Subscribe to Updates
Get the latest creative news from FooBar about art, design and business.
Author: kannadanewsnow09
ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ನವದೆಹಲಿ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ವೈಯಕ್ತಿಕವಾಗಿ ಮಾತನಾಡುತ್ತಿದ್ದ ಕಾರ್ಯಕ್ರಮದಲ್ಲಿ ‘ಖಲಿಸ್ತಾನ್’ ಕುರಿತು ಪ್ರತ್ಯೇಕತಾವಾದಿ ಘೋಷಣೆಗಳನ್ನು ಎತ್ತಿದ್ದಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯ ಸೋಮವಾರ ಕೆನಡಾದ ಉಪ ಹೈಕಮಿಷನರ್ ಗೆ ಸಮನ್ಸ್ ನೀಡಿದೆ. “ಇಂತಹ ಗೊಂದಲಕಾರಿ ಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಅನಿಯಂತ್ರಿತವಾಗಿ ಮುಂದುವರಿಸಲು ಅನುಮತಿಸುವುದರ ಬಗ್ಗೆ ಭಾರತ ಸರ್ಕಾರದ ತೀವ್ರ ಕಳವಳ ಮತ್ತು ಬಲವಾದ ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದೆ. ಪ್ರತ್ಯೇಕತಾವಾದ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ಕೆನಡಾದಲ್ಲಿ ನೀಡಲಾದ ರಾಜಕೀಯ ಸ್ಥಳವನ್ನು ಇದು ಮತ್ತೊಮ್ಮೆ ವಿವರಿಸುತ್ತದೆ. ಅವರ ನಿರಂತರ ಅಭಿವ್ಯಕ್ತಿಗಳು ಭಾರತ-ಕೆನಡಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಲ್ಲದೆ, ಕೆನಡಾದಲ್ಲಿ ಹಿಂಸಾಚಾರ ಮತ್ತು ಅಪರಾಧದ ವಾತಾವರಣವನ್ನು ಉತ್ತೇಜಿಸುತ್ತವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. https://kannadanewsnow.com/kannada/heat-wave-conditions-likely-to-prevail-in-several-districts-of-the-state-till-may-2-imd/ https://kannadanewsnow.com/kannada/amit-shahs-fake-video-case-assam-police-arrests-first-accused/
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಗೆ ಜನ, ಜಾನುವಾರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮೇ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ. ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ ಎಂದು ತಿಳಿಸಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಬಿಸಿಗಾಳಿ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ ಬಿಸಿ ವಾತಾವರಣದ ಮುನ್ಸೂಚನೆಯನ್ನು ನೀಡಿದೆ. https://twitter.com/KarnatakaVarthe/status/1784902313200796123 https://kannadanewsnow.com/kannada/aaps-dilip-pandey-demands-bjps-stand-on-prajwal-revanna-issue/ https://kannadanewsnow.com/kannada/amit-shahs-fake-video-case-assam-police-arrests-first-accused/
ದೆಹಲಿ: ಅತ್ಯಾಚಾರ, ಮಹಿಳಾ ಶೋಷಣೆ ಮಾಡುವುದೇ ಬಿಜೆಪಿಯಲ್ಲಿ ಚುನಾವಣಾ ಟಿಕೆಟ್ ಪಡೆಯಲು ಮಾನದಂಡವಾಗಿದೆಯೇ? ಎಂದು ದೆಹಲಿ ಶಾಸಕ , ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯದ ಉಸ್ತುವಾರಿ ದಿಲೀಪ್ ಪಾಂಡೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ 3000 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಬಿಡುಗಡೆಯಾಗಿವೆ. ಇದೇ ವ್ಯಕ್ತಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಜನರ ಮುಂದೆ ಕೈಮುಗಿದು ಮತಯಾಚನೆ ಮಾಡಿದ್ದಾರೆ. ಇದೇನಾ ಬಿಜೆಪಿ ಸಂಸ್ಕೃತಿ? ಬಿಜೆಪಿ ಮೈತ್ರಕೂಟದ ಪಾಲುದಾರ, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ವಿಚಾರವಾಗಿ, ಬಿಜೆಪಿಯವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. https://twitter.com/AamAadmiParty/status/1784918139421012288 ಬ್ರಿಜ್ ಭೂಷಣ್ ರಿಂದ ಹಿಡಿದು ಪ್ರಜ್ವಲ್ ರೇವಣ್ಣವರೆಗೆ ಇಂತಹ ಹಲವು ಮಹಿಳಾ ಶೋಷಕರನ್ನು ಬಿಜೆಪಿಯಲ್ಲಿ ನೋಡಬಹುದು. ಪ್ರಧಾನಿ ಮೋದಿ ಅವರೆ ಅತ್ಯಾಚಾರಿಗಳಿಗೆ ನೀವು ಬೆಂಬಲ…
ಕೊಪ್ಪಳ : ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ರವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ರೈತರು, ಹಿಂದುಳಿದವರು, ಬಡವರು, ಅಲ್ಪಸಂಖ್ಯಾತರಿಗೆ ದೊಡ್ಡ ಅನ್ಯಾಯ ಮಾಡಿ ಅವರ ಬದುಕು ದುಸ್ತರಗೊಳಿಸಿದ್ದಾರೆ. ಬೆಲೆಯೇರಿಕೆ, ಹಣದುಬ್ಬರ, ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೀಡಾಯಿತು ಎಂದರು. ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತ ಮಾಡಿದ್ದು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ಹುಸಿಗೊಳಿಸಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದಿರಿ. ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಚ್…
ಯಾದಗಿರಿ: ಮಾಜಿ ಸಚಿವ ಭೈರತಿ ಬಸವರಾಜ್ ಅವರ ಕಾರು ಜಿಲ್ಲೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ, ಅದರಲ್ಲಿ ಇದ್ದಂತ ಕಾರು ಚಾಲಕ, ಗನ್ ಮ್ಯಾನ್ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿಯಲ್ಲಿ ಬಿಜೆಪಿಯ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಸೇರಿದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಅದರಲ್ಲಿ ಇದ್ದಂತ ಚಾಲಕ, ಬೈರತಿ ಬಸವರಾಜ್ ಅವರ ಗನ್ ಮ್ಯಾನ್ ಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ತಮ್ಮ ಕಾರಿನಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ತೆರಳದೇ ಬೇರೆಯವರ ಕಾರಿನಲ್ಲಿ ತೆರಳುತ್ತಿದ್ದರು. ಹೀಗಾಗಿ ಅವರು ಕಾರು ಪಲ್ಟಿ ಪ್ರಕರಣದಲ್ಲಿ ಯಾವುದೇ ಪ್ರಾಣಾಪಾಯಕ್ಕೆ ಒಳಗಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/let-modi-tell-us-what-he-has-done-for-karnataka-instead-of-abusing-congress-party-mallikarjun-kharge/ https://kannadanewsnow.com/kannada/amit-shahs-fake-video-case-assam-police-arrests-first-accused/
ಕಲಬುರಗಿ: ‘ಎಲ್ಲರಿಗೂ ನನ್ನ ನಮಸ್ಕಾರ’ ಎಂದು ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಪ್ರಿಯಾಂಕಾ ಗಾಂಧಿ ಅವರು ತಾವು ಸಭೆಗೆ ತಡವಾಗಿ ಬಂದಿರುವುದಕ್ಕೆ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಯಿಸಿದ್ದಕ್ಕೆ ಕ್ಷಮೆ ಕೇಳಿದರು. ಇದು ಬಸವಣ್ಣನವರ ಹಾಗೂ ಖಾಜಾಬಂದೇವನಾಜರ ಪ್ರವಿತ್ರ ಭೂಮಿ ಇದ್ದು. ಸತ್ಯ ಹಾಗೂ ಕ್ರಾಂತಿ ಮತ್ತು ಖರ್ಗೆ ಅವರ ಕರ್ಮಭೂಮಿಯಾಗಿದೆ. ನಮ್ಮ ದೇಶ ಸತ್ಯಮೇವ ಜಯತೇ ಎನ್ನುವ ಮಾತನ್ನು