Author: kannadanewsnow09

ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು. ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಬಗೆಗಿನ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಹಳ ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2020ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಗೆ ಪ್ರಜ್ವಲ್ ದೇವರಾಜ್ ಭಾಜನರಾಗಿದ್ದರೇ, ಅತ್ಯುತ್ತಮ ನಟಿ ಪ್ರಶಸ್ತಿಗೆ ಅಕ್ಷತಾ ಪಾಂಡವಪುರ ಬಾಜನರಾಗಿದ್ದಾರೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಆದೇಶ ಮತ್ತು ತಿದ್ದುಪಡಿ/ಸೇರ್ಪಡೆ ಆದೇಶಗಳಲ್ಲಿ, ಶ್ರೀ ಬಿ.ಎಸ್.ಲಿಂಗದೇವರು, ನಿರ್ದೇಶಕರು ಇವರ ಅಧ್ಯಕ್ಷತೆಯಲ್ಲಿ 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳಿಗಾಗಿ ಚಲವಚಿತ್ರಗಳನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ರಚಿಸಲಾಗಿತ್ತು ಎಂದಿದ್ದಾರೆ. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಪತ್ರದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯ ಅಂತಿಮ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತಾ, ಅಂಗೀಕರಿಸಿ ಅನುಮೋದನೆ ನೀಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ…

Read More

ಒಬ್ಬ 80 ವರ್ಷದ ಮುದುಕನಿಗೆ ಹೃದಯದ ಆಪರೇಷನ್ ಆಯಿತು. ಆಸ್ಪತ್ರೆ ಬಿಲ್ಲು 8 ಲಕ್ಷ… ಬಿಲ್ಲು ನೋಡಿ ಮುದುಕ ಕಣ್ಣಿರು ಹಾಕಿದ… ಅದನ್ನು ಕಂಡ ವೈದ್ಯರು ಹೇಳಿದರು ಅಳಬೇಡಿ ನಿಮ್ಮ ಬಿಲ್ಲು ಸ್ವಲ್ಪ ಕಡಿಮೆ ಮಾಡುತ್ತೇನೆ.. ಸರ್ ಈ ಬಿಲ್ಲು ತುಂಬಾ ಕಡಿಮೆ… 10 ಲಕ್ಷ ಆದರೂ ತುಂಬುವ ಯೋಗ್ಯತೆ ನನಗಿದೆ… ನಾನು ಅತ್ತಿದ್ದು ಅದಕ್ಕಲ್ಲ, ಯಾಕೆಂದರೆ ಆ ಪರಮಾತ್ಮ 80 ವರ್ಷ ನನ್ನ ಹೃದಯವನ್ನು ಕಾಪಾಡಿದ್ದಕ್ಕೆ ಯಾವುದೇ ಬಿಲ್ಲು ನನಗೆ ಕಳಿಸಲಿಲ್ಲ… ನೀವು ಕೇವಲ 3 ಗಂಟೆ ನನ್ನ ಹೃದಯದ ಫಂಕ್ಷನಿಂಗ್ ನೋಡಿಕೊಂಡಿದ್ದಕ್ಕೆ 8 ಲಕ್ಷ ರೂಪಾಯಿಯೇ…? ಓ ಪರಮಾತ್ಮ ನೀನು ನಮ್ಮ ಮೇಲೆ ಎಷ್ಟು ಕಾಳಜಿ ವಹಿಸುತ್ತಿಯಾ… ನೀನು ನಮ್ಮ ಒಂದೊಂದು ಅಂಗಾಂಗದ ಮೇಲೂ ಬೆಲೆಕಟ್ಟಲಾಗದ ಇನ್ವೆಸ್ಟ್ಮೆಂಟ್ ಮಾಡಿದ್ದೀಯಾ… ನಮ್ಮ ದೇಹದ ಯಾವುದೋ ಒಂದು ಅಂಗ ಸರಿಯಾಗಿ ಕೆಲಸಮಾಡಲಿಲ್ಲ ಅಂತ ಡಾಕ್ಟರ್ ಬಳಿಗೆ ಹೋದಾಗಲೇ ನಿನ್ನ ಬೆಲೆ ನಮಗೆ ಅರ್ಥವಾಗೋದು… ನೀನು ಮ್ಯಾನ್ಯುಫ್ಯಾಕ್ಚರರ್ ನಿನ್ನನ್ನೆಂದೂ ನಾವು ನೀನು ನಮ್ಮ…

Read More

ಬೆಂಗಳೂರು: ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಧಾವಿಸಿದೆ. ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೋದಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಪತ್ರ ಬರೆದಿದ್ದಾರೆ. ಆಂಧ್ರಪ್ರದೇಶದಲ್ಲಿ ರೈತರು ಬೆಳೆದ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಉತ್ಪಾದನೆಯ ಶೇ 25ವರೆಗಿನ ವ್ಯಾಪ್ತಿಯೊಂದಿಗೆ ಕ್ವಿಂಟಲ್‌ಗೆ ₹11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ)ಯನ್ನು ನಿಗದಿಪಡಿಸಿದೆ. ಅದನ್ನು ಕರ್ನಾಟಕದ ರೈತರಿಗೂ ವಿಸ್ತರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. https://kannadanewsnow.com/kannada/no-eviction-without-disposing-of-bagar-hukums-petition-minister-krishna-byre-gowda/ https://kannadanewsnow.com/kannada/x-down-across-the-world-including-india-for-the-fourth-time-in-two-days-users/

Read More

ಬೆಂಗಳೂರು : ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಮಿತಿಗಳನ್ನು ರಚಿಸಲಾಗಿದೆ, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಸೋಮವಾರು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದು ತಿಳಿಸಿದರು. ಈ ವೇಳೆ…

Read More

ಬೆಂಗಳೂರು: ನಗರದಲ್ಲಿ ದಿಢೀರ್ ಮಳೆಯ ಆಗಮನವಾಗಿದೆ. ನಗರದ ವಿವಿಧೆಡೆ ವರುಣಾರ್ಭಟ ಜೋರಾಗಿದೆ. ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೀಗಾಗಿ ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದಂತ ಜನರಿಗೆ ತಂಪನೆರದಂತೆ ಆಗಿದೆ. ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗುತ್ತಿದೆ. ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಕೆ ಆರ್ ಮಾರ್ಕೆಟ್, ಬೆಂಗಳೂರಿನ ಹೃದಯಭಾಗವಾದಂತ ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವಂತ ಮಳೆಯಿಂದಾಗಿ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. https://kannadanewsnow.com/kannada/wont-stop-guarantee-as-long-as-congress-government-is-in-power-dk-shivakumar/ https://kannadanewsnow.com/kannada/dkss-reply-to-oppositions-ruckus-with-dvg-get-up-fall-fight-and-lose/

Read More

ಬೆಂಗಳೂರು: ನಾವು ಈ ರಾಜ್ಯದ ಬಡಜನತೆಗೆ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಮೂಲಕ ಅನುಕೂಲ ಮಾಡಿಕೊಟ್ಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಸಹಾಯ ಮಾಡಿದ್ದೇವೆ. ಒಂದು ಸಮಯದಲ್ಲಿ ವಿಪಕ್ಷಗಳು ನಮ್ಮನ್ನು ಹೆದರಿಸಲು ಪ್ರಯತ್ನಪಟ್ಟವು. ಈ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಇರುವ ತನಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದು ನಮ್ಮ ಬದ್ಧತೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ, ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. ಅವರಿಗೆ ವೇತನ ನೀಡಲಾಗುತ್ತಿದೆ ಎನ್ನುವ ಆಕ್ಷೇಪಕ್ಕೆ ಉತ್ತರ ನೀಡಲು ಮುಂದಾದಾಗ ಗದ್ದಲ ಎಬ್ಬಿಸಿದ ವಿಪಕ್ಷಗಳ ಸದಸ್ಯರಿಗೆ ಡಿಸಿಎಂ ಅವರು ಮಂಗಳವಾರ ತಿರುಗೇಟು ನೀಡಿದರು. “ನಮ್ಮ ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದರು. ಪ್ರತಿಯೊಂದು ಪದಾರ್ಥಗಳ ಬೆಲೆಯೂ ಹೆಚ್ಚಾಗಿತ್ತು. ಆದ ಕಾರಣಕ್ಕೆ ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿತು. ಈ ಯೋಜನೆಗಳಿಗೆ ನೂರಾರು ಟೀಕೆ- ಟಿಪ್ಪಣಿಗಳು ಬಂದವು. ಒಂದು ಕಾಳು ಕಡಿಮೆ ಕೊಟ್ಟರೂ…

Read More

ಬೆಂಗಳೂರು : “ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ, ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. ಅವರಿಗೆ ವೇತನ ನೀಡಲಾಗುತ್ತಿದೆ ಎನ್ನುವ ಆಕ್ಷೇಪಕ್ಕೆ ಉತ್ತರ ನೀಡಲು ಮುಂದಾದಾಗ ಗದ್ದಲ ಎಬ್ಬಿಸಿದ ವಿಪಕ್ಷಗಳ ಸದಸ್ಯರಿಗೆ ಡಿಸಿಎಂ ಅವರು ಮಂಗಳವಾರ ತಿರುಗೇಟು ನೀಡಿದರು. “52 ಸಾವಿರ ಕೋಟಿ ರೂಪಾಯಿಯ ಬೃಹತ್ ಯೋಜನೆ ಜನರಿಗೆ ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಮನೆ, ಮನೆಗೆ ತೆರಳಿ ಪರೀಕ್ಷೆ ಮಾಡಿ. ಜನರಿಗೆ ಉಪಯೋಗವಾಗುತ್ತಿದೆಯೋ ಇಲ್ಲವೋ ಎಂದು ತಿಳಿಯಲು ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟರೆ ಅದನ್ನು ನಿಮ್ಮ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲವಲ್ಲ” ಎಂದು ಲೇವಡಿ ಮಾಡಿದರು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಶೋಕ ಅವರು, 187 ಕೋಟಿ ರೂಪಾಯಿ ಸರ್ಕಾರದ ಹಣವನ್ನು ಬಳ್ಳಾರಿಯಲ್ಲಿ ಹಂಚಿದ್ದಾರೆ, ಪಕ್ಷಕ್ಕೆ…

