Author: kannadanewsnow09

ಉತ್ತರ ಪ್ರದೇಶ: ಆಗ್ರಾದಲ್ಲಿ ಮಿಗ್-29 ಯುದ್ಧ ವಿಮಾನ ಪತನಗೊಂಡಿದೆ. ಈ ಪತನದ ನಂತ್ರ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಉತ್ತರ ಪ್ರದೇಶದ ಆಗ್ರಾ ಬಳಿ ಮಿಗ್-29 ಯುದ್ಧ ವಿಮಾನ ಪತನಗೊಂಡಿದೆ. ಪೈಲಟ್ ವಿಮಾನದಿಂದ ಹೊರಬಂದಿದ್ದಾರೆ. ವಿಮಾನವು ಪಂಜಾಬ್ನ ಆದಂಪುರದಿಂದ ಹೊರಟು ಆಗ್ರಾಕ್ಕೆ ವ್ಯಾಯಾಮಕ್ಕಾಗಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ತನಿಖೆಗೆ ಆದೇಶಿಸಿರುವುದಾಗಿ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ANI/status/1853396413457285467 https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/ https://kannadanewsnow.com/kannada/breaking-deeply-concerned-india-condemns-violence-against-hindus-in-canada/

Read More

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಪ್ರತಿಯೊಬ್ಬರು ಹತ್ರನೂ ಇಯರ್‌ ಬಡ್ಸ್‌ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ. ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ. ಏಕೆಂದರೆ ಅದನ್ನು ಕಿವಿಯೇ…

Read More

ನವದೆಹಲಿ: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ. ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೇ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬುದಾಗಿಯೂ ತಿಳಿಸಿದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಾಲ್ಕುವಾರ ವಿಚಾರಣೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/karnataka-janapada-academy-awards-2023-30-artistes-to-be-honoured/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/

Read More

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯಂದ ಕೊಡಮಾಡುವಂತ 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ ಹಾಗೂ ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಜಾನಪದ ಅಕಾಡೆಮಿಯಂದ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಏಕತಾರಿ, ತಂಬೂರಿ ಕಲಾವಿದ ಕೆ.ಎಂ ರಾಮಯ್ಯ ಅವರಿಗೆ 2023ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗಿದೆ. ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬೆಂಗಳೂರು ಗ್ರಾಮಾಂತರದ ಓಬಮ್ಮ- ಸೋಬಾನೆ ರಾಮನಗರ ಜಿಲ್ಲೆಯ ರಂಗಯ್ಯ -ಪಟ ಕುಣಿತ ಕೋಲಾರದ ತೋಪಣ್ಣ ಮಂಚಂಡಹಳ್ಳಿ – ಕೀಲುಕುದುರೆ ಚಿಕ್ಕಬಳ್ಳಾಪುರದ ದೊಡ್ಡಕೂರ್ಲಪ್ಪ – ತಮಟೆ ವಾದನ ತುಮಕೂರಿ ಜಿಲ್ಲೆಯ ಕದರಮ್ಮ- ಜನಪದ ಹಾಡು ದಾವಣಗೆರೆ ಜಿಲ್ಲೆಯ ಕಾಟಮ್ಮ- ಕಥನ ಕಾವ್ಯ ಚಿತ್ರದುರ್ಗದ ಸಿರಿಯಮ್ಮ-ಮಹಾಕಾವ್ಯ ಶಿವಮೊಗ್ಗ ಜಿಲ್ಲೆ ಟೀಕಪ್ಪ- ಡೊಳ್ಳು ಕುಣಿತ ಕೊಡಗು ಜಿಲ್ಲೆಯ ದೇವಕಿ ಕೆ.ಸಿ- ಊರ್ಟಿಕೋಟ್‌ ಮಂಡ್ಯದ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು. ಶಾಸಕರು, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ತ್ತ ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಕೀರ್ಣ ಆವರಣ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ನ.01 ರಂದು ವಾಹನಕ್ಕೆ ಚಾಲನೆ ನೀಡಿದರು. ಈ ವೇಳೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು. ಕುಟುಂಬ, ಸಮುದಾಯ ಕೆಲಸದ ಸ್ಥಳಗಳು ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸಕಾಲಿಕ ನೆರವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯಡಿ…

