Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಂಡೀಪುರ ಮೀಸಲು ಅರಣ್ಯದಲ್ಲಿ ರಾತ್ರಿ 9ರವರೆಗೆ ಸಾರ್ವಜನಿಕ ವಾಹನಗಳಿಗೆ, ಆ ನಂತ್ರ ಅರಣ್ಯ ಇಲಾಖೆಯಿಂದಲೇ 2 ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿರುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ಅರಣ್ಯ ಅಪರಾಧಗಳ ತಡೆಗಾಗಿ ಗರುಡಾಕ್ಷಿ ಆನ್ ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ಅವರು, ಕೇರಳದಿಂದ ನಮ್ಮ ರಾಜ್ಯಕ್ಕೆ ಬಂಡೀಪುರ ಅರಣ್ಯದ ಮೂಲಕ ಬರಲು ರಾತ್ರಿ 9 ರವರೆಗೆ ಅವಕಾಶವನ್ನು ನೀಡಲಾಗಿದೆ. ಅಲ್ಲದೇ ರಾತ್ರಿ 9ರ ನಂತ್ರ ಎರಡು ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ವನ್ಯ ಜೀವಿ ಸಂರಕ್ಷಣೆ ಆಗಬೇಕು. ಉಭಯ ರಾಜ್ಯಗಳ ಸಂಬಂಧ ಕೂಡ ಉಳಿಯಬೇಕು ಎಂದರು. ಇದೇ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆ ಗರುಡಾಕ್ಷಿ ತಂತ್ರಾಂಶ ಬಿಡುಗಡೆ ಮಾಡಿದರು. ಈ ಬಳಿಕ ಮಾತನಾಡಿದ ಅವರು, ಅರಣ್ಯ ಅಪರಾಧ ಪ್ರಕರಣಗಳ ನಿರ್ವಹಣೆಗೆ ಆನ್ ಲೈನ್ ವೇದಿಕೆಯಾಗಿದೆ. ಇವತ್ತಿಗೆ ಅನುಗುಣವಾಗಿ ಅರಣ್ಯ ಇಲಾಖೆಯಲ್ಲಿ ಕೆಲ ಸುಧಾರಣೆ ತರುತ್ತಿದ್ದೇವೆ. ದಿನದಿಂದ ದಿನಕ್ಕೆ ಅರಣ್ಯ ಅಪರಾಧಗಳು ಹೆಚ್ಚಾಗುತ್ತಿದೆ. ಭೂಮಿ ಬೆಲೆ ಜಾಸ್ತಿ ಆಗ್ತಿರೋದ್ರಿಂದ ಅಪರಾಧ ಹೆಚ್ಚು. ಒತ್ತುವರಿಗಳು…
ಬೆಂಗಳೂರು: ಕೊಡಗು ಸೈನಿಕ ಶಾಲೆಯಲ್ಲಿ 6ನೇ ತರಗತಿ(ಹುಡುಗ ಮತ್ತು ಹುಡುಗಿಯರು) ಹಾಗೂ 9 ನೇ ತರಗತಿ(ಹುಡುಗರು ಮಾತ್ರ)ಯ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದ್ದು ಜ.13 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಮಾತ್ರ ಸಲ್ಲಿಸಬಹುದು. ಹಾಗೂ ಲಿಖಿತ ಪರೀಕ್ಷೆಯ ದಿನಾಂಕವನ್ನು ಎನ್ಟಿಎ ಜಾಲತಾಣದಲ್ಲಿ ನಂತರ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಎಂಬ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ. https://kannadanewsnow.com/kannada/at-least-95-killed-over-130-injured-in-tibet-earthquake/ https://kannadanewsnow.com/kannada/salman-khan-upgrades-security-of-his-galaxy-apartment-with-bulletproof-windows-report/