Read More

ನವದೆಹಲಿ: ಎಲೋನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಮತ್ತೊಂದು ಸ್ಥಗಿತವನ್ನು ಎದುರಿಸುತ್ತಿದೆ ಎಂದು ಡೌನ್ಡೆಟೆಕ್ಟರ್ ತಿಳಿಸಿದೆ. ವೆಬ್ಸೈಟ್ ಪ್ರಕಾರ, 48 ಪ್ರತಿಶತದಷ್ಟು ಎಕ್ಸ್ ಬಳಕೆದಾರರು ಸಾಮಾಜಿಕ ಮಾಧ್ಯಮ ವೆಬ್ಸೈಟ್ ಅನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು 43 ಪ್ರತಿಶತದಷ್ಟು ಜನರು ಅಪ್ಲಿಕೇಶನ್ ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಎರಡು ದಿನಗಳಲ್ಲಿ ನಾಲ್ಕನೇ ಬಾರಿಗೆ ಎಕ್ಸ್ ಭಾರಿ ಸ್ಥಗಿತವನ್ನು ಎದುರಿಸಿದ್ದರಿಂದ ಸುಮಾರು 9 ಪ್ರತಿಶತದಷ್ಟು ಬಳಕೆದಾರರು ‘ಸರ್ವರ್ ಸಂಪರ್ಕ’ದ ಸಮಸ್ಯೆಗಳನ್ನು ಎದುರಿಸಿದರು. ಸ್ಥಗಿತ ವರದಿಗಳಲ್ಲಿ ಹೊಸ ಏರಿಕೆ ಡೌನ್ಡೆಟೆಕ್ಟರ್ ಪ್ರಕಾರ, ಮಾರ್ಚ್ 11, 2025 ರಂದು ಸ್ಥಗಿತ ವರದಿಗಳು ಮತ್ತೆ ಏರಿಕೆಯಾಗಿದ್ದು, 40,000 ಕ್ಕೂ ಹೆಚ್ಚು ಬಳಕೆದಾರರು ಸಮಸ್ಯೆಗಳನ್ನು ಉತ್ತುಂಗದಲ್ಲಿ ತೋರಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, 60% ಪೀಡಿತ ಬಳಕೆದಾರರು ಅಪ್ಲಿಕೇಶನ್ನೊಂದಿಗೆ ಸಮಸ್ಯೆಗಳನ್ನು ಎದುರಿಸಿದ್ದಾರೆ, 29% ವೆಬ್ಸೈಟ್ನೊಂದಿಗೆ ಸಮಸ್ಯೆಗಳನ್ನು ಎದುರಿಸಿದ್ದಾರೆ ಮತ್ತು 11% ಸರ್ವರ್ ಸಂಪರ್ಕ ದೋಷಗಳನ್ನು ಎದುರಿಸಿದ್ದಾರೆ. ಮಾರ್ಚ್ 10 ರ ಸೋಮವಾರ ಜಾಗತಿಕವಾಗಿ ಸಾವಿರಾರು ಬಳಕೆದಾರರು…

Read More

ಬೆಂಗಳೂರು: ಬೆಂಗಳೂರಿನ ಯಶವಂತಪುರ ಮತ್ತು ಶಿವಮೊಗ್ಗ ಟೌನ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಇಂಟೆರ್ ಸಿಟಿ ಎಕ್ಸ್ ಪ್ರೆಸ್ (ರೈ.ಸಂ. 16579/16580) ರೈಲುಗಳಿಗೆ ಚಿಕ್ಕಬಾಣಾವಾರ ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮೂರು ತಿಂಗಳವರೆಗೆ ಅಂದರೆ ಮಾರ್ಚ್ 16 ರಿಂದ ಜೂನ್ 15, 2025 ರವರೆಗೆ ಮುಂದುವರಿಸಲಾಗುತ್ತಿದೆ. ನಾಯಂಡಹಳ್ಳಿಯಲ್ಲಿ ಮೆಮು ವಿಶೇಷ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಅಶೋಕಪುರಂ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಮೆಮು ವಿಶೇಷ ರೈಲುಗಳಿಗೆ (ರೈ.ಸಂ. 06525/06526) ನಾಯಂಡಹಳ್ಳಿ ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮಾರ್ಚ್ 21, 2025 ರಿಂದ ಮುಂದಿನ ಸೂಚನೆ ಬರುವವರೆಗೂ ಮುಂದುವರಿಸಲಾಗುತ್ತಿದೆ. https://kannadanewsnow.com/kannada/sbi-upi-service-down-customers-are-struggling/ https://kannadanewsnow.com/kannada/court-orders-registration-of-fir-against-arvind-kejriwal/

Read More