Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮುಂಬೈನ ನಿವಾಸದಲ್ಲಿ ನಡೆದ ಸಾವಿನ ಪ್ರಕರಣದಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ನ್ಯಾಯಾಲಯಕ್ಕೆ ಮುಕ್ತಾಯ ವರದಿಯನ್ನು ಸಲ್ಲಿಸಿದ್ದು, ಸಾವಿಗೆ ಕಾರಣ ಆತ್ಮಹತ್ಯೆ ಎಂದು ದೃಢಪಡಿಸಿದೆ. ಸಿಂಗ್ ಜೂನ್ 14, 2020 ರಂದು ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಪ್ರಕರಣ ಆತ್ಮಹತ್ಯೆ ಎಂದು ಕಂಡುಬಂದರೂ, ನಂತರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. ಸಿಂಗ್ ಅವರ ಶವ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಸ್ಥಳದಿಂದ ಯಾವುದೇ ಆತ್ಮಹತ್ಯಾ ಪತ್ರ ಪತ್ತೆಯಾಗಿಲ್ಲ. ನಂತರ, ಸುಶಾಂತ್ ಅವರ ಕುಟುಂಬವು ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ಪಾಟ್ನಾದಲ್ಲಿ ಎಫ್ಐಆರ್ ದಾಖಲಿಸಿದ್ದು, ಆತ್ಮಹತ್ಯೆ, ಕಳ್ಳತನ ಇತ್ಯಾದಿಗಳಿಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದೆ. ಬಿಹಾರ ಸರ್ಕಾರದ ಶಿಫಾರಸಿನ ನಂತರ ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ ಅನುಮೋದನೆ ನೀಡಿತು. ಆಗಸ್ಟ್ 19, 2020 ರಂದು, ಸುಪ್ರೀಂ ಕೋರ್ಟ್ ತನಿಖೆಯನ್ನು ವಹಿಸಿಕೊಳ್ಳಲು ಸಿಬಿಐಗೆ ನಿರ್ದೇಶನ ನೀಡಿತು ಮತ್ತು…
ಚೆನ್ನೈ : “ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ ನಂತರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ, ಬಿಎಂಆರ್ ಡಿಎ ಆಯುಕ್ತ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು. “ಪ್ರಜಾಪ್ರಭುತ್ವದ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ವ್ಯವಸ್ಥಿತ ದಾಳಿ ಮತ್ತು ಬೆದರಿಕೆ. ಈ ವಿಚಾರದ ಮೇಲೆ ಜೆಎಸಿ (Joint Action Committee)ಯ ಬಲವರ್ಧನೆಗೆ ದೆಹಲಿಯಲ್ಲಿ ಕಚೇರಿ ಸ್ಥಾಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ಸಭೆ ತೆಲಂಗಾಣದಲ್ಲಿ ನಡೆಯಲಿದೆ” ಎಂದರು. “ಪಂಜಾಬ್, ಕೇರಳ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದಿಂದ ನಾನು, ತೆಲಂಗಾಣ…
ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ತಂದೆಯ ಜೊತೆಗೆ ಮೂರು ವರ್ಷದ ಬಾಲಕಿ ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಮರವೊಂದು ಮುರಿದು ಬಿದ್ದ ಪರಿಣಾಮ, ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಬೆಂಗಳೂರಿನ ದೇವಹನಜೀವನಹಳ್ಳಿಯಲ್ಲಿ ತಂದೆಯ ಜೊತೆಗೆ ಮೂರು ವರ್ಷದ ರಕ್ಷಾ ಎಂಬ ಪುಟಾಣಿ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಮರವೊಂದು ದಿಢೀರ್ ಮುರಿದು ಬಿದ್ದಿದೆ. ಈ ದುರ್ಘಟನೆಯಲ್ಲಿ ಮರದಡಿ ಸಿಲುಕಿ ರಕ್ಷಾ(3) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಘಟನೆಯಲ್ಲಿ ತಂದೆ ಸತ್ಯ ಕೂಡ ಗಾಯಗೊಂಡಿದ್ದೂ, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪುಲಕೇಶಿ ನಗರ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/cji-sanjiv-khanna-orders-in-house-inquiry-into-justice-yashwant-varma-case/ https://kannadanewsnow.com/kannada/pvr-inox-partners-with-bcci-to-screen-ipl-2025-live-across-india/
ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಮೂವರು ಸದಸ್ಯರ ಸಮಿತಿಯು ಈ ಕೆಳಗಿನವರನ್ನು ಒಳಗೊಂಡಿದೆ: ನ್ಯಾಯಮೂರ್ತಿ ಶೀಲ್ ನಾಗು (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ); ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ (ಹಿಮಾಚಲ ಪ್ರದೇಶದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ); ಮತ್ತು ನ್ಯಾಯಮೂರ್ತಿ ಅನು ಶಿವರಾಮನ್ (ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ). ವಾಸ್ತವವಾಗಿ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ವಹಿಸದಂತೆ ಸಿಜೆಐ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಕೇಳಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿಯು ಲೆಕ್ಕವಿಲ್ಲದ ಹಣವನ್ನು ವಶಪಡಿಸಿಕೊಳ್ಳಲು ಕಾರಣವಾಯಿತು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ನಂತರ ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ಹೈಕೋರ್ಟ್ ಆದ ಅಲಹಾಬಾದ್ ಹೈಕೋರ್ಟ್ಗೆ ವಾಪಸ್ ಕಳುಹಿಸಲು ನಿರ್ಧರಿಸಿತ್ತು. ಆದಾಗ್ಯೂ, ಶುಕ್ರವಾರ ಬೆಳಿಗ್ಗೆ ನಡೆದ ಎಲ್ಲಾ ಸುಪ್ರೀಂ…
ಬೆಂಗಳೂರು: ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ಬಿಳಿಜಾಜಿಯ ಬಿಜಿಎಸ್ ಲೇಔಟ್ ನಲ್ಲಿ ಮಾಗಡಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ಬಿಳಿಜಾಜಿಯ ಬಿಜಿಎಸ್ ಲೇಔಟ್ ಬಳಿಯಲ್ಲಿನ ನಿರ್ಮಾಣ ಹಂತದ ಕಟ್ಟಡ ಬಳಿ ಕೊಲೆ ಮಾಡಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಸೋಲದೇವನಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/honeytrap-attempt-allegations-complaint-to-dg-igp-on-monday-or-tuesday-says-mlc-rajendra/ https://kannadanewsnow.com/kannada/pvr-inox-partners-with-bcci-to-screen-ipl-2025-live-across-india/
