Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ, ವೇತನ ಬಡ್ತಿ ಸೇರಿದಂತೆ ವಿವಿಧ ಬಡ್ತಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( CLT) ಪಾಸ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಪಾಸ್ ಮಾಡೋದಕ್ಕೆ ನಿಗದಿ ಪಡಿಸಿದ್ದಂತ ಡೆಡ್ ಲೈನ್ ಅನ್ನು ರಾಜ್ಯ ಸರ್ಕಾರ ಡಿ.31, 2024ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ನಿಯಮ 2ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ಕರ್ನಾಟಕ ನಾಗರೀಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ಮುಂದೆ ಸದರಿ ನಿಯಮಗಳಎಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದಿದ್ದಾರೆ. ನಿಯಮ 3ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ದಿನಾಂಕ…
ಬೆಂಗಳೂರು: ಬಿಜೆಪಿಗೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ. ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್. ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂಬುದಾಗಿ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಖತ್ ಇಲ್ಲ ಅಷ್ಟೆ ಎಂದರು. ನರೇಂದ್ರ…
ಬೆಂಗಳೂರು: ಗೋಬಿ ಮಂಚೂರಿ ಅಂದ್ರೆ ಸಾಕು ಅನೇಕರು ಬಾಯಲ್ಲಿ ನೀರು ಸುರಿಸುತ್ತಾರೆ. ಕೆಲವರಿಗಂತೂ ಅದಂದ್ರೆ ಪಂಚ ಪ್ರಾಣ. ವಾರದಲ್ಲಿ ಒಂದು ದಿನವೇನು ದಿನವೂ ತಿನ್ನೋರು ಇರ್ತಾರೆ. ನೀವು ನಾಲಿಗೆ ಚಪ್ಪರಿಸಿಕೊಂಡು ಗೋಬಿ ಮಂಚೂರಿ ತಿನ್ನುತ್ತಾ ಇದ್ದಾರೇ, ಅದಕ್ಕೂ ಮುಂಚೆ ಅದರ ಒಡಲಾಳದಲ್ಲಿ ಇರೋ ಮಾರಕ ರಾಸಾಯನಿಕದ ಬಗ್ಗೆ ತಿಳಿಯಲೇ ಬೇಕು. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಆದೇಶದ ಮೂಲಕ ಇಂದು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು Cotton Candy ಗಳ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ ಕೂಡಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗಿರುತ್ತದೆ ಎಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು Cotton Candy ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿವರಗಳು ಈ ಕೆಳಕಂಡಂತಿರುತ್ತವೆ. ಗೋಬಿ ಮಂಚೂರಿ…
