Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ, ಹಿನ್ನಲೆ ಎನ್ನುವಂತೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಬದಲಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ನಕಾರ ವ್ಯಕ್ತ ಪಡಿಸಿದೆ. ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂಬುದಾಗಿ ಹೆಸರು ಬದಲಾವಣೆಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೇ ರಾಮನಗರ ಜಿಲ್ಲೆಗೆ ಹೊಸ ಹೆಸರು ನಾಮಕರಣ ಮಾಡುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡೋದಾಗಿಯೂ ಘೋಷಣೆ ಮಾಡಿದ್ದರು. ಅದರಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಮರು ನಾಮಕರಣ ಮಾಡಿ, ಕೇಂದ್ರಕ್ಕೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದಿಂದ ಕಳುಹಿಸಲಾಗಿತ್ತು. ಆದರೇ ಕೇಂದ್ರ ಸರ್ಕಾರ ಇದಕ್ಕೆ ನಕಾರ ವ್ಯಕ್ತ ಪಡಿಸಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದಂತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಹೀಗೆ ತಿರಸ್ಕರಿಸೋದಕ್ಕೆ ನಿಖರ ಕಾರಣ ಕೂಡ ಕೊಟ್ಟಿಲ್ಲ. ಹೀಗಾಗಿ ರಾಜ್ಯ…

Read More

ಕ್ರೋದಿ ನಾಮ ಸಂವತ್ಸರ 2025 ಪ್ರಥಮ ಸೂರ್ಯಗ್ರಹಣ ಇದೇ ಶನಿವಾರ ಮಾರ್ಚ್ 29 ರಂದು ಆಗಲಿದೆ. ನಂತರ ವಿಶ್ವಾಸವುನಾಮ ಸಂವತ್ಸರ ಆರಂಭ ಕಾಲದಲ್ಲಿ ಈ ಸೂರ್ಯಗ್ರಹಣವು 5 ರಾಶಿಯವರಿಗೆ ತುಂಬಾ ಮಂಗಳಕರವಾಗಿರಲಿದ್ದು, ಈ ಗ್ರಹಣದ ಪ್ರಭಾವವು ಅವರ ಆರೋಗ್ಯ ಶಿಕ್ಷಣ ಉದ್ಯೋಗ ವೃತ್ತಿಜೀವನದಲ್ಲಿ ಯಶಸ್ಸನ್ನು, ತರುತ್ತದೆ. ಆ ರಾಶಿಗಳಾವುವು ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…

Read More

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಂದ್ರದಿಂದಲೂ ಅನುದಾನ ತಂದಿಲ್ಲ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು 15 ನೇ ಹಣಕಾಸು ಆಯೋಗದ ಅಧ್ಯಕ್ಷರು 11,495 ಕೋಟಿ ರೂ. ಶಿಫಾರಸ್ಸು ಮಾಡಿದರು. ನೀವು ಅಧಿಕಾರದಲ್ಲಿದ್ದಾಗ ಈ ಬಗ್ಗೆಯೂ ಕೇಳಲಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಸಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿಯಲ್ಲಿ ಒಂದು ರೂಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ. ನೀವು ಬಿಜೆಪಿಯವರು ಅದರ ಬಗ್ಗೆ ಒಂದೂ ಮಾತೂ ಆಡಲಿಲ್ಲ ಎಂದಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವಾಗ ಧ್ವನಿ ಎತ್ತಲಿಲ್ಲ. ಕೇಂದ್ರ ಸರ್ಕಾರದಲ್ಲಿ ನ್ಯಾಯಯುತವಾಗಿ ಬರಬೇಕಾದ್ದನ್ನು ಕೇಳಲೂ ನಿಮ್ಮಿಂದ ಆಗಲಿಲ್ಲ. ರಾಜ್ಯಕ್ಕೆ ಇದರಿಂದ ಸಾಕಷ್ಟು ನಷ್ಟವಾಗಿದೆ. ವಿರೋಧ ಪಕ್ಷ ಇರುವುದು ಭಾಷಣ ಮಾಡಲು ಮಾತ್ರವೇ? ಎಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಸರ್ವರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೈಸೂರು, ಕಲಬುರ್ಗಿಯಲ್ಲಿ ತಲಾ 7 ಕೋಟಿ ವೆಟ್ಟದಲ್ಲಿ ನಿಮ್ಹಾನ್ಸ್ ಮಾದರಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮೈಸೂರು, ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ₹7 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತದೆ. ಅತೀ ಶೀಘ್ರದಲ್ಲಿ ಇವು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದರು. ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹೀಗೆ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ಒದಗಿಸಲು ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು. ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1901994564497322405 https://kannadanewsnow.com/kannada/home-minister-g-parameshwara-said-that-the-safety-and-security-of-tourists-in-the-state-is-a-top-priority/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/