Read More

ಬೆಂಗಳೂರು: ಬಿಜೆಪಿ  ನಾಯಕರು ರಾಜಕಾರಣಕ್ಕಾಗಿ ವಕ್ಫ್ ನೋಟಿಸ್ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವಂತ ಅವರು, ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂಬುದಾಗಿ ಹೇಳಿದ್ದಾರೆ. https://twitter.com/siddaramaiah/status/1853353032974528771 ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಯಾರೇ ಆಗಿರಲಿ ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ…

Read More

ಹಾವೇರಿ: ನನ್ನ ಜೀವನ ಒಂದು ತೆರೆದಿಟ್ಟ ಪುಸ್ತಕವಿದ್ದಂತೆ. ಆದರೇ ಬಿಜೆಪಿಯವರು ಮಸಿ ಬಳಿಯಲು ಹೊರಟಿದ್ದಾರೆ. ಅವರ ಮಾತನ್ನು ನೀವು ನಂಬುತ್ತೀರಾ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಶಿಗ್ಗಾವಿಯ ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ. ಸತ್ತ ಹೆಣಗಳ‌ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು…

Read More

ಹಾವೇರಿ : ರೈತರ ಜಮೀನು ಮುಟ್ಟಿದವರು ಯಾರೂ ಕುರ್ಚಿ ಮೇಲೆ ಕೂಡಲು ಆಗುವುದಿಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ‌. ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ವಕ್ಪ್ ನೊಟಿಫಿಕಿಷನ್ ರದ್ದು ಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ರಾಜ್ಯ ಸರ್ಕಾರ ವಕ್ಪ್ ಬೋರ್ಡ್ ಮೂಲಕ ರೈತರಿಗೆ ನೊಟೀಸ್ ನೀಡಿರುವುದನ್ನು ಖಂಡಿಸಿ ಶಿಗ್ಗಾವಿ ಮಂಡಲ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ರ‌್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಶಿಗ್ಗಾವಿ ತಾಲೂಕಿನ ಸರ್ವೆ ನಂಬರ್ 417 ರಲ್ಲಿ ನೂರಾರು ಜನ ಬಡವರಿಗೆ ಸ್ಲಮ್ ಬೋರ್ಡ್ ನಿಂದ ಮನೆ ಕಟ್ಟಲು ಅನುಮತಿ ನೀಡಿದ್ದೇವೆ. ಅದು ವಕ್ಪ್ ಆಸ್ತಿ ಅಂತ ದಾವೆ ಹೂಡಿದ್ದಾರೆ. ಶಿಗ್ಗಾವಿ ಬಡವರಿಗೆ ತಲೆ ಮೇಲೆ ಸೂರು ಇಲ್ಲದಂತ ವ್ಯವಸ್ಥೆ ಈ ವಕ್ಪ್ ಬೋರ್ಡ್ ನಿಂದ ಆಗಿದೆ ಎಂದು ಆರೋಪಿಸಿದರು. ಶಿಗ್ಗಾವಿಯಲ್ಲಿ 220 ಕೆವಿ ವಿದ್ಯುತ್ ಸ್ಟೇಷನ್ ಮಾಡಲು ಹೋದಾಗ ಅದು ವಕ್ಪ್ ಆಸ್ತಿ ಎಂದು…

Read More

ಬೆಂಗಳೂರು: ಛತ್ ಪೂಜಾ ಆಚರಣೆಗಾಗಿ ಮನೆಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಯಶವಂತಪುರ-ದಾನಾಪುರ-ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 06261 ಯಶವಂತಪುರ-ದಾನಾಪುರ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 5, 2024 ರಂದು ಯಶವಂತಪುರದಿಂದ ಬೆಳಿಗ್ಗೆ 7:30 ಕ್ಕೆ ಹೊರಟು, ನವೆಂಬರ್ 7 ರಂದು ದಾನಾಪುರ ನಿಲ್ದಾಣವನ್ನು ಬೆಳಿಗ್ಗೆ 5:30 ಕ್ಕೆ ತಲುಪಲಿದೆ. ರೈಲು ಸಂಖ್ಯೆ 06262 ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 9, 2024 ರಂದು ದಾನಾಪುರದಿಂದ ಸಂಜೆ 6:10 ಕ್ಕೆ ಹೊರಟು, ನವೆಂಬರ್ 11 ರಂದು ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 1:30 ಗಂಟೆಗೆ ಆಗಮಿಸಲಿದೆ. ಈ ರೈಲು ಯಲಹಂಕ ಜಂ, ಧರ್ಮಾವರಂ ಜಂ, ಡೋನ್ ಜಂ, ಕಾಚಿಗುಡ, ಕಾಜಿಪೇಟ್ ಜಂ, ಬಲ್ಹಾರ್ಷಾ, ನಾಗ್ಪುರ ಜಂ, ಇಟಾರ್ಸಿ ಜಂ, ಜಬಲ್ಪುರ್, ಕಟ್ನಿ ಜಂ, ಸತ್ನಾ ಜಂ, ಪ್ರಯಾಗರಾಜ್ ಛೋಕಿ ಜಂಕ್ಷನ್, ಪಂಡಿತ್…

