ ಬಂದಿದೆ. ಇದಕ್ಕೆ ಸರಕಾರ ಉತ್ತರಿಸಬೇಕು. ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸ ಮಾಡದಿರಿ ಎಂದು ಎಚ್ಚರಿಸಿದರು. ಒಬ್ಬರು ಜೀವತ್ಯಾಗ ಮಾಡಿದ್ದು, ಅವರಿಗೆ ಬೆದರಿಕೆ ಹಾಕಿರುವಾಗ ಅವರಿಗೆ ನ್ಯಾಯ ಬೇಕೇ ಬೇಡವೇ? ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಲಿ ಎಂದು ಆಗ್ರಹಿಸಿದರು. ಸಿದ್ದರಾಮಯ್ಯನವರ ಸರಕಾರ ತಪ್ಪು ಮಾಡಿದವರನ್ನು ರಕ್ಷಿಸುತ್ತಿದೆ ಎಂದು ಅವರು ಆರೋಪಿಸಿದರು. ಪ್ರಿಯಾಂಕ್ ಖರ್ಗೆ ಪರವಾಗಿ ದೆಹಲಿಯಿಂದ ಫೋನ್ ಕರೆಗಳು ಬರುತ್ತಿವೆ. ಅವರ ಪರವಾಗಿ 3 ಜನರು ಮಾತನಾಡಿದ್ದಾರೆ. ಒಂದನೆಯದಾಗಿ…

Read More

ಶಿವಮೊಗ್ಗ: ಬೆಂಗಳೂರಿನ ನವರತ್ನ ಜ್ಯೂವೆಲ್ಲರಿ ಮಾಲೀಕರಿಗೆ ಕೋಟಿ ಕೋಟಿ ವಂಚಿಸಿದ ರೀತಿಯಲ್ಲೇ ಚಾಲಾಕಿ ಶ್ವೇತಾಗೌಡ ಅವರು, ಸಾಗರದ ಜ್ಯುವೆಲ್ಲರಿ ಅಂಗಡಿ ಮಾಲೀಕರಿಗೂ ಬಂಗಾರದ ಆಭರಣ ಪಡೆದು ಲಕ್ಷ ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಜ್ಯೂವೆಲ್ಲರಿ ಮಾಲೀಕರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಶ್ವೇತಾಗೌಡ ವಿರುದ್ಧ FIR ದಾಖಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾಗರದ ಪ್ರಗತಿ ಜ್ಯೂವೆಲ್ಲರ್ ಮಾಲೀಕ ಬಾಲರಾಜ್ ಶೇಟ್ ಅವರು, ಬೆಂಗಳೂರಿನ ನವರತ್ನ ಜ್ಯೂವೆಲ್ಲರ್ ಮಾಲೀಕರಾದಂತ ಸಂಜಯ್ ಬಾಪ್ನ ಅವರ ಮೂಲಕ ಶ್ವೇತಾಗೌಡ ಪರಿಚಯವಾಗಿತ್ತು. ಪರಿಚಯವಾದ 15 ದಿನಗಳ ನಂತ್ರ ಕಾಫಿ ಡೇನಲ್ಲಿ ಅವರನ್ನು ಭೇಟಿ ಮಾಡಲಾಗಿತ್ತು. ಆಗ 250 ಗ್ರಾಂ ಚಿನ್ನಾಭರಣ ಬೇಕು ಎಂಬುದಾಗಿ ಆರ್ಡರ್ ನೀಡಿದ್ದರು. ಇದಾದ ಬಳಿಕ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ತಿಳಿಸಿದರು. ಬೆಂಗಳೂರಿಗೆ ಆರ್ಡರ್ ಒಂದು ಇದ್ದ ಕಾರಣ 285 ಗ್ರಾಂ ಆಭರಣಗಳೊಂದಿಗೆ ತನ್ನ ಸಹೋದರನನ್ನು ಕಳುಹಿಸಿ ಕೊಡಲಾಗಿತ್ತು. ಆದರೇ ಆ ಪಾರ್ಟಿ ಸಿಗದ ಕಾರಣ,…

