Author: kannadanewsnow09

ಗದಗ: ಜಿಲ್ಲೆಯಲ್ಲಿ ನಡೆದಂತ ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರೋ ಘಟನೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶರಣಪ್ಪ ಸಂದೀಗೌಡರ್ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡ ಶರಣಪ್ಪ ಅವರನ್ನು ಬೈಕ್ ಅಡ್ಡಗಟ್ಟಿ ಮರಕ್ಕೆ ಹಗ್ಗದಿಂದ ಕಟ್ಟಿಹಾಕಿ ಭರ್ಬರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಗದಗ ಜಿಲ್ಲೆಯ ಡೋಣಿ ಗ್ರಾಮದ ಶರಣಪ್ಪ ಅವರು, ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ಗುರುತಿಸಿಕೊಂಡಿದ್ದರು. ಇಂತಹ ಅವರನ್ನು ಹತ್ಯೆ ಮಾಡಿರೋ ಸುದ್ದಿಯನ್ನು ಕೇಳಿದಂತ ಡೋಣಿ, ಡಾಂಬಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/chess-star-r-praggnanandhaa-thanks-anand-mahindra-for-gifting-him-an-electric-car/ https://kannadanewsnow.com/kannada/visit-this-website-to-apply-for-indian-citizenship-indian-citizenship/

Read More

ಬೆಂಗಳೂರು: ಸಮಾಜದ ಏಳಿಗೆಗೆ ಮಹಿಳೆಯರ ಬದ್ಧತೆಯೇ ಬುನಾದಿ: ಇಂದು ಮಹಿಳೆಯರ ನಡೆ ಸಮಾನತೆ ಕಡೆ ಸಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಜವಾಹರ ಬಾಲ ಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮಹಿಳೆಗೆ ಹುಟ್ಟಿನಿಂದಲೇ ಹೋರಾಟ, ಮೂರು ತಿಂಗಳ ಗರ್ಭದಲ್ಲಿ ಇರುವಾಗಲೇ ಹೋರಾಟ ಆರಂಭಿಸುತ್ತಾಳೆ. ಮಹಿಳೆ ಹುಟ್ಟು ಹೋರಾಟಗಾರ್ತಿ ಎಂದು ಹೇಳಿದರು. ಮಹಿಳೆಯನ್ನು ಹಿಂದೆ ಬಹಳವಾಗಿ ಹೀಯಾಳಿಸುವ ಪರಿಸ್ಥಿತಿ ಇತ್ತು. ಆದರೆ, ಆ ಪರಿಸ್ಥಿತಿ ಈಗ ಬದಲಾಗಿದೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. ಸಾಮಾಜಿಕ ಬದ್ಧತೆಯಿಂದ ಸಾಮಾಜದ ಒಳಿತಿಗಾಗಿ ದುಡಿಯುತ್ತಿದ್ದಾರೆ. ಯಾವುದೇ ರಂಗ ಇರಬಹುದು. ಮಹಿಳೆಯರು ಎಲ್ಲದರಲ್ಲೂ ಸಾಧನೆಯನ್ನು ರುಜುವಾತು ಮಾಡಿದ್ದಾರೆ ಎಂದು ಹೇಳಿದರು. ಸರ್ಕಾರಿ ಮಹಿಳಾ ನೌಕರರೇ ಇರಬಹುದು, ಹೊಲಗಳಲ್ಲಿ ದುಡಿಯುವ ಹೆಣ್ಣು ಮಕ್ಕಳು ಇರಬಹುದು.…

Read More

ಬೆಂಗಳೂರು: ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಸರಬರಾಜಿನಲ್ಲಿ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಸರಕಾರದ ವೈಫಲ್ಯವನ್ನು ಖಂಡಿಸಿ ಖಾಲಿ ಕೊಡಗಳ ಜೊತೆ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರದ ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿಕುಮಾರ್, ಬಸವನಗುಡಿಯ ಶಾಸಕ ರವಿ ಸುಬ್ರಹ್ಮಣ್ಯ, ಜಯನಗರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯದ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಗೌಡ, ಮಾಜಿ ಮಹಾಪೌರರು, ಮೋರ್ಚಾಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೆಂಗಳೂರು ಮಹಾನಗರದ ಎಲ್ಲಾ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. https://kannadanewsnow.com/kannada/breaking-nayab-saini-elected-as-new-cm-of-haryana/ https://kannadanewsnow.com/kannada/chess-star-r-praggnanandhaa-thanks-anand-mahindra-for-gifting-him-an-electric-car/

