Author: kannadanewsnow09

ವಿಜಯಪುರ: ನಾನು ಬಿಜೆಪಿ ಪಕ್ಷ ವಿರೋಧಿಯಲ್ಲ. ನಾನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರೋಧಿ. ಉತ್ತರ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮೋಸ ಮಾಡಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಬಿಜೆಪಿಯನ್ನು ನನ್ನ ತಾಯಿ ಅಂದುಕೊಂಡಿದ್ದೇನೆ. ಹಾಗೆಯೇ ತಿಳಿದುಕೊಂಡಿದ್ದೇನೆ. ನಾನು ಯಾವತ್ತೂ ಬಿಜೆಪಿ ಪಕ್ಷ ವಿರೋಧಿ ನಡೆ ತೋರಿಲ್ಲ. ಬಿಜೆಪಿ ಪಕ್ಷ ವಿರೋಧಿಯೂ ಅಲ್ಲ. ನಾನು ಬಿಎಸ್ ಯಡಿಯೂರಪ್ಪ ವಿರೋಧಿ ಎಂದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಸಿದ್ರೇ ಬೇರೆಯೇ ನಿರ್ಧಾರ ಮಾಡಲಾಗುತ್ತದೆ. ಹಿಂದೂ ಪಕ್ಷ ಕಟ್ಟುವಂತೆ ಜನರಿಂದ ಕರೆ ಬರುತ್ತಿದೆ. ಯಡಿಯೂರಪ್ಪ ಕುಟುಂಬ ವಿರೋಧ ಪಕ್ಷಗಳ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಮಾಡೋದು ಯಾರು ಎಂದು ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. https://kannadanewsnow.com/kannada/man-brutally-assaults-wife-her-sister-with-machetes-on-ugadi-festival/ https://kannadanewsnow.com/kannada/breaking-cbse-releases-new-syllabus-for-class-10-and-12-new-syllabus-for-10th-12th/

