Author: kannadanewsnow09

ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಕೆ ಎಸ್ ಆರ್ ಟಿಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 01-03-2025ರಿಂದ20-03-2025ರವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 21-03-2025ರಿಂದ04-04-2025ರವರೆಗೆ ನಡೆಯಲಿದೆ ಎಂದಿದೆ. ಕ.ರಾ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ. https://kannadanewsnow.com/kannada/minister-shivaraj-thangadagi-warns-mes-goons-if-they-come-to-kannadigas/ https://kannadanewsnow.com/kannada/breaking-bollywood-actor-govindas-37-year-old-marriage-breaks-up-a-couple-who-filed-for-divorce/

Read More

ಬೆಂಗಳೂರು: ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ಮಂಗಳವಾರ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದ ನೀರು, ಗಾಳಿ, ಅನ್ನ ತಿಂದು ಮತ್ತೊಂದು ಭಾಷೆಯ ಬಗ್ಗೆ ಬಹಳ ಪ್ರೀತಿ ವ್ಯಾಮೋಹ ತೋರಿಸಿದರೆ ಮುಂದೆ ಪರಿಣಾಮ ನೆಟ್ಟಗಿರಲ್ಲ ಎಂದು ಕಿಡಿಕಾರಿದರು. ಎಂಇಎಸ್ ಪುಂಡಾಟಿಕೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಬಗ್ಗೆ ಚರ್ಚೆ ಮಾಡುತ್ತೇವೆ. ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಅಂತ ಹೇಳಿದ್ದೇವೆ. ಕನ್ನಡದ ವಿಚಾರಕ್ಕೆ ಬಂದರೆ ನಿಮಗೆ ಸರಿಯಾದ ಶಿಸ್ತು ಕಲಿಸುವ ಪರಿಸ್ಥಿತಿ ನಿರ್ಮಾಣ ಆಗುತ್ತೆ ಎಂದು ತೀಷ್ಣವಾಗಿ ಹೇಳಿದರು.‌ ಪುಂಡಾಟಿಕೆ ಹೀಗೆ ಮುಂದುವರೆದರೆ ಗೂಂಡಾ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಬೇಕಾಗುತ್ತದೆ. ನಾವು ಕನ್ನಡಿಗರು ಬೇರೆ ಭಾಷೆಯನ್ನು ಪ್ರೀತಿಸುತ್ತೇವೆ, ಗೌರವಿಸುತ್ತೇವೆ. ಆದರೆ ಈ ರಾಜ್ಯದಲ್ಲಿ ವಾಸವಿರುವ ಅನ್ಯ ಭಾಷಿಕರು ಈ…

Read More

ಶಿವಮೊಗ್ಗ: ಸಾಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಮೈತ್ರಿ ಪಾಟೀಲ್, ಉಪಾಧ್ಯಕ್ಷರಾಗಿ ಸವಿತಾ ವಾಸು ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹುರಿಯಾಳುಗಳು ಗೆಲುವು ಸಾಧಿಸಿದ್ದಾರೆ. ಇಂದಿನ ಗೌಪ್ಯ ಮತದಾನದಲ್ಲಿ ಬಿಜೆಪಿ ಪಕ್ಷದ ಅಧ್ಯಕ್ಷೆ ಮೈತ್ರಿ ಪಾಟೀಲ್ ಹಾಗೂ ಉಪಾಧ್ಯಕ್ಷೆ ಸವಿತಾ ವಾಸು ಅವರಿಗೆ ತಲಾ 17 ಮತಗಳು ಚಲಾವಣೆಯಾಗಿದ್ದಾವೆ. ಈ ಮೂಲಕ ಮ್ಯಾಜಿಕ್ ನಂಬರ್ ಅನ್ನು ಬಿಜೆಪಿ ಮುಟ್ಟಿ, ಬಿಜೆಪಿ ಸಾಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಇತ್ತ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಮಧು ಮಾಲತಿ ಕಲ್ಲಪ್ಪ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಗಣಪತಿ ಮಂಡಗಳಲೆ ತಲಾ 15 ಮತಗಳನ್ನು ಪಡೆದು, ಸೋಲು ಕಾಣುವಂತಾಗಿದೆ. ಒಟ್ಟಾರೆಯಾಗಿ ಸಾಗರ ನಗರಸಭೆಯ ನೂತನ ಅಧ್ಯಕ್ಷರಾಗಿ ಮೈತ್ರಿ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಸವೀತಾ ವಾಸು ಆಯ್ಕೆಯಾಗಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ,…

