Author: kannadanewsnow09

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಶರಣಾಗತರಾಗಿದ್ದರು. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 3 ಲಕ್ಷ ಸಹಾಯಧನವನ್ನು ಘೋಷಣೆ ಮಾಡಲಾಗಿತ್ತು. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಂದ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮುಂದೆ ಶರಣಾಗತರಾದಂತ 6 ನಕ್ಸಲರನ್ನು ಇಂದು ಬೆಂಗಳೂರಿನ NIA ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇಂತಹ ಆರು ನಕ್ಸಲರಿಗೂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಜೈಲುಪಾಲಾಗಿದ್ದಾರೆ. https://kannadanewsnow.com/kannada/appeal-for-help-from-the-public-may-your-helping-hand-be-to-this-family/ https://kannadanewsnow.com/kannada/state-one-labourer-dies-of-suffocation-while-dumping-chemical-3-critical/

Read More

ಬೆಂಗಳೂರು : 220/66 kV ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ಮಾರ್ಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 12.01.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜ.12ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ ಸೇರಿದಂತೆ ತಾಲ್ಲೂಕಿನ ನಂದಿ, ನಂದಿಕದರಾಸ್, ಬೀಡಗಾನಹಳ್ಳಿ, ನಂದಿಬೆಟ್ಟ, ಸುಲ್ತಾನ್ ಪೇಟೆ, ಸಿಂಗಾಟಕದಿರೇನಹಳ್ಳಿ, ಹೋಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಕೆಳಗಿನ ತೋಟ, ಜಕ್ಕಲಮಡಗು, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. https://kannadanewsnow.com/kannada/veteran-actor-kishore-kumar-appointed-as-ambassador-of-bengaluru-international-film-festival/ https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/

Read More

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಸ್ಯಾಂಡಲ್ ವುಡ್ ಖ್ಯಾತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ  ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು…

Read More

ಬೆಂಗಳೂರು: ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು ಎಂದಿದ್ದಾರೆ. ಬಿಜೆಪಿ ಎಲ್ಲದರಲ್ಲೂ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ಯುಜಿಸಿ ನಿಯಾಮವಳಿಗಳಿಗೆ ತರಲು ಹೊರಟಿರುವ ಬದಲಾವಣೆಯಲ್ಲೂ ಇದೇ ಅಜೆಂಡಾ ಇದೆ. ಗುಜರಾತಿನಲ್ಲಿ ಕುಲಪತಿಗಳ ನೇಮಕಾತಿ ಅಧಿಕಾರ ಮುಖ್ಯಮಂತ್ರಿಯ ಬಳಿಯೇ ಇದೆ. ಬೇರೆ ರಾಜ್ಯಗಳಲ್ಲಿ‌ ಮಾತ್ರ ಇದನ್ನು ವಿರೋಧಿಸುವುದರಲ್ಲಿ ಯಾವ ಅರ್ಥವಿದೆ ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯ ಕಾಂಗ್ರೆಸ್ಸಿ‌ನಲ್ಲಿ ಯಾವ ಸಮಸ್ಯೆಯೂ ಇಲ್ಲ. ಬೆಳಗಾವಿಯ ಜೈ ಸಂವಿಧಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ ಅಷ್ಟೆ. ನಮ್ಮಲ್ಲಿ…

Read More

ಬೆಂಗಳೂರು : ಬಿಜೆಪಿಗರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿಯೇ ಸುಳ್ಳು ಸುದ್ದಿ ಹಬ್ಬಿಸುತ್ತಾ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಗರುಡಾಕ್ಷಿ -ಆನ್ಲೈನ್ ಎಫ್ ಐ ಆರ್ ಉದ್ಘಾಟನೆ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಬಂಡಿಪುರದಲ್ಲಿ ಈಗಾಗಲೇ ರಾತ್ರಿ 9 ರವರೆಗೆ ಸಂಚಾರಕ್ಕೆ ಅವಕಾಶವಿದೆ. ಇದರ ಜೊತೆಗೆ ಎರಡು ರಾಜ್ಯಗಳ ಎರಡು ಬಸ್ ಸಂಚಾರಕ್ಕೆ ಹಿಂದಿನಿಂದಲೂ ಅವಕಾಶವಿದೆ. ಇದಲ್ಲದೆ ಆಂಬುಲೆನ್ಸ್ ಹಾಗೂ ಆರೋಗ್ಯ ನಿಮಿತ್ತ ತುರ್ತು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದೇನೆ. ಆದರೆ ಬಿಜೆಪಿ ಇಲ್ಲ ಸಲ್ಲದ ಆರೋಪ ಮಾಡಿ ಟ್ವೀಟ್ ಮಾಡಿರುವುದು ಅಕ್ಷಮ್ಯ. ಅವರ ಕಾಲದಲ್ಲೂ ರಾತ್ರಿ ಬಸ್ ಸೇವೆ ಇತ್ತು ಎಂದು ತಿಳಿಸಿದ್ದಾರೆ. ನನ್ನನ್ನು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ಬಿಜೆಪಿಗರು ಪ್ರಶ್ನಿಸಿದ್ದಾರೆ, ಕರ್ನಾಟಕದ ಜನತೆಯೆ ಈ ಪ್ರಶ್ನೆಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಖಂಡ್ರೆ ತಿರುಗೇಟು ನೀಡಿದ್ದಾರೆ. ತಾವು ಸಚಿವರಾದ…

