Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಎಲ್ಲೆಡೆ ಆರ್ಭಟಿಸುತ್ತಿದ್ದು, ಧಾರಾಕಾರ ಮಳೆಯಿಂದಾಗಿ ರಾಜ್ಯದಲ್ಲಿ ಇಬ್ಬರು ಬಲಿಯಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯದ ಹಲೆವೆಡೆ ಭಾರೀ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಸಾಗರ ಹಾಗೂ ಕಡೂರು ತಾಲ್ಲೂಕಿನಲ್ಲಿ ಮಳೆಯ ಆರ್ಭಟದಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಯಲ್ಲೂ ವರುಣ ಆರ್ಭಟಿಸುತ್ತಿದ್ದು, ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು, ಕೆರೆ ಕಟ್ಟೆಯಂತಾಗಿವೆ. ಹರಪನಹಳ್ಳಿ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸೇತುವೆ ಬಳಿ ನೀರಿನಲ್ಲಿ ಕೊಚ್ಚು ಹೋಗುತ್ತಿದ್ದಂತ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ.
ಬೆಂಗಳೂರು: ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು. ವಿವಿಧ ವೈದ್ಯ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವರು, ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲಾ ಆಯಾನಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವೈದ್ಯಕೀಯ ಸಂಘಟನೆಯವರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಪಡೆಯಲ್ಲಿರಲಿದ್ದಾರೆ ಎಂದು ತಿಳಿಸಿದರು. ಇತ್ತೀಚೆಗೆ ಕೋಲ್ಕತ್ತಾ ಘಟನೆ ದೇಶದ ಗಮನ ಸೆಳೆದಿದೆ.…
ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರದಲ್ಲೇ 5,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಲಾಗುವುದು ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1825875310333603981 ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1825863905236631657 ಮಕ್ಕಳಿಗೆ ಅನುಕೂಲ ಕಲ್ಪಿಸುವ…
ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕಮಿಟಿ ಆಫ್ ಇಂಡಿಯಾದ (Paris Paralympic Committee of India -PCI) ಉಪಾಧ್ಯಕ್ಷ ಸತ್ಯ ಪ್ರಕಾಶ್ ಸಾಂಗ್ವಾನ್ ( Satya Prakash Sangwan ) ಅವರನ್ನು ಮುಂಬರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಗಾಗಿ ಭಾರತೀಯ ತಂಡದ ಚೆಫ್ ಡಿ ಮಿಷನ್ ಆಗಿ ಹೆಸರಿಸಲಾಗಿದೆ. ಏತನ್ಮಧ್ಯೆ, ಭಾಗ್ಯಶ್ರೀ ಜಾಧವ್ ಮತ್ತು ಸುಮಿತ್ ಆಂಟಿಲ್ ಅವರನ್ನು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ಗೆ ಭಾರತದ ಧ್ವಜಧಾರಿಗಳಾಗಿ ಹೆಸರಿಸಲಾಗಿದೆ. ಇದು ಭಾರತಕ್ಕೆ ವಿಶೇಷ ಕ್ಷಣವಾಗಿದೆ, ಏಕೆಂದರೆ ಇದು 84 ಕ್ರೀಡಾಪಟುಗಳ ದೇಶದ ಅತಿದೊಡ್ಡ ತಂಡವಾಗಿದೆ. ಇದು ಟೋಕಿಯೊದಲ್ಲಿ ಸ್ಪರ್ಧಿಸಿದ 54 ಕ್ರೀಡಾಪಟುಗಳಿಗಿಂತ ಗಮನಾರ್ಹ ಹೆಚ್ಚಳವಾಗಿದೆ. ಈ ಜವಾಬ್ದಾರಿಯನ್ನು ವಹಿಸಿರುವುದು ದೊಡ್ಡ ಗೌರವವಾಗಿದೆ. ಪ್ಯಾರಾಲಿಂಪಿಕ್ಸ್ನಲ್ಲಿ ನಮ್ಮ ಕ್ರೀಡಾಪಟುಗಳು ಯಶಸ್ವಿಯಾಗಲು ಮತ್ತು ಭಾರತವನ್ನು ಹೆಮ್ಮೆಪಡುವಂತೆ ಮಾಡಲು ಅಗತ್ಯವಿರುವ ಎಲ್ಲವನ್ನೂ ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಸಂಗ್ವಾನ್ ಪ್ರಕಟಣೆಯ ನಂತರ ಮಾಧ್ಯಮಗಳಿಗೆ ತಿಳಿಸಿದರು. ಅವರು ಪ್ಯಾರಾಲಿಂಪಿಕ್ಸ್ ಚಳವಳಿಯಲ್ಲಿ ಒಂದು ದಶಕದ ಸಮರ್ಪಿತ ಸೇವೆ ಮತ್ತು ಅನುಭವವನ್ನು ತಮ್ಮೊಂದಿಗೆ…
ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ಸಾಮಾಜಿಕ ನ್ಯಾಯದ ಪರವಾದ ಸಮಾಜ ನಿರ್ಮಾಣಕ್ಕೆ ನಾವು ಬದ್ದರಾಗಿದ್ದೇವೆ. ಮನುಷ್ಯರಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣ ಗುರುಗಳು ಹೇಳಿದರು. ಅದರಂತೆ ಪ್ರತಿಯೊಬ್ಬರೂ ಅನುಸರಿಸಿ ಬಾಳಲು ಪ್ರಯತ್ನಿಸಬೇಕು ಎಂದು ಅವರು ಕರೆ ನೀಡಿದರು. ನಾರಾಯಣ ಗುರು ಅವರು ಈಡಿಗ ಜನಾಂಗದಲ್ಲಿ ಜನಿಸಿದ್ದರೂ, ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ಧ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬ್ರಹ್ಮಶ್ರೀ…
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಇಂದಿನಿಂದ ಬಿಎಲ್ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ತಿಳಿಸಿದರು. ನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಸಂಬಂಧ ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನಿಂದ ಮತದಾರರ ಪಟ್ಟಿಯ ಎಲ್ಲಾ ಕಾರ್ಯಚಟುವಟಿಕೆಗಳು ಆರಂಭವಾಗಿರುತ್ತದೆ. ಪ್ರತಿ ವರ್ಷ 1ನೇ ಜನವರಿಗೆ 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸಿ ಪಟ್ಟಿ ತಯಾರಿಸಿ ಪ್ರಕಟಣೆ ಮಾಡುತ್ತೇವೆ. ಅದರಂತೆ ಇಂದಿನಿಂದ 18ನೇ ಅಕ್ಟೋಬರ್ ವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನಿಡಿ ಸಮೀಕ್ಷೆ ನಡೆಸಲಿದ್ದಾರೆ. 29ನೇ ಅಕ್ಟೋಬರ್ 2024 ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಗೊಳಿಸಲಿದ್ದು, 06ನೇ ಜನವರಿ 2025 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಗೊಳಿಸಲಾಗುವುದು ಎಂದು ಹೇಳಿದರು. ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಸಂಬಂಧ ಮನೆ-ಮನೆ ಸಮೀಕ್ಷೆ ವೇಳೆ ಬೂತ್…
ರಾಶೀಗಳು (12) ಮೇಷ, ವೃಷಭ, ಮಿಥುನ, ಕರ್ಕಾಟಕ ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ. ಋತುಗಳು (6) ಮತ್ತು ಮಾಸ (12) ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) , ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿಜ-ಕಾರ್ತಿಕ), ಹೇಮಂತ (ಮಾರ್ಗಶಿರ-ಪುಷ್ಯ), ಶಿಶಿರ (ಮಾಘ-ಫಾಲ್ಗುಣ). ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ…