ಬೆಂಗಳೂರು: ಸಚಿವ ಕೆಎನ್ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ಸೋಮವಾರ ಅಥವಾ ಮಂಗಳವಾರ ರಾಜ್ಯ ಡಿಜಿ ಮತ್ತು ಐಜಿಪಿಗೆ ದೂರು ನೀಡಲು ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ನಿರ್ಧರಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅವರಿಗೆ ಹನಿಟ್ರ್ಯಾಪ್ ಆರೋಪದ ಸಂಬಂಧ ದಾಖಲೆ ಸಹಿತ ಮಾಹಿತಿ ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸೋಮವಾರ ಅಥವಾ ಮಂಗಳವಾರ ಡಿಜಿ-ಐಜಿಪಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದರು. ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ ಮೂರು ತಿಂಗಳಿನಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ಸಂಬಂಧ ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್ ಯತ್ನ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದರು. ಬೆಂಗಳೂರಿನ ಸರ್ಕಾರಿ ನಿವಾಸಕ್ಕೂ ಬಂದು ಹನಿಟ್ರ್ಯಾಪ್ ಯತ್ನ ನಡೆಸಲಾಗಿತ್ತು. ಈ ಎಲ್ಲಾದರ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂಬುದಾಗಿ ತಿಳಿಸಿದರು. ಯಾರೆಂದು ಹೇಗೆ ಹೋಳೋದು? ತನಿಖೆಯಾಗಲಿ ಎಲ್ಲವೂ ಹೊರ…
ನವದೆಹಲಿ: ಭಾರತದ ಎರಡನೇ ಅತಿದೊಡ್ಡ ಟೆಲಿಕಾಂ ಪೂರೈಕೆದಾರ ಏರ್ಟೆಲ್, 38 ಕೋಟಿ ಬಳಕೆದಾರರನ್ನು ಹೊಂದಿದ್ದು, IPL 2025 ಕ್ಕೂ ಮುನ್ನ 301 ರೂ.ಗಳ ಹೊಸ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. ಬಲವಾದ ನೆಟ್ವರ್ಕ್ ಸಂಪರ್ಕಕ್ಕೆ ಹೆಸರುವಾಸಿಯಾದ ಏರ್ಟೆಲ್, ಗ್ರಾಹಕರ ಅಗತ್ಯಗಳನ್ನು ಪೂರೈಸಲು ಆಗಾಗ್ಗೆ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತದೆ. ಈ ಇತ್ತೀಚಿನ ಯೋಜನೆಯು ಅನಿಯಮಿತ ಕರೆಗಳು, ಡೇಟಾ, SMS ಮತ್ತು ಉಚಿತ OTT ಚಂದಾದಾರಿಕೆಯನ್ನು ನೀಡುತ್ತದೆ. ಇದು ಕ್ರಿಕೆಟ್ ಪ್ರಿಯರಿಗೆ ಆಕರ್ಷಕ ಆಯ್ಕೆಯಾಗಿದೆ. ಏರ್ಟೆಲ್ ರೂ. 301 ಯೋಜನೆ: ಏನು ಒಳಗೊಂಡಿದೆ? ಏರ್ಟೆಲ್ನ ಹೊಸ 301 ರೂ. ಪ್ರಿಪೇಯ್ಡ್ ಯೋಜನೆಯು ಎದ್ದು ಕಾಣುತ್ತದೆ. ಏಕೆಂದರೆ ಇದು ಡೇಟಾ, ಕರೆ ಮತ್ತು ಮನರಂಜನಾ ಪ್ರಯೋಜನಗಳ ಮಿಶ್ರಣವನ್ನು ನೀಡುತ್ತದೆ. ಈ ಯೋಜನೆಯೊಂದಿಗೆ, ಗ್ರಾಹಕರು ಇವುಗಳನ್ನು ಪಡೆಯುತ್ತಾರೆ. ಅನಿಯಮಿತ ಕರೆ: ಭಾರತದಾದ್ಯಂತ ಯಾವುದೇ ನೆಟ್ವರ್ಕ್ಗೆ ಉಚಿತ ಕರೆಗಳನ್ನು ಮಾಡಿ. ಮಾನ್ಯತೆಯ ಉದ್ದಕ್ಕೂ ದೈನಂದಿನ ಉಚಿತ SMS. ದಿನಕ್ಕೆ 1GB ಡೇಟಾ: 28 ದಿನಗಳವರೆಗೆ ಒಟ್ಟು 28GB ಡೇಟಾ. ಡಿಸ್ನಿ+…
ಬೆಂಗಳೂರು: ನಗರದಲ್ಲಿ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಈ ಮಳೆಯ ಪರಿಣಾಮ ವಿದ್ಯುತ್ ಕಂಬವೊಂದು ಬಿಎಂಟಿಸಿ ಬಸ್ಸಿನ ಮೇಲೆಯೇ ಮುರಿದು ಬಿದ್ದಿದೆ. ಈ ವೇಳೆಯಲ್ಲಿ ಪ್ರಯಾಣಿಕರನ್ನು ಕೂಡಲೇ ಕೆಳಗೆ ಇಳಿಸಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ. ಬೆಂಗಳೂರಿನ ಹೊಸಕೋಟೆ ಬಳಿಯ ಕಂಬಳಿಪುರ ಗ್ರಾಮದಲ್ಲಿ ಚಲಿಸುತ್ತಿದ್ದಂತ ಬಿಎಂಟಿಸಿ ಬಸ್ ಮೇಲೆಯೇ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಈ ವೇಳೆ ಬಸ್ ನಿಲ್ಲಿಸಿದಂತ ಚಾಲಕ, ಪ್ರಯಾಣಿಕರನ್ನು ತಕ್ಷಣವೇ ಇಳಿಸಿದ್ದಾನೆ. ಹೀಗಾಗಿ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಂಗಳೂರಿನ ಹೆಬ್ಬಾಳ, ಮೇಖ್ರಿ ಸರ್ಕಲ್, ಯಲಹಂಕ ಸೇರಿದಂತೆ ವಿವಿಧೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಅಲ್ಲಲ್ಲಿ ರಸ್ತೆಗೆ ನೀರು ನುಗ್ಗಿದ ಪರಿಣಾಮ, ವಾಹನ ಸಂಚಾರ ದಟ್ಟಣೆ ಉಂಟಾಗಿ ಸವಾರರು ಹೈರಾಣಾಗುವಂತೆ ಆಯ್ತು. https://kannadanewsnow.com/kannada/man-arrested-for-misbehaving-with-minor-boy/ https://kannadanewsnow.com/kannada/pvr-inox-partners-with-bcci-to-screen-ipl-2025-live-across-india/
ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಂತ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಆತನ ವಿರುದ್ಧ ಕೇಸ್ ದಾಖಲಿಸಿ ಕಾನೂನಿನ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ, ಚಾಕಲೇಟ್ ಆಸೆ ತೋರಿಸಿ ಪದೇ ಪದೇ ಕರೆದೊಯ್ದು, ಅಸಭ್ಯವಾಗಿ ವ್ಯಕ್ತಿಯೊಬ್ಬ ವರ್ತಿಸುತ್ತಿದ್ದನಂತೆ. ಈ ಸಂಬಂಧ ಸ್ಥಳೀಯರು ಪೋಷಕರ ಗಮನಕ್ಕೆ ತಂದಿದ್ದರು. ಪೋಷಕರು ಆರೋಪಿ ಸಿರಾಜ್(55) ಎಂಬಾತನಿಗೆ ಬುದ್ಧಿ ವಾದ ಹೇಳಿದಕ್ಕೆ ಪೋಷಕರಿಗೇ ಅವಾಜ್ ಹಾಕಿ ಬಾಲಕನನ್ನು ಕರೆದೊಯ್ದಿದ್ದನು. ಈ ಸಂಬಂಧ ಪೋಷಕರು ಹುಬ್ಬಳ್ಳಿ ಠಾಣೆಗೆ ತೆರಳಿ ದೂರು ನೀಡಿದ್ದರು. ಪೋಷಕರು ನೀಡಿದ್ದಂತ ದೂರು ಆಧರಿಸಿ ಆರೋಪಿ ಸಿರಾಜ್ ನನ್ನು ಬಂಧಿಸಿರುವಂತ ಪೊಲೀಸರು ಆತನ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/one-person-killed-several-injured-as-chariot-falls-on-them-at-famous-madduramma-jatra-in-anekal/ https://kannadanewsnow.com/kannada/pvr-inox-partners-with-bcci-to-screen-ipl-2025-live-across-india/
ಬೆಂಗಳೂರು: ಜಿಲ್ಲೆಯ ಆನೇಕಲ್ ಬಳಿಯ ಹುಸ್ಕೂರಿನ ಮದ್ದೂರಮ್ಮನ ಜಾತ್ರೆಗೆ ತೆರಳುತ್ತಿದ್ದಂತ ಎರಜು ತೇರುಗಳು ಉರುಳಿ ಬಿದ್ದಿದ್ದಾವೆ. ಈ ಪರಿಣಾಮ ಅದರಡಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಆನೇಕಲ್ ಬಳಿಯ ಹುಸ್ಕೂರಿನ ಮದ್ದೂರಮ್ಮ ಜಾತ್ರೆ ತುಂಬಾನೇ ಪ್ರಸಿದ್ಧಿ. ಇಂದು ತೇರು ಎಳೆಯುವಂತ ಸಂದರ್ಭದಲ್ಲಿ ಉರುಳಿ ಬಿದ್ದಿದೆ. ಇದರಿಂದಾಗಿ ಅದರ ಅಡಿಯಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ 150 ಅಡಿ ಎತ್ತರದ ಮದ್ದೂರಮ್ಮನ ತೇರು ಉರುಳಿ ಬಿದ್ದಿದ್ದು ಇದೇನೂ ಮೊದಲೇನು ಅಲ್ಲ. ಈ ಹಿಂದೆ ಕೆಲ ವರ್ಷಗಳ ಹಿಂದೆಯೂ ಇದೇ ರೀತಿಯಾಗಿತ್ತು. ಆದರೇ ಆಗ ಯಾವುದೇ ಸಾವು ನೋವು ಸಂಭವಿಸಿರಲಿಲ್ಲ. https://www.youtube.com/watch?v=kQJoXOsyWdg https://kannadanewsnow.com/kannada/now-change-your-name-address-in-aadhaar-card-is-simpler-allow-you-to-do-it-online/ https://kannadanewsnow.com/kannada/nagpur-violence-14-more-held-number-of-arrests-reaches-105-3-fresh-firs-registered/