ನವದೆಹಲಿ: ರಾಜಕೀಯ ಪಕ್ಷಗಳು ನಗದೀಕರಿಸಿದ ಚುನಾವಣಾ ಬಾಂಡ್ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಮಾರ್ಚ್ 12ರಂದು (ಮಂಗಳವಾರ) ವ್ಯವಹಾರದ ಸಮಯದ ಅಂತ್ಯದ ವೇಳೆಗೆ ವಿವರಗಳನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಎಸ್ಬಿಐ ತನ್ನ ಅರ್ಜಿಯಲ್ಲಿ ಸಲ್ಲಿಸಿದ ಸಲ್ಲಿಕೆಗಳು ಕೋರಲಾದ ಮಾಹಿತಿಯು ಸುಲಭವಾಗಿ ಲಭ್ಯವಿದೆ ಎಂದು ಸೂಚಿಸುತ್ತದೆ. ಹೀಗಾಗಿ, ಜೂನ್ 30 ರವರೆಗೆ ಸಮಯವನ್ನು ವಿಸ್ತರಿಸುವಂತೆ ಕೋರಿ ಎಸ್ಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದರು. ಎಸ್ಬಿಐ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, “ನಾವು ಮಾಹಿತಿಯನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿದ್ದೇವೆ ಮತ್ತು ನಾವು ಇಡೀ ಪ್ರಕ್ರಿಯೆಯನ್ನು ಹಿಮ್ಮುಖಗೊಳಿಸಬೇಕಾಗಿದೆ. ಇದು ರಹಸ್ಯವಾಗಿರಬೇಕು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ, ನೀವು ಮುಚ್ಚಿದ ಲಕೋಟೆಯನ್ನು ತೆರೆದು, ವಿವರಗಳನ್ನು ಒಟ್ಟುಗೂಡಿಸಿ ಮಾಹಿತಿಯನ್ನು ನೀಡಬೇಕು. ಮುಚ್ಚಿದ…
ಚಿತ್ರದುರ್ಗ ಜಿಲ್ಲೆಯ ಕಾಡುಗೊಲ್ಲ ಸಮಾಜದ ಪ್ರಭಾವಿ ನಾಯಕರಾದ ಗಂಜಿಗಟ್ಟೆ ಶಿವಣ್ಣ ಅವರನ್ನು ಗ್ಯಾರಂಟಿ ಭಾಗ್ಯಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಾಯಿಸಿ ಕಾಡುಗೊಲ್ಲಸಮಾಜದ ಮುಖಂಡರು ಆಗ್ರಹಿಸಿದರು. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾಡುಗೊಲ್ಲಸಮಾಜದ ಮುಖಂಡ ಹಾಗು ನಿವೃತ್ತ ಪ್ರೊಫೆಸರ್ ಬಸವರಾಜಪ್ಪ ಅವರು, ಕಾಡುಗೊಲ್ಲ ಸಮುದಾಯದ ಗಂಜಿಗಟ್ಟೆ ಶಿವಣ್ಣ ಅವರು ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದು,ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಗೆಲುವು ಹಾಗು ಸಂಘಟನೆಯಲ್ಲಿ ತಮ್ಮ ತೊಡಗಿಸಿಕೊಂಡಿದ್ದಾರೆ. ಸತತ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದ್ದಾರೆ.ಆದ್ದರಿಂದ ಗ್ಯಾರಂಟಿ ಭಾಗ್ಯಗಳ ಜಿಲ್ಲಾ ಅನುಷ್ಟಾನ ಸಮಿತಿಗೆ ಇವರನ್ನು ಅಧ್ಯಕ್ಷರನ್ನಾಗಿಸಿದರೆ ಪರೋಕ್ಷವಾಗಿ ಪಕ್ಷಕ್ಕು ಅನುಕೂಲ ಆಗಲಿದೆ. ಅಲ್ಲದೇ ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾಡುಗೊಲ್ಲ ಸಮಾಜ ಚುನಾವಣೆ ವೇಳೆ ನಿರ್ಣಾಯಕ ಪಾತ್ರ ವಹಿಸಲಿದ್ದು, ಇವರನ್ನು ಅಧ್ಯಕ್ಷರನ್ನಾಗಿ ನೇಮಿಸಿದರೆ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದೆ. ಹೀಗಾಗಿ ರಾಜ್ಯದ ಗ್ಯಾರಂಟಿ ಭಾಗ್ಯಗಳ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ ಅವರು ಶಿವಣ್ಣ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಾಯಿಸಿ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲ್ಲುವ ಭರವಸೆಯಿದೆ. ಪ್ರಚಾರಕ್ಕೆ ಯಾರು ಯಾರು ಬರ್ತಾರೆ ನನ್ನ ಪರವಾಗಿ ಅಂತ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಹೇಳಿದರು. ನಾನು ಶಿವಮೊಗ್ಗದಲ್ಲಿ ಮನೆ ಮಾಡಿದ್ದೀನಿ. ಓಡಾಡೋದಕ್ಕೆ ಏನೂ ಸಮಸ್ಯೆ ಇಲ್ಲ. ಈ ಬಾರಿ ನನ್ನ ಪರವಾಗಿ ಪ್ರಚಾರಕ್ಕೆ ಶಿವರಾಜ್ ಕುಮಾರ್ ಫಿಕ್ಸ್. ಕಳೆದ ಬಾರಿ 14 ದಿನ ಮಾತ್ರವೇ ಪ್ರಚಾರ ಮಾಡಿದ್ದೆ. ಈ ಬಾರಿ ಹೆಚ್ಚಿನ ಸಮಯ ಶಿವಮೊಗ್ಗದಲ್ಲೇ ಇರುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/breaking-mandya-activists-arrested-for-protesting-against-government-release-of-water-to-tamil-nadu/ https://kannadanewsnow.com/kannada/congress-party-responsible-for-independent-candidates-victory-in-mandya-in-2019-hdk/
ಬೆಂಗಳೂರು: ಸಂವಿಧಾನವನ್ನು ಸುಟ್ಟ ಪೆರಿಯಾರ್ರನ್ನು ಪೂಜಿಸುವ ಕಾಂಗ್ರೆಸ್ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಇಂದು ಎಕ್ಸ್ ಮಾಡಿದ್ದು, 42ನೇ ತಿದ್ದುಪಡಿ ಮೂಲಕ ಸಂವಿಧಾನದ ಸಾರ್ವಭೌಮತ್ವಕ್ಕೆ ಧಕ್ಕೆ ತಂದು, ಅದರ ಮೂಲ ಸ್ವರೂಪವನ್ನು ತಿರುಚಿದ ಏಕೈಕ ಸಂವಿಧಾನ ವಿರೋಧಿ ರಾಜಕೀಯ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ವಾಗ್ಧಾಳಿ ನಡೆಸಿದೆ. ಸಂವಿಧಾನಕ್ಕೆ ಕಾಂಗ್ರೆಸ್ ಮಾಡಿದ್ದ ಈ ಅಪಚಾರವನ್ನು 44ನೇ ತಿದ್ದುಪಡಿ ಮೂಲಕ ಸಂವಿಧಾನದ ಮೂಲ ಆಶಯಗಳನ್ನು ಸ್ಥಿರೀಕರಣಗೊಳಿಸಿದ್ದು ಬಿಜೆಪಿ ಎಂಬುದನ್ನು ಇತಿಹಾಸವೇ ಸಾರಿ ಹೇಳುತ್ತದೆ ಎಂದು ತಿಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸಂವಿಧಾನದ ಪ್ರತಿಗೆ ನಮಸ್ಕರಿಸಿದ್ದು, ಸಂವಿಧಾನ ದಿನಾಚರಣೆಯನ್ನು ಜಾರಿಗೆ ತಂದಿದ್ದು, ಸಂವಿಧಾನದ ಬಗ್ಗೆ ಬಿಜೆಪಿಗಿರುವ ಗೌರವ ಮತ್ತು ಭಕ್ತಿಯ ಪ್ರತೀಕವಾಗಿದೆ. https://twitter.com/BJP4Karnataka/status/1766847797339607536 https://kannadanewsnow.com/kannada/anant-kumar-hegdes-statement-on-constitution-bjp-clarifies-his-personal-opinion/ https://kannadanewsnow.com/kannada/breaking-mandya-activists-arrested-for-protesting-against-government-release-of-water-to-tamil-nadu/
