Author: kannadanewsnow09

ಬೆಂಗಳೂರು :- ಸಚಿವ ಸಂಪುಟ ಪುನರ್ ರಚನೆ ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿವಾದಾತ್ಮಕ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದ ಆಶಯಗಳು, ಸಂವಿಧಾನದಲ್ಲಿ ಪ್ರತಿಯೊಂದು ಸಮುದಾಯಗಳಿಗೆ ಮತ್ತು ಧರ್ಮಗಳಿಗೆ ಕೊಟ್ಟಿರುವ ಹಕ್ಕು ಮತ್ತು ಅವಕಾಶಗಳನ್ನು ಅವರು ಸರಿಯಾಗಿ ನೋಡಿಕೊಂಡಿಲ್ಲ. ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ನಾವು ಮಾತನಾಡುವುದಾಗಲಿ ಅಥವಾ ಕ್ರಮ ಮಾಡುವುದು ಸಾದುವಲ್ಲ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಯಾರು ಮಾತನಾಡಬಾರದು ಎಂದು ಹೇಳಿದರು. ಎರಡು ಗ್ಯಾರಂಟಿ ಯೋಜನೆ ನಿಲ್ಲಿಸುವಂತೆ ಶಾಸಕ ಗವಿಯಪ್ಪ‌ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು…

Read More

ವಿಜಯಪುರ: ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತಂತೆ ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನು, ಜನಸಾಮಾನ್ಯರಿಗೂ ಒಂದೇ ಕಾನೂನು. ಸ್ವಾಮೀಜಿಯವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಇಂತಹ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದರು‌. ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ ನಾನು ಕರ್ನಾಟಕದ ಮಂತ್ರಿಯಾಗಿದ್ದರೂ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಈಗಲೂ ಸಕ್ರಿಯವಾಗಿರುವೆ. ಮಂತ್ರಿಯಾಗಿರುವ ಕಾರಣ ಕೆಲಸದ ಒತ್ತಡದಿಂದಾಗಿ ಮೀಸಲಾತಿ ಹೋರಾಟದ ಒಂದೆರಡು ಸಭೆಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ನನ್ನ ತಮ್ಮ ಹಾಗೂ ನನ್ನ ಮಗ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದರು. ಪಂಚಮಸಾಲಿ ಸಮಾಜ ಸದಾ ನನ್ನೊಂದಿಗಿದೆ. ನಾನು…

Read More

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ ಕಾರ್ಯಕರ್ತೆಯರು ಮತ್ತು 448 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ, ಗ್ರಾಮ ಪಂಚಾಯತ್, ಮಹಾನಗರಪಾಲಿಕೆ, ನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯ್ತಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣಾ ಅರ್ಜಿಗಳನ್ನು ದಿ: 04-12-2024 ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾ ಕಚೇರಿಗೆ ಸಲ್ಲಿಸಬಹುದು. ಭದ್ರಾವತಿ ತಾಲ್ಲೂಕು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಾರ್ಯಕರ್ತೆಯರು 10, ಸಹಾಯಕಿಯರು 72, ಹೊಸನಗರ ಕಾರ್ಯಕರ್ತೆಯರು 07, ಸಹಾಯಕಿಯರು 35, ಸಾಗರ ಕಾರ್ಯಕರ್ತೆಯರು 21, ಸಹಾಯಕಿಯರು 62, ಶಿಕಾರಿಪುರ ಕಾರ್ಯಕರ್ತೆಯರು 08, ಸಹಾಯಕಿಯರು 55, ಶಿವಮೊಗ್ಗ ಕಾರ್ಯಕರ್ತೆಯರು 33, ಸಹಾಯಕಿಯರು 118, ಸೊರಬ ಕಾರ್ಯಕರ್ತೆಯರು 38, ಸಹಾಯಕಿಯರು 65 ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು 09 ಹಾಗೂ ಸಹಾಯಕಿರಯರು 41 ಹುದ್ದೆಗಳ…

