Author: kannadanewsnow09

ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ಮನೆಯ ಖುಷಿಯಲ್ಲಿದ್ದಂತ ಮಗನನ್ನೇ ತಂದೆಯೊಬ್ಬ ಕಲ್ಲಿನಿಂದ ಹೊಡೆದು ಕೊಂದಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದ ಮಂಜುನಾಥ್ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಎಷ್ಟೇ ಕುಡಿತ ಬಿಡಿಸೋದಕ್ಕೆ ಪ್ರಯತ್ನಿಸಿದರೂ ಬಿಟ್ಟಿಲ್ಲ. ಮದುವೆ ಬೇರೆ ಸೆಟ್ ಆಗಿದೆ. ಈಗಲಾದರೂ ಸರಿಯಾಗಿ ಇರುವಂತ ತಂದೆ ನಾಗಪ್ಪ ಹಾಗೂ ಸಹೋದರ ಗುರುಬಸಪ್ಪ ಬುದ್ಧಿವಾದ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಮಂಜುನಾಥ್ ಉಳ್ಳಾಗಡ್ಡಿ ಗಲಾಟೆ ಜೋರಾಗಿ ಮಾಡಿದ್ದಾನೆ. ಇದರಿಂದ ಬೇಸತ್ತಂತ ತಂದೆ ನಾಗಪ್ಪ ಹಾಗೂ ಗುರಬಸಪ್ಪ ಇಬ್ಬರು ಸೇರಿ ಕಲ್ಲಿನಿಂದ ಹೊಡೆದಿದ್ದಾರೆ. ತಲೆಗೆ ಕಲ್ಲಿನಿಂದ ಹೊಡೆದ ಕಾರಣ ತೀವ್ರವಾಗಿ ಗಾಯಗೊಂಡಿದ್ದಂತ ಮಂಜುನಾಥ್ ಉಳ್ಳಾಗಡ್ಡಿ(25) ಸಾವನ್ನಪ್ಪಿದ್ದಾರೆ. ಅಂದಹಾಗೇ ಮಾರ್ಚ್.12ರಂದು ಸಹೋದರ ಮಂಜುನಾಥ್ ಮದುವೆ ನಿಗದಿಯಾಗಿತ್ತು. ಈ ಕಾರಣ ಸೇನೆಯಲ್ಲಿದ್ದಂತ ಗುರುಬಸಪ್ಪ ರಜೆಯ ಮೇಲೆ ಊರಿಗೆ ಬಂದಿದ್ದರು. ಇದೀಗ ಸಹೋದರ ಮಂಜುನಾಥ್ ಹತ್ಯೆ ಕೇಸಲ್ಲಿ ತಂದೆ ನಾಗಪ್ಪ ಹಾಗೂ ಗುರುಬಸಪ್ಪ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/two-killed-as-sajjana-collapses-in-hassans-belur/ https://kannadanewsnow.com/kannada/isro-to-get-two-new-launchpads-in-two-states-chandrayaan-4-getting-ready/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಹಾಸನ: ಜಿಲ್ಲೆಯ ಬೇಲೂರಲ್ಲಿ ಹಳೆಯ ಕಟ್ಟಡದ ಸಜ್ಜಾ ಕುಸಿದು ಘೋರ ದುರಂತವೊಂದು ಸಂಭವಿಸಿದೆ. ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನದ ಬೇಲೂರಿನ ಚನ್ನಕೇಶವ ದೇವಾಲಯ ರಸ್ತೆಯ ಸಮೀಪದ ಖಾಸಗಿ ಕಟ್ಟಡ ಸಜ್ಜಾವೊಂದು ದಿಢೀರ್ ಕುಸಿತಗೊಂಡಿದೆ. ಈ ಘಟನೆಯಲ್ಲಿ ನಜೀರ್ ಹಗೂ ಅಮರನಾಥ್ ಎಂಬುವರು ಸಾವನ್ನಪ್ಪಿದ್ದಾರೆ. ಇನ್ನೂ ಈ ದುರಂತದಲ್ಲಿ ನೀಲಮ್ಮ, ಜ್ಯೋತಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಲ್ಪಾ ಎಂಬುವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ಹಾಸನ ಎಸ್ಪಿ ಮೊಹಮ್ಮದ್ ಸುಜೇತಾ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರು ಹಾಗೂ ಗಾಯಗೊಂಡವರು ಬೀದಿ ಬರಿಯ ವ್ಯಾಪಾರಿಗಳು ಹಾಗೂ ಖರೀದಿದಾರರು ಎಂಬುದಾಗಿ ತಿಳಿದು ಬಂದಿದೆ. ಹಳೆಯ ಕಟ್ಟಡ ಕೆಳಗೆ ವ್ಯಾಪಾರ ಮಾಡುತ್ತಿದ್ದದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. https://kannadanewsnow.com/kannada/opposition-leader-r-ashoka-challenged-siddaramaiah-will-the-cm-give-the-responsibility/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಮಾಡಿ ಈ ಕೆಳಗಿನಂತೆ ಸವಾಲ್ ಹಾಕಿದ್ದಾರೆ. ಆರ್ ಅಶೋಕ್ ಅವರ ಸವಾಲಿಗೆ ಸಿಎಂ ಜವಾಬ್ ಕೊಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ಬಂಧನದಿಂದ ತಪ್ಪಿಸಿಕೊಳ್ಳಲು ಮುಡಾದಿಂದ ಅಕ್ರಮವಾಗಿ ಪಡೆದ 14 ಸೈಟುಗಳನ್ನು ವಾಪಸ್ಸು ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬ, ಈಗ ಸೈಟುಗಳನ್ನು ವಾಪಸ್ಸು ಪಡೆಯುವ ಮಾತಾಡುತ್ತಿದೆ ಎಂದಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೇ, ನಿಮಗೆ ನನ್ನದೊಂದು ಸವಾಲು. ನಿಮ್ಮ ಪುತ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರು ಮೂಡಾದಿಂದ 14 ಸೈಟುಗಳನ್ನು ವಾಪಸ್ಸು ಪಡೆಯುತ್ತೇವೆ, ಅದು ನಮಗೇ ಸೇರಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ನೀವು 16 ಬಜೆಟ್ ಅಲ್ಲ, 19 ಬಜೆಟ್ ಮಂಡಿಸುತ್ತೀರಿ ಎಂದೂ ಕೂಡ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ನಿಜವಾಗಿಯೂ ಸತ್ಯವಂತರಾಗಿದ್ದಾರೆ, ಪ್ರಾಮಾಣಿಕರಾಗಿದ್ದರೆ, ಸ್ಟ್ರಾಂಗ್ ಮುಖ್ಯಮಂತ್ರಿ ಆಗಿದ್ದರೆ, ಮುಂದಿನ ಬಜೆಟ್ ಮಂಡಿಸುವ ಮುನ್ನ ಮುಡಾಗೆ ಹಿಂದಿರುಗಿಸಿರುವ ಸೈಟುಗಳನ್ನು…

