Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಚಂದ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲೂಯಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ. ಇನ್ನೂ ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೇ, ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂಡಿಯಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೇಟರಿ ಹಾಗೂ ವೆಟರ್ನರಿ ಸೈನ್ಸ್ ಅಂಡ್ ಫಿಷರಿಂಗ್ ಇಲಾಖೆಯ ಸೆಕ್ರೇಟರಯಾಗಿ ನೇಮಕ ಮಾಡಲಾಗಿದೆ. ಸಮೀರ್ ಶುಕ್ಲ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೇ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೇಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.…
ಬೆಂಗಳೂರು: ಬಡ ಮಕ್ಕಳ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. ಬರೋಬ್ಬರಿ 13,000 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಬ್ಯಾಗ್ ವಿತರಣೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಸಾಂಕೇತಿಕವಾಗಿ ಬೆಂಗಳೂರಿನ ಕೋರಮಂಗಲ ವಿಲೇಜ್ ನಲ್ಲಿರುವಂತ ಸರ್ಕಾರಿ ಪ್ರೈಮರಿ ಮಾಡಲ್ ಶಾಲೆಯ ಮಕ್ಕಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೋಟ್ ಬುಕ್, ಬ್ಡಾಗ್ ವಿತರಣೆ ಮಾಡಲಿದ್ದಾರೆ. ತಮ್ಮ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತ 23 ಸರ್ಕಾರಿ ಶಾಲೆ, ಕಾಲೇಜುಗಳು, ಸರ್ಕಾರಿ ಅನುದಾನಿತ ಶಾಲೆ ಹಾಗೂ ಅತ್ಯಂತ ಬಡ ಜನರು ವಾಸಿರುವಂತ ಪ್ರದೇಶಗಳಲ್ಲಿನ ಕಾನ್ವೆಂಡ್ ಶಾಲೆಗಳಲ್ಲಿ ಓದುತ್ತಿರುವಂತ ಮಕ್ಕಳು ಸೇರಿದಂತೆ 13,000 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನೋಟ್ ಬುಕ್, ಬ್ಯಾಗ್ ವಿತರಣೆ ಮಾಡಲಿದ್ದಾರೆ.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಕಾನೂನು- ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರವು ಇಡೀ ರಾಜ್ಯದಲ್ಲಿ ಕೆಟ್ಟ ವಾತಾವರಣ ಸೃಷ್ಟಿಸುತ್ತಿದೆ. ರಾಜ್ಯದ ಕಾನೂನು- ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದ್ದಾರೆ. ಅತ್ಯಾಚಾರಗಳು, ಕೊಲೆಗಳು ಇವತ್ತು ಬಹಳಷ್ಟು ಆಗುತ್ತಿದೆ. ಜೊತೆಗೇ ಬಿಜೆಪಿ ನಾಯಕರು, ಹಿಂದೂಪರ ನಾಯಕರನ್ನು ಟಾರ್ಗೆಟ್ ಮಾಡಿ ತೊಂದರೆ ಕೊಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಮಂಗಳೂರಿನಲ್ಲಿ ಕೆಲವು ಮುಸ್ಲಿಂ ಸಂಘಟನೆಗಳು, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ಮುಸಲ್ಮಾನ ನಾಯಕರು ರಾಜೀನಾಮೆಯ ಬ್ಲ್ಯಾಕ್ಮೇಲ್ ಪ್ರಾರಂಭಿಸಿದ್ದಾರೆ. ಬ್ಲ್ಯಾಕ್ಮೇಲ್ಗೆ ಹೆದರಿ ಹಿಂದುತ್ವ ಕಾರ್ಯಕರ್ತರು, ಬಿಜೆಪಿ ನಾಯಕರನ್ನು ಗಡೀಪಾರು ಮಾಡಲು ಆರಂಭಿಸಿದ್ದಾರೆ. ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಇದು ನಡೆದಿದೆ. ಸುಹಾಸ್ ಅವರು ಮೃತಪಟ್ಟಾಗ ಮೆರವಣಿಗೆಯಲ್ಲಿ ಹೋದವರನ್ನು ಗುರುತಿಸಿ ಕರೆದು ತನಿಖೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಸರಕಾರ…
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸುಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದನೆಗೆ ಸರ್ಕಾರ ಮುಂದಾಗಿದೆ. ಬಳಿಕ ಇದರ ಯಶಸ್ಸಿನ ಆಧಾರದ ಮೇಲೆ ರಾಜ್ಯದ ವಿವಿಧೆಡೆಗಳಲ್ಲಿ ಇಂತಹ 40ಕ್ಕೂ ಹೆಚ್ಚು ಕೆರೆಗಳಲ್ಲಿ ತೇಲುವ ಸೌರಶಕ್ತಿ ಘಟಕಗಳನ್ನು ನಿರ್ಮಿಸಿ, 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ. https://twitter.com/KarnatakaVarthe/status/1929524569737703890 https://kannadanewsnow.com/kannada/ujjivan-small-finance-bank-has-launched-a-tobacco-free-campaign/ https://kannadanewsnow.com/kannada/87-people-confirmed-with-corona-in-the-state-the-number-of-infected-has-increased-to-529/
ನಾವು ಸಂತೋಷದಿಂದ ಬದುಕಬೇಕಾದರೆ, ಅದಕ್ಕಾಗಿ ಶ್ರಮಿಸಬೇಕು. ಮತ್ತು ನೀವು ರಾಜಿ ಮಾಡಿಕೊಂಡು ನಿಮ್ಮ ಕುಟುಂಬದೊಂದಿಗೆ ಬದುಕಬೇಕು. ಆಗ ಮಾತ್ರ ನಾವು ಸಂತೋಷದಿಂದ ಬದುಕಲು ಸಾಧ್ಯ. ಅದೇ ಸಮಯದಲ್ಲಿ, ನಾವು ವಾಸಿಸುವ ಮನೆ ಯಾವುದೇ ರೀತಿಯ ದುಷ್ಟತನದಿಂದ ಮುಕ್ತವಾಗಿದ್ದರೆ ಮಾತ್ರ ನಾವು ಗಳಿಸುವ ಹಣವು ನಮ್ಮೊಂದಿಗೆ ಉಳಿಯುತ್ತದೆ ಮತ್ತು ಕುಟುಂಬದಲ್ಲಿ ಯಾವುದೇ ಜಗಳಗಳು ಇರುವುದಿಲ್ಲ. ಎಲ್ಲಾ ರೀತಿಯ ಶುಭ ಕಾರ್ಯಕ್ರಮಗಳು ನಡೆಯಬೇಕಾದರೂ, ಮನೆಯಲ್ಲಿ ಯಾವುದೇ ದುಷ್ಟತನ ಇರಬಾರದು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಅಂತಹ ದೋಷವನ್ನು ತೆಗೆದುಹಾಕಲು ಬಳಸಬಹುದಾದ ತಾಂತ್ರಿಕ ಪರಿಹಾರವನ್ನು ನಾವು ನೋಡಲಿದ್ದೇವೆ , ಅದು ಯಾವುದಾದರೂ ಇದ್ದರೆ. ವಾಸ್ತು ದೋಷಗಳನ್ನು ನಿವಾರಿಸಲು ಪರಿಹಾರ ನಾವು ವಾಸಿಸುವ ಮನೆಯನ್ನು ದೇವಾಲಯಕ್ಕೆ ಸಮಾನವೆಂದು ಪರಿಗಣಿಸಲಾಗುತ್ತದೆ. ಆಗಮಗಳ ನಿಯಮಗಳನ್ನು ಅನುಸರಿಸಿ ಅವರು ದೇವಾಲಯಗಳನ್ನು ಹೇಗೆ ನಿರ್ಮಿಸುತ್ತಾರೆ? ಅದೇ ರೀತಿ, ನಾವು ನಮ್ಮ ವಾಸಯೋಗ್ಯ ಮನೆಯನ್ನು ವಾಸ್ತು ಶಾಸ್ತ್ರದ ಆಧಾರದ ಮೇಲೆ ನಿರ್ಮಿಸಬೇಕು. ಯಾವ ಕೋಣೆ ಯಾವ ದಿಕ್ಕಿನಲ್ಲಿರಬೇಕು ಎಂಬುದನ್ನು ಸಂಶೋಧಿಸಿ ನಿರ್ಮಿಸುವುದರಿಂದ ಮಾತ್ರ ಮನೆ ಉತ್ತಮ…
