Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಂಡಿಯಾ ಎನರ್ಜಿ ವೀಕ್ 2025 ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು ಮತ್ತು ರಾಷ್ಟ್ರವು 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸೇರಿಸಲು ಬಯಸಿದೆ ಎಂದು ಹೇಳಿದರು. 2030 ರ ವೇಳೆಗೆ ಸಾಧಿಸಬೇಕಾದ ಇತರ ಹಲವಾರು ಹಸಿರು ಇಂಧನ ಗುರಿಗಳನ್ನು ಪ್ರಧಾನಿ ವಿವರಿಸಿದರು, ಕಳೆದ 10 ವರ್ಷಗಳಲ್ಲಿ ಅತ್ಯುತ್ತಮ ದಾಖಲೆಯನ್ನು ಗಮನಿಸಿದರೆ ಅವು ಮಹತ್ವಾಕಾಂಕ್ಷೆಯ ಆದರೆ ಸಾಧ್ಯ ಎಂದು ಬಣ್ಣಿಸಿದರು. ಕಳೆದ 10 ವರ್ಷಗಳಲ್ಲಿ, ನಾವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದ್ದೇವೆ ಮತ್ತು ನಮ್ಮ ಸೌರ ಸಾಮರ್ಥ್ಯವನ್ನು 32 ಪಟ್ಟು ಹೆಚ್ಚಿಸಿದ್ದೇವೆ. ಭಾರತವು ವಿಶ್ವದ 3 ನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಿಸುವ ರಾಷ್ಟ್ರವಾಗಿದೆ” ಎಂದು ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದರು. ಜಿ 20 ರಾಷ್ಟ್ರಗಳ ನಡುವೆ ಪ್ಯಾರಿಸ್ ಒಪ್ಪಂದದಲ್ಲಿ ನಿಗದಿಪಡಿಸಿದ ಗುರಿಯನ್ನು ಸಾಧಿಸಿದ ಮೊದಲ ದೇಶ ಭಾರತ ಎಂದು ಅವರು ಹೇಳಿದರು. ಪ್ಯಾರಿಸ್ ಒಪ್ಪಂದವು ಹವಾಮಾನ ಬದಲಾವಣೆಯ ಕಾನೂನುಬದ್ಧ ಅಂತರರಾಷ್ಟ್ರೀಯ ಒಪ್ಪಂದವಾಗಿದೆ. ಡಿಸೆಂಬರ್…
ಬೆಂಗಳೂರು: 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ 25-02-2025ರಿಂದ 04-03-2025ರವರೆಗೆ ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ. ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ರಿಂದ ಪಡೆದುಕೊಂಡು, ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಸೂಚಿಸಿದ್ದಾರೆ. ಹೀಗಿದೆ SSLC ಪೂರ್ವ ಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ https://kannadanewsnow.com/kannada/cm-siddaramaiah-puts-forward-these-facts-about-namma-metro-rail-fare-hike/ https://kannadanewsnow.com/kannada/note-if-your-mobile-is-lost-do-this-without-fail/
ಬೆಂಗಳೂರು: ನಮ್ಮ ಮೆಟ್ರೋ ರೈಲು ದರವನ್ನು ಶೇ.47ರಷ್ಟು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಮೆಟ್ರೋ ರೈಲು ದರ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಕೆಲ ವಾಸ್ತವಾಂಶಗಳೊಂದಿಗೆ ಮಾಹಿತಿ ಮುಂದಿಟ್ಟಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು…
ಶಿವಮೊಗ್ಗ: ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಒಂದು ಬಾಲ್ಯ ವಿವಾಹ ಪ್ರಕರಣವನ್ನು ಹಾಟ್ಸ್ಪಾಟ್ ಎಂದು ಪರಿಗಣನೆಗೆ ತೆಗೆದುಕೊಂಡು ಚಟುವಟಿಕೆ ಕೈಗೊಳ್ಳಬೇಕು. ಶಾಶ್ವತ ಪರಿಹಾರ ಒದಗುವಂತಹ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಮುಖಂಡರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಮತ್ತು ಪ್ರಭಾವಿ ವ್ಯಕ್ತಿಗಳ ಸಹಾಯ ತೆಗೆದುಕೊಂಡು ಸಮುದಾಯದಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವಂತಾಗಬೇಕು. ಬಾಲ್ಯ ವಿವಾಹ ತಡೆಯುವಲ್ಲಿ ಶ್ರಮಿಸಿದ ಮುಖಂಡರು, ಪ್ರೇರಕರನ್ನು ಗೌರವಿಸಬೇಕು. ಸ್ಥಳೀಯವಾಗಿ ಕಾರ್ಯವೆಸಗುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸದ್ಬಳಕೆ ಮಾಡಿಕೊಂಡು ಅವರನ್ನೂ ಗೌರವಿಸಬೇಕು. ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಬಾಲ್ಯ ವಿವಾಹ ತಡೆ…