Read More

ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ವಿಶೇಷ ಆದ್ಯತೆಯನ್ನು ನೀಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ ಎಂದರು. https://twitter.com/KarnatakaVarthe/status/1901993458505547987 ಪ್ರವಾಸಿಗರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲು ಮಾಡುವುದು, ಸೂಕ್ತ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ವಿದೇಶಿ ಪ್ರವಾಸಿಗರ ಆಗಮನದ ಮಾಹಿತಿಯನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ಹೆದ್ದಾರಿ ಗಸ್ತು ವಾಹನ ನಿಯೋಜಿಸಿದ್ದು, ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಿಸಲಾಗಿದೆ ಎಂದು ಗೃಹ ಸಚಿವರಾದ  ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://kannadanewsnow.com/kannada/two-youths-killed-in-illegal-sand-mining-in-karnataka-bike-riders-killed-on-spot-after-tipper-ran-over-them/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/

Read More

ಕೊಪ್ಪಳ: ರಾಜ್ಯದಲ್ಲಿ ಅಕ್ರಮ ಮರಳು ದಂಧೆಗೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. ಕೊಪ್ಪಳದ ಕನಕಗಿರಿಯ ನವಲಿ ಬಳಿಯಲ್ಲಿ ಮರಳು ತುಂಬಿದ್ದಂತ ಟಿಪ್ಪರ್ ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಮೇಶ್ ಜವಳಗೇರಿ (27) ಹಾಗೂ ಸಿದ್ದಪ್ಪ ಪ್ಯಾಟ್ಯಾಳ್ (34) ಎಂಬುದಾಗಿ ಗುರುತಿಸಲಾಗಿದೆ. ಯುವಕರು ಕನಕಗಿರಿ ತಾಲ್ಲೂಕಿನ ಗುಡೂರಿನ ನಿವಾಸಿಗಳು. ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಂತ ಟಿಪ್ಪರ್ ಲಾರಿಯಿಂದಲೇ ಇಬ್ಬರು ಯುವಕರು ಬಲಿಯಾಗುವಂತೆ ಆಗಿದೆ ಎಂಬುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು. ಪೊಲೀಸರು ಕೊಪ್ಪಳದ ಕನಕಗಿರಿಯಲ್ಲಿ ನಡೆಯುತ್ತಿರುವಂತ ಅಕ್ರಮ ಮರಳು ದಂಧೆಯನ್ನು ನಿಲ್ಲಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. ಬೈಕ್ ಸವಾರರ ಸಾವಿನ ಸಂಬಂಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/this-is-not-siddaramaiahs-guarantee-its-kannadigas-guarantee-cm-siddaramaiah/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಸುವುದು ಕಡ್ಡಾಯ ಎಂಬುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಅಕ್ರಮ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ. ರಾಜ್ಯ ಸರ್ಕಾರವು ‘ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ ಎಂದರು. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1901992594948649451 https://kannadanewsnow.com/kannada/this-is-not-siddaramaiahs-guarantee-its-kannadigas-guarantee-cm-siddaramaiah/ https://kannadanewsnow.com/kannada/breaking-%e0%b2%a8%e0%b2%9f-%e0%b2%a6%e0%b2%b0%e0%b3%8d%e0%b2%b6%e0%b2%a8%e0%b3%8d-%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%8a%e0%b2%82%e0%b2%a6%e0%b3%81-%e0%b2%b8%e0%b2%82/

Read More

ಬೆಂಗಳೂರು: ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ, ಕನ್ನಡಿಗರ ಗ್ಯಾರಂಟಿ ಎಂದು ಘೋಷಿಸಿದ್ದೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದಂತ ಅವರು, ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದರು.ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲಿಲ್ಲ ಎಂದರು. ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ ಎಂಬುದಾಗಿ ಸಿಎಂ ವ್ಯಂಗ್ಯ ಮಾಡಿದರು. ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ.…

Read More

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಟಿ ರನ್ಯಾ ರಾವ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿ ದೂರು ನೀಡಿದ ಕಾರಣ, ಎಫ್ಐಆರ್ ದಾಖಲಾಗಿದೆ. ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟಿ ರನ್ಯಾ ರಾವ್, ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರನ್ಯಾ ರಾವ್ ವಿರುದ್ಧ ಅವಾಚ್ಯ ಪದ ಬಳಸಿ ತೇಜೋವಧೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ ಪೊಲೀಸರಿಗೆ ಅನುರಾಧ ಎಂಬುವರು ದೂರು ನೀಡಿದ್ದಾರೆ. ಈ ದೂರು ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/karnataka-assembly-passes-karnataka-tax-on-professions-occupations-occupations-and-occupations-bill/ https://kannadanewsnow.com/kannada/karnataka-public-service-commission-amendment-bill-passed-in-assembly/

Read More

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸುಬುಗಳ, ಅಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ವಿಧೇಯಕವು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ಸಚಿವರು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಅಧಿನಿಯಮ 1959ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಈ ವಿಧೇಯಕವು ಪರೀಕ್ಷ ನಿಯಂತ್ರಕ ಮತ್ತು ಜಂಟಿ ಪರೀಕ್ಷ ನಿಯಂತ್ರಕ ಎಂಬ ಪದಗಳನ್ನು ಪರಿಭಾಷಿಸಲು, ಆಯೋಗವು ನಿರ್ಣಯ ತೆಗೆದುಕೊಳ್ಳುವಲ್ಲಿ ಆಗುವ ವಿಳಂಬವನ್ನು ತಡೆಯುವ ಸಂಬಂಧ, ಸುತ್ತೋಲೆಯ…

Read More