ಟಿಬೆಟ್: ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸೇರಿದಂತೆ ಆರು ಭೂಕಂಪಗಳು ಟಿಬೆಟ್ನಲ್ಲಿ ಮಂಗಳವಾರ ಒಂದು ಗಂಟೆಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ. 130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತ, ನೇಪಾಳ ಮತ್ತು ಭೂತಾನ್ ನ ಅನೇಕ ಪ್ರದೇಶಗಳಲ್ಲಿ ಭೂಕಂಪಗಳು ಕಟ್ಟಡಗಳನ್ನು ನಡುಗಿಸಿದವು ಎಂಬುದಾಗಿ ವರದಿಯಾಗಿದೆ. ಭೂಕಂಪದಲ್ಲಿ ಟಿಬೆಟ್ನ ಶಿಗಾಟ್ಸೆ ಪ್ರದೇಶದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. 130 ಮಂದಿ ಗಾಯಗೊಂಡಿದ್ದಾರೆ ಎಂದು ಚೀನಾದ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಭೂಕಂಪದ ಕೇಂದ್ರಬಿಂದುವಿನ ಬಳಿ ಹಲವಾರು ಕಟ್ಟಡಗಳು ಕುಸಿದಿವೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. “ಡಿಂಗ್ರಿ ಕೌಂಟಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಬಹಳ ಬಲವಾದ ಭೂಕಂಪನವನ್ನು ಅನುಭವಿಸಿವೆ ಮತ್ತು ಕೇಂದ್ರಬಿಂದುವಿನ ಬಳಿಯ ಅನೇಕ ಕಟ್ಟಡಗಳು ಕುಸಿದಿವೆ” ಎಂದು ಚೀನಾದ ಸರ್ಕಾರಿ ಪ್ರಸಾರಕ ಸಿಸಿಟಿವಿ ತಿಳಿಸಿದೆ. https://twitter.com/XHNews/status/1876492717213245521 ಶಿಗಟ್ಸೆ 800,000 ಜನರಿಗೆ…
ಬೆಂಗಳೂರು : ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸಿನಿಮಾಸಕ್ತರಿಗೆ ಸುವರ್ಣಾವಕಾಶ ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಸಾಮಾಜಿಕ ನ್ಯಾಯ ಎಂಬ ಥೀಮ್ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು . ಈ ಬಾರಿಯೂ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್ ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ: ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಸ್ವತ್ತು ಅಕ್ರಮವಾಗಿ ಆಕ್ರಮಿಸಿಕೊಳ್ಳೋದು, ಮಾರಾಟ ಮಾಡೋದು, ಕಬಳಿಸೋದು, ಸ್ವಾಧೀನ ಮಾಡೋದು ಅಪರಾಧ. ಆ ಎಲ್ಲಾ ಅಪರಾಧಗಳಿಗೆ ಸಾರ್ವಜನಿಕರಿಗೆ ಏನೆಲ್ಲ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎನ್ನುವ ಬಗ್ಗೆ ಉಪಯುಕ್ತ ಮಾಹಿತಿ ಮುಂದಿದೆ ಓದಿ. ಈ ಸಂಬಂಧ ಕರ್ನಾಟಕ ಭೂ ಕಂದಾಯ ಅಧಿನಿಯ 1964ರ 192-ಎ ಅಡಿಯಲ್ಲಿ ಸರ್ಕಾರಿ ಸ್ವತ್ತಿನ ಕುರಿತಂತೆ ಮಹತ್ವದ ಮಾಹಿತಿ ನೀಡಲಾಗಿದೆ. ಈ ಕಾಯ್ದೆಯಲ್ಲಿ ಏನೇ ಒಳೊಳಗೊಂಡಿದ್ದರೂ ಅಥವಾ ನಿಯಮಗಳನ್ನು ಏನೇ ಇದ್ದರೂ ಯಾವನೊಬ್ಬ ವ್ಯಕ್ತಿ, ಈ ಕೆಳಗಿನ ಪಟ್ಟಿ ಕಲಂ(2)ರಲ್ಲಿ ನಿರ್ದಿಷ್ಟ ಪಡಿಸಲಾದ ಅಪರಾಧ ಎಸಗಿದರೇ ನ್ಯಾಹಿಕ ದಂಡಾಧಿಕಾರಿಗಳು ಪ್ರಥಮ ದರ್ಜೆಯವರಿಂದ ವಿಚಾರಣೆ ನಡೆಸಿ ಈ ಕೆಳಗಿನಂತೆ ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ. ಸರ್ಕಾರಿ ಸ್ವತ್ತನ್ನು ಅಕ್ರಮವಾಗಿ ಆಕ್ರಮಿಸಿ, ಸರ್ಕಾರಿ ಸ್ವತ್ತೆಂದು ಗೊತ್ತಿದ್ದು ಹೊಂದಿದ್ದರೇ, ಪರಂತು ಈ ಮೇಲ್ಕಂಡ ಉಪಬಂಧವು ಜಮ್ಮಾ ಕೊಡಗು ಜಿಲ್ಲೆಯಲ್ಲಿನ ಭಾನೆ ಸ್ವತ್ತುಗಳು ಮತ್ತು ಕಲಮು 94ಎ, 94ಬಿ ಮತ್ತು 94ಸಿ ರಡಿಯಲ್ಲಿ ಸ್ಥಾಪಿಸಲಾದ ಸಮಿತಿಗಳ ಮುಂದೆ ಕ್ರಮಬದ್ಧಗೊಳಿಸಲು…
ಬೆಂಗಳೂರು: ನಗರದ ಮೆಜೆಸ್ಟಿಕ್ ನಲ್ಲಿ ಆಂಧ್ರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದಂತೆ ಬಸ್ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವಂತ ಟರ್ಮಿನಲ್-3ರಲ್ಲಿ ಆಂಧ್ರ ಸಾರಿಗೆ ಬಸ್ ನಿಲ್ಲಿಸಲಾಗಿತ್ತು. ಈ ಟರ್ಮಿನಲ್-3ರಲ್ಲಿ ಆಂಧ್ರ ಸಾರಿಗೆ ಬಸ್ ಗೆ ಒರಗಿ ಬೆಳಗಾವಿ ಜಿಲ್ಲೆಯ ಖಾನಾಪುರದ ಭೂಷಣ್ ಪಾಟೀಲ್(30) ಎಂಬಾತ ನಿಂತಿದ್ದನು. ಬಸ್ಸಿಗೆ ಒರಗಿ ನಿಂತಿರುವಂತ ಭೂಷಣ್ ಪಾಟೀಲ್ ಗಮನಿಸದಂತ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಚಾಲಕ ಬಸ್ ಅನ್ನು ಚಾಲನೆ ಮಾಡಿಕೊಂಡು ಹೊರಟಾಗ ಕಳಗೆ ಬಿದ್ದಂತ ಆತನ ಮೇಲೆ ಬಸ್ ಹರಿದಿದೆ. ಈ ಹಿನ್ನಲೆಯಲ್ಲಿ ಭೂಷಣ್ ಪಾಟೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/over-15-labourers-feared-trapped-in-assam-coal-mine-flooded/ https://kannadanewsnow.com/kannada/list-of-winners-of-state-level-youth-festival-competition-announced/
ದಾವಣಗೆರೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯಲ್ಲಿ ಜನವರಿ 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಗಳ ವಿಜೇತರ ವಿವರ ಪ್ರಕಟಿಸಲಾಗಿದೆ. ಘೋಷಣೆ ಸ್ಪರ್ಧೆಯಲ್ಲಿ; ಬೆಂಗಳೂರು ನಗರ ಜಿಲ್ಲೆಯ ಚಂದನ್ ಎಂ ನಾಯ್ಕ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ ವರುಣ್ ಡಿ. ಆರ್ಯ ದ್ವಿತೀಯ ಸ್ಥಾನ, ಹಾಸನದ ದೇಶರಾಜ್ ಪರಿಪೂರ್ಣ ತೃತೀಯ ಸ್ಥಾನ ಪಡೆದಿರುತ್ತಾರೆ. ಕವನ ರಚನಾ ಸ್ಪರ್ಧೆ; ಬೆಳಗಾವಿಯ ಶಾಂಭವಿ ಕುಶಪ್ಪ ತೇರ್ಲಿ ಪ್ರಥಮ ಸ್ಥಾನ, ಹಾಸನದ ಶೃತಿ ಎಸ್ ರಾಜ್ ದ್ವಿತೀಯ ಸ್ಥಾನ, ಉತ್ತರ ಕನ್ನಡದ ಅಸ್ಪಿಯಾ ಇರ್ಶಾದ್ ಅಹಮದ್ ಶೇಕ್ ತೃತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆ; ಗದಗ ವಿನುತ ಎನ್.