Read More

ಬೆಂಗಳೂರು: ಬಿಬಿಎಂಪಿ ಅಡಿಯಲ್ಲಿ ಇರುವ ಬೆಂಗಳೂರು ಹವಾಮಾನ ಕ್ರಿಯಾ ಕೋಶದ ವತಿಯಿಂದ ಬ್ಲೂಗ್ರೀನ್ ಪ್ರಶಸ್ತಿ(BluGreen Awards)ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರು ಹಾಗೂ ಹವಾಮಾನ ಕ್ರಿಯಾ ಕೋಶದ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ಗೆಹ್ಲೋಟ್ ರವರು ತಿಳಿಸಿದರು. ಬೆಂಗಳೂರನ್ನು ಹೆಚ್ಚು ಹಸಿರೀಕರಣ, ಪರಿಸರ ಸ್ನೇಹಿ ನಗರವನ್ನಾಗಿ ಮಡುವ, ಹಾವಾಮಾನ ಉಪ ಕ್ರಮದಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳು, ಸಮುದಾಯಗಳು, ಸಂಸ್ಥೆಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ನೀವು ಬೆಂಗಳೂರಲ್ಲಿ ಹವಾಮಾನ ಬದಲಾವಣೆಗಾಗಿ ನವೀನ ಪರಿಹಾರ ಜಾರಿಗೊಳಿಸುತ್ತಿದ್ದೀರಾ.? ಇಲ್ಲಿದೆ ಪ್ರಶಸ್ತಿ ಪಡೆಯಲು ಅವಕಾಶ ಹವಾಮಾನ ಬದಲಾವಣೆಯನ್ನು ಎದುರಿಸಲು ನೀವು ನವೀನ ಪರಿಹಾರಗಳನ್ನು ಜಾರಿಗೊಳಿಸುತ್ತಿದ್ದೀರಾ?, ನೀವು ಸಮರ್ಥನೀಯತೆಯಲ್ಲಿ ಪರಿಣಾಮಕಾರಿ ಅಭ್ಯಾಸಗಳನ್ನು ಮುನ್ನಡೆಸುತ್ತಿದ್ದೀರಾ ? ಹೌದು ಎಂದಾದರೆ, ಗುರುತಿಸಿಕೊಳ್ಳಲು ಇದು ನಿಮ್ಮ ಸದಾವಕಾಶ. ಬ್ಲೂಗ್ರೀನ್ ಪ್ರಶಸ್ತಿಗಳು ಬೆಂಗಳೂರಿನ ಹವಾಮಾನ ಕ್ರಮದ ಗುರಿಗಳನ್ನು ಮುನ್ನಡೆಸುವವರಿಗೆ ಸ್ಪೂರ್ತಿ ಮತ್ತು ಗೌರವವನ್ನು ನೀಡುವ ಗುರಿಯನ್ನು ಹೊಂದಿವೆ. ಯಶಸ್ಸಿನ ಕಥೆಗಳನ್ನು ಪ್ರದರ್ಶಿಸುವ ಮೂಲಕ, ಈ ಪ್ರಶಸ್ತಿಗಳು ಹಸಿರು ಮತ್ತು ಹೆಚ್ಚು…

Read More

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್‌ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ದೂರಿದರು. ಸರ್ಕಾರ ಎಲ್ಲವನ್ನೂ…

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳದ ಶಾಕ್ ಜನತೆಗೆ ಉಂಟಾಗಲಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಪ್ರಯಾಣ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಸಾರಿಗೆ ಬಸ್ಸುಗಳ ಪ್ರಯಾಣದರವನ್ನು ಶೇ.42ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ಅಂತಿಮವಾಗಿ, ಶೇ.15ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಜಾರಿಗೆ ಬರಲಿದೆ. ಆ ಮೂಲಕ ಕೆ ಎಸ್ ಆರ್ ಟಿಸಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಪರಿಣಾಮ 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್‌ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ ಎಂದಿದೆ. https://twitter.com/KarnatakaVarthe/status/1874724304031826356 ಇನ್ನೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದೇಶದ ಸ್ವಾತಂತ್ರ್ಯದ 77 ವರುಷಗಳ ಸುದೀರ್ಘ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಕ್ರಮ- ಹಿಂದೂ ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮವನ್ನು ಸರ್ಕಾರ ವಹಿಸಿದೆ. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಧಾರ್ಮಿಕ ಬದ್ಧತೆ – ಉಳಿಯಿತು 10,700 ಎಕರೆ ‘ದೇವರ ಸ್ವತ್ತು ಎಂದಿದ್ದಾರೆ. ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿ.ಜೆ.ಪಿ ಯವರು ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ…

Read More

ಮೈಸೂರು: ಕೆ ಆರ್ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂಬುದಾಗಿ ಹೇಳುತ್ತಿರುವಂತ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ದಾಖಲೆ ಸಹಿತ ಮೈಸೂರು ಒಡೆಯರ್ ಹಾಗೂ ಸಂಸದ ಯಧುವೀರ್ ಈ ಕೆಳಕಂಡಂತೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ”ಕೆಆರ್‌ಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಆಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಶ್ರೀ ಮಿರ್ಜಾ ಇಸ್ಮಾಯಿಲ್’ರವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆಯಲ್ಲಿ ವಾಸವಿದ್ದರು, ಅವರು ಬರೆದಿರುವಂತಹ at post ಪತ್ರಗಳ ವಿಳಾಸದಲ್ಲಿ ‘ಪ್ರಿನ್ಸೆಸ್ ರಸ್ತೆ’ಯ ಹೆಸರು ಬಳಸಲಾಗಿದೆ. ಕೇಂದ್ರ ಸರ್ಕಾರದ ಭಾರತದ ಮ್ಯಾಪಿಂಗ್ ಮತ್ತು ಸಮೀಕ್ಷೆಯ ಉಸ್ತುವಾರಿ ಹೊಂದಿರುವ ಸರ್ಕಾರಿ ಇಲಾಖೆಯವರ ‘ಮೈಸೂರು ಟೂರ್ ಮ್ಯಾಪ್/ಗೈಡ್’ನಲ್ಲಿರುವ ಮೈಸೂರಿನ ನಕ್ಷೆಯಲ್ಲಿ ‘ಪ್ರಿನ್ಸೆಸ್ ರಸ್ತೆ’ಯನ್ನು ಗುರುತಿಸಿ ಹೆಸರಿಸಲಾಗಿದೆ. ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಇದೇ ರಸ್ತೆಗೆ ‘ಪ್ರಿನ್ಸೆಸ್ ರಸ್ತೆ’ ಎಂದು ನಾಮಕರಣ…