Read More

ಬೆಂಗಳೂರು : ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ…

Read More

ಬೆಂಗಳೂರು: ಭಾರತದ ಪ್ರಮುಖ ಅಗರಬತ್ತಿ ಬ್ರಾಂಡ್‌ಗಳಲ್ಲಿ ಒಂದಾದ ITC ಮಂಗಲ್‌ದೀಪ್ ತನ್ನ ಇತ್ತೀಚಿನ ಶ್ರೇಣಿಯ ಅಗರಬತ್ತಿ, ಮಂಗಲ್‌ದೀಪ್ ಫ್ಯೂಷನ್ ಅನ್ನು ಪ್ರಾರಂಭಿಸಿದೆ. ಈ ಹೊಸ ಕೊಡುಗೆಯು ಕ್ಲಾಸಿಕ್ ಮತ್ತು ಆಧುನಿಕ ಸುಗಂಧಗಳ ನವೀನ ಮಿಶ್ರಣವಾಗಿದ್ದು, ಗ್ರಾಹಕರ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮಂಗಲ್‌ದೀಪ್‌ ಅಗರಬತ್ತಿಯು ಆಧುನಿಕತೆಯಲ್ಲಿಯೂ, ಆಧ್ಯಾತ್ಮಿಕತೆ ಅಭ್ಯಾಸವನ್ನು ಇನ್ನಷ್ಟು ಆಸಕ್ತಿದಾಯ ಹಾಗೂ ಜನರ ನಂಬಿಕೆಗಳಲ್ಲಿ ಸಾಮರಸ್ಯ ಬೆಸೆಯುವಂತೆ ವಿನ್ಯಾಸಗೊಳಿಸಲಾಗಿದೆ. ಈ ನವೀನ ಉತ್ಪನ್ನವು ನೈಸರ್ಗಿಕ ಪದಾರ್ಥ ಹಾಗೂ ಸುಗಂಧಭರಿತ ಪರಿಮಳವನ್ನು ಹೊಂದಿರುವ ಅಗರಬತ್ತಿಯ ಅನುಭವ ನೀಡಲಿದೆ. ಫ್ಯೂಷನ್‌ನ ಪ್ರತಿಯೊಂದು ಪ್ಯಾಕ್ ಮೂರು ವಿಧದ ಸ್ಟಿಕ್‌ಗಳನ್ನು ಹೊಂದಿರುತ್ತದೆ, ಪ್ರತಿ ಪ್ಯಾಕ್‌ಗೆ ಒಂದು ಸಾಂಪ್ರದಾಯಿಕ ಮತ್ತು ಒಂದು ಆಧುನಿಕ ಪರಿಮಳವನ್ನು ಅನನ್ಯವಾಗಿ ಸಂಯೋಜಿಸುತ್ತದೆ. ಪ್ರತಿ ಇದ್ದಿಲು ರಹಿತ ಅಗರಬತ್ತಿಯು ಅದರ ವಿಶಿಷ್ಟವಾದ ಸುಗಂಧ ಸಂಯೋಜನೆಗಳೊಂದಿಗೆ ದೈನಂದಿನ ಪ್ರಾರ್ಥನೆಗಳಿಗೆ ಉಲ್ಲಾಸಕರ ತಿರುವನ್ನು ತರುತ್ತದೆ, ಉದಾಹರಣೆಗೆ ಈ ನೂತನ ಅಗರಬತ್ತಿಯು ವೆಟಿವರ್‌ನ ಮಣ್ಣಿನ ಪರಿಮಳದೊಂದಿಗೆ ಬೆಸೆಯಲಾದ ಸುಗಂಧಬರಿತ ಶ್ರೀಗಂಧದ ಪರಿಮಳ ಹೊಂದಿದೆ, ನಮ್ಮ ಮಣ್ಣಿನ ಲ್ಯಾವೆಂಡರ್‌ನ…

Read More

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಉಲ್ಬಣಿಸಿದೆ. ಸದ್ಯಕ್ಕೆ ಶಮನವಾಗೋದು ಡೌಟ್ ಎನ್ನಲಾಗುತ್ತಿದೆ. ಅಲ್ಲದೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಒಂದು ಗುಂಪಿನ ಸದಸ್ಯರು ಇಂದು ಮಧ್ಯಾಹ್ನ 12.30ಕ್ಕೆ ಸಭೆ ನಡೆಸಲು ನಿರ್ಧರಿಸಿರುವುದಾಗಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿ ಇರುವಂತ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಯತ್ನಾಳ್, ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿಯ ಭಿನ್ನಮತೀಯ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸಭೆಯನ್ನು ನಡೆಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇಂದಿನ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಕಳಕಪ್ಪ ಬಂಡಿ ಸೇರಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬೆಂಬಲಿಗರರ ದಂಡೇ ನೆರೆಯಲಿದೆ ಎನ್ನಲಾಗುತ್ತಿದೆ. ಬಿಜೆಪಿ ಭಿನ್ಮತೀಯರು ಇಂದಿನ ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ, ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ…