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಆರ್ಭಟಿಸಿದೆ. ಇಂದು ಹೊಸದಾಗಿ 87 ಜನರಿಗೆ ಕೋವಿಡ್ ಪಾಸಿಟಿವ್ ಅಂತ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 464, ರಾಟ್ ಮೂಲಕ 40 ಸೇರಿದಂತೆ 504 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 87 ಜನರಿಗೆ ಪಾಸಿಟಿವ್ ಅಂತ ದೃಢಪಟ್ಟಿದೆ ಎಂದು ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 29 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸದ್ಯ 311 ಸಕ್ರೀಯ ಸೋಂಕಿತರಿದ್ದಾರೆ. ಇವರಲ್ಲಿ 297 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಐವರು ಸರ್ಕಾರಿ, ನಾಲ್ವರು ಖಾಸಗಿ ಜನರಲ್ ಬೆಡ್ ನಲ್ಲಿ, ಇಬ್ಬರು ಐಸೋಲೋಷನ್ ಬೆಡ್ ನಲ್ಲಿ, ಐಸಿಯುನಲ್ಲಿ ಮೂವರು ಸೇರಿದಂತೆ 14 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ. https://kannadanewsnow.com/kannada/shivamogga-arrest-of-house-and-cattle-thieves-by-the-police-of-sagar-police-station/ https://kannadanewsnow.com/kannada/breaking-bjp-leader-arun-kumar-puthil-receives-a-big-shock-border-crossing-notice-issued/
ಶಿವಮೊಗ್ಗ: ಜಿಲ್ಲೆಯ ಸಾಗರ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವಂತ ಸಾಗರ ಪೇಟೆ ಠಾಣೆಯ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು, ದಿನಾಂಕ 07-09-2024ರಂದು ನಿಸಾರ್ ಅಹಮದ್ ಎಂಬುವರು ಮನೆಯಲ್ಲಿ ಇಲ್ಲದೇ ಇರುವಾಗ ಮನೆಗೆ ನುಗ್ಗಿ ಕಳ್ಳತನ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 2 ಲಕ್ಷ ಮೌಲ್ಯದ 23 ಗ್ರಾಂ ತೂಕದ ಬಂಗಾರದ ಒಡವೆಗಳು, ಕೃತ್ಯಕ್ಕೆ ಬಳಸಿದಂತ 5 ಲಕ್ಷ ಮೌಲ್ಯದ ಇಕೋ ಕಾರು ಜಪ್ತಿ ಮಾಡಿರುವುದಾಗಿ ತಿಳಿಸಿದರು. ದಿನಾಂಕ 28-05-2025ರಂದು ಉಮಾದೇವಿ ಎಂಬುವರು ಎರಡು ದನಗಳವು ಆಗಿರುವ ಬಗ್ಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.…
ಬೆಂಗಳೂರು: ಪೌರ ಕಾರ್ಮಿಕನಿಗೆ ಕೊಲೆ ಬೆದರಿಕೆ, ನಿಂದನೆ ಆರೋಪದಡಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಮುನಿಸ್ವಾಮಿ ಎಂಬುವರು ದೂರು ನೀಡಿದ್ದರು. ಈ ದೂರು ಆಧರಿಸಿ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ. ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಕಡೆ ಹುಡುಗರ ಜೊತೆ ಜಗಳವಾಡಿದ್ದಕ್ಕೆ ಪೌರ ಕಾರ್ಮಿಕ ಮುನಿಸ್ವಾಮಿ ಎಂಬುವರಿಗೆ ಎನ್ ಆರ್ ರಮೇಶ್ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಂತ ಆರೋಪ ಮಾಡಲಾಗಿದೆ. https://kannadanewsnow.com/kannada/grand-response-for-the-vidhana-soudha-tour-on-the-very-first-day-102-tourists-visited-on-foot/ https://kannadanewsnow.com/kannada/breaking-bjp-leader-arun-kumar-puthil-receives-a-big-shock-border-crossing-notice-issued/
