Author: kannadanewsnow09

ಬೆಂಗಳೂರು: ಕರ್ನಾಟಕಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಗಣಿಯಲ್ಲಿ ಐವರಿಗೆ ಝೀಕಾ ವೈರಸ್ ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಸಾರ್ವಜನಿಕರು ಝಿಕಾ ವೈರಸ್ ಬಗ್ಗೆ ಭಯಬೇಡ. ಕೆಲ ಎಚ್ಚರಿಕೆ ಇರಲಿ ಅಂತ ಆರೋಗ್ಯ ಇಲಾಖೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಝಿಕಾ ವೈರಸ್ ಲಕ್ಷಣಗಳು ಅಂದ್ರೆ ಅತಿಯಾದ ತೆಲೆನೋವು, ಕೆಂಪಾದ ಕಣ್ಣು, ಜ್ವರ ಹಾಗೂ ಮೈಯಲ್ಲಿ ಗಂಧೆಗಳು ಉಂಟಾಗುತ್ತವೆ ಎಂದು ತಿಳಿಸಿದೆ. ಈ ಲಕ್ಷಣಗಳು ಕಂಡು ಬಂದಲ್ಲಿ, ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಅದು ಝೀಕಾ ವೈರಸ್ ಹೌದೋ ಅಲ್ಲವೋ ಎನ್ನುವ ಬಗ್ಗೆಯೂ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದೆ. https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/ https://kannadanewsnow.com/kannada/congress-worker-dies-of-cardiac-arrest-during-press-conference-in-bengaluru/

Read More

ಅಮೇರಿಕಾ: ಹಗಲಿನ ದೂರದರ್ಶನ ಭೂದೃಶ್ಯದಲ್ಲಿ ಕ್ರಾಂತಿಯನ್ನುಂಟು ಮಾಡಿದ ಪ್ರವರ್ತಕ ಟಿವಿ ಟಾಕ್ ಶೋ ನಿರೂಪಕ ಫಿಲ್ ಡೊನಾಹ್ಯೂ ತಮ್ಮ 88 ನೇ ವಯಸ್ಸಿನಲ್ಲಿ ನಿಧನರಾದರು. ದೀರ್ಘಕಾಲದ ಅನಾರೋಗ್ಯದ ನಂತರ ಡೊನಾಹ್ಯೂ ಭಾನುವಾರ ರಾತ್ರಿ ಮನೆಯಲ್ಲಿ ನಿಧನರಾದರು ಎಂದು ಅವರ ಕುಟುಂಬ ಆಗಸ್ಟ್ 19 ರ ಸೋಮವಾರ ದೃಢಪಡಿಸಿದೆ. ಡೊನಾಹ್ಯೂ ಅವರಿಗೆ 88 ವರ್ಷ ವಯಸ್ಸಾಗಿತ್ತು ಮತ್ತು ದೀರ್ಘಕಾಲದ ಅನಾರೋಗ್ಯದ ನಂತರ ಶಾಂತಿಯುತವಾಗಿ ನಿಧನರಾದರು ಎಂದು ಅವರ ಕುಟುಂಬ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 44 ವರ್ಷದ ಪತ್ನಿ ಮಾರ್ಲೊ ಥಾಮಸ್, ಸಹೋದರಿ, ಮಕ್ಕಳು, ಮೊಮ್ಮಕ್ಕಳು ಮತ್ತು ಅವರ ಪ್ರೀತಿಯ ಗೋಲ್ಡನ್ ರಿಟ್ರೀವರ್ ಚಾರ್ಲಿ ಅವರೊಂದಿಗೆ ಪತ್ರಕರ್ತ ಫಿಲ್ ಡೊನಾಹ್ಯೂ ಭಾನುವಾರ ರಾತ್ರಿ ಮನೆಯಲ್ಲಿ ನಿಧನರಾದರು. ಅವರ ಸಾವಿಗೆ ಮೂರು ತಿಂಗಳ ಮೊದಲು, ಪ್ರಸಾರ ಮತ್ತು ಸಾರ್ವಜನಿಕ ಸಂವಾದಕ್ಕೆ ನೀಡಿದ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಅಧ್ಯಕ್ಷ ಜೋ ಬೈಡನ್ ಡೊನಾಹ್ಯೂ ಅವರಿಗೆ ಪ್ರೆಸಿಡೆನ್ಷಿಯಲ್ ಮೆಡಲ್ ಆಫ್ ಫ್ರೀಡಂ ನೀಡಿ ಗೌರವಿಸಿದರು. ಅವರ ವೃತ್ತಿಜೀವನದ ಉತ್ತುಂಗದಲ್ಲಿ,…