Read More

ಬೆಂಗಳೂರು: ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ಕಾರ್ಖಾನೆಯ ಆಡಳಿತ ಮಂಡಲಿಯ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, `ವಿಶ್ವೇಶ್ವರಯ್ಯನವರ ದಿವಾನಗಿರಿಯ ಕಾಲದಲ್ಲಿ ಆರಂಭವಾದ ಬಣ್ಣ ಮತ್ತು ಅರಗಿನ ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ 34-35 ಕೋಟಿ ರೂ. ವಹಿವಾಟು ನಡೆಸುತ್ತಿದೆ. ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದ್ದು, ಈ ವರ್ಷ ವಹಿವಾಟು 77 ಕೋಟಿ ರೂ. ತಲುಪಲಿದೆ. ಆದರೆ, ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಉದ್ದಿಮೆ ಹೀಗಿದ್ದರೆ ಸಾಲುವುದಿಲ್ಲ. ಆದ್ದರಿಂದ, ಈ ಕಾರ್ಖಾನೆಗೆ ಮತ್ತಷ್ಟು ಕಸುವು ತುಂಬಲಾಗುವುದು’ ಎಂದರು. ಮನೆ ಗೋಡೆ ಬಣ್ಣಗಳನ್ನು ತಯಾರಿಸಲು ಸೂಚಿಸಲಾಗಿದೆ. ಮುಕ್ತ ಮಾರುಕಟ್ಟೆ ಅಲ್ಲದೆ, ಸರಕಾರಿ ಕಟ್ಟಡಗಳು, ಶಾಲಾ- ಕಾಲೇಜು, ಹಾಸ್ಟೆಲ್ ಗಳಿಗೆ…

Read More

ನವದೆಹಲಿ: ಇಂದು ರಾಜ್ಯದ ಲೋಕಸಭಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸೋ ಸಂಬಂಧ ಚರ್ಚಿಸಲಾಗಿದೆ. ಆದರೇ ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಸಿಇಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಸಂಬಂಧ ಚರ್ಚೆ ನಡೆಸಲಾಗಿದೆ. ಆದರೇ ಅಂತಿಮಗೊಂಡಿಲ್ಲ ಎಂದರು. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸೋ ಸಾಧ್ಯತೆ ಇದೆ. ಹೀಗಾಗಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಲ್ಲ. ನಾಳೆ ಬಿಡುಗಡೆಯಾಗಬಹುದು ಎಂದು ತಿಳಿಸಿದರು. https://kannadanewsnow.com/kannada/lok-sabha-elections-2024-final-on-announcement-of-candidates-for-28-assembly-constituencies-to-be-finalised-tomorrow-says-by-vijayendra/ https://kannadanewsnow.com/kannada/good-news-for-anganwadi-workers-cm-assures-rs-2000-salary-hike-soon/

Read More

ನವದೆಹಲಿ: ಇಂದು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸೋ ಸಂಬಂಧ ಚರ್ಚೆ ನಡೆಸಲಾಗಿದೆ. ಇನ್ನೂ ಅಂತಿಮಗೊಂಡಿಲ್ಲ. ನಾಳೆ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಬಿಜೆಪಿ ಹೈಕಮಾಂಡ್ ಫೈನಲ್ ಮಾಡಲಿದ್ದಾರೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವಂತ ಸಿಇಸಿ ಸಭೆ ಅಂತ್ಯಗೊಂಡ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡೋ ಬಗ್ಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಇಂದು ಸಿಇಸಿ ಸಭೆಯಲ್ಲಿ ಚರ್ಚೆಯಾಗಿದೆ. ನಾಳೆ ಮತ್ತೊಂದು ಸುತ್ತಿನ ಸಭೆಯಲ್ಲಿ ಪಟ್ಟಿ ಅಂತಿಮ ಆಗಲಿದೆ ಎಂದರು. 2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡೋ ನಿರೀಕ್ಷೆಯಿದೆ. ಮೈತ್ರಿ ಅಭ್ಯರ್ಥಿಗಳ ಬಗ್ಗೆಯೂ ಇಂದಿನ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/good-news-for-anganwadi-workers-cm-assures-rs-2000-salary-hike-soon/ https://kannadanewsnow.com/kannada/ramzan-fast-to-begin-in-karnataka-from-tomorrow/

Read More

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನ ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಇಂದು ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ ಎಂದರು. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌.…

