Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು. ನನ್ನ ಮತ್ತು ಜಯಂತಿ ಅವರ ರಾಜಕೀಯ ಮೌಲ್ಯಗಳು ಒಂದೇ ಆಗಿದ್ದರು. ಸಮಾಜ ಪ್ರೇಮಿ, ಮಾನವೀಯತೆಯ ಪ್ರೇಮಿ ಆಗಿದ್ದರು ಎಂದು ಬಣ್ಣಿಸಿದರು. ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ…
ಬೆಂಗಳೂರು : ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಚ್ ಎಂ.ಪಿ.ವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ ಹಾಗೂ ಅದು ಚೀನಾದಿಂದ ಬಂದಿಲ್ಲ. 2001 ರಿಂದಲೇ ಈ ವೈರಾಣು ಪತ್ತೆಯಾಗಿದ್ದು, ಎಚ್.ಎಂ.ಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ.ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಗೃಹ ಸಚಿವ ಜಿ.ಪರಮೇಶ್ವರ ಅವರು ಏರ್ಪಡಿಸಿದ್ದ ಔತಣಕೂಟ ರದ್ದಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಗೊತ್ತಿಲ್ಲ ಎಂದರು. ಔತಣ ಕೂಟ ಕರೆದಿರುವುದಾಗಲಿ ಅಥವಾ ರದ್ದಾಗಿರುವುದಾಗಲಿ ನನಗೆ ತಿಳಿದಿಲ್ಲ. ಅವರೊಂದಿಗೆ ಮಾತನಾಡುವೆ…
ತೆಲಂಗಾಣ: ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಏಳುಮೈಲಾರಂ ಗ್ರಾಮದಲ್ಲಿ ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆಯಲಾಗಿದೆ. ನಾಯಿಗಳ ಕಾಲು, ಬಾಯಿಯನ್ನು ಕಟ್ಟಿ ಚಿತ್ರ ಹಿಂಸೆ ನೀಡಲಾಗಿದೆ. ಈ ಭಯಾನಕ ಕೃತ್ಯದ ಪರಿಣಾಮ 32 ನಾಯಿಗಳಲ್ಲಿ 21 ಸಾವನ್ನಪ್ಪಿದ್ದರೇ ಸಾವು ಬದುಕಿನ ನಡುವೆ ಇದ್ದಂತ 11 ನಾಯಿಗಳನ್ನು ರಕ್ಷಿಸಲಾಗಿದೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಏಳುಮೈಲಾರಂ ಗ್ರಾಮದಲ್ಲಿ ನಾಯಿಗಳ ಮೇಲೆ ಧುರುಳರು ಕ್ರೌರ್ಯ ಮೆರೆದಿರುವ ಸುಳಿವು ಸಿಟಿಜನ್ಸ್ ಫಾರ್ ಅನಿಮಲ್ಸ್ (Citizens for Animals -CFA) ತಂಡಕ್ಕೆ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಪಾಳುಬಿದ್ದಿದ್ದಂತ ಸ್ಥಳಕ್ಕೆ ತೆರಳಿ ನೋಡಿದಂತ ತಂಡಕ್ಕೆ ಮನ ಕಲಕುವಂತ ಕೃತ್ಯದ ದರ್ಶನವಾಗಿದೆ. 32 ನಾಯಿಗಳನ್ನು ಬಿಗಿಯಾದ ತಂತಿಗಳಿಂದ ಕಾಲು, ಬಾಯಿಗೆ ಕಟ್ಟಿ ಬಿಡಲಾಗಿದ್ದು ಕಂಡು ಬಂದಿದೆ. ಕೂಡಲೇ ಸಿಎಫ್ಎ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಆಹಾರವಿಲ್ಲದೇ ಸಾಯುವ ಸ್ಥಿತಿಯಲ್ಲಿದ್ದಂತ 11 ನಾಯಿಗಳನ್ನು ರಕ್ಷಿಸಲಾಗಿದೆ. ಅಲ್ಲದೇ ಬದುಕುಳಿದ ನಾಯಿಗಳಿಗೆ ಅನಿಮಲ್ ವಾರಿಯರ್ಸ್ ಕನ್ಸರ್ವೇಶನ್ ಸೊಸೈಟಿ ( Animal Warriors Conservation Society -AWCS) ಹಾಗೂ…