Read More

ನವದೆಹಲಿ: ವರ್ಷಾಂತ್ಯದ ರಜಾದಿನಗಳಿಗಾಗಿ ಭಾರತದಿಂದ ಭೇಟಿ ನೀಡಲು ನೀವು ಕೈಗೆಟುಕುವ ದೇಶವನ್ನು ಹುಡುಕುತ್ತಿದ್ದರೆ, ಮಲೇಷ್ಯಾವನ್ನು ಅನ್ವೇಷಿಸಲು ಡಿಸೆಂಬರ್ ಅದ್ಭುತ ಸಮಯ. ಹಾಗಾದ್ರೆ ನೀವು ಡಿಸೆಂಬರ್ ನಲ್ಲಿ ಟ್ರಿಪ್ ಹೋಗುವ ಪ್ಲಾನ್ ಮಾಡಿದ್ರೇ, ವೀಸಾ ಮುಕ್ತವಾಗಿ ತೆರಳಬಹುದಾದಂತ ಈ ದೇಶಕ್ಕೆ ಭೇಟಿ ನೀಡಿ. ಆ ಬಗ್ಗೆ ಮುಂದೆ ಓದಿ. ಚಳಿಗಾಲದ ತಿಂಗಳುಗಳು ದೇಶದ ಸಾಮಾನ್ಯ ಉಷ್ಣವಲಯದ ಶಾಖದಿಂದ ಸ್ವಾಗತಾರ್ಹ ವಿರಾಮವನ್ನು ತರುತ್ತವೆ, ತಂಪಾದ ಹವಾಮಾನವು ದೃಶ್ಯವೀಕ್ಷಣೆಯನ್ನು ಹೆಚ್ಚು ಆರಾಮದಾಯಕವಾಗಿಸುತ್ತದೆ. ನೀವು ಸಾಂದರ್ಭಿಕ ಮಳೆ ಮಳೆಯನ್ನು ಎದುರಿಸಬಹುದಾದರೂ, ಇವು ಸಂಕ್ಷಿಪ್ತವಾಗಿರುತ್ತವೆ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಎಕಾನಮಿ ವಿಮಾನಗಳು 5,000 ರೂ.ಗಳಿಂದ ಪ್ರಾರಂಭವಾಗುತ್ತವೆ, ಇದು ಮಲೇಷ್ಯಾವನ್ನು ಕರಾವಳಿ ಸ್ಥಳಗಳಿಗೆ ಪ್ರವೇಶಿಸಬಹುದಾದ ಆಯ್ಕೆಯನ್ನಾಗಿ ಮಾಡುತ್ತದೆ. ಕೌಲಾಲಂಪುರದಲ್ಲಿ, ನಗರದ ಸ್ಕೇಪ್ 451 ಮೀಟರ್ ಎತ್ತರದ ಅಪ್ರತಿಮ ಪೆಟ್ರೋನಾಸ್ ಅವಳಿ ಗೋಪುರಗಳಿಂದ ಪ್ರಾಬಲ್ಯ ಹೊಂದಿದೆ. ಆಧ್ಯಾತ್ಮಿಕ ನಿಲುಗಡೆಗಾಗಿ, ಪ್ರಸಿದ್ಧ ಹಿಂದೂ ದೇವಾಲಯವಾದ ಬಟು ಗುಹೆಗಳು ಭೇಟಿ ನೀಡಲೇಬೇಕಾದ ಸ್ಥಳವಾಗಿದೆ. ಪೆಟಲಿಂಗ್ ಸ್ಟ್ರೀಟ್ ನ ಫ್ಲೀ ಮಾರ್ಕೆಟ್ ಮತ್ತು…

Read More