Subscribe to Updates
Get the latest creative news from FooBar about art, design and business.
Author: kannadanewsnow09
ಹೈದರಾಬಾದ್: ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿಸಿ ಬೈಕ್ ಸೇರಿದಂತೆ ಇತರೆ ವಾಹನಗಳಲ್ಲಿ ತೆಗೆದುಕೊಂಡು ಹೋಗೋರೇ ಹೆಚ್ಚು. ನೀವು ಪಟಾಕಿ ಖರೀದಿಸಿ ಬೈಕ್ ನಲ್ಲಿ ತೆಗೆದುಕೊಂಡು ಹೋಗ್ತಿದ್ದೀರಿ ಅಂದ್ರೆ ಎಚ್ಚರಿಕೆ ವಹಿಸಬೇಕಿದೆ. ಯಾಕೆ ಅಂತ ಮುಂದೆ ಸುದ್ದಿ ಓದಿ. ಹೈದರಾಬಾದಿನ ಏಲೂರಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿಸಿದ್ದಂತ ಇಬ್ಬರು ಬೈಕ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಗಂಗಮ್ಮದೇವಸ್ಥಾನದ ಬಳಿಯ ರಸ್ತೆಯಲ್ಲಿ ಸಾಗುತ್ತಿದ್ದಂತ ವೇಳೆಯಲ್ಲಿ ರಸ್ತೆಯಲ್ಲಿದ್ದಂತ ಗುಂಡಿಯಲ್ಲಿ ಬೈಕ್ ಇಳಿದಿದೆ. ಬೈಕ್ ರಸ್ತೆ ಗುಂಡಿಯಲ್ಲಿ ಇಳಿದು ಅಲ್ಲಾಡಿದ್ದೇ ತಡ, ಹಿಂಬದಿಯಲ್ಲಿ ವ್ಯಕ್ತಿಯೊಬ್ಬರು ಹಿಡಿದಿದ್ದಂತ ಪಟಾಕಿ ಕೆಳಗೆ ಬಿದ್ದಿದೆ. ಬೈಕ್ ಸವಾರರು ತೆರಳುತ್ತಿದ್ದಂತ ಮಾರ್ಗದಲ್ಲೇ, ರಸ್ತೆ ಗುಂಡಿಯ ಬಳಿಯಲ್ಲೇ ಸಾರ್ವಜನಿಕರು ನಿಂತಿದ್ದರು. ಪಟಾಕಿ ರಸ್ತೆಗೆ ಬೀಳುತ್ತಿದ್ದಂತೆ ದಿಢೀರ್ ಸ್ಪೋಟಗೊಂಡಿದೆ. ಈ ಸ್ಪೋಟಕದಲ್ಲಿ ಬೈಕ್ ಸವಾರ ಸುಧಾಕರ್ ಎಂಬುವರ ದೇಶ ಛಿದ್ರಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಲ್ಲದೇ ರಸ್ತೆಯಲ್ಲಿದ್ದಂತ ಆರು ಸಾರ್ವಜನಿಕರು ಗಂಭೀರವಾಗಿ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದಾರೆ. ಅವರನ್ನು ಏಲೂರು ಸರ್ಕಾರಿ ಆಸ್ಪತ್ರೆಗೆ…
ಚನ್ನಪಟ್ಟಣ / ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಗುರುವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ? ಅಥವಾ ದೇವರು ಬಂದು ಹೇಳಿದ್ದಾರೆಯೇ? ಒಂದೊಂದಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು. ಒಂದೂವರೆ ವರ್ಷದಲ್ಲಿ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ…
ಹೈದ್ರಾಬಾದ್: ದೀಪಾವಳಿ ಹಬ್ಬದ ಪ್ರಯುಕ್ತ ಬೈಕ್ ನಲ್ಲಿ ಪಟಾಕಿ ಖರೀದಿಸಿ ಕೊಂಡೊಯ್ಯೋರ ಸಂಖ್ಯೆಯೇ ಹೆಚ್ಚು. ನೀವು ಹೀಗೆ ಕೊಂಡೊಯ್ಯೋ ಮುನ್ನ ಎಚ್ಚರಿಕೆ ವಹಿಸಿ. ಯಾಕೆ ಅಂತ ಮುಂದೆ ಶಾಕಿಂಗ್ ನ್ಯೂಸ್ ಓದಿ. ಹೈದರಾಬಾದಿನ ಏಲೂರಿನಲ್ಲಿ ಬೈಕ್ ನಲ್ಲಿ ಸವಾರ ಹಾಗೂ ಮತ್ತೋರ್ವ ಹಿಂಬದಿಯಲ್ಲಿ ಪಟಾಕಿಯನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು. ಈ ವೇಳೆಯಲ್ಲಿ ಗುಂಡಿಯೊಂದರಲ್ಲಿ ಬೈಕ್ ಇಳಿದಿದ್ದೇ ತಡ ಕೈಯಲ್ಲಿದ್ದಂತ ಪಟಾಕಿ ಕೆಳಗೆ ಬಿದ್ದಿದೆ. ಆ ಬಳಿಕ ಪಟಾಕಿ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಎಲೂರು ಪಟ್ಟಣದಲ್ಲಿ ಪಟಾಕಿ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಜೀವ ದಹನವಾಗಿದ್ದು, ಇತರ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಗಂಗಮ್ಮ ದೇವಸ್ಥಾನದ ಬಳಿ ರಸ್ತೆ ಗುಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ಬಾಂಬ್ ಗಳಿದ್ದ ಚೀಲ ನೆಲದ ಮೇಲೆ ಬಿದ್ದಿದೆ. ಪಟಾಕಿಗಳು ಸ್ಫೋಟಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ…
ಚನ್ನಪಟ್ಟಣ/ರಾಮನಗರ: ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ತಿಟ್ಟಮಾರನಹಳ್ಳಿ, ಕುಂತೂರು ದೊಡ್ಡಿ, ಚಿಕ್ಕನದೊಡ್ಡಿ, ಪಟಲು, ಕಳ್ಳಿ ಹೊಸೂರು, ಮೈಲನಾಯಕನಹಳ್ಳಿ ಇನ್ನಿತರೆ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು ಅವರು. ಕಳೆದ ಚುನಾವಣೆಯಲ್ಲಿ ರಾಮನಗರ ಸೇರಿ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಕಾಂಗ್ರೆಸ್ ಪಕ್ಷ ಗಿಫ್ಟ್ ಕೂಪನ್ ಗಳನ್ನು ಹಂಚಿ ಅಕ್ರಮ ನಡೆಸಿತ್ತು. ಉಪ ಚುನಾವಣೆಯಲ್ಲಿಯೂ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕನಕಪುರ ಸೇರಿ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನ ಲುಲು ಮಾಲ್ ನಲ್ಲಿ ಖರೀದಿ ಮಾಡುವ ₹3,000,₹5000 ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್ ಗಳನ್ನು ಮಾಲ್ ನವರಿಗೆ ಕೊಟ್ಟರೆ ಅವರು…
ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ ಎಂದು ತಿಳಿಸಿದರು. ಭೂಗಳ್ಳರು ಮಾತ್ರವಲ್ಲದೆ, ಸರ್ಕಾರವೇ ಅಧಿಕೃತವಾಗಿ ಒತ್ತುವರಿ ಆರಂಭ ಮಾಡಿದೆ. ಇದರ ವಿರುದ್ಧ ರೈತ ಸಂಘಟನೆಗಳು ತೀವ್ರವಾಗಿ ಪ್ರತಿಭಟಿಸಬೇಕು. ಹಿಂದೆ ಮುಸ್ಲಿಂ ರಾಜರು ದಾಳಿ ಮಾಡಿ, ಮತಾಂಧತೆ ಮೆರೆದಿದ್ದರು. ಟಿಪ್ಪು ಸುಲ್ತಾನ ಕೊಡಗಿನಲ್ಲಿ ಮತಾಂತರ ಮಾಡಿರುವುದು ಇದಕ್ಕೆ ಸಾಕ್ಷಿ. ಇದೇ ರೀತಿ ಈಗ ಜಮೀನಿನ ಕಬಳಿಕೆ ನಡೆಯುತ್ತಿದೆ. ಇಂತಹವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಸುತ್ತಿದ್ದಾರೆ ಎಂದು ದೂರಿದರು. ಬಿಜೆಪಿ ಯಾವುದೇ ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ…