Read More

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವಂತ ಆತನ ಚಿಕಿತ್ಸೆಗಾಗಿ ಇಡೀ ಕುಟುಂಬವೇ ಹಣವನ್ನು ಹೊಂದಿಸೋದಕ್ಕೆ ಪರದಾಡುತ್ತಿದೆ. ಸಾರ್ವಜನಿಕರ ಸಹಾಯದ ಹಸ್ತ ಚಾಚುವಂತೆ ಕನ್ನಡ ನ್ಯೂಸ್ ನೌ ಮೂಲಕ ಕೋರಿದೆ. ಕೂಲಿ ಕೆಲಸ ಮಾಡುತ್ತಿದ್ದಂತ ರಮೇಶ್ ಎಂಬುವರು, ಕೆಲಸ ಮುಗಿಸಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಬರುತ್ತಿದ್ದಂತ ವೇಳೆಯಲ್ಲಿ ಹಿಂಬದಿಯಿಂದ ಬಂದಂತ ಬೈಕ್ ಒಂದು ಡಿಕ್ಕಿಯಾಗಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದಂತ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆಗೆ ದುಡಿಯುವ ವ್ಯಕ್ತಿಯಾಗಿದ್ದಂತ ರಮೇಶ್ ಈಗ ಸ್ಪೈನಲ್ ಕಾರ್ಡ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಾದ ತಾಯಿ, ಮತ್ತೊಬ್ಬ ತಂಗಿಯ ಜೀವನ ನಿರ್ವಹಣೆಯು ರಮೇಶ್ ದುಡಿಮೆಯ ಮೇಲೆಯೇ ನಿಂತಿದೆ. ಅಲ್ಲದೇ ತಂಗಿಯ ಇಬ್ಬರು ಮಕ್ಕಳ ಹೊಣೆಹೊತ್ತಿದ್ದರು. ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ರಮೇಶ್ ಗೆ ಆರ್ಥಿಕ ಸಹಾಯ ಬೇಕಿದೆ. ಚಿಕಿತ್ಸೆಗಾಗಿ ಹಣಕಾಸಿನ ನೆರವು ಬೇಕಿದೆ. ನೀವು ಸಹಾಯ ಮಾಡುವುದಾದರೇ ಫೋನ್ ನಂಬರ್ 7259609476 ನಂಬರ್ ಗೆ ಪೋನ್ ಪೇ, ಜಿ ಪೇ ಮಾಡಬಹುದಾಗಿದೆ. ಇದು ರಮೇಶ್ ಅವರ…