ಟಿಬೆಟ್: ಇಂದು 6.8 ತೀವ್ರತೆಯ ಭೂಕಂಪದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 126 ಕ್ಕೆ ಏರಿದೆ ಎಂದು ಚೀನಾದ ಏಜೆನ್ಸಿ ಕ್ಸಿನ್ಹುವಾವನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ. ಭೂಕಂಪದಿಂದಾಗಿ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಬೀದಿಗಳಲ್ಲಿ ಕಸದ ರಾಶಿ ಬಿದ್ದಿದ್ದು, ಸುಮಾರು 200 ಜನರು ಗಾಯಗೊಂಡಿದ್ದಾರೆ. ಬಂಜರು ಮತ್ತು ವಿರಳ ಜನಸಂಖ್ಯೆಯ ಪ್ರದೇಶದಲ್ಲಿ 1,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಚೀನಾದ ಪ್ರಸಾರಕ ಸಿಸಿಟಿವಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ. ಪ್ರಸಾರಕರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕಟ್ಟಡದ ಅವಶೇಷಗಳು ಬೀದಿಗಳಲ್ಲಿ ಹರಡಿಕೊಂಡಿವೆ ಮತ್ತು ಕಾರುಗಳು ಪುಡಿಪುಡಿಯಾಗಿವೆ. ಮಂಗಳವಾರ ಸಂಜೆ ಟಿಬೆಟ್ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಆಫ್ ಸೀಸ್ಮಾಲಜಿ (ಎನ್ಸಿಎಸ್) ವರದಿ ಮಾಡಿದೆ. ಭಾರತೀಯ ಕಾಲಮಾನ ಸಂಜೆ 5:52 ಕ್ಕೆ ಈ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪವು 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಎಪಿ ವರದಿಯ ಪ್ರಕಾರ, ಚೀನಾದ ಅಧ್ಯಕ್ಷ…
ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡು ರಾಯಣ್ಣ ಬ್ರಿಗೇಡ್ ಆರಂಭಿಸಿ ಸಡ್ಡು ಹೊಡೆದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇದೀಗ ಕ್ರಾಂತಿ ವೀರ ಬ್ರಿಗೇಡ್ ಎಂಬ ಸಂಘಟನೆಯೊಂದಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಎಲ್ಲಾ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಶುರುವಾಗಿದ್ದು, ಈಶ್ವರಪ್ಪ ಈ ಸಂಘಟನೆಯ ಸಂಚಾಲಕರಾಗಲಿದ್ದಾರೆ. ಹಿಂದುಗಳ ಪರವಾಗಿ ಮತ್ತು ಹಿಂದುಳಿದವರ ಪರವಾಗಿ ಈ ಬ್ರಿಗೇಡ್ ಧ್ವನಿ ಎತ್ತಲಿದೆಯಂತೆ. ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದ ಕೆ ಎಸ್ ಈಶ್ವರಪ್ಪ ಬ್ರಿಗೇಡ್ ಕುರಿತಾಗಿ ಮಾಹಿತಿ ಹಂಚಿಕೊಂಡರು. ಫೆಬ್ರವರಿ 4 ರಂದು ಕ್ರಾಂತಿ ವೀರ ಬ್ರಿಗೇಡ್ ಸಂಘಟನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಇದಕ್ಕೆ ಚಾಲನೆ ನೀಡಲಾಗುತ್ತದೆ. ಹಿಂದೂಗಳು ಮತ್ತು ಶೋಷಿತರು ಒಂದಾಗಬೇಕು ಎಂಬ ಉದ್ದೇಶದೊಂದಿಗೆ ಈ ಸಂಘಟನೆ ಕಾರ್ಯನಿರ್ವಹಲಿದ್ದು, ಈಶ್ವರಪ್ಪ ಅವರ ಪುತ್ರ ಕಾಂತೇಶ್ ಕಾರ್ಯಾಧ್ಯಕ್ಷರಾಗಿದ್ದಾರೆ. ಅಲ್ಲದೆ, ಗೂಳಿಹಟ್ಟಿ ಶೇಖರ್, ಮುಕುಡಪ್ಪ ಅವರು ಸಂಚಾಲಕರಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಕ್ರಾಂತಿ ವೀರ ಬ್ರಿಗೇಡ್ ಕುರಿತಾಗಿ ಮಾತನಾಡಿದ ಕೆ ಎಸ್ ಈಶ್ವರಪ್ಪ,…
ಬೆಂಗಳೂರು: ಬಿಜೆಪಿ ನಾಯಕರು ಬೀದಿ ಹೋರಾಟ ನಡೆಸಿರುವುದು ವಿಪರ್ಯಾಸ! ಬಿಜೆಪಿ ನಾಯಕರಿಗೆ ಕಳಂಕಿತರನ್ನು, ಆರೋಪಿತರನ್ನು ಮತ್ತು ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನೂ ತಮ್ಮ ಹೋರಾಟಗಳಲ್ಲಿ ಜೊತೆ ಜೊತೆಯಲಿ ಕರೆದುಕೊಂಡು ಹೋಗದೆ ಇದ್ದರೆ ಆತ್ಮತೃಪ್ತಿ ಇರುವುದಿಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮೂರನ್ನು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಮಾತಿನಂತೆ ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ವರ್ತನೆಯನ್ನು ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಹೋರಾಟಗಳಿಗೆ ಬಿಜೆಪಿ ನಾಯಕರು ಕ್ರಿಮಿನಲ್ ಆರೋಪದ ಮುಖಂಡರನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗುತ್ತಿರುವುದು ನಾಚಿಕೆಗೇಡಿನ ಪರಮಾವಧಿ. ಇಡೀ ರಾಷ್ಟ್ರ ನೋಡುವಂತೆ ಪಿಎಸ್ಐ ಹಗರಣದಲ್ಲಿ ಗಂಭೀರ ಆರೋಪವನ್ನು ಹೊತ್ತಿದ್ದ ಭಾರತೀಯ ಜನತಾ ಪಕ್ಷ ತದನಂತರ ಸದರಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಕೈ ತೊಳೆದುಕೊಳ್ಳುವ ಪ್ರಯತ್ನವನ್ನು ಮಾಡಿತ್ತು. ಕರ್ನಾಟಕದ ಸಾವಿರಾರು ಯುವಕರ ಭವಿಷ್ಯವನ್ನು ಕಸಿ ದಂತಹ…
ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು. ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ…
ಚಿಕ್ಕಮಗಳೂರು: ನಾನು ಕೊನೆಯವರೆಗೂ ಜನಪರವಾಗಿ ಹೋರಾಟ ಮಾಡುತ್ತೇನೆ. ಸಂವಿಧಾನಿಕ, ಪ್ರಜಾತಂತ್ರ ಹೋರಾಟವನ್ನು ಮುಂದುವರೆಸುವುದಾಗಿ ನಕ್ಸಲ್ ನಾಯಕಿ ಮುಂಡಗಾರು ಲತಾ ತಿಳಿಸಿದ್ದಾರೆ. ನಾಳೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದಾರೆ. ಅವರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಕೂಡ ಒಬ್ಬರಾಗಿದ್ದಾರೆ. ಅವರು ಶರಣಾಗತಿಗೂ ಮುನ್ನಾ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸೋ ಸಂಬಂಧ ಸರ್ಕಾರಕ್ಕೆ ತಲುಪಿಸಲಾಗಿದೆ. ನಾವು ಸಮಾಜದ ಮುಖ್ಯ ವಾಹಿನಿಗೆ ಬರುತ್ತಿದ್ದೇವೆ ಎಂದಿದ್ದಾರೆ. ನಾನು ಪ್ರಜಾತಂತ್ರ, ಸಾಂವಿಧಾನಿಕ ಹೋರಾಟವನ್ನು ಶರಣಾಗತಿಯ ನಂತ್ರವೂ ಮುಂದುವರೆಸಲಿದ್ದೇನೆ. ಕೊನೆಯವರೆಗೂ ನಾನು ಜನಪರವಾಗಿ ನಿಂತು ಹೋರಾಟ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿರೋ ಕಾರಣ ಶರಣಾಗತಿ ಆಗುತ್ತಿರೋದಾಗಿ ಹೇಳಿದ್ದಾರೆ. ನಾನು ಯಾವುದೇ ಕಾರಣಕ್ಕೂ ಜನಪರ ಹೋರಾಟಗಳಿಂದ ಹಿಂದೆ ಸರಿಯೋದಿಲಲ್. ನನ್ನ ಉಸಿರು ಇರೋವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. https://kannadanewsnow.com/kannada/death-toll-in-tibet-earthquake-rises-to-126/ https://kannadanewsnow.com/kannada/notification-to-fill-up-300-posts-in-health-department-soon-siddaramaiah/
ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದಂತ ಅವರು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 3927 ಎಎನ್ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು ಎಂಬುದಾಗಿ ಸೂಚಿಸಿದರು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ…
ನೇಪಾಳ: ನೇಪಾಳ ಗಡಿಯ ಬಳಿ ಮಂಗಳವಾರ ಬೆಳಿಗ್ಗೆ 7.1 ತೀವ್ರತೆಯ ಭೂಕಂಪ ಸಂಭವಿಸಿದೆ. ಸುದ್ದಿ ಸಂಸ್ಥೆ ಎಎಫ್ಪಿ ಪ್ರಕಾರ, ಈ ಪ್ರದೇಶದಲ್ಲಿ ಭೂಕಂಪ ಮತ್ತು ಅದರ ಪರಿಣಾಮವಾಗಿ ಕಟ್ಟಡ ಕುಸಿತದಿಂದಾಗಿ ಇದುವರೆಗೆ 126 ಜನರು ಸಾವನ್ನಪ್ಪಿದ್ದಾರೆ. ಬಿಹಾರ, ದೆಹಲಿ-ಎನ್ಸಿಆರ್, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಭಾರತದ ಹಲವಾರು ಭಾಗಗಳು ಸಹ ಆಘಾತವನ್ನು ಅನುಭವಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮತ್ತು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ಪ್ರಕಾರ, ಬೆಳಿಗ್ಗೆ 6: 35 ಕ್ಕೆ ಟಿಬೆಟ್ನ ಕ್ಸಿಜಾಂಗ್ನಲ್ಲಿ 10 ಕಿ.ಮೀ ಆಳದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 28.86 ಉತ್ತರ ಮತ್ತು ರೇಖಾಂಶ 87.51 ಪೂರ್ವದಲ್ಲಿತ್ತು. ಎನ್ಸಿಎಸ್ ಪ್ರಕಾರ, ಕ್ಸಿಜಾಂಗ್ನಲ್ಲಿ ನಾಲ್ಕು ಭೂಕಂಪಗಳು ಸಂಭವಿಸಿವೆ. ಮೊದಲನೆಯದು ಬೆಳಿಗ್ಗೆ 5:41 ಕ್ಕೆ ರಿಕ್ಟರ್ ಮಾಪಕದಲ್ಲಿ 4.2, ಎರಡನೇ ಮತ್ತು ದೊಡ್ಡದು (7.1) ಬೆಳಿಗ್ಗೆ 6:35 ಕ್ಕೆ, ಮೂರನೆಯದು ಬೆಳಿಗ್ಗೆ 7:02 ಕ್ಕೆ 4.7 ತೀವ್ರತೆಯಲ್ಲಿ ಮತ್ತು ನಾಲ್ಕನೆಯದು 7:07 ಕ್ಕೆ…