ಅಕ್ಷರಶಃ ಪಾಲಿಸುವ ದೇಶವಾಗಿದೆ. ಮನೆಯಲ್ಲಿ ತಾಯಿ ಮಕ್ಕಳು ಸತ್ಯ ಹೇಳುವಂತೆ ಹೇಳುತ್ತಾಳೆ. ಮಹಾತ್ಮಾಗಾಂಧಿ ಕೂಡಾ ಸತ್ಯದ ಹಾದಿಯಲ್ಲೆ ನಡೆದರು. ರಾಜಕೀಯ ಕೂಡಾ ಸತ್ಯದ ದಾರಿಯಲ್ಲೇ ನಡೆದಿದೆ. ಕಾಂಗ್ರೆಸ್ ಪಕ್ಷ ಸತ್ಯದ ರಾಜಕೀಯದ ಹಾದಿಯಲ್ಲೇ ನಡೆದಿದೆ. ಆದರೆ ಕಳೆದ ಹತ್ತುವರ್ಷಗಳಿಂದ ರಾಜಕೀಯದ ಹಾದಿ ಬದಲಾಗಿದೆ. ಇಲ್ಲಿ ಸತ್ಯಕ್ಕೆ ಜಾಗವಿಲ್ಲದಾಗಿದೆ. ಕಳೆದ ಐದು ವರ್ಷದ ಅವಧಿಯಲ್ಲಿ ಇಲ್ಲಿನ ಸಂಸದ ಒಂದು ರೈಲು ಬಿಡಿಸಿದ್ದು ಬಿಟ್ಟರೇ ಬೇರೆ ಏನು ಮಾಡಿಲ್ಲ ಎಂದು ಆರೋಪಿಸಿದ ಪ್ರಿಯಾಂಕಾ ಗಾಂಧಿ, ಕುಡಿಯುವ ನೀರಿಗೂ ಕೂಡಾ ಕಷ್ಟಪಡುವ ವಾತಾವರಣ ನಿರ್ಮಾಣವಾಗಿದೆ.…
ಕಲಬುರ್ಗಿ: ಪ್ರಧಾನಮಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೆ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದು ಎಐಸಿಸಿ ಅದದ್ಯಕ್ಷ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸೇಡಂ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಹಾಗೂ ನನಗೆ ಬೈಯುತ್ತಲೇ ಇರುತ್ತಾರೆ. ನಮಗೆ ಬೈಯುವ ಬದಲು ನಮ್ಮ ರಾಜ್ಯಕ್ಕೆ ಏನು ಮಾಡಿದ್ದಾರೆ ಎಂದು ಮೋದಿ ವಿವರಿಸಲಿ ಎಂದರು. ಆರ್ಟಿಕಲ್ 371 (J) ಜಾರಿಗೆ ತರಲು 330 ಸದಸ್ಯರ ಬೆಂಬಲ ಬೇಕಾಗಿತ್ತು. ನಾನು ಎಲ್ಲ ಸದಸ್ಯರ ಮನೆಗೆ ವೈಯಕ್ತಿಕ ಭೇಟಿ ನೀಡಿ ಅವರ ಬೆಂಬಲ ಕೋರಿದ್ದೆ. ಅವರೆಲ್ಲರ ಸಹಕಾರದಿಂದ ಅದು ಜಾರಿಯಾಗಿತ್ತು. ಈ ಪ್ರಮುಖ ಯೋಜನೆಯ ಜೊತೆಗೆ ಕೇಂದ್ರಿಯ ವಿಶ್ವವಿದ್ಯಾಲಯ, ಇಎಸ್ ಐಸಿ, ಜವಳಿ ಪಾರ್ಕ್, ರೇಲ್ವೆ ಕೋಚ್ ಫ್ಯಾಕ್ಟರಿ ಮುಂತಾದ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ಧ್ವನಿ ಎತ್ತುತ್ತೇನೆ ಎಂಬುದಾಗಿ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ ಎಂದಿದ್ದಾರೆ. ಇನ್ನೂ ಯಾರು ಕೂಡ ನನ್ನ ಬಗ್ಗೆಯಾಗಲಿ, ನನ್ನ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ ದನಿ ಎತ್ತುತ್ತೇನೆ ಎಂದು ಹೇಳಿದ್ದಾರೆ. https://twitter.com/hd_kumaraswamy/status/1784921489697022450 https://kannadanewsnow.com/kannada/what-is-bjp-nda-alliances-stand-on-pen-drive-case-dk-shivakumar-shivakumars-question/ https://kannadanewsnow.com/kannada/amit-shahs-fake-video-case-assam-police-arrests-first-accused/
ಬೆಳಗಾವಿ/ಕೂಡ್ಲಗಿ : “ಪೆನ್ ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್ ಡಿಎ ನಿಲುವೇನು ಎಂದು ತಿಳಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಳಿದರು. ಬೆಳಗಾವಿಯಲ್ಲಿ ಮತ್ತು ಕೂಡ್ಲಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದಂತ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ. ಆದರೆ ಈ ಹಗರಣದ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ತಮ್ಮ ನಿಲುವೇನು ಎಂಬುದರ ಬಗ್ಗೆ ಬಿಜೆಪಿ ಹಾಗೂ ಎನ್ ಡಿಎ ನಾಯಕರು ಉತ್ತರ ನೀಡಬೇಕು” ಎಂದರು. ಪೆನ್ ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್.ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ್ದ ಪ್ರಧಾನಮಂತ್ರಿಗಳು, ರಾಜ್ಯದಲ್ಲಿ ಕಾನೂನು…