ಅಕ್ಕಸಾಲಿಗ ಪ್ರಥಮ ಸ್ಥಾನ, ದಾವಣಗೆರೆಯ ಕಾರ್ತಿಕ್ ಆಲೂರು ದ್ವಿತೀಯ ಸ್ಥಾನ, ಉತ್ತರ ಕನ್ನಡದ ಪ್ರಶಾಂತ ಬಾರುಗೌಡ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಕಥೆ ಬರೆಯುವ ಸ್ಪರ್ಧೆ: ಹಾಸನದ ತೀರ್ಥ ಪೂವಯ್ಯ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ…
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( Indian Space Research Organisation ISRO) ಸೋಮವಾರ ತನ್ನ ಪ್ರಮುಖ ಬಾಹ್ಯಾಕಾಶ ಡಾಕಿಂಗ್ ಪ್ರಯೋಗ (Space Docking Experiment – SpaDeX mission) ಕಾರ್ಯಾಚರಣೆಯನ್ನು ಜನವರಿ 9 ಕ್ಕೆ ಒಂದೆರಡು ದಿನಗಳವರೆಗೆ ಮುಂದೂಡಿದೆ ಎಂದು ಹೇಳಿದೆ. ಯಶಸ್ವಿ ಡಾಕಿಂಗ್ ಪ್ರಯೋಗವು ಭಾರತವನ್ನು ಯುಎಸ್, ರಷ್ಯಾ ಮತ್ತು ಚೀನಾದ ನಂತರ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ನಾಲ್ಕನೇ ದೇಶವನ್ನಾಗಿ ಮಾಡುತ್ತದೆ. ಈ ಉಪಗ್ರಹವನ್ನು ಡಿಸೆಂಬರ್ 30 ರಂದು ಉಡಾವಣೆ ಮಾಡಲಾಯಿತು. ಡಾಕಿಂಗ್ ಅನ್ನು ಆರಂಭದಲ್ಲಿ ಜನವರಿ 7 ರಂದು ಯೋಜಿಸಲಾಗಿತ್ತು. “ನೆಲದ ಮೇಲೆ ಕೆಲವು ಸಿಮ್ಯುಲೇಶನ್ಗಳನ್ನು ಮಾಡಿದ ನಂತರ ನಿಖರತೆಯನ್ನು ಸುಧಾರಿಸಲು ಇದನ್ನು ಮಾಡಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://twitter.com/isro/status/1876191202967785774 ಉಪಗ್ರಹವು ತನ್ನ ಡಾಕಿಂಗ್ ರಿಂಗ್ ಅನ್ನು ವಿಸ್ತರಿಸುವ ವೀಡಿಯೊವನ್ನು ಬಾಹ್ಯಾಕಾಶ ಸಂಸ್ಥೆ ಬಿಡುಗಡೆ ಮಾಡಿದೆ. ವಿಸ್ತೃತ ಡಾಕಿಂಗ್ ರಿಂಗ್ ಎರಡೂ ಬಾಹ್ಯಾಕಾಶ ನೌಕೆಗಳು ಬಾಹ್ಯಾಕಾಶದಲ್ಲಿ ಸಂಪರ್ಕಿಸುವ ಪ್ರದೇಶವಾಗಿದೆ. ಪ್ರಯೋಗಕ್ಕಾಗಿ ಡಾಕಿಂಗ್ ಕಾರ್ಯವಿಧಾನವು ಆಂಡ್ರೊಜಿನಸ್ ಆಗಿದೆ…
ಗುವಾಹಟಿ: ಅಸ್ಸಾಂನ ಗುಡ್ಡಗಾಡು ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಬೆಳಿಗ್ಗೆಯಿಂದ ಕನಿಷ್ಠ 15 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ರಾಜ್ಯ ಸರ್ಕಾರವು ಸೇನೆಯ ಸಹಾಯವನ್ನು ಕೋರಿದೆ. ಪ್ರವಾಹಕ್ಕೆ ಸಿಲುಕಿದ ಕಲ್ಲಿದ್ದಲು ಗಣಿಯೊಳಗೆ ಸಿಕ್ಕಿಬಿದ್ದ ವ್ಯಕ್ತಿಗಳ ನಿಖರ ಸಂಖ್ಯೆಯನ್ನು ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲವಾದರೂ, ಜಿಲ್ಲಾಡಳಿತದ ಮೂಲಗಳು ಈ ಸಂಖ್ಯೆ 15 ಆಗಿರಬಹುದು ಎಂದು ತಿಳಿಸಿವೆ. “ಪ್ರಾಥಮಿಕ ಮಾಹಿತಿಯ ಪ್ರಕಾರ ಅವರು ಅಲ್ಲಿ ಕೆಲಸ ಮಾಡುತ್ತಿದ್ದಾಗ ಗಣಿಯಲ್ಲಿ ಇದ್ದಕ್ಕಿದ್ದಂತೆ ಪ್ರವಾಹ ಉಂಟಾಯಿತು” ಎಂದು ಮೂಲಗಳು ತಿಳಿಸಿವೆ. ಘಟನೆ ನಡೆದ ಸ್ಥಳವನ್ನು ಉಮ್ರಾಂಗ್ಸೊ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಕಿಲೋ ಎಂದು ಕರೆಯಲಾಗುತ್ತದೆ. “ಈ ಸ್ಥಳವು ತುಂಬಾ ಒಳಾಂಗಣವಾಗಿದೆ” ಎಂದು ಅಧಿಕಾರಿ ಹೇಳಿದರು. ಗಣಿಯಿಂದ ಹೊರಬರುವಲ್ಲಿ ಯಶಸ್ವಿಯಾದ ಕೆಲವು ಕಾರ್ಮಿಕರು ಗಣಿ ಮಾಲೀಕರು ಮತ್ತು ಸ್ಥಳೀಯ ಪೊಲೀಸರಿಗೆ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯನ್ನು ದೃಢಪಡಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಕ್ಷಣಾ ಕಾರ್ಯಾಚರಣೆ ನಡೆಸಲು ರಾಜ್ಯ ಮತ್ತು…
ದಾವಣಗೆರೆ: ಗ್ಯಾಸ್ ಸಿಲಿಂಡರ್ ಲೀಕ್ ನಂತ್ರ ಬೆಂಕಿ ಕಾಣಿಸಿಕೊಂಡು, ಸ್ಪೋಟಗೊಂಡ ಪರಿಣಾಮ ಇಡೀ ಮನೆಯ ಹೊತ್ತಿ ಉರಿದಿರುವ ಘಟನೆ ಚನ್ನಗಿರಿಯಲ್ಲಿ ನಡೆದಿದೆ. ಚನ್ನಗಿರಿಯ ಚನ್ನೇಶಪುರ ಗ್ರಾಮದಲ್ಲಿ ಸಿಲಿಂಡರ್ ಲೀಕ್ ನಿಂದ ಮನೆಯಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡು ಮನೆಯಲ್ಲಿದ್ದಂತ ರೈತ ಕಾಶಪ್ಪ ಅವರ ಪತ್ನಿ, ಮಗ ಮನೆಯಿಂದ ಹೊರ ಓಡಿ ಬಂದಿದ್ದಾರೆ. ರೈತ ಕಾಶಪ್ಪ ಪತ್ನಿ, ಪುತ್ರ ಮನೆಯಿಂದ ಹೊರ ಬಂದ ಎರಡೇ ನಿಮಿಷದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಪರಿಣಾಮ ರೈತ ಕಾಶಪ್ಪ ಅವರ ಮನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟ ಕರಕಲಾಗಿದೆ. ಗ್ಯಾಸ್ ಸಿಲಿಂಡರ್ ನಿಂದ ಉಂಟಾದಂತ ಸ್ಪೋಟದ ಬೆಂಕಿಯಲ್ಲಿ ರೈತ ಕಾಶಪ್ಪ ಅವರ ಮನೆಯಲ್ಲಿದ್ದಂತ ವಸ್ತು, ಅಪಾರ ಪ್ರಮಾಣದ ದವಸ ಧಾನ್ಯಗಳು ಬೆಂಕಿಗೆ ಆಹುತಿಯಾಗಿದ್ದಾವೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಚನ್ನಗಿರಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂಡಿಸಲು ಹರಸಾಹಸ ಪಡುತ್ತಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bindu-elected-president-of-sagar-taluk-level-childrens-literary-meet/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/