ಮಂಡ್ಯ : ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿ ಎಂದರೇ ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಾಪಂ ಇಓ ರಾಮಲಿಂಗಯ್ಯ ಅವರು ಸ್ಮರಿಸಿದರು. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪುರಸಭಾ ಸಿಡಿಎಸ್ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಮದ್ದೂರು ತಾಪಂ ಇಓ ರಾಮಲಿಂಗಯ್ಯ ಹಾಗೂ ಉಪ ತಹಶೀಲ್ದಾರ್ ಸೋಮಶೇಖರ್ ಉದ್ಘಾಟಿಸಿ, ಬಳಿಕ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಅರಸು ಅವರು ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ಸಹ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ಶ್ರಮಿಸಿದವರು. ಉಳುವವನೇ ಭೂಮಿಯ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರು ನೀಡಿದ…
ಮಂಡ್ಯ : ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಮಂಗಳವಾರ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮದ್ದೂರು ಪಟ್ಟಣದ ಕೊಲ್ಲಿ ವೃತ್ತದಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ತಾಲೂಕು ಕಚೇರಿ ಮುಂಭಾಗ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಕೃತಿ ದಹಿಸಿದ ಕಾರಣ ಕೆಲಕಾಲ ಹೆದ್ದಾರಿ ಸಂಚಾರ ತಡೆದು, ಪ್ರಧಾನಮಂತ್ರಿ ನರೇಂದ್ರಮೋದಿ, ಅಮಿತ್ ಷಾ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಜನಪರವಾಗಿ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರದ ಕೈಗೊಂಬೆಯಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ರಾಜಕೀಯ ದುರುದ್ದೇಶದಿಂದ…
ಆಯುರ್ವೇದ ವೈದ್ಯರು ನಕಲಿ ವೈದ್ಯರೇ? ನಿಜವಾಗಿಯೂ ಅಲ್ಲ, ಇತ್ತೀಚಿನ ಕೆಲವು ದಿನಗಳಿಂದ ಆಯುಷ್ ವೈದ್ಯರು ನಕಲಿ ವೈದ್ಯರು ಎಂಬಂತೆ ಬಿಂಬಿಸಲಾಗುತ್ತಿದೆ, ಇದರಿಂದ ಜನಸಾಮಾನ್ಯರಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿದೆ.ಆಯುರ್ವೇದ ವೈದ್ಯರಾಗಲು ಅವರ ಕಲಿಕಾ ಹಂತಗಳು ಹಾಗು ಅವರು ಕಲಿಯುವ ವಿಷಯಗಳ ಬಗ್ಗೆ ಮಾಹಿತಿಗಾಗಿ ಮುಂದೆ ಓದಿ. 10 ನೇ ತರಗತಿ ಮುಗಿಸಿದ ನಂತರ ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ದುಕೊಂಡ ವಿದ್ಯಾರ್ಥಿಗಳು ಯಾವುದೇ ವೈದ್ಯಕೀಯ ಕೋರ್ಸ್ ಮಾಡಲು ಅರ್ಹರಿರುತ್ತಾರೆ.ಇದರಲ್ಲಿ ಆಯುರ್ವೇದ ಶಾಸ್ತ್ರ(ವಿಜ್ಞಾನ) ವು ಒಳಗೊಂಡಿದೆ. ನಂತರದಲ್ಲಿ ಆ ವಿದ್ಯಾರ್ಥಿಗಳು ಮೆಡಿಕಲ್ ಕೋರ್ಸ್ಗಗೆ ಅಂದರೆ MBBS /Ayush/BDS ಗೆ ಸೇರಲು ಪ್ರವೇಶ ಪರೀಕ್ಷೆಯಾದ ನೀಟ್ (National Eligibility cum Entrance Test) ಪರೀಕ್ಷೆಯಲ್ಲಿ ಕಡ್ಡಾಯವಾಗಿ ಅರ್ಹತಾ ಅಂಕಗಳನ್ನು ಗಳಿಸಬೇಕಾಗುತ್ತದೆ. ನಂತರ ಕೌನ್ಸಿಲಿಂಗ್ ಮುಖೇನ ವಿದ್ಯಾರ್ಥಿಗಳ ರ್ಯಾಂಕ್ ಗಳ ಆಧಾರಿಸಿ ಮೆಡಿಕಲ್ ಕಾಲೇಜಿನಲ್ಲಿ ಪ್ರವೇಶವನ್ನು ಪಡೆಯುತ್ತಾರೆ. ಮೇಲಿನ ಹಂತವು ಎಲ್ಲಾ ವೈದ್ಯಕೀಯ ಕೋರ್ಸ್ ಗಳಿಗೆ ಅನ್ವಯಿಸುತ್ತದೆ. ನಂತರದಲ್ಲಿ ಅಭ್ಯರ್ಥಿಯು ಆಯ್ದುಕೊಂಡ ಕೋರ್ಸಗಳಿಗೆ ಅನುಗುಣವಾಗಿ ಅವರ ಪಠ್ಯಕ್ರಮಗಳು ಅಥವಾ…