Read More

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ದಿನಾಂಕ:20-09-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 07-10-2024ರಿಂದ 07-11-2024ರವರೆಗೆ ನಿಗದಿಪಡಿಸಲಾಗಿತ್ತು. ಸರ್ಕಾರವು ದಿನಾಂಕ:18-09-2024ರಂದು ಜಾರಿ ಮಾಡಿದ ಕ್ರೀಡಾ ಸಾಧಕ ಅಭ್ಯರ್ಥಿಗಳ ಮೀಸಲಾತಿಯನ್ನು ಸದರಿ ಹುದ್ದೆಗಳಿಗೂ ಅಳವಡಿಸಿಕೊಳ್ಳಬೇಕಾದ್ದರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮುಂದೂಡಲಾಗಿರುತ್ತದೆ ಎಂದಿದೆ. ಪ್ರಸ್ತುತ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 295 ಸೇನೆನಿ 2023 ದಿನಾಂಕ:04-12-2024ರಲಿ.. ಕ್ರೀಡಾ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಸಾಮಾನ ನೇಮಕಾತಿ) ನಿಯಮಗಳು 19770 ನಿಯಮ 098 ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿರುವುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡಾ…

Read More

ನವದೆಹಲಿ: ಭಾರತವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ದೇಶದ ಕಾಫಿ ರಫ್ತು ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ, ಮೊದಲ ಬಾರಿಗೆ 1 ಬಿಲಿಯನ್ ಡಾಲರ್ ಮೀರಿದೆ. 2024 ರ ಏಪ್ರಿಲ್ ಮತ್ತು ನವೆಂಬರ್ ನಡುವೆ ಕಾಫಿ ರಫ್ತು 1,146.9 ಮಿಲಿಯನ್ ಡಾಲರ್ ತಲುಪಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 29 ರಷ್ಟು ಹೆಚ್ಚಾಗಿದೆ. ಇದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (Centre for Monitoring Indian Economy -CMIE) ಪ್ರಕಾರ ಆಗಿದೆ. ರಫ್ತಿನ ಮೌಲ್ಯದಲ್ಲಿ ಹಠಾತ್ ಏರಿಕೆಯು ರೋಬಸ್ಟಾ ಕಾಫಿ ಬೆಲೆಗಳ ಏರಿಕೆಯಿಂದಾಗಿ ಎನ್ನಲಾಗುತ್ತಿದೆ. ಯುರೋಪಿಯನ್ ಯೂನಿಯನ್ ವಿಧಿಸಿದ ಹೊಸ ಅರಣ್ಯನಾಶ ಕಾನೂನಿನ ನಿರೀಕ್ಷೆಯಲ್ಲಿ ದಾಸ್ತಾನು ಮಾಡುವ ಅಗತ್ಯವೂ ರಫ್ತು ಉಲ್ಬಣಕ್ಕೆ ಕಾರಣವಾಯಿತು. ಈ ನಿಯಂತ್ರಣವು ಇಯುಗೆ ಕಾಫಿ ಮತ್ತು ಇತರ ಕೃಷಿ ರಫ್ತುಗಳ ವೆಚ್ಚವನ್ನು ಹೆಚ್ಚಿಸುತ್ತದೆ. ಭಾರತದ ಕಾಫಿ ರಫ್ತು 2023-24ರ ಪೂರ್ಣ ವರ್ಷದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿ 1.28 ಬಿಲಿಯನ್ ಡಾಲರ್ಗೆ ತಲುಪಿದೆ. 2022-23ರಲ್ಲಿ, ದೇಶದ ಕಾಫಿ ರಫ್ತು ಮೌಲ್ಯ…

Read More

ಬೆಂಗಳೂರು: ನಗರದ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಕೇಸ್ ಸಂಬಂಧ ತೆಲುಗು ನಟಿ ಹೇಮಾ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ನಟಿ ಹೇಮಾಗೆ ರೇವ್ ಪಾರ್ಟಿ ಕೇಸಲ್ಲಿ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರ ವಿರುದ್ಧ ಕೇಸ್ ದಾಖಲಾಗಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಬಳಿಕ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ತೆಲುಗು ನಟಿ ಹೇಮಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಟಿ ಹೇಮಾ ವಿರುದ್ಧದ ರೇವ್ ಪಾರ್ಟಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ತೆಲುಗು ನಟಿ ಹೇಮಾಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/direct-interview-for-assistant-professor-recruitment/ https://kannadanewsnow.com/kannada/breaking-big-shock-to-bengaluru-people-water-tariff-hike-almost-fixed-tariff-likely-to-go-up-in-january-2-week/

Read More