Read More

ಮುಂಬೈ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಹೋಟೆಲ್ ಒಂದರಲ್ಲಿ ಪಾರ್ಟಿ ಮಾಡಲು ಮಹಿಳೆಯರು ನಿರ್ಧರಿಸಿದ್ದರು. ಅದರಂತೆ ಮುಂಬೈನಲ್ಲಿನ ಹೋಟೆಲ್ ಒಂದಕ್ಕೆ ತೆರಳಿ ಪಾರ್ಟಿ ನಡೆಸಿದ್ದರು. ಆ ವೇಳೆಯಲ್ಲಿ ಪೋಟೆಲ್ ನವರು ಸರ್ವ್ ಮಾಡಿದಂತ ಗೋಬಿ ಮಂಚೂರಿಯಲ್ಲಿ ಇಲಿ ಮರಿ ಪತ್ತೆಯಾಗಿದ್ದನ್ನು ಕಂಡು ಶಾಕ್ ಆಗಿದ್ದಾರೆ. ಮುಂಬೈನ ಪರ್ಪಲ್ ಬಟರ್ ಪ್ಲೈ ಹೋಟೆಲ್ ಗೆ ನಿನ್ನೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹಿತೆಯರು ಸೇರಿದಂತೊಂ ಪಾರ್ಟಿಗೆಂದು ತೆರಳಿದ್ದರು. ವಿವಿಧ ಭಕ್ಷ್ಯಗಳನ್ನು ಆರ್ಡರ್ ಮಾಡಿದ್ದರು. ಇದರ ಜೊತೆಗೆ ಗೋಬಿ ಮಂಚೂರಿ ಕೂಡ ಆರ್ಡರ್ ನೀಡಿದ್ದರು. ಊಟವನ್ನು ಮಾಡುತ್ತಿದ್ದಾಗ, ಮಹಿಳೆಯೊಬ್ಬರಿಗೆ ಗೋಬಿ ಮಂಚೂರಿಯಲ್ಲಿ ಸತ್ತ ಇಲಿ ಮರಿ ಪತ್ತೆಯಾಗಿದೆ. ಇದನ್ನು ಕಂಡ ಮಹಿಳೆಯರು ಶಾಕ್ ಆಗಿದ್ದಾರೆ. ಈ ಬಗ್ಗೆ ಹೋಟೆಲ್ ಮಾಲೀಕರಿಗೆ ಜ್ಯೋತಿ ಕೊಂಡೆ ಎಂಬುವರು ಪ್ರಶ್ನಿಸಿದ್ದಾರೆ. ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಬಳಿಕ ಹೋಟೆಲ್ ಮಾಲೀಕ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ. ಆ ಬಳಿಕ ಜ್ಯೋತಿ ಕೊಂಡೆ ಅವರು ಮುಂಬೈನ…