Read More

ರಾಯಚೂರು: ಕೌಟುಂಬಿಕ ಕಲಹದಿಂದಾಗಿ ಪತ್ನಿ ಹಾಗೂ ಆಕೆಯ ತಂಗಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪತಿಯೊಬ್ಬ ಪರಾರಿಯಾಗಿರುವಂತ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಏಗನೂರಿನಲ್ಲಿ ಮೊದಲ ಪತ್ನಿಯಿಂದ ದೂರಾಗಿ, ಎರಡನೇ ಮದುವೆಯನ್ನು ತಿಮ್ಮಪ್ಪ ಎಂಬಾತ ಆಗಿದ್ದನು. ಮೊದಲ ಪತ್ನಿ ಪದ್ಮಾವತಿ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ಸಿಟ್ಟಿನಲ್ಲಿ ಯುಗಾದಿ ಹಬ್ಬದ ದಿನದಂದು ಇಂದು ಮನೆಗೆ ನುಗ್ಗಿದಂತ ತಿಮ್ಮಪ್ಪ, ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಆಕೆಯನ್ನು ರಕ್ಷಿಸೋದಕ್ಕೆ ಬಂದಂತ ತಂಗಿ ಭೂದೇವಿಯ ಮೇಲೂ ಹಲ್ಲೆ ಮಾಡಿದ್ದಾನೆ. ಮಚ್ಚಿನಿಂದ ಪತ್ನಿ ಪದ್ಮಾವತಿ ಹಾಗೂ ಆಕೆಯ ಸಹೋದರಿ ಭೂದೇವಿಯ ಮೇಲೆ ಹಲ್ಲೆ ಮಾಡಿದಂತ ತಿಮ್ಮಪ್ಪ, ಅಲ್ಲಿಂದ ಪರಾರಿಯಾಗಿದ್ದಾನೆ. ಕೂಡಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದಂತ ಪದ್ಮಾವತಿ ಹಾಗೂ ಭೂದೇವಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಬ್ಯಾಂಕುಗಳು ಮೇ 1 ರಿಂದ ಪ್ರತಿ ವಹಿವಾಟಿಗೆ 2 ರೂ.ಗಳಿಂದ 23 ರೂ.ಗಳಿಗೆ ಎಟಿಎಂ ನಗದು ಹಿಂಪಡೆಯುವಿಕೆಯನ್ನು ಹೆಚ್ಚಿಸಲು ಅನುಮತಿ ನೀಡಿದೆ. ಕಡ್ಡಾಯವಾದ ಐದು ಉಚಿತ ಮಾಸಿಕ ವಹಿವಾಟುಗಳನ್ನು ಮೀರಿದ ಶುಲ್ಕಗಳು ಅನ್ವಯವಾಗುತ್ತವೆ. ಪ್ರಸ್ತುತ, ಗ್ರಾಹಕರು ಉಚಿತ ವಹಿವಾಟು ಮಿತಿಯನ್ನು ಪೂರ್ಣಗೊಳಿಸಿದ ನಂತರ, ಬ್ಯಾಂಕುಗಳು ಪ್ರತಿ ವಹಿವಾಟಿಗೆ 21 ರೂ.ಗಳನ್ನು ವಿಧಿಸಲು ಅನುಮತಿಸಲಾಗಿದೆ. ಉಚಿತ ವಹಿವಾಟುಗಳನ್ನು ಮೀರಿ, ಗ್ರಾಹಕನಿಗೆ ಪ್ರತಿ ವಹಿವಾಟಿಗೆ ಗರಿಷ್ಠ 23 ರೂ.ಗಳ ಶುಲ್ಕ ವಿಧಿಸಬಹುದು. ಇದು ಮೇ 1, 2025 ರಿಂದ ಜಾರಿಗೆ ಬರಲಿದೆ ಎಂದು RBI ಸುತ್ತೋಲೆಯಲ್ಲಿ ತಿಳಿಸಿದೆ. ಗ್ರಾಹಕರು ತಮ್ಮ ಸ್ವಂತ ಬ್ಯಾಂಕ್ ಸ್ವಯಂಚಾಲಿತ ಟೆಲ್ಲರ್ ಯಂತ್ರಗಳಿಂದ (ATM ಗಳು) ಪ್ರತಿ ತಿಂಗಳು ಐದು ಉಚಿತ ವಹಿವಾಟುಗಳಿಗೆ (ಹಣಕಾಸು ಮತ್ತು ಹಣಕಾಸುೇತರ ವಹಿವಾಟುಗಳನ್ನು ಒಳಗೊಂಡಂತೆ) ಅರ್ಹರಾಗಿರುತ್ತಾರೆ. ಅವರು ಇತರ ಬ್ಯಾಂಕ್ ಎಟಿಎಂಗಳಿಂದ ಉಚಿತ ವಹಿವಾಟುಗಳಿಗೆ (ಹಣಕಾಸು ಮತ್ತು ಹಣಕಾಸುೇತರ ವಹಿವಾಟುಗಳನ್ನು ಒಳಗೊಂಡಂತೆ) ಅರ್ಹರಾಗಿರುತ್ತಾರೆ – ಮೆಟ್ರೋ…