ಬೆಂಗಳೂರು: ಸಂವಿಧಾನ ಕುರಿತಂತೆ ಹೇಳಿರುವಂತ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿ ಅವರ ವೈಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು, ಪಕ್ಷದ ಅಭಿಪ್ರಾಯವಲ್ಲ ಎಂಬುದಾಗಿ ರಾಜ್ಯ ಬಿಜೆಪಿ ಸ್ಪಷ್ಟ ಪಡಿಸಿದೆ. ಈ ಸಂಬಂಧ ಎಕ್ಸ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಸಂವಿಧಾನ ಕುರಿತಂತೆ ಅನಂತ್ ಕುಮಾರ್ ಹೆಗಡೆ ಹೇಳಿರುವಂತ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅದು ಬಿಜೆಪಿ ಪಕ್ಷದ ಅಭಿಪ್ರಾಯವಲ್ಲ ಎಂಬುದಾಗಿ ತಿಳಿಸಿದೆ. ಬಿಜೆಪಿ ಸಂವಿಧಾನವನ್ನು ಎತ್ತಿ ಹಿಡಿಯುವ ನಿಲುವಿಗೆ ಬದ್ಧವಾಗಿದೆ. ಸಂವಿಧಾನದ ಕುರಿತಂತೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿರುವಂತ ಹೇಳಿಕೆ ಕುರಿತಂತೆ ಅವರಿಂದ ವಿವರಣೆಯನ್ನು ಕೇಳಲಾಗಿದೆ ಎಂಬುದಾಗಿ ಹೇಳಿದೆ. https://twitter.com/BJP4Karnataka/status/1766822401944486300 https://kannadanewsnow.com/kannada/breaking-mandya-activists-arrested-for-protesting-against-government-release-of-water-to-tamil-nadu/ https://kannadanewsnow.com/kannada/congress-party-responsible-for-independent-candidates-victory-in-mandya-in-2019-hdk/
ಮೈಸೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಮೈಸೂರಿನಲ್ಲಿ 268 ಕಿ.ಮೀ ಉದ್ದದ 22 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರು ಮತ್ತು ಉತ್ತರ ಕರ್ನಾಟಕದ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹುಳಿಯಾರು-ಕೆಬಿ ಕ್ರಾಸ್-ಚುಂಚನಹಳ್ಳಿ-ನೆಲ್ಲಿಗೆರೆ ರಸ್ತೆಯಂತಹ ಉಪಕ್ರಮಗಳು ಇವುಗಳಲ್ಲಿ ಸೇರಿವೆ ಎಂದು ಸಚಿವರು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಸರ್ವಿಸ್ ರಸ್ತೆಗಳಿಂದ ಕೂಡಿದ ಮೈಸೂರು ರಿಂಗ್ ರಸ್ತೆ ದಟ್ಟಣೆಯನ್ನು ನಿವಾರಿಸುತ್ತದೆ. ಬೇಲೂರು-ಹಾಸನ ಮತ್ತು ಯಡೇಗೌಡನಹಳ್ಳಿ-ಬಿಳಿಕೆರೆ ರಸ್ತೆಯ ಚತುಷ್ಪಥ ವಿಸ್ತರಣೆ, ಹಂಗರಹಳ್ಳಿ ಮತ್ತು ಹೊಳೆನರಸೀಪುರ ಬೈಪಾಸ್ ನಲ್ಲಿ ರಸ್ತೆ ಮೇಲ್ಸೇತುವೆಗಳ ಸ್ಥಾಪನೆಯಿಂದ ಪ್ರಯಾಣದ ಸಮಯ 2 ಗಂಟೆ ಕಡಿಮೆಯಾಗಲಿದೆ. https://twitter.com/BJP4Karnataka/status/1766829981160841403 ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ ಪ್ರಮುಖ ಸೇತುವೆಯ ನಿರ್ಮಾಣವು ಹುಣಸೂರು ಪಟ್ಟಣದ ಜನದಟ್ಟಣೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತದೆ. ಇದು ಸುವ್ಯವಸ್ಥಿತ ನಗರ ಯೋಜನೆಯ ಬದ್ಧತೆಯನ್ನು ಪ್ರತಿಧ್ವನಿಸುತ್ತದೆ. ಹೆಚ್ಚುವರಿಯಾಗಿ, ಶ್ರೀನಿವಾಸಪುರ ಮತ್ತು ಚಿಂತಾಮಣಿ ಬೈಪಾಸ್ ಗಳ ಅಭಿವೃದ್ಧಿಯು ಎರಡೂ ನಗರಗಳಲ್ಲಿ ದಟ್ಟಣೆಯನ್ನು…