Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ನಕ್ಸಲರು ಶರಣಾಗುವ ಸಾಧ್ಯತೆಯಿದೆ ನಕ್ಸಲರ…
ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡಿರುವಂತ ಹೆಚ್ ಎಂ ಪಿ ವಿ ವೈರಸ್ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ಸೋಂಕಿತ ಮಗು ನಾರ್ಮಲ್ ಆಗಿದೆ. ಹೆಚ್ ಎಂ ಪಿ ವಿ ವೈರಸ್ ಜೀವಕ್ಕೆ ಅಪಾಯವಿಲ್ಲ. ಯಾರೂ ಆತಂಕ ಪಡಬೇಡಿ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕರ್ನಾಟಕದಲ್ಲಿ ಹೆಚ್ ಎಂ ಪಿ ಎಸ್ ವೈರಸ್ ನಿಯಂತ್ರಣ ಸಂಬಂಧ ಮಹತ್ವದ ಸಭೆ ನಡೆಸಿದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕರ್ನಾಟಕದಲ್ಲಿ 2 ಹೆಚ್ ಎಂ ಪಿಎಸ್ ಕೇಸ್ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಮಗುವೊಂದಕ್ಕೂ ಕಾಣಿಸಿಕೊಂಡಿದ್ದು, ನಾರ್ಮಲ್ ಇದೆ ಎಂದರು. ಕೊರೋನಾ ವೈರಸ್ ಅಷ್ಟು ಹೆಚ್ ಎಂ ಪಿ ವಿ ವೈರಸ್ ಭಯಾನಕವಲ್ಲ. ಯಾರೂ ಆತಂಕ ಪಡಬೇಡಿ. ಇದು ಮಾರಣಾಂತಿಕವೂ ಅಲ್ಲ. ಮಾಸ್ಕ್ ಬಳಕೆಯ ಅವಶ್ಯಕತೆಯಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮನವಿ ಮಾಡಿದರು. https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/ https://kannadanewsnow.com/kannada/what-is-hmpv-virus-what-are-its-symptoms-heres-the-information/
ಬೆಂಗಳೂರು: ನಿನ್ನೆ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ನಾರ್ಬಟ್ ಡಿಸೋಜ ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರು. ಶಿವಮೊಗ್ಗ ಜಿಲ್ಲೆಯ ಇವರು ದಿನಾಂಕ 05-01-2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಇನ್ನೂ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. https://kannadanewsnow.com/kannada/what-is-hmpv-virus-what-are-its-symptoms-heres-the-information/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/
ಬೆಂಗಳೂರು: ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಪ್ರಕರಣ ಪತ್ತೆಯಾಗಿದ್ದು, ಆಸ್ಪತ್ರೆಯು ಶಂಕಿತ ಸೋಂಕನ್ನು ಆರೋಗ್ಯ ಅಧಿಕಾರಿಗಳಿಗೆ ವರದಿ ಮಾಡಿದೆ. ಹಾಗಾದ್ರೆ HMPV ವೈರಸ್ ಸೋಂಕು ಅಂದರೇನು? ಅದರ ಲಕ್ಷಣಗಳು ಏನು ಅಂತ ಮುಂದೆ ಓದಿ. ಎಚ್ಎಂಪಿವಿ ವೈರಸ್ ಎಂದರೇನು? ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಉಸಿರಾಟದ ವೈರಸ್ ಆಗಿದ್ದು, ಇದು ಸಾಮಾನ್ಯವಾಗಿ ಸೌಮ್ಯ ಮತ್ತು ಮಧ್ಯಮ ಫ್ಲೂ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ಈ ವೈರಸ್ ಚಳಿಗಾಲ ಮತ್ತು ವಸಂತಕಾಲದ ಆರಂಭದಲ್ಲಿ ಹೆಚ್ಚು ಪ್ರಚಲಿತದಲ್ಲಿದೆ ಮತ್ತು ಪ್ರಾಥಮಿಕವಾಗಿ ಸೋಂಕಿತ ವ್ಯಕ್ತಿಗಳೊಂದಿಗೆ ನೇರ ಸಂಪರ್ಕದಿಂದ ಅಥವಾ ಕಲುಷಿತ ಮೇಲ್ಮೈಗಳಿಂದ ಹರಡುತ್ತದೆ. ಸಾಮಾನ್ಯ ರೋಗಲಕ್ಷಣಗಳಲ್ಲಿ ಕೆಮ್ಮು, ಜ್ವರ, ಗಂಟಲು ನೋವು, ಮೂಗು ಸೋರುವಿಕೆ ಅಥವಾ ಕಟ್ಟುವಿಕೆ, ಮತ್ತು ಕೆಲವು ಸಂದರ್ಭಗಳಲ್ಲಿ, ಉಬ್ಬಸ ಅಥವಾ ಉಸಿರಾಟದ ತೊಂದರೆ ಸೇರಿವೆ. ಕೆಲವು ವ್ಯಕ್ತಿಗಳು, ವಿಶೇಷವಾಗಿ ತುಂಬಾ ಚಿಕ್ಕವರು, ವಯಸ್ಸಾದವರು, ಅಥವಾ…
ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ. ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಆರೋಗ್ಯ…
ಶಿವಮೊಗ್ಗ: ಕನ್ನಡ ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು ನಾ.ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಎರಡೂ ಒಂದೇ. ಬರೆದಂತೆ ಬದುಕಿದವರು. ಬದುಕಿದಂತೆ ಬರೆದವರು ಎಂದಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಸ್ತರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.