ಕೊಡಗು: ಆಹಾರ ಸರಬರಾಜು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಂತ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ ಶ್ರೀಧರ್ ಮೂರ್ತಿ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕಚೇರಿಗೆ ಬಂದಿದ್ದಂತ ಅವರಿಗೆ ಎದೆನೋವಿನಿಂದ ದಿಢೀರ್ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಶ್ರೀಧರ್ ಮೂರ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಮೃತ ಶ್ರೀಧರ್ ಮೂರ್ತಿ 28 ದಿನಗಳ ಹಿಂದೆಯಷ್ಟೇ ಕೊಡಗಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಲ್ಲದೇ ಕೆಲ ದಿನಗಳಲ್ಲೇ ಅವರು ನಿವೃತ್ತರಾಗಲಿದ್ದರು. ಇದೀಗ ಮೂಲತಃ ಚಿತ್ರದುರ್ಗ ಜಿಲ್ಲೆಯ ಶ್ರೀಧರ್ ಮೂರ್ತಿ ಹೃದಯಾಘಾತದಿಂದ ಕೆಲಸದ ವೇಳೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. https://kannadanewsnow.com/kannada/man-commits-suicide-after-cancelling-marriage/ https://kannadanewsnow.com/kannada/note-if-your-mobile-is-lost-do-this-without-fail/
ಬೆಂಗಳೂರು: ಗ್ರಾಮಾಂತರ ಜಿಲ್ಲೆಯಲ್ಲಿ ಮದುವೆಯನ್ನು ಹುಡುಗಿ ಮನೆಯವರ ಕಡೆಯವರು ಕ್ಯಾನ್ಸಲ್ ಮಾಡಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉತ್ತರ ತಾಲ್ಲೂಕಿನ ದೊಂಬರಹಳ್ಳಿಯಲ್ಲಿ ಬಾಗಲಕೋಟೆ ಮೂಲದ ಯುವಕ ಸಿದ್ದಲಿಂಗಯ್ಯ(29) ಎಂಬಾತನೇ ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯಾಗಿದ್ದಾನೆ. ಬಾಗಲಕೋಟೆ ಮೂಲದ ಯುವತಿ ಜೊತೆಗೆ ಮದುವೆ ನಿಶ್ಚಯವಾಗಿತ್ತು. 15 ದಿನಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಆದರೇ ವಯಸ್ಸಿನ ಕಾರಣವೊಡ್ಡಿ ಯುವತಿಯ ಕಡೆಯವರು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದು ಮನೆಯಲ್ಲಿದ್ದಂತ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಸಿದ್ದಲಿಂಗಯ್ಯ ದೇಹವನ್ನು ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಒಪ್ಪಿಸಲಾಗಿದೆ. https://kannadanewsnow.com/kannada/karnataka-global-investors-meet-begins-investments-in-these-sectors/ https://kannadanewsnow.com/kannada/note-if-your-mobile-is-lost-do-this-without-fail/
ಬೆಂಗಳೂರು: ಇಂದಿನಿಂದ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಗೊಂಡಿದೆ. ಪ್ರಮುಖವಾಗಿ ಈ ಕೆಳಕಂಡ ವಲಯಗಳಲ್ಲಿ ಹೂಡಿಕೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆಈ ಸಮಾವೇಶ ವೇದಿಕೆ ಒದಗಿಸಲಿದೆ. ಈ ಪ್ರಮುಖ ವಲಯಗಳಲ್ಲಿ ಹೂಡಿಕೆ ವೈಮಾಂತರಿಕ್ಷ ಮತ್ತು ರಕ್ಷಣೆ ಎಲೆಕ್ಟ್ರಾನಿಕ್ ಬಿಡಿ ಭಾಗಗಳು ವಿದ್ಯುನ್ಮಾನ ವ್ಯವಸ್ಥೆಯ ವಿನ್ಯಾಸ ಹಾಗೂ ತಯಾರಿಕೆ ಉಗ್ರಾಣ ಹಾಗೂ ಸರಕು ಸಾಗಣೆ ವಿದ್ಯುತ್ ಚಾಲಿತ ವಾಹನಗಳು ಸೆಮಿಕಂಡಕ್ಟರ್ ವಲಯ ವೈದ್ಯಕೀಯ ತಂತ್ರಜ್ಞಾನ, ಸಂಶೋಧನೆ ಹಾಗೂ ಅಭಿವೃದ್ಧಿ ಸಣ್ಣ ಮತ್ತು ಮಧ್ಯಮ ಉದ್ಯಮಗಳು (SME) https://twitter.com/KarnatakaVarthe/status/1889242543012897204 https://kannadanewsnow.com/kannada/note-if-your-mobile-is-lost-do-this-without-fail/ https://kannadanewsnow.com/kannada/shocking-pu-students-get-married-on-whatsapp-app-chatting-photo-goes-viral/
ಬೆಂಗಳೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಷಿಯಲ್ ಮಿಡೀಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಒಂದು ಸಮುದಾಯವನ್ನು ಕೆರಳಿಸಿದೆ. ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದರು. ಈ ಘಟನೆಯಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂಬುದನ್ನು ನಾವು ನಿರ್ಧಾರ ಮಾಡಲು ಆಗುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಮಾಡಿರುತ್ತಾರೆ. ತಪ್ಪು ಮಾಡಿದ್ದರೆ ಪೊಲೀಸರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ಸಂದರ್ಭಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್, ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲು ಕ್ರಮ…
ಬೆಂಗಳೂರು: ನಗರದಲ್ಲಿ ಭಾವ – ಭಾಮೈದನ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ನಡೆದಿದೆ. ಮೆಜೆಸ್ಟಿಕ್ ಸಮೀಪದ ರೈಲ್ವೆ ನಿಲ್ದಾಣ ಬಳಿಯಲ್ಲಿ ಈ ಘಟನೆ ಭಾನುವಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಜೆಸ್ಟಿಕ್ ಬಳಿಯ ರೈಲ್ವೆ ನಿಲ್ದಾಣದ ಬಳಿಯಲ್ಲಿ ರೋಲ್ಡ್ ಗೋಲ್ಡ್ ಜೈನ್ ಗಳನ್ನು ಭಾವ ರಾಮ ಹಾಗೂ ಭಾಮೈದ ವೆಂಕಟೇಶ್ ಮಾರಾಟ ಮಾಡುತ್ತಿದ್ದರು. ಇಬ್ಬರ ನಡುವೆ ಜಗಳ ಉಂಟಾಗಿ ಭಾವ ರಾಮ, ತನ್ನ ಭಾಮೈದನಿಗೆ ಚಾಕುವಿನಿಂದ ಇರಿದಿದ್ದನು. ಚಾಕು ಇರಿತಕ್ಕೆ ಒಳಗಾಗಿದ್ದಂತ ಭಾಮೈದ ವೆಂಕಟೇಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಮೂಲದವರಾಗಿದ್ದಾರೆ. ಭಾಮೈದ ವೆಂಕಟೇಶ್ ಸಾವಿನ ಬಳಿಕ ಭಾವ ರಾಮು ತಲೆಮರೆಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/applications-invited-for-distribution-of-vegetable-seed-kits-2/ https://kannadanewsnow.com/kannada/note-if-your-mobile-is-lost-do-this-without-fail/
ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಶಿಕಾರಿಪುರ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್ನ್ನು ಪಡೆಯುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆ ಕಚೇರಿಯನ್ನು ಹಾಗೂ ಮೊ.ಸಂ. : ಕಸಬಾ-7019808174, ಅಂಜನಾಪುರ-8151810552, ಹೊಸೂರು-6363095898, ಉಡುಗಣೆ-9108548454, ತಾಳಗುಂದ-7975515575 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/note-if-your-mobile-is-lost-do-this-without-fail/ https://kannadanewsnow.com/kannada/shocking-pu-students-get-married-on-whatsapp-app-chatting-photo-goes-viral/














