Author: kannadanewsnow09

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ ಎನ್ನುವಂತೆ 1,500 ಹೆಚ್ಚುವರಿ KSRTC ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ನಿಗಮ ಘೋಷಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:08.09.2024ದಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,…

Read More

ಚಿತ್ರದುರ್ಗ : ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು. ಬಿಜೆಪಿಗರ ಕುತಂತ್ರಕ್ಕೆ ಶೀಘ್ರವೇ ಉತ್ತರ ಕರ್ನಾಟಕದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸ್ಥಿರವಾದ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಬಿಜೆಪಿ ನಾಯಕರ ಉದ್ದೇಶ. ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಏನೆಲ್ಲಾ ಸರ್ಕಸ್ ನಡೆಸುತ್ತಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೋವಿಡ್ ಕಾಲದ ಭ್ರಷ್ಟಾಚಾರ ಬಯಲು ಕೋವಿಡ್ ವೇಳೆ ಬಿಜೆಪಿ ಸಚಿವರು ಮಾಡಿದ್ದ ಭ್ರಷ್ಟಾಚಾರ ಇಡೀ ರಾಜ್ಯಕ್ಕೆ…

Read More

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ರಸ್ತೆ ಗುಂಡಿಗಳನ್ನು ವಾರದೊಳಗೆ ಮುಚ್ಚುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿಗೆ ಸೂಚಿಸಿದ್ದಾರೆ. ಇದಲ್ಲದೇ ತಾವೇ ಖುದ್ದು ತಮ್ಮ ಕಾಲೇಜು ದಿನಗಳ ಬೈಕ್ ಏರಿ ನಗರ ಪ್ರದಕ್ಷಿಣೆ ಮೂಲಕ ವೀಕ್ಷಣೆ ಕೂಡ ಮಾಡಲಿದ್ದಾರೆ. ರಸ್ತೆಗುಂಡಿ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದಾಗ “ಸಾರ್ವಜನಿಕರಿಗಾಗಿ ʼರಸ್ತೆ ಗುಂಡಿ ಗಮನʼ ಎನ್ನುವ ಆಪ್ ಅನ್ನು ಪರಿಚಯಿಸಿದ್ದು ಅದರಲ್ಲಿ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ರೂಪಿಸಲಾಗಿದೆ. ರಸ್ತೆಗಳ ವೀಕ್ಷಣೆಗೆ ಎಂದೇ ನನ್ನ ಹಳೆಯ ಬೈಕ್ ದುರಸ್ತಿ ಮಾಡಿಸಿದ್ದೇನೆ. ಅಧಿಕಾರಿಗಳು ಮುಖ್ಯರಸ್ತೆಗಳನ್ನು ಮಾತ್ರ ತೋರಿಸುತ್ತಾರೆ, ಅದಕ್ಕೆ ಒಳ ರಸ್ತೆಗಳನ್ನು ಬೈಕ್ ಅಲ್ಲಿ ಓಡಾಡಿ ವೀಕ್ಷಿಸುತ್ತೇನೆ. ಜೊತೆಗೆ ಕಮಿಷನರ್ ಕೂರಿಸಿಕೊಂಡು ಒಂದು ಸುತ್ತು ಹೋಗುತ್ತೇನೆ” ಎಂದರು. ಬಿಬಿಎಂಪಿ ಗುತ್ತಿಗೆದಾರರು ಬಿಲ್ ಬಾಕಿ ಬಗ್ಗೆ ಪ್ರತಿಭಟನೆ ವಿಚಾರ ಕೇಳಿದಾಗ “ಗುತ್ತಿಗೆದಾರರ ನೋವು ನನಗೂ ಅರ್ಥವಾಗುತ್ತದೆ. ಶೇ.50 ರಷ್ಟಿದ್ದ ಬಿಲ್ ಬಾಕಿಯನ್ನು ಶೇ.75 ಕ್ಕೆ ಇಳಿಸಿದ್ದೇನೆ. ಒಂದಷ್ಟು ಭಾಗ ಆಯೋಗದ…

