Author: kannadanewsnow09

ತಮಿಳುನಾಡು: “ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಕೇಳಿದಾಗ, “ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ?” ಎಂದು ಹೇಳಿದರು. ನಾಯಕತ್ವ ಗುಣ ಬೆಳೆಯುತ್ತದೆ “ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ನನಗೆ ತುಂಬಾ ಸಂತೋಷವಾಯಿತು. ನಾನು ಸಹ ನನ್ನ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಮಾನವೀಯತೆ ಮತ್ತು ಶಿಸ್ತನ್ನು ಇಲ್ಲಿಂದ ವಿದ್ಯಾರ್ಥಿಗಳು ಕಲಿಯಬಹುದು. ಜೊತೆಗೆ ನಾಯಕತ್ವ ಗುಣವನ್ನು ಇದು ಬೆಳೆಸುತ್ತದೆ. ಯುವ ಜನತೆಯ ವ್ಯಕ್ತಿತ್ವ ಇದರಿಂದ ಗಟ್ಟಿಯಾಗುತ್ತದೆ. ತಮಿಳುನಾಡು ಸರ್ಕಾರ ಅಚ್ಚುಕಟ್ಟಾಗಿ ಈ…

Read More

ಬೆಂಗಳೂರು :- ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ ಎಂದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಸಭೆ ಕರೆಯಲಾಗಿದೆ‌. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ಸಹಾಯವಾಣಿಯನ್ನು ಆರಂಭಿಸಲಾಗುವುದು. ಸಭೆಯಲ್ಲಿ ಅಂತಿಮವಾದರೆ ನಾಳೆ ಕ್ಯಾಬಿನೆಟ್ ಮುಂದೆ ತರುತ್ತೇವೆ ಎಂದು ಹೇಳಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿಗೆ ನೀಡುವಂತೆ ಕೇಳುತ್ತಿದ್ದೇವೆ. ತುಮಕೂರಿನ ಭಾಗದಲ್ಲಿ ನಿರ್ಮಾಣವಾದರೆ ಉತ್ತರ ಕರ್ನಾಟಕ ಭಾಗದ 21 ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಈಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕು ಸಂಪರ್ಕವಾಗುತ್ತದೆ ಎಂದರು. ತುಮಕೂರುವರೆಗೆ ಮೆಟ್ರೋ ಯೋಜನೆ ಡಿಪಿಆರ್ ಇನ್ನು ಅಂತಿಮವಾಗಿಲ್ಲ. ಹೈದ್ರಾಬಾದ್ ಕಂಪನಿಗೆ…

Read More

ಸುತ್ತೂರು: ಇಂದು ಎಲ್ಲ ವಸ್ತುಗಳಿಗೆ ಎಂ.ಆರ್.ಪಿ. ಇದೆ. ಆದರೆ ರೈತರು ಕಷ್ಟಪಟ್ಟು ಬೆಳೆದ ಫಸಲಿಗೆ ನಿಶ್ಚಿತ ದರ ನಿಗದಿ ಆಗಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ರೈತರು ಬೆಳೆವ ಎಲ್ಲ ಬೆಳೆಗೆ ನಿಶ್ಚಿತ ದರ ನಿಗದಿಗೆ ಕಾಯಿದೆ ತರಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಶಿವಯೋಗಿ ದೇಶಿಕೇಂದ್ರ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವದ ಭಾಗವಾಗಿ ಕೃಷಿ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಅನ್ನದಾತನ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಸಿಗಲೇಬೇಕು ಎಂಬುದು ತಮ್ಮ ಅಭಿಪ್ರಾಯ ಎಂದರು. ನಮ್ಮ ದೇಶ ಸ್ವಾತಂತ್ರ್ಯ ಬಂದ ತರುಣದಲ್ಲಿ ಆಹಾರ ಸಮಸ್ಯೆ ಎದುರಿಸುತ್ತಿತ್ತು. ಆದರೆ ಇಂದು ದೇಶದ 140 ಕೋಟಿ ಜನರಿಗೆ ಆಹಾರ ಒದಗಿಸುವುದರ ಜೊತೆಗೆ ಹೆಚ್ಚುವರಿ ಆಹಾರ ಧಾನ್ಯವನ್ನು ರಫ್ತು ಮಾಡುವ ಸಾಮರ್ಥ್ಯ ಪಡೆದಿದೆ ಎಂದರೆ ಅದಕ್ಕೆ ಕರ್ಮಯೋಗಿಗಳು, ಕಾಯಕಯೋಗಿಗಳಾದ ರೈತರೇ ಕಾರಣ ಎಂದರು. ಇಂದು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವಂತ 5,000 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶೀಘ್ರವೇ ಖಾಲಿ 5000 ಹುದ್ದೆ ಭರ್ತಿ ಮಾಡಿಕೊಳ್ಳಲಾಗುತ್ತದೆ ಅಂತ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ತಿಳಿಸಿದ್ದಾರೆ. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1884177539188584559