Read More

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮಾಡಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ ಪರಾರಿಯಾಗಿದ್ದಂತ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮತ್ತು ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಈ ಘಟನೆಯನ್ನು ಸಿಎಂ ಸಿದ್ಧರಾಮಯ್ಯ ಖಂಡಿಸಿದ್ದರು. ಅಲ್ಲದೇ ಸೂಕ್ತ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಪೊಲೀಸರು ಪರಾರಿಯಾಗಿದ್ದಂತ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಂದು ತಮಿಳುನಾಡಿನಲ್ಲಿ ಗಂಗಾವತಿ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ನಿನ್ನೆಯಷ್ಟೇ ಪೊಲೀಸರು ಮಲ್ಲೇಶ್, ಚೇತನ್, ಸಾಯಿ ಎಂಬಾತನನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಸಾಯಿರಾಮ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಗಂಗಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ. https://kannadanewsnow.com/kannada/aishwarya-gowda-fraud-case-ex-minister-vinay-kulkarnis-driver-questioned/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಬೆಂಗಳೂರು: ಹಲವರಿಗೆ ಚಿನ್ನ ವಂಚನೆ ಪ್ರಕರಣದ ಐಶ್ವರ್ಯ ಗೌಡ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಾರು ಚಾಲಕನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಐಶ್ವರ್ಯ ಗೌಡ ಚಿನ್ನ ವಂಚನೆ ಕೇಸ್ ಸಂಬಂಧ ಎಸಿಪಿ ಭರತ್ ರೆಡ್ಡಿ ಅವರ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಐಶ್ವರ್ಯ ಗೌಡಗೆ ಸೇರಿದ್ದಂತ ಕಾರು ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿದ್ದರಿಂದ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯ ಗೌಡ ಅವರ ಪರಿಚಯವಿತ್ತು. ಮಹಾರಾಷ್ಟ್ರಕ್ಕೆ ಹೋಗುವಾಗ ವಿನಯ್ ಕುಲಕರ್ಣಿ ಮನೆಗೆ ಐಶ್ವರ್ಯ ಗೌಡ ಬಂದಿದ್ದರು. ವಾಪಾಸ್ ಹೋಗುವಾಗ ಕಾರು ಬಿಟ್ಟು ವಿಮಾನದಲ್ಲಿ ಹೋಗಿದ್ದರು. ಅವರ ಬೆನ್ಜ್ ಕಾರು ವಿನಯ್ ಕುಲಕರ್ಣಿ ಮನೆ ಬಳಿಯೇ ಇತ್ತು ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/bjp-to-protest-against-inadequate-power-supply-in-sagar-stage-protest-in-front-of-mescom-office-tomorrow/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಕೊಪ್ಪಳ: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ‌ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ ಬೆಳೆಯುತ್ತಾ ಬೆಳೆಯುತ್ತಾ ಮಕ್ಕಳು ಮೊಬೈಲ್ ಗೇ ಅಂಟಿಕೊಳ್ಳುತ್ತಾರೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ ಎಂದರು. ಮಕ್ಕಳು ಸ್ವತಂತ್ರವಾಗಿ ಆಲೋಚಿಸುವುದನ್ನು ಕಲಿತಾಗ ಅವರಲ್ಲಿ ಸೃಜನಶೀಲತೆ ಅರಳುತ್ತದೆ. ಸ್ವಂತಕ್ಕೆ ಆಟದ ಸಾಮಾನುಗಳನ್ನು ಸೃಷ್ಟಿಸಿಕೊಳ್ಳುವುದು ಮಕ್ಕಳ ಮೊದಲ ಸೃಜನಶೀಲ ಕ್ರಿಯೆ. ಮನೆಯಿಂದ ಹೊರಗೆ ಮಕ್ಕಳು ಆಟಕ್ಕೆ ಇಳಿದಾಗ ಕೈಗೆ ಸಿಕ್ಕ ಸಾಮಾಗ್ರಿಗಳೇ ಅವರ ಆಟದ ವಸ್ತುಗಳಾಗುತ್ತವೆ. ಕೇವಲ ನಾಲ್ಕು ಗೋಡೆ ಮಧ್ಯೆ ಕುಳ್ಳಿರಿಸಿ ಪ್ಲಾಸ್ಟಿಕ್ ಆಟದ ವಸ್ತುಗಳು, ಮೊಬೈಲ್ ಗಳ ಗೀಳು ಹಚ್ಚಿಕೊಳ್ಳುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಟಿತಗೊಳ್ಳುತ್ತದೆ. ನಾವೆಲ್ಲಾ…