Read More

ಶಿವಮೊಗ್ಗ: ನಾವು ವಿದ್ಯುತ್ ದರವನ್ನು 36 ಪೈಸೆ ಹೆಚ್ಚಿಸಿದ್ದಕ್ಕೆ ಅಬ್ಬಬ್ಬಾ ಬಾಯಿ ಬಡಿದುಕೊಳ್ಳೋ ಬಿಜೆಪಿಗರು, ಮೋದಿ ಅವರು ಟೋಲ್ ದರವನ್ನು ಶೇ.35ರಷ್ಟು ಹೆಚ್ಚಳ ಮಾಡಿದ್ದಾರೆ. ಅದರ ಬಗ್ಗೆ ಒಬ್ಬರೇ ಒಬ್ಬರು ಮಾತನಾಡೋದಿಲ್ವಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಬಿಜೆಪಿಗರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಇಂದು ಸಾಗರದ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ಬರುತ್ತಿದೆ. ಅದಕ್ಕೆ ಪಕ್ಷವನ್ನು ತಯಾರು ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರ ಸಭೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಕೂಡ ಬರುತ್ತಿದೆ. ಪಕ್ಷದ ಅಡಿಯಲ್ಲಿ ಚಿನ್ಹೆ ಇರಲಿದೆ. ಆಗ ನಾವೇ ಬಂದು ಕ್ಯಾನ್ವಾಸ್ ಮಾಡುತ್ತೇವೆ. ನಮ್ಮ ಪಕ್ಷದಿಂದಲೇ ಟಿಕೆಟ್ ಕೊಡುತ್ತೇವೆ ಎಂದರು. https://youtu.be/qfe-ezOeKRs?si=FqEMyeZT0wIYFv0F ತುಮುರಿ ಭಾಗದಲ್ಲಿ ಇಷ್ಟು ವರ್ಷ ಆದರೂ ಟವರ್ ಹಾಕೋದಕ್ಕೆ ಸಾಧ್ಯವಾಗಲಿಲ್ಲ. ಹಲೋ ಅಂದ್ರೆ ಕೇಳಿಸೋದಿಲ್ಲ. ರಸ್ತೆ ಮಾಡಿಸಿಲ್ಲ. ಅಟಲ್ ಬಿಹಾರಿ ವಾಜಪೇಯಿ ಮಾಡಿಸಿದ್ದು ಅಷ್ಟೇ. ಈ ಪಾವಿಗಳು ಎರಡು ವರ್ಷ ಆಯ್ತು ನಮ್ಮ ರಾಜ್ಯಕ್ಕೆ ಒಂದೇ ಒಂದು…

Read More

ಬ್ಯಾಂಕಾಕ್: ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಬಳಿ ಕೇಂದ್ರಬಿಂದುವಾಗಿರುವ 7.7 ತೀವ್ರತೆಯ ಭೂಕಂಪವು ಮಧ್ಯಾಹ್ನ ಸಂಭವಿಸಿತು ಮತ್ತು ನಂತರ 6.4 ತೀವ್ರತೆಯ ಪ್ರಬಲವಾದ ನಂತರದ ಕಂಪನ ಸಂಭವಿಸಿತು. ಸಾವು, ಗಾಯ ಮತ್ತು ವಿನಾಶದ ಸಂಪೂರ್ಣ ಪ್ರಮಾಣವು ತಕ್ಷಣವೇ ಸ್ಪಷ್ಟವಾಗಿಲ್ಲ – ವಿಶೇಷವಾಗಿ ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಮ್ಯಾನ್ಮಾರ್‌ನಲ್ಲಿ. ಇದು ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ ಮತ್ತು ಮಾಹಿತಿಯನ್ನು ಬಿಗಿಯಾಗಿ ನಿಯಂತ್ರಿಸಲಾಗುತ್ತದೆ. ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರದ ಮುಖ್ಯಸ್ಥರು ಶುಕ್ರವಾರ ಸಂಜೆ ದೂರದರ್ಶನದ ಭಾಷಣದಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ ಮತ್ತು 730 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದರು. “ಸಾವಿನ ಸಂಖ್ಯೆ ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗುವ…

Read More

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ತಾಯಿಯೊಂದಿಗೆ ಜಗಳಕ್ಕೆ ಇಳಿದಂತ ಮಗನೊಬ್ಬ, ಅದೇ ಮತ್ತಿನಲ್ಲಿ ಹೆತ್ತಮ್ಮನನ್ನೇ ಹತ್ಯೆಗೈದ ಬೆಚ್ಚಿ ಬೀಳಿಸೋ ಘಟನೆ ಚಿತ್ರದುರ್ಗದ ಹಿರಿಯೂರಿನ ಹುಲಗಲಕುಂಟೆ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆ ಗ್ರಾಮದ ಆರೋಪಿ ಚಿತ್ರಲಿಂಗ(40) ಎಂಬಾತ ತನ್ನ ತಾಯಿ ಮೃತ ಮಹಿಳೆ ಗಂಗಮ್ಮ(65) ಎಂಬುವರ ಜೊತೆಗೆ ಕುಡಿದು ಜಗಳಕ್ಕೆ ಇಳಿದಿದ್ದಾನೆ. ಜಗಳ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ತಾಯಿಯನ್ನೇ ಹೊಡೆದು ಕೊಲೆಗೈದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಆರೋಪಿ ಚಿತ್ರಲಿಂಗನನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಈ ಬಗ್ಗೆ ಹಿರಿಯೂರು ತಾಲ್ಲೂಕು ಘಟಕದ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್ ಅಧ್ಯಕ್ಷ ಪರಮೇಶ್ವರ್ ಮಾತನಾಡಿ, ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆಯಲ್ಲಿ ನಡೆದಿರುವಂತ ಇಂತಹ ದುಷ್ಕೃತ್ಯವು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇದಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಅಕ್ರಮವಾಗಿ ಹಳ್ಳಿಯಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಇಲ್ಲವಾದಲ್ಲಿ ಅಬಕಾರಿ ಇಲಾಖೆಯ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ…

Read More

ಮ್ಯಾನ್ಮಾರ್: ಮ್ಯಾನ್ಮಾರ್ನಲ್ಲಿ ಶುಕ್ರವಾರ ಮಧ್ಯಾಹ್ನ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಥೈಲ್ಯಾಂಡ್ನಾದ್ಯಂತ ನಡುಕ ಉಂಟಾಗಿದ್ದು, ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ ಮತ್ತು 732 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮ್ಯಾನ್ಮಾರ್ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. https://twitter.com/ANI/status/1905566897812505083 ಮ್ಯಾನ್ಮಾರ್ ಮಿಲಿಟರಿ ನೇತೃತ್ವದ ಸರ್ಕಾರವು ನೈಪಿಟಾವ್ ಮತ್ತು ಮಾಂಡಲೆ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಏಕೆಂದರೆ ದೇಶದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ರಕ್ಷಣಾ ಪ್ರಯತ್ನಗಳು ಸವಾಲುಗಳನ್ನು ಎದುರಿಸುತ್ತಿವೆ. 144 ಜನರು ಸಾವನ್ನಪ್ಪಿದ್ದಾರೆ ಮತ್ತು 732 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಜುಂಟಾ ಮುಖ್ಯಸ್ಥರು ಸುದ್ದಿ ಸಂಸ್ಥೆ ಎಎಫ್ಪಿಗೆ ತಿಳಿಸಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಮತ್ತು ಜರ್ಮನಿಯ ಜಿಎಫ್ಜೆಡ್ ಸೆಂಟರ್ ಫಾರ್ ಜಿಯೋಸೈನ್ಸ್ ವರದಿ ಮಾಡಿದಂತೆ, ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್ನ ಎರಡನೇ ಅತಿದೊಡ್ಡ ನಗರವಾದ ಮಾಂಡಲೆ ಬಳಿ 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಮ್ಯಾನ್ಮಾರ್ನ ಆಡಳಿತಾರೂಢ…