Read More

ಶಿವಮೊಗ್ಗ: ಇಂದು ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ಕಾವು ಏರಿದೆ. ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಗರಸಭೆ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಇಂದಿನ ಸಾಗರ ನಗರಸಭೆ ಚುನಾವಣೆಗೆ ಭದ್ರತೆಗಾಗಿ ಇಬ್ಬರು ಡಿವೈಎಸ್ಪಿ, 07 PI, 12 PSI, 20 ಎಎಸ್ಐ, ಹೆಡ್ ಕಾನ್ಸ್ ಸ್ಟೇಬಲ್, ಪಿಸಿ 115 ಹಾಗೂ 2 KSRP, 3 DAR ತುಕಡಿಯನ್ನು ನಿಯೋಜಿಸಲಾಗಿದೆ. ಇನ್ನೂ ಭದ್ರತಾ ಕಾರ್ಯದಲ್ಲಿ ಖುದ್ದು ನಿಂತು ಮೇಲುಸ್ತುವಾರಿಯನ್ನು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮಾರೆಡ್ಡಿ ಮಾಡುತ್ತಿದ್ದಾರೆ. ಅವರಿಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್, ಸಾಗರ…

Read More

ಬೆಂಗಳೂರು : ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು,…

Read More

ಮೈಸೂರು: ಕೇಂದ್ರ ಬಜೆಟ್ ಬಗ್ಗೆ ಟೀಕೆ ಸರಿಯಲ್ಲ. ವಿಶಾಲ ತಳಹದಿಯ, ದೂರದೃಷ್ಟಿಯ ಬಜೆಟ್ ಇದಾಗಿದೆ. ಬಡವರು, ಮಹಿಳೆಯರು, ರೈತರು ಹಾಗೂ ಯುವ ಜನರ ಶ್ರೇಯೋಭಿವೃದ್ಧಿಗೆ ಅತಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಸರ್ವರ ವಿಕಾಸ ಆಗುತ್ತಿದೆ. ಎಲ್ಲರಿಗೂ ಕೇಂದ್ರ ಸರ್ಕಾರದ ಯೋಜನೆಗಳು ಮುಟ್ಟುತ್ತಿವೆ ಎಂದು ಅವರು ಹೇಳಿದರು. ಮೈಸೂರಿನಲ್ಲಿ ಸೋಮವಾರ ಕೇಂದ್ರ ಬಜೆಟ್ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ ಅವರು; ಮಧ್ಯಮ ವರ್ಗಕ್ಕೆ ತೆರಿಗೆಯ ಹೊರೆ ಇಳಿಸಲಾಗಿದೆ. ರೈತರ ಆರ್ಥಿಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಯಾವ ಕಾರ್ಯಕ್ರಮವೂ ಘೋಷಣೆಯಾಗಿ ಉಳಿಯುವುದಿಲ್ಲ, ಎಲ್ಲವೂ ಜಾರಿಗೆ ಬರುತ್ತವೆ ಎಂದು ಕೇಂದ್ರ ಸಚಿವರು ಹೇಳಿದರು. ರೈತರು, ಮಹಿಳೆಯರು, ಯುವಕರು, ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡುವುದೇ ಈ ಬಜೆಟ್ ಆಶಯವಾಗಿದೆ. ಈ ಬಾರಿ ₹50 ಲಕ್ಷ…

Read More

ಮೈಸೂರು: ಮೈಸೂರಿನ ಉದಯಗಿರಿ ಗಲಭೆಯ ಗಲಭೆಕೋರರು ಯಾರೇ ಆಗಿದ್ದರೂ ಅವರನ್ನು ನಿರ್ದಯವಾಗಿ ಶಿಕ್ಷೆಗೆ ಗುರಿ ಮಾಡಬೇಕು. ಪೊಲೀಸ್ ವಾಹನಗಳ ಮೇಲೆ ಕಲ್ಲು ಹೊಡೆಯುತ್ತಾರೆ ಎಂದರೆ ನಮ್ಮ ರಾಜ್ಯದ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕರ್ನಾಟಕ ಕುವೆಂಪು ಅವರ ಸಂದೇಶದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿಯೇ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ನಾನು ಮನವಿ ಮಾಡಿಕೊಳ್ತೀನಿ. ನಮ್ಮ ಸಮಾಜಕ್ಕೆ ರಕ್ಷಣೆ ನೀಡಬೇಕೆಂದು‌ ನೀವು ಹೋಗುತ್ತೀರಿ. ನಿಮ್ಮ ಒಳ್ಳೆಯ ಉದ್ದೇಶವನ್ನು ದುರುಪಯೋಗ ಮಾಡಿಕೊಂಡು ಅವರು‌ ಭದ್ರವಾಗುತ್ತಾ ಹೋಗುತ್ತಿದ್ದಾರೆ. ಎರಡೂ ಪಕ್ಷದ ನಾಯಕರಿಗೆ ನಾನು ಮನವಿ ಮಾಡಿಕೊಳ್ಳುವೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಿ. ಶಾಂತಿ, ನೆಮ್ಮದಿ ಹಾಳು ಮಾಡುವ ಇಂಥ ಗಲಭೆಕೋರ ಶಕ್ತಿಗಳನ್ನು ಮಟ್ಟ ಹಾಕಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದರು. ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದವರನ್ನ ಬಲಿ…