Read More

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಟ್ಟಡವೊಂದು ಕುಸಿತಗೊಂಡ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದಂತ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಬೀದಿ ಬದಿಯ ವ್ಯಾಪಾರಿ ಆಶಾ, ದೀಪಾ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. https://kannadanewsnow.com/kannada/isro-to-get-two-new-launchpads-in-two-states-chandrayaan-4-getting-ready/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಶ್ರೀ ಮಂಜುನಾಥನಿಗೆ ಅರ್ಪಿತವಾದ ಪುಣ್ಯಕ್ಷೇತ್ರ ಧರ್ಮಸ್ಥಳ ಹಿಂದೂ ದೇವಾಲಯನಾ? ಅಥವಾ ಜೈನ ದೇವಾಲಯನಾ? ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಪೋಟೋ ಒಂದು ಹರಿದಾಡುತ್ತಿದೆ. ಅದರಲ್ಲಿ ಏನಿದೆ ಎನ್ನುಬ ಬಗ್ಗೆ ಮುಂದೆ ಓದಿ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ. ಸುಮಾರು ಏಳರಿಂದ ಎಂಟು ನೂರು ವರುಷಗಳ ಇತಿಹಾಸ ಹೊಂದಿರುವ ಪವಿತ್ರ ಕ್ಷೇತ್ರ. ಜೈನ ಬಂಟ ಸಮುದಾಯ ಆರಂಭಿಸಿರುವ ಈ ದೇವಾಲಯ. Dharmasthala Governing Religion: ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯನ್ನು ಆರಾಧನೆ ಮಾಡಲಾಗುತ್ತದೆ. ಪ್ರತಿನಿತ್ಯ ಸಾವಿರಾರು ಮಂದಿ, ಇನ್ನೂ ಕೆಲವೊಮ್ಮೆ ಲಕ್ಷಾಂತರ ಜನ ಸಮೂಹವೇ ಸೇರುವ ಈ ಪುಣ್ಯಕ್ಷೇತ್ರ ಒಂದಲ್ಲ, ಎರಡಲ್ಲ ಅದೆಷ್ಟೋ ದಾನ ಧರ್ಮಗಳನ್ನು ಮಾಡುತ್ತಾ ಸಮಾಜಕ್ಕೆ ಕೊಡುಗೆ ನೀಡುತ್ತಿದೆ. ಸುಮಾರು ಏಳರಿಂದ ಎಂಟು ನೂರು ವರುಷಗಳ ಇತಿಹಾಸ ಹೊಂದಿರುವ ಈ ಪವಿತ್ರ ಕ್ಷೇತ್ರ ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ…

Read More

ಬೆಂಗಳೂರು: ವಿಶ್ವ ಮಹಿಳಾ ದಿನ ಅಂಗವಾಗಿ ಬನಶಂಕರಿಯ ಫಿಡಲಿಟಸ್​ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯೋಗಿಗಳು ಕೇಕ್​ ಕತ್ತರಿಸುವ ಮೂಲಕ ಮಹಿಳಾ ದಿನ ಆಚರಿಸಿದರು. ಬಣ್ಣದ ಬಣ್ಣದ ಉಡುಗೆ ಧರಿಸಿ ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಮಹಿಳೆಯರು ಮುಂದಿರುವುದು ದೇಶದ ಆರ್ಥಿಕತೆ ಅಭಿವೃದ್ಧಿಗೆ ನಮ್ಮ ಕೊಡುಗೆ ಸಾಕಷ್ಟಿದೆ ಎಂದು ಘೋಷಿಸಿ ಸಂಭ್ರಮಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಚ್ಯುತ್​ಗೌಡ ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯುಕ್ತಿಕವಾಗಿ ಮನೆಯ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್​ ಮತ್ತು ಪೈಲೆಟ್​ ಆಗಿ ಕೂಡ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದು ಮಹಿಳೆಯರ ಬಗ್ಗೆ ಗುಣಗಾನ ಮಾಡಿದರು. ಮಹಿಳಾ ದಿನಾಚರಣೆಯ ಇತಿಹಾಸವನ್ನು ನೋಡುವುದಾದರೆ ಇಂದು ಮಹಿಳೆಯರ ಸಾಧನೆ ಎಲ್ಲ ಕ್ಷೇತ್ರಗಳಲ್ಲಿಯೂ ಇದೆ. ಪ್ರಮುಖವಾಗಿ ತಾಂತ್ರಿಕ, ಸಂಶೋಧನಾ ಹಾಗೂ ಐಟಿ-ಬಿಟಿ…

Read More