Read More

ಬೆಂಗಳೂರು: ದಿನಾಂಕ 13-02-2025 ಮತ್ತು 14-02-2025ರಂದು ಅಂತರಾಷ್ಟ್ರೀಯ ದ್ವೈವಾರ್ಷಿಕ ಏರ್ ಶೋ ಕಾರ್ಯಕ್ರಮ ಯಲಹಂಕದ ಏರ್ ಬೇಸ್ ನಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಎರಡು ದಿನ ಯಲಹಂಕದ ಸುತ್ತಮುತ್ತಲಿನ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 13-02-2025 ಮತ್ತು 14-02-2025 ರಂದು ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಏರೋ ಇಂಡಿಯಾ: ಏಷ್ಯಾದ ಅತಿ ದೊಡ್ಡ ಏರ್ ಶೋ ನಡೆಯಲಿದ್ದು, ಸದರಿ ಶೋ ವನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯ ಸಾರ್ವಜನಿಕರು ಮತ್ತು ಗಣ್ಯರು ಪದರ್ಶನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ, ಮುಂಜಾಗ್ರತೆಯ ಕ್ರಮವಾಗಿ ಸದರಿ ದಿನಾಂಕಗಳಂದು Air Force Station, ಯಲಹಂಕದ ಸುತ್ತಮುತ್ತಲಿನ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ತರಗತಿಗಳನ್ನು ರದ್ದುಪಡಿಸುವಂತೆ ಕ್ರಮವಹಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/are-there-cockroaches-lizards-and-ants-in-your-house-just-do-this-elimination-is-guaranteed/ https://kannadanewsnow.com/kannada/cauvery-water-tariff-to-be-hiked-in-bengaluru-soon-dk-shivakumar/

Read More

ದಕ್ಷಿಣ ಕೊರಿಯಾ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪ್ರಯಾಣಿಕರ ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ 176 ಜನರನ್ನು ಸ್ಥಳಾಂತರಿಸಲಾಗಿದೆ. ಆಗ್ನೇಯ ಬುಸಾನ್ ನ ಗಿಮ್ಹೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾಂಗ್ ಕಾಂಗ್ ಗೆ ಹಾರಲು ಏರ್ ಬಸ್ ಎ 321 ವಿಮಾನವು ಸಿದ್ಧವಾಗಿತ್ತು ಆದರೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆಯ ಪ್ರಕಾರ, ಸ್ಥಳಾಂತರಿಸುವ ಸಮಯದಲ್ಲಿ ಮೂವರು ಸ್ವಲ್ಪ ಗಾಯಗೊಂಡಿದ್ದಾರೆ. ಆದರೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. 169 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಸಾರಿಗೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. https://twitter.com/aviationbrk/status/1884242617027678545 ಆದಾಗ್ಯೂ, ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳುವುದನ್ನು ಹೊರತುಪಡಿಸಿ ಬೆಂಕಿಯ ಕಾರಣವನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಕಳೆದ ತಿಂಗಳು ಡಿಸೆಂಬರ್ 29 ರಂದು ಥೈಲ್ಯಾಂಡ್ನಿಂದ ಮುವಾನ್ಗೆ ತೆರಳುತ್ತಿದ್ದ ಜೆಜು ಏರ್ ಬೋಯಿಂಗ್ 737-800 ವಿಮಾನವು ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದ ನಂತರ ಅಪಘಾತಕ್ಕೀಡಾಗಿ ಫೈರ್ಬಾಲ್ಗೆ ಸ್ಫೋಟಗೊಂಡಾಗ ಈ ದುರಂತ ಅನುಭವಿಸಿತು. ವಿಮಾನದಲ್ಲಿದ್ದ…

Read More

ನವದೆಹಲಿ : ‘ಚಾಟ್ ಜಿಪಿಟಿಯನ್ನು ಖಂಡಿತವಾಗಿಯೂ ಬಳಸಿ. ಆದರೆ ನಾವು ಕೃತಕ ಬುದ್ಧಿಮತ್ತೆಯಿಂದ ಅಲ್ಲ ನಮ್ಮ ಸ್ವಂತ ಬುದ್ಧಿವಂತಿಕೆಯಿಂದ ಮುಂದುವರೆಯುತ್ತೇವೆ. ನೀವೂ ನಿಮ್ಮ ಸ್ವಂತ ಬುದ್ಧಿಯಿಂದ ಮುಂದೆ ಸಾಗಬಹುದು ಎಂಬುದನ್ನು ನೆನಪಿಡಿ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪಂಡಿತ್ ದೀನ್ ದಯಾಳ್ ಎನರ್ಜಿ ಯೂನಿವರ್ಸಿಟಿ (ಪಿಡಿಇಯು) ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ಅವರು ಕೃತಕ ಬುದ್ಧಿಮತ್ತೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ನಾನು ನಮ್ಮ ಯುವ ವಿದ್ಯಾರ್ಥಿಗಳಿಗೆ ಒಂದು ಸಲಹೆ ನೀಡಲು ಬಯಸುತ್ತೇನೆ. ಕೃತಕ ಬುದ್ಧಿಮತ್ತೆಯನ್ನು ಸಾಧನವಾಗಿ ಬಳಸುವಲ್ಲಿ ಒಬ್ಬರು ಪ್ರವೀಣರಾಗಿರಬೇಕು ಆದರೆ ನಿಮ್ಮ ಬುದ್ಧಿವಂತಿಕೆಯನ್ನು ಬಳಸುವುದನ್ನು ನಿಲ್ಲಿಸಬೇಡಿ. ನೀವು ಈ ವಿಶ್ವವಿದ್ಯಾಲಯದಿಂದ ಹೊರಹೋದ ತಕ್ಷಣ, ನೀವು ಇನ್ನೂ ದೊಡ್ಡದಾದ ‘ಯೂನಿವರ್ಸಿಟಿ ಆಫ್ ಲೈಫ್’ ನಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಲ್ಲಿ ಕ್ಯಾಂಪಸ್ ಇರುವುದಿಲ್ಲ, ತರಗತಿ ಇರುವುದಿಲ್ಲ ಮತ್ತು ಬೋಧನಾ ಶಿಕ್ಷಕರು ಇರುವುದಿಲ್ಲ. ನೀವು ನಿಮ್ಮ ಸ್ವಂತ ಜೀವನದಲ್ಲಿ ಮುಂದೆ ಸಾಗಲು ಸಾಧ್ಯವಾಗುತ್ತದೆ’…