Read More

ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಗೇಮ್ಸ್ 2024 ರ ಪುರುಷರ ಸಿಂಗಲ್ಸ್ ಎಸ್ಎಲ್ 3 ಸ್ಪರ್ಧೆಯಲ್ಲಿ ಭಾರತದ ಪ್ಯಾರಾ-ಶಟ್ಲರ್ ನಿತೇಶ್ ಕುಮಾರ್ ಗ್ರೇಟ್ ಬ್ರಿಟನ್ನ ಡೇನಿಯಲ್ ಬೆತೆಲ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. https://twitter.com/ANI/status/1830570132571050165 ಪ್ಯಾರಾಲಿಂಪಿಕ್ಸ್ಗೆ ಪಾದಾರ್ಪಣೆ ಮಾಡುತ್ತಿರುವ ನಿತೇಶ್, ಲಾ ಚಾಪೆಲ್ ಅರೆನಾ ಕೋರ್ಟ್ 1 ರಲ್ಲಿ ಟೋಕಿಯೊ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತ ಬೆತೆಲ್ ಅವರನ್ನು ಮೂರು ಪಂದ್ಯಗಳಲ್ಲಿ ಸೋಲಿಸಿ ಹಳದಿ ಲೋಹವನ್ನು ಗೆದ್ದರು. ಅಗ್ರ ಶ್ರೇಯಾಂಕಿತ ನಿತೇಶ್ ಮೊದಲ ಗೇಮ್ ಅನ್ನು 21-14ರಿಂದ ಗೆದ್ದರೆ, ಎರಡನೇ ಗೇಮ್ ನಲ್ಲಿ 18-21ರಿಂದ ಸೋತರು. ಎರಡನೇ ಶ್ರೇಯಾಂಕಿತ ಆಟಗಾರನ ವಿರುದ್ಧ 23-21 ಅಂಕಗಳ ಅಂತರದಿಂದ ಜಯ ಸಾಧಿಸಿದ ಭಾರತದ ಆಟಗಾರ್ತಿ ನಿರ್ಣಾಯಕ ಪಂದ್ಯಕ್ಕೆ ಪ್ರವೇಶಿಸಿದರು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಅವನಿ ಲೆಖಾರಾ ಶೂಟಿಂಗ್ನಲ್ಲಿ ಅಗ್ರ ಬಹುಮಾನ ಗೆದ್ದ ನಂತರ ಇದು ಭಾರತದ ಎರಡನೇ ಚಿನ್ನದ ಪದಕವಾಗಿದೆ. https://kannadanewsnow.com/kannada/prosecution-sanction-against-cm-ag-to-hear-arguments-in-hc-on-september-9-abhishek-manu-singhvi-on-september-12/ https://kannadanewsnow.com/kannada/breaking-aap-mla-amanatullah-khan-arrested-by-ed-in-money-laundering-case/

Read More

ಬೆಂಗಳೂರು: ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮವು ಸೆಪ್ಟೆಂಬರ್‌ 1ರಿಂದ ಆರಂಭಗೊಂಡಿದೆ. 21 ಜಿಲ್ಲೆಗಳಲ್ಲಿ ಅಕ್ಟೋಬರ್‌ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ…

Read More

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಲಾಗಿದೆ. ಈ ಬೆನ್ನಲ್ಲೇ ಎಜಿ ಅವರು ಸೆ.9ಕ್ಕೆ ವಾದ ಮಂಡಿಸಿದ್ರೇ, ಸೆ.12ರಂದು ಅಭಿಷೇಕ್ ಮನು ಸಿಂಘ್ವಿ ಅವರು ತಮ್ಮ ವಾದವನ್ನು ಮಂಡಿಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇಂದು ದೂರುದಾರರ ಪರವಾಗಿ ಹಿರಿಯ ವಕೀಲ ಕೆ.ಜಿ ರಾಘವನ್ ತಮ್ಮ ವಾದವನ್ನು ನ್ಯಾಯಪೀಠದ ಮುಂದಿಟ್ಟರು. ನಾನು ಕಾನೂನು, ವಾಸ್ತವಾಂಶದ ಪ್ರಶ್ನೆಗಳ ಬಗ್ಗೆ ವಾದಿಸುತ್ತೇನೆ. ವಾಕ್ಚಾತುರ್ಯ ಮತ್ತು ವ್ಯಂಗ್ಯದಿಂದ ವಾದಿಸಲು ಬಯಸುವುದಿಲ್ಲ. ಭ್ರಟಾಚಾರ ತಡೆ ಕಾಯ್ದೆ ಸೆಕ್ಷನ್.17ಎ ಆಧರಿಸಿ ವಾದಿಸುತ್ತೇನೆ ಎಂಬುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಸೆಕ್ಷನ್.7ಸಿ ಓದಲು ಬಯಸುತ್ತೇನೆ. ಅನಗತ್ಯ ಲಾಭ, ಅನುಕೂಲ ಪಡೆಯುವುದು ಕೂಡ ಕಾಯ್ದೆಯ ವ್ಯಾಪ್ತಿಯಲ್ಲಿದೆ. ಭ್ರಷ್ಟಾಚಾರ ತಡೆ ಕಾಯ್ದೆ…

Read More

ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು (ಸೆಪ್ಟೆಂಬರ್‌ 6) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನಡೆಸಿತು. ಇಂದಿನ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸೆಪ್ಟೆಂಬರ್.9ಕ್ಕೆ ವಿಚಾರಣೆಯನ್ನು ಮುಂದೂಡಿತು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇಂದು ದೂರುದಾರರ ಪರವಾಗಿ ಹಿರಿಯ ವಕೀಲ ಕೆ.ಜಿ ರಾಘವನ್ ತಮ್ಮ ವಾದವನ್ನು ನ್ಯಾಯಪೀಠದ ಮುಂದಿಟ್ಟರು. ನಾನು ಕಾನೂನು, ವಾಸ್ತವಾಂಶದ ಪ್ರಶ್ನೆಗಳ ಬಗ್ಗೆ ವಾದಿಸುತ್ತೇನೆ. ವಾಕ್ಚಾತುರ್ಯ ಮತ್ತು ವ್ಯಂಗ್ಯದಿಂದ ವಾದಿಸಲು ಬಯಸುವುದಿಲ್ಲ. ಭ್ರಟಾಚಾರ ತಡೆ ಕಾಯ್ದೆ ಸೆಕ್ಷನ್.17ಎ ಆಧರಿಸಿ ವಾದಿಸುತ್ತೇನೆ ಎಂಬುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಸೆಕ್ಷನ್.7ಸಿ ಓದಲು ಬಯಸುತ್ತೇನೆ. ಅನಗತ್ಯ ಲಾಭ, ಅನುಕೂಲ ಪಡೆಯುವುದು ಕೂಡ ಕಾಯ್ದೆಯ ವ್ಯಾಪ್ತಿಯಲ್ಲಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲೇಖಿಸಿ ಹಿರಿಯ ವಕೀಲ ಕೆ.ಜಿ ರಾಘವನ್…