Read More

ತುಮಕೂರು: ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ್ದ ಸಂಬಂಧ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ತಮ್ಮ ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ ಡಿಜಿ ಮತ್ತು ಐಜಿಪಿ ಭೇಟಿಯಾಗಿ ದೂರು ನೀಡಿದ್ದರು. ಆ ನಂತ್ರ ತುಮಕೂರು ಎಸ್ಪಿಗೂ ದೂರು ನೀಡಿದ್ದರು. ಈ ದೂರು ಆಧರಿಸಿ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎ1 ಆರೋಪಿಯಾಗಿಸಿ ಸೋಮು, ಎ2 ಭರತ್, ಎ3 ಅಮಿತ್, ಎ4 ಗುಂಡ ಹಾಗೂ ಎ5 ಯತೀಶ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅನಾಮಧೇಯ ಮೂಲಗಳಿಂದ ಆಡಿಯೋ ಸಿಕ್ಕ, ಎಂಎಲ್ಸಿ ರಾಜೇಂದ್ರ ಹತ್ಯೆ ಪ್ರಕರಣ ಬಹಿರಂಗಗೊಂಡಿತ್ತು. ಆರೋಪಿಗಳು ರಾಜೇಂದ್ರ ಸುಫಾರಿಯ ಬಗ್ಗೆ ಆಡಿಯೋದಲ್ಲಿ ಮಾತುಕತೆ ನಡೆಸಿದ್ದರು. ಆರೋಪಿಗಳಾದಂತ ಸೋಮು, ಭರತ್, ಅಮಿತ್, ಗುಂಡ ಹಾಗೂ ಯತೀಶ್ ಮಾತನಾಡಿದ್ದಂತ ಆಡಿಯೋದಲ್ಲಿ ಎಂಎಲ್ಸಿ ರಾಜೇಂದ್ರ ಹತ್ಯೆಗೆ ಸಂಚು ರೂಪಿಸಿದ್ದು ಬಹಿರಂಗವಾಗಿತ್ತು. 70 ಲಕ್ಷಕ್ಕೆ ಡೀಲ್ ಮಾಡಿದ್ದಂತ…

Read More

ಶಿವಮೊಗ್ಗ: ದಿನಾಂಕ 31-03-2025ರಂದು ಸಾಗರ ತಾಲ್ಲೂಕು ಆರ್ಯ ಈಡಿಗರ ಸಂಘಕ್ಕೆ ಬೆಳ್ಳಿ ಹಬ್ಬ. ಈ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ನೂತನ ಈಡಿಗರ ಸಮುದಾಯ ಭವನ, ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅಧ್ಯಕ್ಷ ಬಿ.ಎಂ ಮಂಜಪ್ಪ ಮರಸ ಅವರು, ಸಾಗರ ಪ್ರಾಂತ ಆರ್ಯ ಈಡಿಗರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ನೂತನ ಸಮುದಾಯ ಭವನ, ವಾಣಿಜ್ಯ ಮಳಿಗೆ ಶಂಕುಸ್ಥಾಪನೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾರ್ಚ್.31ರಂದು ಹಮ್ಮಿಕೊಳ್ಳಲಾಗಿದೆ ಎಂದರು. ಮಾರ್ಚ್.31ರಂದು ಬೆಳಿಗ್ಗೆ 10.30ಕ್ಕೆ ವರದಹಳ್ಳಿ ರಸ್ತೆಯಲ್ಲಿ ಈಡಿಗರ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನ ಕಾರ್ಯವನ್ನು ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ವಾಣಿಜ್ಯ ಮಳಿಗೆ ಶಂಕುಸ್ಥಾಪನೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ನೆರವೇರಿಸಲಿದ್ದಾರೆ. ಆ ಬಳಿಕ ಸಭಾ ಕಾರ್ಯಕ್ರಮ ನೆಡೆಯಲಿದೆ ಎಂದು ಹೇಳಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿವೈ ರಾಘವೇಂದ್ರ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಶಿರಸಿ-ಸಿದ್ಧಾಪುರ ಶಾಸಕ…

Read More

ಬೆಂಗಳೂರು: ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು. https://youtu.be/IDxtmYXWGZM ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ಇದೇ ಸಂದರ್ಭದಲ್ಲಿ…

Read More