Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆ.21ರ ನಾಳೆ, ಸೆ.22ರ ನಾಡಿದ್ದು ವಿದ್ಯುತ್ ವ್ಯತ್ತಯ ಉಂಟಾಗಲಿದೆ. ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ…
ಜೀವನದಲ್ಲಿ ಮುನ್ನಡೆಯಲು ಅವಿರತವಾಗಿ ದುಡಿಯುವ ಜನರಲ್ಲಿ ನಾಲ್ಕನೇ ಮೂರು ಭಾಗದಷ್ಟು ಜನರು ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಹೇಗಾದರೂ ಜೀವನದಲ್ಲಿ ಮುಂದೆ ಬರಬಾರದು ಎಂಬ ಕನಸಿನೊಂದಿಗೆ ಜೀವನದೊಂದಿಗೆ ಹೋರಾಡುತ್ತಿದ್ದಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಜೀವನದಲ್ಲಿ ಒಂದು ಹೆಜ್ಜೆ ಇಡುವುದರಿಂದ ನಾವು ಉನ್ನತ ಮಟ್ಟವನ್ನು ತಲುಪಲು ಸಾಧ್ಯವಿಲ್ಲ, ನಾವು ಹೆಜ್ಜೆ ಹೆಜ್ಜೆಗೆ ಹೋಗಬೇಕು. ಯಾಕೆ ಎಂದರೆ ಜೀವನದಲ್ಲಿ ಮುಂದೆ ಸಾಗಿ ಉನ್ನತ ಸ್ಥಾನದಲ್ಲಿರುವವರು, ಒಮ್ಮೆ ಜೀವನದಲ್ಲಿ ಕಷ್ಟಪಟ್ಟು ಹಂತಹಂತವಾಗಿ ಮುನ್ನಡೆದವರೂ ಆ ಜಾಗದಲ್ಲಿಯೇ ಕುಳಿತಿದ್ದಾರೆ. ಆದ್ದರಿಂದ ನೀವೂ ಕೂಡ ನಮ್ಮ ಜೀವನದಲ್ಲಿ ಹಂತಹಂತವಾಗಿ ಪ್ರಗತಿ ಹೊಂದುವ ಭರವಸೆಯೊಂದಿಗೆ ನಿಮ್ಮ ಜೀವನವನ್ನು ನಡೆಸಬೇಕು. ಪ್ರಗತಿಹೀನ ಆದರೆ, ಕೆಲವರ ಜೀವನದಲ್ಲಿ ಸ್ವಲ್ಪವೂ ಸುಧಾರಣೆಯಾಗುವುದಿಲ್ಲ. ಒಮ್ಮೆ ಅವರು ತಮ್ಮ ಜೀವನದಲ್ಲಿ ಒಂದು ಹೆಜ್ಜೆ ಮುಂದಿಟ್ಟರು ಎಂದು ತಿಳಿದ ನಂತರ ಕ್ರಮೇಣ ಅವರು ಸ್ವತಃ ಪ್ರಗತಿ ಹೊಂದುತ್ತಾರೆ. ಹಾಗೆಂದು ಜೀವನದಲ್ಲಿ ಪ್ರಗತಿಯೇ ಇಲ್ಲ…
ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ಅಂಶ ಪತ್ತೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಖಡಕ್ ಆದೇಶ ಹೊರಡಿಸಿದೆ. ಇಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀವಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯ ಸರ್ಕಾರ ತಿರುಪತಿ ಲಡ್ಡು ಪ್ರಸಾದದ ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡಿದೆ. ಅಂತಹ ವಿವಾದಕ್ಕೆ ಕಾರಣವಾಗುವ ಮುನ್ನವೇ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಶುದ್ದ ನಂದಿನಿ ತುಪ್ಪ ಬಳಕೆಗೆ ಆದೇಶಿಸಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/nagamangala-riots-due-to-complete-failure-of-police-bjp/ https://kannadanewsnow.com/kannada/big-news-the-destruction-of-the-world-will-begin-in-3-months-baba-vanga-shocking-prediction/ https://kannadanewsnow.com/kannada/breaking-cm-siddaramaiah-announces-increase-in-age-limit-for-police-constable-posts-from-27-to-33-years/
ಬೆಂಗಳೂರು: ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸತ್ಯಶೋಧನಾ ಸಮಿತಿಯ ನೇತೃತ್ವ ವಹಿಸಿದ್ದ ಅವರು ತಮ್ಮ ಸಮಿತಿಯ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರರಿಗೆ ಹಸ್ತಾಂತರ ಮಾಡಿದರು. ಬಿ.ವೈ.ವಿಜಯೇಂದ್ರ, ಸತ್ಯಶೋಧನಾ ಸಮಿತಿಯಲ್ಲಿದ್ದ ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ, ರಾಜ್ಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರ ಉಪಸ್ಥಿತಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮತಕ್ಕಾಗಿ ಆಪಾದಿತರ ಕೇಸುಗಳನ್ನು ಹಿಂಪಡೆಯಲಾಗಿದೆ. ಪೊಲೀಸರ ಸಂಪೂರ್ಣ ವೈಫಲ್ಯತೆ ಕಾಣುತ್ತದೆ. ಪೊಲೀಸರ ಕೈಕಟ್ಟಿ ಹಾಕಿದ್ದರು. ಏನೂ ಕ್ರಮ ಕೈಗೊಳ್ಳಲು ಅವರಿಗೆ ಅವಕಾಶ ಇರಲಿಲ್ಲ. ಯಾರ ಮೇಲೂ ಕೇಸ್ ಮಾಡುವ ಹಾಗಿಲ್ಲ. ಯಾರ ಮೇಲೂ ಕ್ರಮ ಕೈಗೊಳ್ಳುವಂತಿಲ್ಲ…
ತಿರುಮಲ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ. ಇದು ಲ್ಯಾಬ್ ವರದಿಯಿಂದ ತಿಳಿದ ನಂತ್ರ ನಮಗೂ ಶಾಕ್ ಆಗಿದೆ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ತಿರುಪತಿ ತಿಮ್ಮಪ್ಪನ ಲಡ್ಡು ವಿವಾದದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ತಿರುಪತಿ ದೇವಸ್ಥಾನ ಟ್ರಸ್ಟ್ ( Tirupati Temple Trust ), ಈ ಪ್ರಕರಣದಲ್ಲಿ ಶೀಘ್ರದಲ್ಲೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಪ್ರಸಾದದ ಮಾದರಿಗಳು ಕಲಬೆರಕೆಯಾಗಿವೆ ಎಂದು ಟ್ರಸ್ಟ್ ಹೇಳಿದೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ತಿರುಮಲ ತಿರುಪತಿ ದೇವಸ್ಥಾನಂ (Tirumala Tirupati Devasthanams – TTD) ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ( TTD Executive Officer J Syamala Rao ) “ಶುದ್ಧ ಹಸುವಿನ ತುಪ್ಪದಿಂದ ಮಾತ್ರ ಉತ್ತಮ ಲಡ್ಡುವನ್ನು ತಯಾರಿಸಲಾಗುತ್ತದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ ಆಶಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರು. ಅವರ ಸೂಚನೆಯ ಮೇರೆಗೆ, ನಾವು ಮಾದರಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ ಮತ್ತು ನಿಯಮಗಳನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಿದ್ದೇವೆ.…
ಬೆಂಗಳೂರು: ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆ.21ರ ನಾಳೆ, ಸೆ.22ರ ನಾಡಿದ್ದು ವಿದ್ಯುತ್ ವ್ಯತ್ತಯ ಉಂಟಾಗಲಿದೆ. ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ…
ಬೆಂಗಳೂರು: ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿನ ಶೌಚಾಲಯದಲ್ಲಿ ಯುವತಿಯರ ವೀಡೀಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದಂತ ಶಾಕಿಂಗ್ ವಿಷಯ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಪೊಲೀಸರಿಂದ ಓರ್ವ ಅನುಮಾನಾಸ್ಪದ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಜರಾಜೇಶ್ವರಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ನಿಂದ ಯುವತಿಯ ವೀಡಿಯೋವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ರಾಜರಾಜೇಶ್ವರಿ ಕಾಲೇಜಿನ ವಿದ್ಯಾರ್ಥಿನಿಯರು ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿರುವಂತ ವಿಷಯ ತಿಳಿದಂತ ಕುಂಬಳಗೋಡು ಠಾಣೆಯ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮನವೊಲಿಸಿದರು. ಅಲ್ಲದೇ ಘಟನೆಯ ಸಂಬಂಧ ಶೌಚಾಲಯದಲ್ಲಿ ಯುವತಿಯ ವೀಡಿಯೋ ಚಿತ್ರೀಕರಿಸುತ್ತಿದ್ದಂತ ಅನುಮಾನಾಸ್ಪದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ಯುವಕನನ್ನು ಬಂಧಿಸಿರುವಂತ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/big-news-the-destruction-of-the-world-will-begin-in-3-months-baba-vanga-shocking-prediction/ https://kannadanewsnow.com/kannada/breaking-cm-siddaramaiah-announces-increase-in-age-limit-for-police-constable-posts-from-27-to-33-years/ https://kannadanewsnow.com/kannada/bengaluru-power-outages-in-these-areas-of-the-city-on-september-21/