Read More

ಬೆಂಗಳೂರು: ನಾಡಕಚೇರಿ, ತಹಶೀಲ್ದಾರರ ಕಚೇರಿಗಳಿಗೆ ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ನಂತ್ರ, ಕೆಲವು ಸಂದರ್ಭದಲ್ಲಿ ರಿಜೆಕ್ಟ್ ಕೂಡ ಆಗುತ್ತವೆ. ಅದಕ್ಕೆ ಇಲಾಖೆಯ ಅಧಿಕಾರಿಗಳು ಸಕಾರಣ ಕೊಟ್ಟಿದ್ದರೇ, ಕೆಲವು ಸಂದರ್ಭದಲ್ಲಿ ಸರಿಯಾದ ಮಾಹಿತಿ ನೀಡಿರೋದಿಲ್ಲ. ಒಂದು ವೇಳೆ ನೀವು ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿದ್ದರೇ ಏನು ಮಾಡಬೇಕು ಅಂತ ಮುಂದೆ ಓದಿ. ಈ ಕುರಿತಂತೆ ಸಕಾಲ ಕರ್ನಾಟಕ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಸಕಾಲ ಕಾಯ್ದೆಯಡಿ ಅಧಿಸೂಚನೆಗೊಂಡಿರುವ, ಎಲ್ಲಾ ವಿಧದ ಆದಾಯ ಪ್ರಮಾಣ ಪತ್ರಗಳು ಸೇವಾ ವಿಲೇವಾರಿಯಲ್ಲಿ ವಿಳಂಬ ಅಥವಾ ತಿರಸ್ಕೃತ ವಾದಲ್ಲಿ ಪ್ರಥಮ ಮೇಲ್ಮನವಿಯನ್ನು ಸಕ್ಷಮ ಅಧಿಕಾರಿಯವರದ ಉಪವಿಭಾಗಾಧಿಕಾರಿಯವರು ಇತ್ಯರ್ಥ ಪಡಿಸುತ್ತಾರೆ ಎಂದಿದೆ. ಇನ್ನೂ ಸಕಾಲ ಮಿಷನ್ ಅಡಿಯಲ್ಲಿ ಎಲ್ಲಾ ವಿಧದ ಆದಾಯ ಪ್ರಮಾಣ ಪತ್ರಗಳು ಸೇವಾ ವಿಲೇವಾರಿಯಲ್ಲಿ ವಿಳಂಬ ಅಥವಾ ತಿರಸ್ಕೃತವಾಗಿದ್ದಲೇ ಪ್ರಥಮ ಮೇಲ್ಮನವಿಯನ್ನು ಸಕ್ಷಮ ಪ್ರಾಧಿಕಾರಿಯವರಾದ ಉಪ ವಿಭಾಗಾಧಿಕಾರಿಯವರು ಇತ್ಯರ್ಥ ಪಡಿಸುತ್ತಾರೆ. ಪ್ರಥಮ ಮೇಲ್ಮನವಿಯನ್ನು ಉಪ ವಿಭಾಗಾಧಿಕಾರಿಗಯವರಿಗೆ ಸಲ್ಲಿಸುವಂತೆ ತಿಳಿಸಿದೆ. ನೀವು ಸಕ್ಷಮ ಪ್ರಾಧಿಕಾರಿಯವರಾದ ಉಪ…

Read More

ನವದೆಹಲಿ: ಅದಾನಿ ವಂಚನೆ ಪ್ರಕರಣ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರಿಂದ ಗದ್ದಲ ಕೋಲಾಹಲವನ್ನೇ ಉಂಟು ಮಾಡಲಾಯಿತು. ಈ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಯಿತು. ಇದಕ್ಕೂ ಮೊದಲು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಎನ್ಡಿಎ ಮೈತ್ರಿಕೂಟದ ಸದನ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು. ಸಂಸತ್ ಅಧಿವೇಶನದಲ್ಲಿ ಎತ್ತಬೇಕಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅದಾನಿ ವಿಷಯದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯ ಮಧ್ಯೆ ಸದನದಲ್ಲಿ ಗದ್ದಲದ ಕಾರಣ ಲೋಕಸಭೆಯನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು. ಈ ನಂತ್ರ ರಾಜ್ಯಸಭೆಯಲ್ಲೂ ಇದೇ ವಿಷಯಕ್ಕೆ ಗದ್ದಲ ಉಂಟಾದಾಗ, ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ನವೆಂಬರ್ 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ. https://twitter.com/ANI/status/1861652769003982885 https://kannadanewsnow.com/kannada/big-shock-to-nhm-employees-who-were-expecting-permanently-health-minister-says-lets-see-after-scheme-is-over/ https://kannadanewsnow.com/kannada/bengaluru-power-outages-in-these-areas-tomorrow-adds/