Read More

ನವದೆಹಲಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಲಕ್ಷಾಂತರ ಭಕ್ತರಿಗೆ ಸುಗಮ ಮತ್ತು ಅನುಕೂಲಕರ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಭಾರಿ ಪ್ರಯತ್ನಗಳನ್ನು ಕೈಗೊಂಡಿದೆ. ಪ್ರಯಾಗ್ ರಾಜ್ ರೈಲ್ವೆ ನಿಲ್ದಾಣದಿಂದ ಪ್ರತಿ ನಾಲ್ಕು ನಿಮಿಷಕ್ಕೊಂದು ವಿವಿಧೆಡೆಗೆ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಸಿಇಒ ಸತೀಶ್ ಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಹಾ ಕುಂಭಮೇಳದ ಅಭೂತಪೂರ್ವ ಯಾತ್ರಾರ್ಥಿಗಳ ಒಳಹರಿವನ್ನು ಸರಿದೂಗಿಸಲು ರೈಲ್ವೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. ಈ ಪ್ರಯತ್ನಗಳ ಭಾಗವಾಗಿ, ಭಾರತೀಯ ರೈಲ್ವೆ ಜನವರಿ 14 ರಂದು 132 ರಿಂದ 135 ವಿಶೇಷ ರೈಲುಗಳನ್ನು ಓಡಿಸಿದೆ ಮತ್ತು 2025 ರ ಮಹಾ ಕುಂಭ ಮೇಳದ ಅತ್ಯಂತ ಶುಭ ದಿನವಾದ ಮುಂಬರುವ ಮೌನಿ ಅಮಾವಾಸ್ಯೆಗೆ ರೈಲು ಸೇವೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲು ನಿರ್ಧರಿಸಿದೆ. ಭಕ್ತರ ಬೃಹತ್ ಒಳಹರಿವನ್ನು ನಿರ್ವಹಿಸಲು ರೈಲ್ವೆ ಈ ಸಂದರ್ಭದಲ್ಲಿ 190 ವಿಶೇಷ ರೈಲುಗಳು, ಎನ್ಆರ್, ಎನ್ಇಆರ್…

Read More

ಚಾಮರಾಜನಗರ: ಜಿಲ್ಲೆಯಲ್ಲಿ ಕಾರೊಂದು ಬೈಕ್ ಗೆ ಡಿಕ್ಕಿಯಾಗಿ ಉಂಟಾದಂತ ಅಪಘಾತದ ಪರಿಣಾಮ ಬೈಕ್ ನಲ್ಲಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗೇಟ್ ಬಳಿಯಲ್ಲಿ ಕಾರೊಂದು ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಮೃತರನ್ನು ಪತಿ ಶಶಿಧರ್, ಪತ್ನಿ ಶಾಲಿನಿ ಹಾಗೂ ಭಾಗ್ಯಮ್ಮ ಎಂಬುದಾಗಿ ಗುರ್ತಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/air-show-on-feb-13-14-colleges-in-bengaluru-to-remain-closed/ https://kannadanewsnow.com/kannada/are-there-cockroaches-lizards-and-ants-in-your-house-just-do-this-elimination-is-guaranteed/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆಬ್ರವರಿ ಅಂತ್ಯದೊಳಗಾಗಿ ನೀರು ಒದಗಿಸಿ: ಥಣಿಸಂದ್ರ ಹಾಗೂ ಹೆಗ್ಡೆ ನಗರಕ್ಕೆ ಕಾವೇರಿ ನೀರು ಸಂಪರ್ಕ ಕಲ್ಪಿಸಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಕಾವೇರಿ ನೀರು ಎಲ್ಲಾ ಕಡೆ ಸಿಗುವಂತೆ ಮಾಡಬೇಕು. ಈ ಸಂಬಂಧ ಕಮಿಷನ್ ಮಾಡಿ ಟೆಸ್ಟಿಂಗ್ ಮಾಡಬೇಕು.…

Read More