Read More

ಮೈಸೂರು: ಮುಡಾ‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟಬಂದಂತೆ, ಅನುಕೂಲ ಆಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು‌ ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ. ಈ‌ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಎಸ್ ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್ ಐಟಿಗೆ ನೇಮಕ ಮಾಡಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು. 40 ವರ್ಷದ ಹಿಂದೆ ನಾನು ಇದೇ ಮೈಸೂರಿನಲ್ಲಿ…

Read More

ನವದೆಹಲಿ: ಭಾರತವು 2024 ರಲ್ಲಿ 84 ಇಂಟರ್ನೆಟ್ ಸ್ಥಗಿತಗಳಿಗೆ ಸಾಕ್ಷಿಯಾಗಿದೆ, ಇದು ವಿಶ್ವದ ಎರಡನೇ ಅತಿ ಹೆಚ್ಚು ಎಂದು ಡಿಜಿಟಲ್ ಹಕ್ಕುಗಳ ಸಂಸ್ಥೆ ಆಕ್ಸೆಸ್ ನೌ ವರದಿ ತಿಳಿಸಿದೆ. ದೇಶದಲ್ಲಿ ಮಿಲಿಟರಿ ಜುಂಟಾ ವಿಧಿಸಿದ ಇಂತಹ 85 ಬ್ಲಾಕ್ಔಟ್ಗಳನ್ನು ಕಂಡ ಮ್ಯಾನ್ಮಾರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ. ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಇಂಟರ್ನೆಟ್ ಸ್ಥಗಿತವನ್ನು ಕಂಡ ದೇಶವೆಂದು ಹೆಸರಿಸಲಾಗಿಲ್ಲ ಎಂದು ವರದಿ ಹೇಳಿದೆ. “2023 ರಿಂದ (116 ಇಂಟರ್ನೆಟ್ ಸ್ಥಗಿತಗಳು) ಸ್ಥಗಿತಗಳಲ್ಲಿ ಸಾಧಾರಣ ಇಳಿಕೆಯ ಹೊರತಾಗಿಯೂ, ಭಾರತವು 2024 ರಲ್ಲಿ ಇನ್ನೂ 84 ಬಾರಿ ಇಂಟರ್ನೆಟ್ ಸ್ಥಗಿತಗೊಂಡಿದೆ. ಇದು ಆ ವರ್ಷ ಪ್ರಜಾಪ್ರಭುತ್ವದಲ್ಲಿ ಆದೇಶಿಸಿದ ಅತಿ ಹೆಚ್ಚು ಅಡೆತಡೆಗಳು ಎಂದು ಸೋಮವಾರ ಪ್ರಕಟವಾದ ವರದಿ ತಿಳಿಸಿದೆ. ಭಾರತದಲ್ಲಿ, 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಗಿತವನ್ನು ಅನುಭವಿಸಿದವು. ಮಣಿಪುರ (21) ಅಗ್ರಸ್ಥಾನದಲ್ಲಿದ್ದರೆ, ಹರಿಯಾಣ (12) ಮತ್ತು ಜಮ್ಮು ಮತ್ತು ಕಾಶ್ಮೀರ…

Read More

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿನ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆ ಮಾಹಿತಿ ನೀಡಿದೆ. ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ. ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯಲಿದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದಿದೆ. https://forms.gle/9LUE1UvHMAv21vRS7 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಸಂಪರ್ಕಿಸಬಹುದು. ಇನ್ನೂ ರುಡ್ ಸೆಟ್ ಸಂಸ್ಥೆಯ ವೆಬ್‌ ಸೈಟ್‌ https://www.rudsetujire.com…

Read More