Read More

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ ವಂಚನೆ ಸಂಬಂಧ 25ಕ್ಕೂ ಹೆಚ್ಚು ಕಡೆಯಲ್ಲಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಜಾಲಾಟದಲ್ಲಿ ತೊಡಗಿದ್ದಾರೆ. ಬೆಂಗಳೂರು ನಗರದ ಉದ್ಯಮಿಗಳು, ರಿಯಲ್ ಎಸ್ಟೇಟ್ ಮಾಲೀಕರು, ಕಚೇರಿ, ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 25 ಕಡೆಯಲ್ಲಿ ಏಕ ಕಾಲಕ್ಕೆ ಈ ದಾಳಿಯನ್ನು ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಸಂಬಂಧ ಉದ್ಯಮಿಗಳ ನಿವಾಸ, ಕಚೇರಿ, ರಿಯಲ್ ಎಸ್ಟೇಟ್ ಮಾಲೀಕರ ನಿವಾಸ, ಕಚೇರಿ ಸೇರಿದಂತೆ ಹಲವೆಡೆ ದಾಳಿಯನ್ನು ನಡೆಸಿ ದಾಖಲೆಗಳ ಪರಿಶೀಲನೆ, ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಖಾಯಂ ನಿರೀಕ್ಷೆಯಲ್ಲಿದ್ದ ‘NHM ನೌಕರ’ರಿಗೆ ಬಿಗ್ ಶಾಕ್: ಸ್ಕೀಂ ಮುಗಿದ ಮೇಲೆ ನೋಡೋಣವೆಂದ ‘ಆರೋಗ್ಯ ಸಚಿವ’ರು – Kannada News | India News | Breaking news | Live news | Kannada | Kannada News | Karnataka News |…

Read More

ಶಿವಮೊಗ್ಗ: ಸಾಗರ ತಾಲ್ಲೂಕಿನ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದಾವೆ. ಈ ಕಾರಣದಿಂದ ಹಾಲಿ ನೌಕರರಿಗೆ ಕೆಲಸದ ಒತ್ತಡ ಹೆಚ್ಚಿದೆ. ಜೊತೆಗೆ ಆರೋಗ್ಯ ಇಲಾಖೆಯ ಕಾರ್ಯವೈಖರಿಯು ಕುಂಠಿತಗೊಳಿಸುವಂತೆ ಮಾಡುತ್ತಿದೆ. ಹೀಗಾಗಿ ಸಾಗರ ತಾಲ್ಲೂಕಿನ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಮನವಿ ಮಾಡಿದರು. ಮಂಗಳವಾರದಂದು ಮಂಗನಕಾಯಿಲೆ ನಿಯಂತ್ರಣದ ಸಂಬಂಧ ಸಾಗರ ತಾಲ್ಲೂಕಿಗೆ ಭೇಟಿ ನೀಡಿದ್ದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಹಾಗೂ ಪದಾಧಿಕಾರಿಗಳು ಭೇಟಿ ಮಾಡಿದರು. ಸಾಗರ ತಾಲ್ಲೂಕಿನಲ್ಲಿ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದಾವೆ. 1 ಸಮುದಾಯ ಆರೋಗ್ಯ ಕೇಂದ್ರವಿದೆ. 1 ನಗರ ಸಮುದಾಯ ಆರೋಗ್ಯ ಕೇಂದ್ರ, 1 ಉಪ ವಿಭಾಗಿಯ ಆಸ್ಪತ್ರೆಯಿದೆ. ಇಲ್ಲಿ ಹಲವು ಹುದ್ದೆಗಳು ಖಾಲಿ ಇದ್ದಾವೆ ಎಂಬುದಾಗಿ ಆರೋಗ್ಯ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಸಾಗರ…

Read More