Author: kannadanewsnow09

ಬೆಂಗಳೂರು: ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್‌ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ, ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಸಚಿವರು ಹೇಳಿದ್ದಾರಲ್ಲದೆ, ಮಹಿಳೆಯರಿಂದ ಬರುವ ಬೇಡಿಕೆ,…

Read More

ಬೆಂಗಳೂರು: ರಾಜ್ಯ ಹೆದ್ದಾರಿಗಳು ಹಾದು ಹೋಗುವ ನಗರ, ಪಟ್ಟಣ, ಗ್ರಾಮಗಳ ಪರಿಮಿತಿ ಹಾಗೂ ಇತರೆ ಆಕ್ಷೇಪಿತ ಪ್ರದೇಶಗಳಿಗೆ ಅನ್ವಯಿಸುವಂತೆ ನಿಗದಿಪಡಿಸಿದ್ದ ಕಟ್ಟಡ ರೇಖೆಯನ್ನು ಜಿಲ್ಲಾ ಮುಖ್ಯ ರಸ್ತೆಗಳಿಗೂ ಅನ್ವಯಿಸುವಂತೆ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಷನ್, ಸಿಟಿ ಮುನಿಸಿಪಲ್ ಕೌನ್ಸಿಲ್, ಟೌನ್ ಮುನಿಸಿಪಲ್ ಕೌನ್ಸಿಲ್, ಟೌನ್ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರವನ್ನು ಮೇಲೆ ಕ್ರಮ ಸಂಖ್ಯೆ (1)ರಲ್ಲಿ ಓದಲಾದ ಆದೇಶದಲ್ಲಿ ನಿಗಧಿಗೊಳಿಸಿ ಆದೇಶಿಸಲಾಗಿತ್ತು. ಸದರಿ ಆದೇಶವು ಇದುವರೆವಿಗೂ ಚಾಲ್ತಿಯಲ್ಲಿರುತ್ತದೆ. ಹಾಗೂ ಸದರಿ ಆದೇಶದಲ್ಲಿ ತಿಳಿಸಿರುವಂತೆ ಕಟ್ಟಡ ರೇಖೆಗಳನ್ನು ಗುರುತಿಸುವ ಬಗ್ಗೆ ಹೆಚ್ಚುವರಿ ಸ್ಪಷ್ಟನೆಯನ್ನು ಮೇಲೆ ಕ್ರಮ ಸಂಖ್ಯೆ (2)ರಲ್ಲಿ ಓದಲಾದ ಸುತ್ತೋಲೆಯಲ್ಲಿ ನೀಡಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:18.10.2004 ರ ಆದೇಶವು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಟೈರ್ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ವೆಂಕಟೇಶ್ವರ ಟೈರ್ ಅಂಗಡಿಯಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯನ್ನು ಬಾಗಿಲು ಹಾಕಿ ಹೋಗಿದ್ದಾಗ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಟೈರ್ ಅಂಗಡಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಅಂಗಡಿಯ ಮುಂದಿದ್ದಂತ ಎರಡು ವಾಹನಗಳು ಕೂಡ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯನ್ನು ನಂದಿಸಲು ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಹರಸಾಹಸ ಪಡುತ್ತಿದ್ದಾರೆ. ಇನ್ನೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗುತ್ತಿದೆ. https://kannadanewsnow.com/kannada/good-news-for-bhagyalakshmi-scheme-beneficiaries-funds-sanctioned-to-those-who-have-completed-18-years-of-age/ https://kannadanewsnow.com/kannada/applications-invited-for-the-post-of-village-assistant/

Read More

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 3302 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್.ಐ.ಸಿ.ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳನ್ನು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಿನಿ ವಿಧಾನಸೌಧ (ನೆಲಮಹಡಿ) ಯಲಹಂಕ, ಬೆಂಗಳೂರು ಉತ್ತರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 080-28462513 ಮೂಲಕ ಸಂಪರ್ಕಿಸಬಹುದು ಎಂದು ಯಲಹಂಕ ಬೆಂಗಳೂರು ಉತ್ತರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/applications-invited-for-the-post-of-village-assistant/ https://kannadanewsnow.com/kannada/chitradurga-power-supply-will-be-disrupted-in-these-areas-of-chitradurga-district-on-march-6-and-march-8/

Read More

ಚಿತ್ರದುರ್ಗ : 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು…

Read More

ಚಿತ್ರದುರ್ಗ : ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕಡೆಯ ದಿನಾಂಕದಂದು 25 ವರ್ಷ ಪೂರ್ಣಗೊಂಡಿರಬೇಕು. 45ವರ್ಷ ವಯೋಮಿತಿ ಒಳಗಿರಬೇಕು.. ಎಸ್‍ಎಸ್‍ಎಲ್‍ಸಿ, ವರ್ಗಾವಣೆ ಪ್ರಮಾಣ ಪತ್ರ, ಶಾಲಾ ದಾಖಲಾತಿ ಪ್ರಮಾಣ ಪತ್ರದಲ್ಲಿ ದಾಖಲಿಸಿರುವ ಜನ್ಮ ದಿನಾಂಕವನ್ನು ಮಾತ್ರವೇ ಪರಿಗಣಿಸಲಾಗುವುದು. ಅಭ್ಯರ್ಥಿಯು ಕನ್ನಡ ಓದುವ, ಬರೆಯುವ ಜ್ಞಾನವುಳ್ಳ ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆ-1ರಲ್ಲಿ ಸಲ್ಲಿಸಬೇಕು. ಗ್ರಾಮ ಸಹಾಯಕ ಹುದ್ದೆಯ ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗಧಿ ಆಗುವಂತಹ ಗೌರವಧನ ಪಾವತಿಸಲಾಗುವುದು. ಗ್ರಾಮ ಸಹಾಯಕ ಹುದ್ದೆ ನೇಮಕಾತಿಗಾಗಿ ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ…