Read More

ಬೆಂಗಳೂರು: ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಎನ್ಎಂಎಂಎಸ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್.5 ಕೊನೆಯ ದಿನವಾಗಿದೆ. NMMS ಪರೀಕ್ಷೆಯನ್ನು 2024ನೇ ಡಿಸೆಂಬರ್‌ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ…

Read More

ಬೆಂಗಳೂರು: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಮಣ್ಣು ಕುಸಿದಿತ್ತು. ಇಂದು ಈ ಮಣ್ಣುನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು, ನಾಳೆಯಿಂದ ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭಿಸಲಾಗುತ್ತದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಹಳಿಯಲ್ಲಿನ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿ ಎಲ್ಲಾ ರೈಲು ಕಾರ್ಯಾಚರಣೆಗಳಿಗೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದಿದೆ. ನಾಳೆಯಿಂದ ಈ ಮಾರ್ಗದಲ್ಲಿ ಈ ರೈಲುಗಳ ಸಂಚಾರ ಪುನರಾರಂಭ * ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ * ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ * ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ * ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ * ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್…

Read More

ಶಿವಮೊಗ್ಗ: ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧದ ಹಗರಣದ ಸಂದರ್ಭದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದಾಗ ನೀಡಲಿಲ್ಲ. ಈಗ ಬಿಜೆಪಿ ಏಜೆಂಟ್ ರೀತಿಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದಾರೆ. ಪಿಎಸ್ಐ ಹಗರಣದ ತನಿಖೆಯಾದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ. ಅದರಲ್ಲಿ ಎರಡು ಮಾತಿಲ್ಲ ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ಪಿಎಸ್ಐ ಹಗರಣದ ತನಿಖೆ ಮಾಡಿದ್ರೆ ವಿಜಯೇಂದ್ರ ಜೈಲಿಗೆ ಹೋಗ್ತಾರೆ. ವಿಜಯೇಂದ್ರ ನೀವು ಸಹ ಜೈಲಿಗೆ ಹೋಗ್ತೀರ. ನಿಮ್ಮ ಅಣ್ಣನೂ ಜೈಲಿಗೆ ಹೋಗ್ತಾರೆ ನೋಡ್ತಾ ಇರಿ ಎಂಬುದಾಗಿ ಹೇಳಿದರು. ನಿಮ್ಮ ಹಗರಣವನ್ನು ತೆಗಿತೀವಿ. ನಿಮ್ಮ ಹಗರಣವನ್ನು ಬಿಡುವುದಿಲ್ಲ. ರಾಜ್ಯಪಾಲರ ಮನೆ ಮುತ್ತಿಗೆ ಹಾಕದೇ ಬಿಡುವುದಿಲ್ಲ ಎಂಬುದಾಗಿ ಶಿವಮೊಗ್ಗದಲ್ಲಿ ಶಾಸಕ ಬೇಳೂರು ಗೋಪಾಲ ಕೃಷ್ಣ ಅವರು ಗುಡುಗಿದರು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/mla-belur-gopalakrishna-accuses-governor-of-defiance-of-bjp-agent/ https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/ https://kannadanewsnow.com/kannada/congress-worker-dies-of-cardiac-arrest-during-press-conference-in-bengaluru/

