Author: kannadanewsnow09

ಬೆಂಗಳೂರು: ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.‌ ವಿವಿಧ ವೈದ್ಯ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವರು, ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲಾ ಆಯಾನಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವೈದ್ಯಕೀಯ ಸಂಘಟನೆಯವರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಪಡೆಯಲ್ಲಿರಲಿದ್ದಾರೆ ಎಂದು ತಿಳಿಸಿದರು. ಇತ್ತೀಚೆಗೆ ಕೋಲ್ಕತ್ತಾ ಘಟನೆ ದೇಶದ ಗಮನ ಸೆಳೆದಿದೆ.…

Read More

ಬೆಂಗಳೂರು: ಇನ್ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು, ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1825892930432778556 ಟೊಯೊಟಾ ಕಿರ್ಲೊಸ್ಕರ್‌ ಮೋಟರ್ಸ್‌ ಲಿಮಿಟೆಡ್‌ನ (ಟಿಕೆಎಂಎಲ್‌) ಇನೊವಾ ಹೈಕ್ರಾಸ್‌ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟೆಟ್ಸು ಇಂಡಿಯಾ ಆಟೊ ಪಾರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ಇಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ. ಬೃಹತ್ ಮತ್ತು…

Read More

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಆಸಕ್ತ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002. ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಆಗಸ್ಟ್ 31 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ www.sahithyaacademy.karnataka.gov.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/madikeri-power-supply-will-be-disrupted-in-these-areas-of-the-district-tomorrow/ https://kannadanewsnow.com/kannada/taiwans-best-group-to-invest-rs-200-crore-in-state-create-5000-jobs/

Read More

ಮಡಿಕೇರಿ : ಶ್ರೀಮಂಗಲ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್4 ಬಿರುನಾಣಿ ಫೀಡರ್‍ನ ನಿರ್ವಹಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್, 21 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಿರುನಾಣಿ, ಪೂಕೊಳ, ಬಾಡಗರಕೇರಿ ಹಾಗೂ ತೆರಾಲು ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಶನಿವಾರಸಂತೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-3 ಶನಿವಾರಸಂತೆ ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 21 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶನಿವಾರಸಂತೆ, ಗುಡುಗಳಲೆ, ಮಾದ್ರೆ, ಗುಂಡುರಾವ್ ಬಡಾವಣೆ, ಚಿಕ್ಕಕೊಳತ್ತೂರು, ಅಪ್ಪಶೆಟ್ಟಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು…

Read More

ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್‌ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ತೈವಾನ್ ಮೂಲದ ಕಂಪನಿಯ ಈ ಯೋಜನೆಯಿಂದ 5,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ ಮೂರು ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತಹಂತವಾಗಿ ಬಂಡವಾಳ ಹೂಡಲಿದೆ ಎಂದು ಅವರು ವಿವರಿಸಿದ್ದಾರೆ. ಬೆಸ್ಟೆಕ್ ಕಂಪನಿಯು ಅಡಾಪ್ಟರ್, ಸಿ-ಪಿನ್, ಇ.ವಿ. ಮತ್ತು ಲ್ಯಾಪ್‌ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟದೊಂದಿಗೆ ತಯಾರಿಸಲಿದೆ. ಈ ಮೂಲಕ ಕಂಪನಿಯು ವಾರ್ಷಿಕವಾಗಿ 2,500 ಕೋಟಿ ರೂಪಾಯಿ ವಹಿವಾಟು ನಡೆಸಲಿದೆ ಎಂದು…

Read More

ಬೆಂಗಳೂರು: ಪ್ರಸಕ್ತ(2024-25) ಸಾಲಿಗೆ ಕಾಫಿ ಮಂಡಳಿ ವತಿಯಿಂದ ಕಾಫಿ ತೋಟದ ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ ಕೆರೆ, ತೆರೆದ ಬಾವಿ, ರಿಂಗ್ ಬಾವಿ, ಸ್ಪ್ರಿಂಕ್ಲರ್ ಇರಿಗೇಷನ್, ಹನಿ ನೀರಾವರಿಗೆ-ವಾಟರ್ ಅಗ್‍ಮೆಂಟೇಷನ್, ಕಾಫಿಗೋಡೌನ್, ಕಾಫಿ ಕಣ, ಪಲ್ಪರ್ ಯುನಿಟ್, ಇಕೋ ಪಲ್ಪರ್, ಮೆಕಾನಿಕಲ್ ಡ್ರೈಯರ್, ಸೋಲಾರ್ ಟನೆಲ್ ಡ್ರೈಯರ್-ಕ್ವಾಲಿಟಿ ಅಪ್‍ಗ್ರೇಡೇಷನ್, ಬಿಳಿಕಾಂಡ ಕೊರಕದ ಹತೋಟಿಗಾಗಿ ನಾನ್ ವೋವನ್ ಪ್ಯಾಬ್ರಿಕ್ ರ್ಯಾಪಿಂಗ್ ಮೆಟಿರಿಯಲ್, ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಮತ್ತಿತರ ಕಾರ್ಯ ಚಟುವಟಿಕೆಗಳಿಗೆ ಸಹಾಯಧನದ ಯೋಜನೆಯನ್ನು ಅನುಮೋದಿಸಲಾಗಿದೆ. 25ಎಚ್‍ಎ(61.75 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ತಮ್ಮ ತೋಟವನ್ನು ಅಭಿವೃದ್ಧಿ ಪಡಿಸಲಿಚ್ಚಿಸುವ ಅರ್ಹ ಕಾಫಿ ಬೆಳೆಗಾರರು, ಈ ಎಲ್ಲಾ ಚಟುವಟಿಕೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾಫಿ ಮಂಡಳಿಯ ಉಪ ನಿರ್ದೇಶಕರು(ವಿಸ್ತರಣೆ) ತಿಳಿಸಿದ್ದಾರೆ. https://kannadanewsnow.com/kannada/bengaluru-power-outages-in-these-areas-on-august-22/ https://kannadanewsnow.com/kannada/centre-agrees-to-provide-rice-to-karnataka-under-annabhagya-scheme/…

Read More

ಬೆಂಗಳೂರು: ದಿನಾಂಕ 22.08.2024 (ಗುರುವಾರ) ಬೆಳಿಗ್ಗೆ 10:00 ಗಂಟೆಯಿxದ ಮದ್ಯಾಹ್ನ 03:00 ಗಂಟೆಯವರೆಗೆ “ಸರ್ ಎಮ್.ವಿ 220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆಗಸ್ಟ್.22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ರ‍್ಚ್ ಸ್ಟ್ರೀಟ್, ಕಸ್ತರ‍್ಬಾ ರಸ್ತೆ, ಸೇಂಟ್ ಮರ‍್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಆ.22ರಂದು ಈ ಏರಿಯಾಗಳಲ್ಲಿಯೂ ಪವರ್ ಕಟ್  ದಿನಾಂಕ 22.08.2024 (ಗುರುವಾರ) ಬೆಳಿಗ್ಗೆ 10:30 ಗಂಟೆಯಿAದ ಮಧ್ಯಾಹ್ನ 04:00 ಗಂಟೆಯವರೆಗೆ ‘66/11ಕೆ.ವಿ ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೆಚ್.ಬಿ.ಆರ್. 1ನೇ ಬ್ಲಾಕ್,…

Read More

ಬೆಂಗಳೂರು: ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಬೇಕಿರುವಂತ ಅಕ್ಕಿ ಕೊಡುತ್ತಿಲ್ಲ ಎನ್ನುವ ಕಾರಣಕ್ಕಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ಬದಲಾಗಿ ಹಣವನ್ನೇ ನೀಡಲಾಗುತ್ತಿತ್ತು. ಆದರೇ ಈಗ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವಂತ ಅಕ್ಕಿ ನೀಡಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಶೀಘ್ರವೇ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಹಣದ ಬದಲಾಗಿ ದೊರೆಯುವ ಸಾಧ್ಯತೆ ಇದೆ. ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನ ಭಾಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಅಗತ್ಯವಾದ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ ಆದೇಶ ನೀಡಿದ ಕೂಡಲೇ ಕೇಂದ್ರವು ಅಗತ್ಯ ಪ್ರಮಾಣದ ಅಕ್ಕಿಯನ್ನು ಒದಗಿಸುತ್ತದೆ ಎಂದು ದೃಢಪಡಿಸಿದ್ದಾರೆ. ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ ಅಕ್ಕಿಯನ್ನು ಪೂರೈಸುವ ಇಚ್ಛೆಯನ್ನು ಕೇಂದ್ರ…

Read More

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ…

Read More

ನವದೆಹಲಿ: ಎಸ್ಸಿ/ಎಸ್ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ ಬಚಾವೋ ಸಂಘರ್ಷ ಸಮಿತಿ ಆಗಸ್ಟ್ 21 ರಂದು (ಬುಧವಾರ) ಭಾರತ್ ಬಂದ್ಗೆ ಕರೆ ನೀಡಿದೆ. ಹಾಗಾದ್ರೇ ಈ ಸಂದರ್ಭದಲ್ಲಿ ಏನಿರುತ್ತೆ.? ಏನಿರಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಮುಷ್ಕರಕ್ಕೆ ರಾಜಸ್ಥಾನದ ಎಸ್ಸಿ / ಎಸ್ಟಿ ಗುಂಪುಗಳಿಂದ ಬೆಂಬಲ ದೊರೆತಿದೆ. ವ್ಯಾಪಕ ಭಾಗವಹಿಸುವಿಕೆಯನ್ನು ಕಾಣುವ ನಿರೀಕ್ಷೆಯಿದೆ. ಬುಧವಾರದ ಬಂದ್ ಎದುರಿಸಲು ಕಾನೂನು ಜಾರಿ ಸಂಸ್ಥೆಗಳು ಸಜ್ಜಾಗಿವೆ. ಪ್ರತಿಭಟನೆಯ ಹಿಂದಿನ ಕಾರಣವೇನು? ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳ ಉಪ-ವರ್ಗೀಕರಣವು ಎಸ್ಸಿ / ಎಸ್ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ತಿಳಿಸಿದೆ. 2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಸ್ಟೇಟ್ ಆಫ್ ಆಂಧ್ರಪ್ರದೇಶ ಪ್ರಕರಣದಲ್ಲಿ ಮೀಸಲಾತಿ ಉದ್ದೇಶಕ್ಕಾಗಿ ಎಸ್ಸಿ/ಎಸ್ಟಿ ಉಪ ವರ್ಗೀಕರಣ ಸಾಧ್ಯವಿಲ್ಲ ಎಂದು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಆಗಸ್ಟ್ 1ರಂದು ರದ್ದುಗೊಳಿಸಿತ್ತು. ಈ ನಿರ್ಧಾರವು ಮೀಸಲಾತಿ…

Read More