ಬೆಂಗಳೂರು: ನಿನ್ನೆಯಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಲಾಗಿತ್ತು. ಮೊದಲ ದಿನವೇ ವಿಧಾನಸೌಧ ಪ್ರವಾಸಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 102 ಮಂದಿ ಪ್ರಾಸಿಗರು ಕಾಲ್ನಡಿಗೆಯ ಮೂಲಕ ಭೇಟಿ ನೀಡಿದ್ದಾರೆ. ಜನಸಾಮಾನ್ಯರಿಗೂ ನಾಡಿನ ಶಕ್ತಿಸೌಧ ವೀಕ್ಷಣೆ ಅವಕಾಶ ಸಿಗಲೆಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂ.1ರಿಂದ ವಿಧಾನಸೌಧ ಗೈಡೆಡ್ ಟೂರ್ ಆರಂಭವಾಗಿದ್ದು, ಮೊದಲ ದಿನ 67 ಮಂದಿ ಪುರುಷರು ಮತ್ತು 53 ಮಂದಿ ಮಹಿಳೆಯರು ಸೇರಿ ಒಟ್ಟು 120 ಮಂದಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವೆಬ್ಸೈಟ್ ಮೂಲಕ ನೋಂದಣಿ ಮಾಡಿಸಿದ್ದು ಅದರಲ್ಲಿ 102 ಮಂದಿ ಹಾಜರಾಗಿ ವಿಧಾನಸೌಧ ವೀಕ್ಷಿಸಿದ್ದಾರೆ ಎಂದು ಕೆಎಸ್ಟಿಡಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1929508078296408286 https://kannadanewsnow.com/kannada/i-personally-apologize-by-writing-a-letter-to-gulbarga-district-mlc-n-ravikumar/ https://kannadanewsnow.com/kannada/breaking-bjp-leader-arun-kumar-puthil-receives-a-big-shock-border-crossing-notice-issued/
ಕಲಬುರ್ಗಿ: ನನ್ನ ಹೇಳಿಕೆಯಿಂದ ನೋವು, ವಿವಾದದ ಬಳಿಕ ನಾನು ಅಂದೇ ಕ್ಷಮೆ ಕೇಳಿದ್ದೇನೆ. ಈಗ ವೈಯಕ್ತಿಕವಾಗಿಯೂ ಕಲಬುರ್ಗಿ ಡಿಸಿಗೆ ಪತ್ರ ಬರೆದು ಕ್ಷಮೆ ಕೇಳುತ್ತೇನೆ ಎಂಬುದಾಗಿ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಹೈಕೋರ್ಟ್ ಸೂಚನೆಯ ಮೇರೆಗೆ ವಿಚಾರಣೆಗೆ ಹಾಜರಾಗಿದ್ದೆ. ನನ್ನನ್ನು ಅರೆಸ್ಟ್ ಮಾಡಬಾರದು ಎಂಬುದಾಗಿ ಕೋರ್ಟ್ ಹೇಳಿದೆ ಎಂದರು. ನಾನು ದಲಿತರ ಅವಹೇಳನ ಮಾಡಿಲ್ಲ. ಆ ಬಗ್ಗೆ ವೀಡಿಯೋ ಇದೆ. ಕಲಬುರ್ಗಿ ಡಿಸಿಗೂ ನಾನು ಬೈದಿಲ್ಲ ಎಂದು ಹೇಳಿದ್ದೇನೆ. ಧರ್ಮದ ವಿಚಾರವಾಗಿ ನಾನು ಹೇಳಿಕೆಯನ್ನೂ ನೀಡಿಲ್ಲ. ನಾನು ಹೇಳಿಕೆ ನೀಡಿದ ಮರು ದಿನವೇ ಕ್ಷಮೆ ಕೇಳಿದ್ದೇನೆ ಎಂದರು. ಕಲಬುರ್ಗಿ ಡಿಸಿಗೆ ಬೈದಿದ್ದೇನೆ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ನಾನು ಅವರಿಗೆ ವೈಯಕ್ತಿಕವಾಗಿಯೂ ಡಿಸಿಗೆ ಪತ್ರ ಬರೆದು ಕ್ಷಮೆ ಕೇಳುತ್ತೇನೆ. ಕಲಬುರ್ಗಿ ಜಿಲ್ಲಾಧಿಕಾರಿಗೆ ಪತ್ರ ಬರೆದು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.