ತಿರುಮಲ: ತಿರುಪತಿ ತಿರುಮಲ ಲಡ್ಡು ಪ್ರಸಾದ ಈಗ ವಿವಾದದ ಸ್ವರೂಪ ಪಡೆದಿದೆ. ಜೊತೆ ಜೊತೆಗೆ ದನದ ಕೊಬ್ಬು ಮಾತ್ರವೇ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಕೆ ಮಾತ್ರ ಆಗುತ್ತಿಲ್ಲ. ಇದರೊಂದಿಗೆ ಇತರೆ ಕೊಬ್ಬಿನ ಅಂಶಗಳು ಕೂಡ ಬಳಕೆಯಾಗಿರುವುಂತ ಆಘಾತಕಾರಿ ಮಾಹಿತಿಯು ಲ್ಯಾಬ್ ರಿಪೋರ್ಟ್ ವರದಿಯಿಂದ ಬಹಿರಂಗವಾಗಿದೆ. ಹೌದು ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶವಷ್ಟೇ ಅಲ್ಲದೇ ಇತರೆ ಕೊಬ್ಬಿನ ಅಂಶಗಳು ಪತ್ತೆಯಾಗಿರುವುದಾಗಿ ಲ್ಯಾಬ್ ವರದಿಯಿಂದ ತಿಳಿದು ಬಂದಿದೆ. ಇದಕ್ಕೆ ಕಲಬೆರೆಕೆಯ ತುಪ್ಪ ಸರಬರಾಜು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿರುಮಲ ಪ್ರಸಾದವಾದಂತ ಲಡ್ಡು ತಯಾರಿಕೆಗಾಗಿ ಎಆರ್ ಡೈರಿಯಿಂದ ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ಕಲಬೆರೆಕೆಯಿಂದ ಕೂಡಿರುವ ಅನುಮಾನದಿಂದ ಗುಜರಾತ್ ನಲ್ಲಿನ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು ಎಂದಿದ್ದಾರೆ. ಲ್ಯಾಬ್ ರಿಪೋರ್ಟ್ ನೋಡಿ ನಮಗೆ ಶಾಕ್ ಆಗಿದೆ. ವರದಿಯಂತೆ ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ಎಆರ್ ಡೈರಿಯಿಂದ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಜಸ್ಪ್ರೀತ್ ಬುಮ್ರಾ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ 400 ವಿಕೆಟ್ ಪಡೆದ ಭಾರತದ 10ನೇ ಬೌಲರ್ ಹಾಗೂ 6ನೇ ವೇಗಿ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ. ಬಾಂಗ್ಲಾದೇಶದ ಹಸನ್ ಮಹಮೂದ್ ಅವರು ಬುಮ್ರಾ ಅವರ 400ನೇ ವ್ಯಕ್ತಿಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಶುಕ್ರವಾರ ಮೊದಲ ಎರಡು ಸೆಷನ್ಗಳಲ್ಲಿ ಮೂರು ವಿಕೆಟ್ಗಳನ್ನು ಪಡೆಯುವ ಮೂಲಕ ತವರು ಪರಿಸ್ಥಿತಿಗಳಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದರು. ಬುಮ್ರಾ ತಮ್ಮ ಮೊದಲ ಓವರ್ನಲ್ಲಿ ಶತಕ ಬಾರಿಸಿ, ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್ಮನ್ ಶದ್ಮಾನ್ ಇಸ್ಲಾಂ ಅವರನ್ನು ಹಿಂದಕ್ಕೆ ಕಳುಹಿಸಿದರು. ನಂತರ ಅವರು ಎರಡನೇ ಸೆಷನ್ನಲ್ಲಿ ಮುಷ್ಫಿಕರ್ ರಹೀಮ್ ಮತ್ತು ಮಹಮೂದ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಖಾತೆಗೆ ಇನ್ನೂ ಎರಡು ಸೇರಿಸಿದರು. ಹೀಗಿದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬುಮ್ರಾ ಸಾಧನೆ 162 ಟೆಸ್ಟ್, 149 ಏಕದಿನ…
ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ. ದನದ ಕೊಬ್ಬಿಗೆ ಕಲಬೆರೆಕೆ ತುಪ್ಪ ಸರಬರಾಜೇ ಕಾರಣ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ಈ ಬೆನ್ನಲ್ಲೇ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ಗೆ ಪತ್ರಕರ್ತ ಸುರೇಶ್ ಎಂಬುವರು ಅರ್ಜಿಯೊಂದನ್ನು ಸಲ್ಲಿಸಿದ್ದು, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವುದು ತೀವ್ರ ವಿವಾದವನ್ನು ಪಡೆಯುತ್ತಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಕೂಡಲೇ ಮಧ್ಯ ಪ್ರವೇಶಿಸುವಂತೆ ಕೋರಲಾಗಿದೆ. ಈ ನಡುವೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗಾಗಿ ಈ ಮೊದಲು ಕಂಪನಿಯೊಂದರಿಂದ ತುಪ್ಪವನ್ನು ಖರೀದಿಸಲಾಗುತ್ತಿತ್ತು. ಆ ತುಪ್ಪ ಕಲಬೆರೆಕೆಯಿಂದ ಕೂಡಿದ್ದೇ ವಿವಾದಕ್ಕೆ ಕಾರಣವಾಗಿದೆ ಎಂಬುದಾಗಿ ತಿಳಿಸಿದರು. ತುಪ್ಪ ಕಲಬೆರೆಕೆಯ ಬಗ್ಗೆ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಲಡ್ಡು ತಯಾರಿಕೆಗೆ ಬಳಸುತ್ತಿದ್ದಂತ ತುಪ್ಪದಲ್ಲಿ ದನದ ಕೊಬ್ಬು ಸೇರಿಸುವಂತ ಅಂಶವಿರುವ ವರದಿಯನ್ನು ನೋಡಿ…