Read More

ಶಿವಮೊಗ್ಗ: ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ರಾಜ್ಯಪಾಲರಿಗೆ ಧಿಕ್ಕಾರ, ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯಪಾಲರ ನಡೆಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ರಾಜ್ಯಪಾಲರಿಗೆ ಗೌರವ ತರಲ್ಲ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿದ್ದಾರೆ. ಅವರಿಗೆ ಧಿಕ್ಕಾರವನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿತ್ತು. ಆದರೇ ಈವರೆಗೆ ಕೊಟ್ಟಿಲ್ಲ. ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡಲು ನಿಮಗೆ ಹಕ್ಕಿಲ್ಲ. ರಾಜ್ಯಪಾಲರೇ ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಗರಂ ಆದರು.…

Read More

ನವದೆಹಲಿ: ಯುದ್ಧಪೀಡಿತ ಉಕ್ರೇನ್ ಗೆ ಆಗಸ್ಟ್.23ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಲ್ಲದೇ ಆಗಸ್ಟ್.21ರಂದು ಪೋಲೆಂಡ್ ಗೂ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದಾಗಿ ಪಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 23 ರ ಶುಕ್ರವಾರ ಉಕ್ರೇನ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪಶ್ಚಿಮ ಕಾರ್ಯದರ್ಶಿ ತನ್ಮಯ ಲಾಲ್ ಹೇಳಿದ್ದಾರೆ. ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ 30 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಉಕ್ರೇನ್ ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎಂಬುದು ಒಂದು ಹೆಗ್ಗುರುತು ಮತ್ತು ಐತಿಹಾಸಿಕ ಭೇಟಿಯಾಗಿದೆ. ಈ ಭೇಟಿಯು ನಾಯಕರ ನಡುವಿನ ಇತ್ತೀಚಿನ ಉನ್ನತ ಮಟ್ಟದ ಸಂವಾದಗಳನ್ನು ನಿರ್ಮಿಸುತ್ತದೆ ಎಂದು ತಿಳಿಸಿದ್ದಾರೆ. https://twitter.com/ANI/status/1825515126205952268 ವಿದೇಶಾಂಗ ಸಚಿವಾಲಯದ ಪಶ್ಚಿಮ ಕಾರ್ಯದರ್ಶಿ ತನ್ಮಯ ಲಾಲ್ ಮಾತನಾಡಿ, “ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ…

Read More

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564 ಮನೆಯಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರೂ ಫಲ ಸಿಗುತ್ತಿಲ್ಲ,…

Read More

ಬೆಂಗಳೂರು : “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು. ಮುಖ್ಯಮಂತ್ರಿಗಳ ವಿರುದ್ಧದ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳ ಹುನ್ನಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು. “ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ…

Read More

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ. ಅವರು ಸುಮಾರು 72 ದಿನಗಳ ಬಳಿಕ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ರಂದು ವಿಚಾರಣೆ ನಡೆಸಲಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬೆಂಗಳೂರಿಗೆ ಕರೆತಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಆತನನ್ನು ಕೆಂಗೇರಿ ಬಳಿಯ ಶೆಡ್ ಒಂದರಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಮೋರಿಗೆ ಎಸೆದಿತ್ತು. ಮೋರಿಯಲ್ಲಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ನಂತ್ರ, ತನಿಖೆಗೆ ಇಳಿದ ಬಳಿಕ ನಟ ದರ್ಶನ್ ಅಂಡ್ ಗ್ಯಾಂಗ್ ಇಡೀ ಕೃತ್ಯ ಬಯಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ತೀರ್ಪಿನ ಅನುಸಾರ ಜೈಲಿಗೆ ಕಳುಹಿಸಿದ್ದರು. ಸದ್ಯ ಕೇಸ್ ಚಾರ್ಜ್ ಶೀಟ್ ಸಲ್ಲಿಕೆಯ ಹಂತದಲ್ಲಿದೆ. ಈ ವೇಳೆಯಲ್ಲೇ 72 ದಿನಗಳ…

Read More