ಹಾವೇರಿ : ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಪ್ ಪ್ರಾಪರ್ಟಿ ಅಂತ ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದೆ. ಕಂದಾಯ ಕಾನೂನು ಕಡೆಗಣಿಸಿದ್ದಾರೆ. ಭೂಮಿ ವಿಚಾರದಲ್ಲಿ ಕಂದಾಯ ಕಾನೂನು ದಾಖಲೆಗಳೇ ಅಂತಿಮ. ಆದರೆ, ಆ ಕಾನೂನು ಕಡೆಗಣಿಸಿ ಅದಾಲತ್ ಪ್ರಕಾರ ಆಗಿದ್ದೇ ಅಂತಿಮ ಅಂತ ಮಾಡುತ್ತಿದ್ದಾರೆ. ಹಿಂದೆ ಇಂತ ಪ್ರಕರಣ ಆದಾಗ ಯಾರ್್ಯಾರು ನ್ಯಾಯಾಲಯಕ್ಕೆ ಹೋಗಿದ್ದಾರೆ ಅವರಿಗೆಲ್ಲ ನ್ಯಾಯ ಸಿಕ್ಕಿದೆ. ಯಾರೋ ಒಬ್ಬರು ಅರ್ಜಿ ಹಾಕಿದರೆ ಇಡೀ ರಾಜ್ಯದ ರೈತರ ಆಸ್ತಿಗೆ ವಕ್ಪ್ ಆಸ್ತಿಯೆಂದು ರೈತರಿಗೆ ನೊಟೀಸ್ ನೀಡುವ ಮೂಲಕ ಸರ್ಕಾರದಿಂದ ಅರಾಜಕತೆ, ಗಾಬರಿ ಉಂಟು ಮಾಡುವ…
ಬೆಂಗಳೂರು: “ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಶಕ್ತಿ ಯೋಜನೆ ಮರುಪರಿಶೀಲನೆ ಸಂಬಂಧಿಸಿದಂತೆ ಕೇಳಿದಾಗ, “ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ತಿಳಿಸಿದರು. “ನಮ್ಮ…
ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದರು. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರು ನಾ ನಾಯಕಿ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ…
ಹಾಸನ: ಹಾಸನಾಂಬೆ ತಾಯಿಯ ದರ್ಶನದ ವೇಳೆ ನೂಕುನುಗ್ಗಲು ಉಂಟಾಗಿದೆ. ಆಡಳಿತ ಮಂಡಳಿಯಿಂದ ಬೇಕಾಬಿಟ್ಟಿ ಪಾಸ್ ಕೊಟ್ಟಿರೋದಕ್ಕೆ ಪ್ಲೆಕ್ಸ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹಾಸನಾಂಬೆ ತಾಯಿಯ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ. ಅಲ್ಲದೇ ಆಡಳಿತ ಮಂಡಳಿಯಿಂದ ಪಾಸ್ ನೀಡಿದ್ದಕ್ಕೆ ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ. ಮಳೆ ಕೂಡ ದರ್ಶನಕ್ಕೆ ಅಡ್ಡಿಯಾದ ಕಾರಣ ಭಕ್ತರ ಆಕ್ರೋಶದ ಕಟ್ಟೆ ಹೊಡೆದಿದೆ. ಹೀಗಾಗಿ ದೇವಸ್ಥಾನದ ಬಳಿ ಹಾಕಿರುವಂತ ಪ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುವಂತೆ ಆಗಿದೆ.
ಹಾಸನ: ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬ ತಾಯಿಯ ದರ್ಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ಹಾಸನಾಂಬ ಆಡಳಿತ ಮಂಡಳಿಯಿಂದ ಎಲ್ಲಾ ಪಾಸ್ ರದ್ದುಮಾಡಿ ಆದೇಶಿಸಿದೆ. ಸದ್ಯ ಸರದಿ ಸಾಲಿನಲ್ಲಿ ನಿಂತಿರುವ ಭಕ್ತರ ಪಾಸ್ ಹೊರತಾಗಿ ಬೇರೆ ಎಲ್ಲಾ ಪಾಸ್ ರದ್ದು ಮಾಡಿರುವುದಾಗಿ ತಿಳಿಸಿದೆ. ಇನ್ನೂ ಹಾಸನಾಂಬೆ ದರ್ಶನಕ್ಕೆ ಈಗ ಮಳೆ ಅಡ್ಡಿಯಾಗಿದೆ. ಭಾರೀ ಮಳೆಯ ಕಾರಣದಿಂದ ಮಕ್ಕಳು, ಜನರು ಪರದಾಡುವಂತೆ ಆಗಿದೆ. ಅಲ್ಲದೇ ಭಕ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತೆ ಆಗಿದೆ.