Read More

ಮಂಡ್ಯ: ಜಿಲ್ಲೆಯ ನಿಮಿಷಾಂಬ ಹಾಗೂ ಪಾಂಡವಪುರ ತಾಲ್ಲೂಕಿನ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ ಮಾರಮ್ಮನ ದೇಗುಲಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಇಂದು ರಾಮಲಿಂಗಾ ರೆಡ್ಡಿ, ಮಾನ್ಯ ಸಾರಿಗೆ ಹಾಗೂ‌ ಮುಜರಾಯಿ ಸಚಿವರು ಮಂಡ್ಯ ಜಿಲ್ಲೆಯ ನಿಮಿಷಾಂಬ ದೇವಸ್ಥಾನ ಹಾಗೂ ಪಾಂಡವಪುರ ತಾಲ್ಲೂಕಿನ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ‌ ಮಾರಮ್ಮನ ದೇಗುಲಗಳಿಗೆ ಭೇಟಿ ನೀಡಿದರು. ಮುಜರಾಯಿ ಸಚಿವರು ನಿಮಿಷಾಂಬ ದೇವಸ್ಥಾನಕ್ಕೆ ಭೇಟಿ, ಸದರಿ ದೇವಸ್ಥಾನಕ್ಕೆ ಹೆಚ್ಚ್ಇನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿರುವುದರಿಂದ ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳುವ ಸಂಬಂಧ Master Plan ತಯಾರಿಸಲು ಸೂಚಿಸಿದರು. ಇದೇ ಸಂದರ್ಭದಲ್ಲಿ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ ಮಾರಮ್ಮನ‌ ದೇಗುಲಕ್ಕೆ‌ ಮಾನ್ಯ ಸಚಿವರು ಭೇಟಿ‌ ನೀಡಿದರು. ಇಲ್ಲಿ ಮೂಲಭೂತ ಸೌಲಭ್ಯಗಳಾದ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯು‌ ಇಲ್ಲದಿರುವುದನ್ನು ಕಂಡು ಕೂಡಲೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ‌ ನೀಡಿದರು. ದೇವಸ್ಥಾನಗಳು ಭಕ್ತಾಧಿಗಳ ಸ್ನೇಹಿಯಾಗಿ‌ ಕಾರ್ಯನಿರ್ವಹಿಸಬೇಕು. ಭಕ್ತಾಧಿಗಳು…

Read More

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ರಿಯಾಸಿ ಜಿಲ್ಲೆಯ ವೈಷ್ಣೋ ದೇವಿ ದೇವಾಲಯದ ಹೊಸ ಟ್ರ್ಯಾಕ್ನಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಹಿಳಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪ್ರಕಾರ, ಮಧ್ಯಾಹ್ನ 2.35 ರ ಸುಮಾರಿಗೆ ಭವನದಿಂದ ಮೂರು ಕಿಲೋಮೀಟರ್ ಮುಂದಿರುವ ಪಂಚಿ ಬಳಿ ಭೂಕುಸಿತ ಸಂಭವಿಸಿದೆ. ಓವರ್ ಹೆಡ್ ಕಬ್ಬಿಣದ ರಚನೆಯ ಒಂದು ಭಾಗಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾತ್ರಾರ್ಥಿಗಳು ದೇವಾಲಯಕ್ಕೆ ತೆರಳುತ್ತಿದ್ದಾಗ ಭೂಕುಸಿತದ ನಂತರ ಕಬ್ಬಿಣದ ರಚನೆಯ ಅಡಿಯಲ್ಲಿ ಸಿಕ್ಕಿಬಿದ್ದರು ಎಂದು ಅವರು ಹೇಳಿದರು. ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಿಯಾಸಿಯ ಉಪ ಆಯುಕ್ತ ವಿಶೇಷ್ ಪಾಲ್ ಮಹಾಜನ್ ಪ್ರಾಥಮಿಕ ಮಾಹಿತಿ ವರದಿಯನ್ನು ಉಲ್ಲೇಖಿಸಿದ್ದಾರೆ. ಹಿರಿಯ ಪೊಲೀಸ್ ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. ತ್ರಿಕೂಟ ಬೆಟ್ಟಗಳ ಮೇಲಿರುವ ದೇವಾಲಯಕ್ಕೆ ಭೇಟಿ…

Read More