Read More

ಮಂಗಳೂರು: ಇಂದು ಅಮವಾಸೆಯ ಹಿಂದಿನ ದಿನದಂದು ಚಂದ್ರನ ದರ್ಶನವಾಗಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯದ ಕರಾವಳಿಯಲ್ಲಿ ರಂಜಾನ್ ಮಾಸ ಆರಂಭಗೊಳ್ಳಲಿದೆ. ಇಂದು ಮಾಹಿತಿ ನೀಡಿರುವಂತ ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್ಎಂ ರಶೀದ್ ಮಾಹಿತಿ ಹಂಚಿಕೊಂಡಿದ್ದಾರೆ. ಕರಾವಳಿಯಲ್ಲಿ ಇಂದು ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ವ್ರತ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೂಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಇನ್ನೂ ರಾಜ್ಯದ ಕೆಲವೆಡೆ ಚಂದ್ರ ದರ್ಶನವಾಗದ ಕಾರಣ, ನಾಳೆ ಚಂದ್ರ ದರ್ಶನವನ್ನು ನೋಡಿಕೊಂಡು ರಂಜಾನ್ ಉಪವಾಸ ವ್ರತ ಆಚರಣೆಯ ಬಗ್ಗೆ ಮುಸ್ಲೀಂ ಸಮುದಾಯದಿಂದ ನಿರ್ಧಾರ ಕೈಗೊಳ್ಳೋ ಸಾಧ್ಯತೆ ಇದೆ. https://kannadanewsnow.com/kannada/good-news-for-anganwadi-workers-cm-assures-rs-2000-salary-hike-soon/ https://kannadanewsnow.com/kannada/public-should-note-if-you-are-pelted-with-stones-on-trains-call-this-helpline/

Read More

ಬೆಂಗಳೂರು: ರಾಜ್ಯದಲ್ಲಿ ಫೇಕ್ ನ್ಯೂಸ್ ಹಾವಳಿ ತಪ್ಪಿಸೋದಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದೆ. ಈ ಸಂಬಂಧ ಶೀಘ್ರವೇ ಆದೇಶ ಕೂಡ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು ರಾಜ್ಯದಲ್ಲಿ ಫೇಕ್ ನ್ಯೂಸ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಫೇಕ್ ನ್ಯೂಸ್ ಪತ್ತೆ ಹಚ್ಚುವುದು ಹೇಗೆ.? ಫೇಕ್ ನ್ಯೂಸ್ ಬಗ್ಗೆ ತನಿಖೆ ನಡೆಸುವವರು ಯಾರು? ನಿಯಂತ್ರಣ ಕ್ರಮಗಳು ಏನು.? ಕಾನೂನು ಕ್ರಮಗಳನ್ನು ಹೇಗೆಲ್ಲ ಜಾರಿಗೊಳಿಸಬೇಕು ಎನ್ನುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು. ಇಂದಿನ ಸಭೆಯಲ್ಲಿ ನಡೆಸಿದಂತ ಚರ್ಚೆಗಳನ್ನು ಮಂಗಳವಾರ ಅಥವಾ ಬುಧವಾರದಂದು ಫೇಕ್ ನ್ಯೂಸ್ ತಡೆಗಟ್ಟುವ ಸಂಬಂಧ ಆದೇಶ ಹೊರಡಿಸಲಾಗುತ್ತದೆ. ರಾಜ್ಯದಲ್ಲಿ ಫೇಕ್ ನ್ಯೂಸ್ ಹಾವಳಿಯನ್ನು ತಡೆಗಟ್ಟೋದಕ್ಕೆ ನಿಯಂತ್ರಣ ಕ್ರಮಗಳನ್ನು ಈ ಮೂಲಕ ಜಾರಿಗೊಳಿಸೋದಕ್ಕೆ ನಿರ್ಧಾರ ಕೈಗೊಳ್ಳುತ್ತಿದ್ದೇವೆ ಎಂದರು. https://kannadanewsnow.com/kannada/central-government-issues-notification-regarding-implementation-of-caa/ https://kannadanewsnow.com/kannada/good-news-for-anganwadi-workers-cm-assures-rs-2000-salary-hike-soon/

Read More

ಮಂಗಳೂರು: ಪವಿತ್ರ ರಂಜಾನ್ ಮಾಸದ ಚಂದ್ರನ ದರ್ಶನ ಮಂಗಳವಾರ ಆಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ಮಾರ್ಚ್.12ರ ಮಂಗಳವಾರದ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತಾಚರಣೆ ಆರಂಭಗೊಳ್ಳಲಿದೆ. ಈ ಕುರಿತಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಅವರು ಮಾಹಿತಿ ನೀಡಿದ್ದು, ಮಂಗಳವಾರದ ನಾಳೆ ಚಂದ್ರ ದರ್ಶನವಾಗುವ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತ ಆಚರಣೆ ಮಾಡಲಾಗುತ್ತದೆ ಎಂದರು. ಈ ಹಿನ್ನಲೆಯಲ್ಲಿ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಕೇರಳ, ಕಾಸರಗೂಡು ಸೇರಿದಂತೆ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಮಾಸದ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ. ನಾಳೆಯಿಂದ ಒಂದು ತಿಂಗಳವರೆಗೆ ಮುಸ್ಲೀಂ ಬಾಂಧವರು ಪವಿತ್ರ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡಲಿದ್ದಾರೆ. https://kannadanewsnow.com/kannada/central-government-issues-notification-regarding-implementation-of-caa/ https://kannadanewsnow.com/kannada/good-news-for-anganwadi-workers-cm-assures-rs-2000-salary-hike-soon/

Read More