Read More

ಶಿವಮೊಗ್ಗ: ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ನಾಟ ಕಡಿತಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಹಾಗೂ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜಂಟಿ ಕಾರ್ಯಾಚರಣೆ ನಡೆಸಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ನಾಟಾ ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಅವರು ಮಾಹಿತಿ ನೀಡಿದ್ದು, ಉಳ್ಳೂರು ವ್ಯಾಪ್ತಿಯ ಅರಣ್ಯಯ ಸರ್ವೇ ನಂಬರ್.5ರಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿದ್ದರ ಬಗ್ಗೆ ಪ್ರಕರಣ ದಾಖಲಿಸಾಗಿತ್ತು. ಈ ಸಂಬಂಧ ಇಲಾಖೆಯಿಂದ ತನಿಖೆಯನ್ನು ಕೈಗೊಳ್ಳಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜೊತೆಗೂಡಿ ಜಂಟಿ ಕಾರ್ಯಾಚರಣೆ ನಡೆಸಿ, ಕಡಿತಲೆ ಮಾಡಿದಂತ ಸಾಗುವಾನಿ ಮರದ ನಾಟ ಹಾಗೂ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಸಾಗುವಾನಿ ಮರಗಳನ್ನು ಕಡಿತಲೆ ಮಾಡಿ ಅಕ್ರಮವಾಗಿ ಸಾಗಿಸಿದಂತ ಆರೋಪದಡಿ ದಾಖಲಾಗಿದ್ದಂತ ದೂರಿನ ಹಿನ್ನಲೆಯಲ್ಲಿ ಆರೋಪಿ ಕಣಕಿ ಗೌಡ್ರು ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪೌರಕಾರ್ಮಿಕರ ಪಿತಾಮಹರಾದ ಶ್ರೀ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಶ್ರೀ ಐ.ಪಿ.ಡಿ ಸಾಲಪ್ಪ ರವರು 1929ರಲ್ಲಿ ಜನಿಸಿದ್ದು, ಭಾರತ ಸ್ವಾತಂತ್ರ್ಯದ ಹೋರಾಟದಲ್ಲಿ ಸಕ್ರಿಯವಾಗಿ ಹೋರಾಟ ನಡೆಸಿಕೊಂಡು ಬಂದವರು. ಬಿನ್ನಿಪೇಟೆಯಿಂದ ಶಾಸಕರಾಗಿ ಕಾರ್ಯನಿರ್ವಹಿಸಿದವರು. ಪೌರಕಾರ್ಮಿಕರ ಜೀವನದ ಸ್ಥಿತಿಗತಿಗಳನ್ನು ಬಹಳ ಹತ್ತಿರದಿಂದ ತಿಳಿದಿದ್ದ ಸಾಲಪ್ಪನವರು 36 ಅಂಶಗಳ ವರದಿಯನ್ನು ಸರ್ಕಾರಕ್ಕೆ ನೀಡಿದರು. ಐ.ಪಿ.ಡಿ.ಸಾಲಪ್ಪ ವರದಿಯ…

Read More

ಸುಕ್ಮಾ : ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಖಚಿತಪಡಿಸಿದ್ದಾರೆ. ಇಂದು ಮುಂಜಾನೆ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆದಿದೆ. ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬೆಳಿಗ್ಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾ ರಿಸರ್ವ್ ಗಾರ್ಡ್, ವಿಶೇಷ ಕಾರ್ಯಪಡೆ ಮತ್ತು ಕೋಬ್ರಾ (ಸಿಆರ್ಪಿಎಫ್ನ ಗಣ್ಯ ಘಟಕವಾದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು. ಆಗಾಗ್ಗೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/ https://kannadanewsnow.com/kannada/state-one-labourer-dies-of-suffocation-while-dumping-chemical-3-critical/

Read More

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಹಲ್ಲೆ ಯತ್ನ ಆರೋಪ ಕುರಿತಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ಇಂದು ಹಲ್ಲೆ ಯತ್ನ ಆರೋಪ ಮಾಡಿದ್ದಂತ ಸಿ.ಟಿ ರವಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಡಿಸೆಂಬರ್.19, 2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಹಲ್ಲೆ ಮಾಡಿದ್ದರ ಸಂಬಂಧ ಸಭಾಪತಿ ಹೊರಟ್ಟಿ ಅವರನ್ನು ಭೇಟಿಯಾಗಿ ಮೂವರು ಪರಿಷತ್ ಸದಸ್ಯರು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇಂದು ಸಿಐಡಿಯಿಂದ ವಿಚಾರಣೆಗೆ ಹಾಜರಾಗುವಂತೆ ಸಿ.ಟಿ ರವಿ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸಿಐಡಿ ಕಚೇರಿಗೆ ಖುದ್ದು ವಿಚಾರಣೆಗೆ ಪರಿಷತ್ ಸದಸ್ಯ ಸಿ.ಟಿ ರವಿ ಹಾಜರಾದರು. ಸಿಐಡಿಯ ತನಿಖಾಧಿಕಾರಿ ಕೇಶವಮೂರ್ತಿ ಮುಂದೆ ವಿಚಾರಣೆಗೆ ಹಾಜರಾದಂತ ಸಿ.ಟಿ ರವಿ ಅವರನ್ನು ಘಟನೆಯ ಸಂಬಂಧ ಪ್ರಶ್ನಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/ https://kannadanewsnow.com/kannada/state-one-labourer-dies-of-suffocation-while-dumping-chemical-3-critical/

Read More