Read More

ಬೆಂಗಳೂರು; ಕಾಡುಗೊಲ್ಲ ಸಮುದಾಯದವರಿಗೆ ಕಾಡುಗೊಲ್ಲ ಎಂಬುದಾಗಿ ಜಾತಿ ಪ್ರಮಾಣಪತ್ರ ವಿತರಿಸುವಲ್ಲಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿರವಾಜ ತಂಡರಿಗೆ ಹೇಳಿದ್ದಾರೆ. ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897281569833750740 ಅಂದಹಾಗೇ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಕಾಡುಗೊಲ್ಲ ಸಮುದಾಯದವರಿಗೆ ಕೇವಲ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಲ್ಲಿ ಹೆಚ್ ಸಿ ಬಾಲಕೃಷ್ಣ ಅವರು ಮನವಿ ಮಾಡಿದ್ದರು. ಈ ಮನವಿಗೆ ಮೇಲಿನಂತೆ ಸಚಿವರು ಉತ್ತರಿಸಿದ್ದಾರೆ. https://kannadanewsnow.com/kannada/minister-ishwar-khandre-orders-probe-into-leopard-death-in-tumkur/ https://kannadanewsnow.com/kannada/shivamogga-power-outages-in-these-areas-of-soraba-taluk-on-march-7/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಮಾರ್ಚ್.7ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಸೊರಬ ಎಇಇ ಸತ್ಯಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 07-03-2025ರಂದು 110/11 ಕವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂನಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.7ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದ್ದಾರೆ. ಮಾರ್ಚ್.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಪವರ್ ಕಟ್ ಪುರ, ಕಾನಳ್ಳಿ, ಉಳವಿ, ಹೊಸಬಾಳೆ, ದೂಗೂರು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಪವರ್ ಕಟ್ ಆಗಲಿದೆ. ಮಾರ್ಚ್.7ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/minister-ishwar-khandre-orders-probe-into-leopard-death-in-tumkur/ https://kannadanewsnow.com/kannada/16-hospitals-fined-for-violating-kpme-norms-in-bengaluru-fir-lodged-against-2-firms/

Read More

ಬೆಂಗಳೂರು: ತುಮಕೂರಲ್ಲಿ ಬೋನಿಗೆ ಬಿದ್ದಿದ್ದಂತ ಚಿರತೆಯೊಂದು ಆ ಬಳಿಕ ತೋಟದಲ್ಲಿ ಸಂಭವಿಸಿದಂತ ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿತ್ತು. ಈ ಪ್ರಕರಣದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ. ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತುಮಕೂರು ಜಿಲ್ಲೆ ತಿಪಟೂರು ವಲಯದ ಚೌಡ್ಲಾಪುರ ಗಸ್ತು ಮಧ್ಯೆಹಳ್ಳ ಗ್ರಾಮದ ತೋಟದಲ್ಲಿ ಬೋನಿಗೆ ಬಿದ್ದ ಚಿರತೆ, ನಂತರ ತೋಟದಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವೇಳೆ ಹೊಗೆಯಿಂದ ಉಸಿರುಕಟ್ಟಿ ಮೃತಪಟ್ಟದ್ದು, ಇದಕ್ಕೆ ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂಬುದಾಗಿ ತಿಳಿಸಿದ್ದಾರೆ. ಚಿರತೆಯ ಅಸಹಜ ಸಾವಿನ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯಿಂದ ಸ್ಥಳ ತನಿಖೆ ನಡೆಸಿ, ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲ. ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. https://kannadanewsnow.com/kannada/16-hospitals-fined-for-violating-kpme-norms-in-bengaluru-fir-lodged-against-2-firms/ https://kannadanewsnow.com/kannada/mangaluru-jail-food-poisoning-case-one-prisoners-condition-critical/

Read More

ಬೆಂಗಳೂರು: ರಾಜ್ಯದಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿದಂತ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಆರೋಗ್ಯ ಇಲಾಖೆ ದಂಡದ ಮೂಲಕ ಬಿಗ್ ಶಾಕ್ ನೀಡಿದೆ. 16 ಸಂಸ್ಥೆಗಳ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ್ದರೇ, 2 ಸಂಸ್ಥೆಗಳ ವಿರುದ್ಧ FIR ದಾಖಲಿಸಲಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್, ಪುನರ್ವಸತಿ ಕೇಂದ್ರಗಳ ಒಟ್ಟು 39 ಪ್ರಕರಣಗಳನ್ನು ಮಂಡಿಸಲಾಗಿತ್ತು. ಸದರಿ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಈ ಕೆಳಕಂಡ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. 16 ಸಂಸ್ಥೆಗಳ ವಿರುದ್ಧ ದಂಡ ಕೆಪಿಎಂಇ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಬೆಂಗಳೂರಿನ ಸುಂಕದಕಟ್ಟೆಯಲ್ಲಿನ ಕೀರ್ತನ ಫೌಂಡೇಶನ್ ಗೆ ರೂ.50,000 ದಂಡವನ್ನು ವಿಧಿಸಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನ ಕೋಸ್ಮೆಡಿಕ್ಸ್ ಕ್ಲಿನಿಕ್ ಗೆ ರೂ.25,000 ದಂಡ ಹಾಕಲಾಗಿದೆ. ಇನ್ನೂ ಗಿಡ್ಡಕೊನ್ನೇನಹಳ್ಳಿಯಲ್ಲಿನ ಅನನ್ಯ ಆಸ್ಪತ್ಪೆಗೆ ರೂ.50,000, ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿನ ಸಮೃದ್ಧಿ…

Read More