ಧಾರವಾಡ: ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ದಿ. ಶ್ರೀ ಚನ್ನವೀರೌಡ ಅಣ್ಣಾ ಶಿದ್ರಾಮಗೌಡ ಪಾಟೀಲ್ ಸಂಸ್ಕರಣೆ ದತ್ತಿ ಕಾರ್ಯಕ್ರಮದಲ್ಲಿ ಪ್ರೊ. ಮಲ್ಲಿಕಾರ್ಜುನ ಪಾಟೀಲ್ ಬರೆದಿರುವ ಸೈದಾಪುರ ಸಿ.ಎಸ್.ಪಾಟೀಲ ಜೀವನ ಮತ್ತು ಸಾಧನೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ನೂರಾರು ವರ್ಷಗಳಿಂದ ಜಗತ್ತಿಗೆ ಮಹಾಪುರುಷರನ್ನು ಕೊಟ್ಟ ಈ ಮಣ್ಣಿನ ಗುಣ, ಕೇವಲ ಧಾರವಾಡದಲ್ಲಿ ಹುಟ್ಟಿದವರಷ್ಟೇ ಅಲ್ಲ, ಮಹಾರಾಷ್ಟ್ರ, ಗೋವಾದಿಂದ ಬಂದು ಇಲ್ಲಿ ವಿದ್ಯಾರ್ಜನೆ ಪಡೆದು ಉನ್ನತ ಹುದ್ದೆ ಪಡೆದವರು ಅನೇಕರು ಇದ್ದಾರೆ. ನನಗೆ ಧಾರವಾಡದಲ್ಲಿ ಸ್ನೇಹಿತರು ಅತಿ ಹೆಚ್ಚಿದ್ದಾರೆ ಎಂದರು. ನಮ್ಮೆಲ್ಲರ ಹಿರಿಯರು ಸಿ.ಎಸ್. ಪಾಟೀಲರು ಆ ಕಾಲದಲ್ಲಿ ಅದ್ಭುತ ಸಾಧನೆ ಮಾಡಿದರು. ನಾವೆಲ್ಲ 21 ನೇ ಶತಮಾನ ಜ್ಞಾನದ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಜನವರಿ.7ರಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಾಯ ಉಂಟಾಗದಂತೆ ಕ್ರಮ ವಹಿಸಲು ಮಹತ್ವದ ಸೂಚನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿ.07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಕರೆ ನೀಡಿರುತ್ತಾರೆ. ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪಮುಖ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.…
ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ ಡಿಸೋಜ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೋ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ಸ್ಪಷ್ಟ ಪಡಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜನವರಿ.7ರಂದು ಮೃತ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ಸಾಗರದಲ್ಲಿ ನೆರವೇರಿಸುವುದಾಗಿ ತಿಳಿಸಿದ್ದಾರೆ. ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. https://kannadanewsnow.com/kannada/good-news-for-the-workers-of-the-state-you-will-get-all-these-facilities-from-the-government/ https://kannadanewsnow.com/kannada/important-information-to-the-public-do-you-know-what-is-the-punishment-and-penalty-for-these-offences-related-to-government-property-heres-the-information/
ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿಯಿ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ ಡಿಸೋಜ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೋ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ಸ್ಪಷ್ಟ ಪಡಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜನವರಿ.7ರಂದು ಮೃತ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ಸಾಗರದಲ್ಲಿ ನೆರವೇರಿಸುವುದಾಗಿ ತಿಳಿಸಿದ್ದಾರೆ. ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ನಾ ಡಿಸೋಜ ಬಗ್ಗೆ ಮಾಹಿತಿ ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ…












