Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಬಿಎಂಪಿಯಿಂದ ಇನ್ಮುಂದೆ ಮನೆ ಬಾಗಿಲಿಗೆ ಇ-ಖಾತಾ ತಲುಪಿಸುವಂತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ- ಖಾತಾ ತಲುಪಿಸುವ ಅಭಿಯಾನವನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು ಎಂದಿದ್ದಾರೆ. ನಮ್ಮ ವೆಬ್ಸೈಟ್ನಲ್ಲಿ ಲಭ್ಯವಿರುವ ಕರಡು ಇ-ಖಾತಾದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೆ, ನಮ್ಮ ಸಿಬ್ಬಂದಿ ಅವರ ಮನೆಗೆ ಹೋಗಿ ಅಗತ್ಯ ದಾಖಲೆಗಳನ್ನು ಪಡೆದು ಅಪ್ಲೋಡ್ ಮಾಡಿ ಅಂತಿಮ ಇ-ಖಾತಾ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1890749482985554411
ಮಂಡ್ಯ : ಮದ್ದೂರು ತಾಲ್ಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿರುವ ಲಕ್ಷ್ಮೀದೇವಿ ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶಿಸಿದ್ದಾರೆ. ಮದ್ದೂರು ತಾಲ್ಲೂಕಿನ ಕಸಬಾ ಹೋಬಳಿಯ ಭೀಮನಕೆರೆ ಗ್ರಾಮದ ಸರ್ವೆ ನಂಬರ್ 121/3ರ 2 ಎಕರೆ 4 ಗುಂಟೆ ಭೂಮಿಗೆ ಸಂಬಂಧಪಟ್ಟಂತೆ ಕಾಲಂ 11ರಲ್ಲಿದ್ದ ಋಣಭಾರವನ್ನು ತೆಗೆದು ಹಾಕಿ ಕರ್ತವ್ಯ ಲೋಪವೆಸಗಿದ್ದರು. ಈ ಬಗ್ಗೆ ಸಾರ್ವಜನಿಕರು ತಿಂಗಳ ಹಿಂದೆ ಮದ್ದೂರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದರು. ಈ ಬಗ್ಗೆ ಉಪ ವಿಭಾಗಾಧಿಕಾರಿ ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿಯು ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಆದ್ದೇಶಿಸಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/3-year-old-boy-killed-in-firing-with-real-gun-as-game-pistol/ https://kannadanewsnow.com/kannada/bescom-urges-farmers-not-to-use-single-phase-farm-pump-sets-for-irrigation-at-night/
ಮಂಡ್ಯ: ಆಟದ ಪಿಸ್ತೂಲ್ ಎಂಬುದಾಗಿ ತಿಳಿದು ನಿಜವಾದ ಪಿಸ್ತೂಲ್ ನಿಂದ ಪುಟಾಣಿ ಮಗುವಿನ ಮೇಲೆ ಮಿಸ್ ಫೈರಿಂಗ್ ಮಾಡಿದ ಕಾರಣ, ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೊಂದೆಮಾದಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕುಟುಂಬವೊಂದು ಕೋಳಿ ಫಾರಂನಲ್ಲಿ ವಾಸವಾಗಿತ್ತು. ಈ ಫಾರಂ ಮಾಲೀಕ ನರಸಿಂಹಮೂರ್ತಿ ಎಂಬುವರು ಗನ್ ಲೈಸೆನ್ಸ್ ಪಡೆದಿದ್ದರು. ಈ ಕೋಳಿ ಫಾರಂಗೆ ಶಂಕರ್ ದಾಸ್ ಎಂಬುವರು ಆಗಾಗ ಆಗಮಿಸುತ್ತಿದ್ದರು. ಅವರ ಪುತ್ರ ಸುದೀಪ್ ದಾಸ್ ಕೂಡ ಇಂದು ಬಂದಿದ್ದರು. 13 ವರ್ಷದ ಸುದೀಪ್ ದಾಸ್ ಹಾಗೂ 3 ವರ್ಷದ ಅಭಿಷೇಕ್ ಆಟವಾಡುತ್ತಿದ್ದರು. ಸುದೀಪ್ ಕೈಗೆ ನಿಜವಾದ ಗನ್ ಸಿಕ್ಕಿದೆ. ಅದು ಅಸಲಿ ಎಂಬುದು ತಿಳಿಯದೇ ಆಟವಾಡುತ್ತಿದ್ದಾಗ ಆಟದ ಪಿಸ್ತೂಲ್ ಎಂಬುದಾಗಿ ಭಾವಿಸಿ ಅಭಿಷೇಕ್ ಮೇಲೆ ಮಿಸ್ ಫೈರಿಂಗ್ ಮಾಡಿದ್ದಾನೆ. ಗುಂಡು ತಗುಲಿ ಗಾಯಗೊಂಡಿದ್ದಂತ ಅಭಿಷೇಕ್(3) ಅನ್ನು ನಾಗಮಂಗಲದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ…
ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ನಡೆದಂತ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ವಿವೇಕ್ ರೆಡ್ಡಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ಬೆಂಗಳೂರು ವಕೀಲರ ಸಂಘದ ಚುನಾವಣೆ 2025-2028ಗೆ ಮತದಾನ ನಡೆಯಿತು. ಮತದಾನದ ಬಳಿಕ ನಡೆದಂತ ಮತಏಣಿಕೆ ಕಾರ್ಯದಲ್ಲಿ ಮೊದಲ ಸುತ್ತಿನಿಂದ ಅಂತಿಮ ಸುತ್ತಿನವರೆಗೆ ಅಧ್ಯಕ್ಷರ ಹುದ್ದೆಯ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿಯೇ ನಡೆಯಿತು. 9ನೇ ಸುತ್ತಿನಲ್ಲಿ ಒಟ್ಟು 13,403 ಮತಗಳು ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಚಲಾವಣೆಗೊಂಡಿದ್ದವು. ಇವುಗಳಲ್ಲಿ ಎಪಿ ರಂಗನಾಥ್ 4,518 ಮತಗಳನ್ನು ಪಡೆದಿದ್ದರೇ, ವಿವೇಕ್ ಸುಬ್ಬಾರೆಡ್ಡಿ ಅವರು 6,820 ಮತಗಳನ್ನು ಪಡೆದರು. ಅಂತಿಮವಾಗಿ ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಮತ್ತೊಮ್ಮೆ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೂ ಜನರಲ್ ಸೆಕ್ರೇಟರಿ ಸ್ಥಾನಕ್ಕೆ ನಡೆದಂತ ಚುನಾವಣೆಯಲ್ಲಿ ಪ್ರವೀಣ್ ಗೌಡ ಹೆಚ್.ವಿ ಅವರು ಶಿವಮೂರ್ತಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರವೀಣ್ ಗೌಡ ಅವರು 4854 ಮತಗಳನ್ನು ಪಡೆದರೇ, ಶಿವಮೂರ್ತಿ ಅವರು 2,321 ಮತಗಳನ್ನು ಪಡೆದು ಸೋಲು…
ಬೆಂಗಳೂರು: ನಗರದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ 22-02-2025ರಂದು ಬೆಂಗಳೂರಿನ ವಿದ್ಯಾಮಾನ್ಯನಗರದಲ್ಲಿ ಉಚಿತ ಆರೋಗ್ಯ ತಪಾಸಣೆ, ವೈದ್ಯಕೀಯ ಶಿಬಿರ ಮತ್ತು ಔಷಧ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕುರಿತಂತೆ ಸಮೃದ್ಧಿ ಸೇವಾ ಚಾರಿಟೇಬಲ್ ಫೌಂಡೇಶನ್ (ರಿ.)ಯ ಲಕ್ಷ್ಮಿಕಾಂತ್ ಅವರು ಮಾಹಿತಿ ಹಂಚಿಕೊಂಡಿದ್ದು, ಫೆಬ್ರವರಿ 22ರಂದು ಉಚಿತ ಆರೋಗ್ಯ ತಪಾಸಣೆ ವೈದ್ಯಕೀಯ ಶಿಬಿರ & ಔಷದಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಯಾವೆಲ್ಲ ಉಚಿತ ಆರೋಗ್ಯ ತಪಾಸಣೆ.? 1 ಕಣ್ಣಿನ ತಪಾಸಣೆ 2 ದಂತ ತಪಾಸಣೆ ಮತ್ತು ಚಿಕಿತ್ಸೆ 3 ಕನ್ಸಲ್ಟಿoಗ್ ಮತ್ತು ಮೂಲಭೂತ ದೇಹ ತಪಾಸಣೆ ಎಷ್ಟು ಹೊತ್ತಿಂದ ಎಷ್ಟು ಹೊತ್ತಿನವರೆಗೆ.? ಶನಿವಾರ 22 ಫ್ರೆಬ್ರವರಿ 2025 ಬೆಳಗ್ಗೆ 9.30 ರಿಂದ ಸಂಜೆ 5.00ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಬೆಂಗಳೂರಿನ ಎಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ.? 123 ಮಂಜುನಾಥ ದೇವಸ್ಥಾನ ಎದುರು ಅಂದ್ರಹಳ್ಳಿ ಮುಖ್ಯರಸ್ತೆ ಕಾಳಿಕಾ ನಗರ. ವಿದ್ಯಾಮಾನ್ಯನಗರ ಬೆಂಗಳೂರು 560058. ಈ ಬಗ್ಗೆ ಹೆಚ್ಚಿನ…
ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೊಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯನ್ನು ಗಮನದಲ್ಲಿರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು. ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ನೀರಾವರಿ ಫೀಡರ್ ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ…
ನವದೆಹಲಿ: ಆಡಳಿತಾರೂಡ ಎಎಪಿ ಮೂಲೆ ಕಚ್ಚಿ, ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ದೆಹಲಿಯ ಮುಖ್ಯಮಂತ್ರಿ ಹೆಸರು ಘೋಷಣೆ ಸಂಬಂಧ ನಾಳೆ ಮಹತ್ವದ ಸಭೆ ನಡೆಯಲಿದೆ. ಆ ಬಳಿಕ ಫೆಬ್ರಬರಿ.18ರಂದು ದೆಹಲಿಯ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಹೌದು. ನಾಳೆ ದೆಹಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಬಿಜೆಪಿಯ ಹಿರಿಯ ನಾಯಕರಿಂದ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ದೆಹಲಿಯ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸಲಾಗುತ್ತಿದೆ. ಆ ಬಳಿಕ ಘೋಷಣೆ ಕೂಡ ಮಾಡಲಾಗುತ್ತದೆ. ಇನ್ನೂ ಈ ಘೋಷಣೆಯ ಬಳಿಕ, ಫೆಬ್ರವರಿ 18 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನೂತನ ದೆಹಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/delhi-stampede-no-platform-change-no-train-cancellation-says-indian-railways/ https://kannadanewsnow.com/kannada/another-diabolical-act-in-the-state-unidentified-woman-raped-brutally-murdered/
ಹಾಸನ: ನಗರದ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಿರ್ಮಾಣ ಹಂತದ ಕಟ್ಟದಲ್ಲೇ ಅಪರಿಚಿತ ಮಹಿಳ ಮೇಲೆ ಅತ್ಯಾಚಾರ ಎಸಗಿರುವಂತ ಕೀಚಕರು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಫೆ.13ರಂದು ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ರೈಲು ನಿಲ್ದಾಣದ ಸಮೀಪದ ರೈಲ್ವೆ ಇಲಾಖೆಯ ನಿರ್ಮಾಣ ಹಂತದ ಕಟ್ಟಡದಲ್ಲೇ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಎಸ್ಪಿ ಸೌಮ್ಯಲತಾ ಅವರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದಂತ ಮಹಿಳೆಗೆ 40 ವರ್ಷವಿರಬಹುದು ಎಂಬುದಾಗಿ ಅಂದಾಜಿಸಲಾಗಿದೆ. ಕೊಲೆಯ ಆರೋಪಿಗಳ ಬಗ್ಗೆ ತನಿಖೆಯ ನಂತ್ರ ಮಾಹಿತಿ ಹೊರಬೀಳಬೇಕಿದೆ. https://kannadanewsnow.com/kannada/delhi-stampede-no-platform-change-no-train-cancellation-says-indian-railways/ https://kannadanewsnow.com/kannada/will-get-reply-on-karnataka-bjp-state-presidents-post-by-feb-20-by-vijayendra/
ನವದೆಹಲಿ: ಶನಿವಾರ ಸಂಜೆ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಪ್ರಯಾಣಿಕರು ಸಾವನ್ನಪ್ಪಿದ್ದು, ಡಜನ್ಗಟ್ಟಲೆ ಜನರು ಗಾಯಗೊಂಡಾಗ ಯಾವುದೇ ರೈಲುಗಳನ್ನು ರದ್ದುಗೊಳಿಸಲಾಗಿಲ್ಲ ಅಥವಾ ಯಾವುದೇ ಪ್ಲಾಟ್ಫಾರ್ಮ್ ಬದಲಾವಣೆಯನ್ನು ಘೋಷಿಸಲಾಗಿಲ್ಲ ಎಂದು ಭಾರತೀಯ ರೈಲ್ವೆ ಭಾನುವಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್ಒ) ಹಿಮಾಂಶು ಶೇಖರ್ ಉಪಾಧ್ಯಾಯ, ಪ್ರಯಾಗ್ರಾಜ್ ಎಕ್ಸ್ಪ್ರೆಸ್ ಹತ್ತಲು ಪ್ಲಾಟ್ಫಾರ್ಮ್ 14 ರಲ್ಲಿ ಅಭೂತಪೂರ್ವ ಸಂಖ್ಯೆಯ ಮಹಾ ಕುಂಭ ಭಕ್ತರು ಜಮಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಿದರು. “ಯಾವುದೇ ನಿಗದಿತ ರೈಲಿನ ಪ್ಲಾಟ್ಫಾರ್ಮ್ ಅನ್ನು ಬದಲಾಯಿಸಲಾಗಿಲ್ಲ ಮತ್ತು ಯಾವುದೇ ರೈಲನ್ನು ರದ್ದುಗೊಳಿಸಲಾಗಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ವಾಸ್ತವವಾಗಿ, ದಟ್ಟಣೆಯನ್ನು ನಿರ್ವಹಿಸಲು ಸಂಜೆ ಐದರಿಂದ ಆರು ವಿಶೇಷ ರೈಲುಗಳನ್ನು ಪರಿಚಯಿಸಲಾಯಿತು” ಎಂದು ಉಪಾಧ್ಯಾಯ ಹೇಳಿದರು. “ನವದೆಹಲಿ ರೈಲ್ವೆ ನಿಲ್ದಾಣವು ಅಭೂತಪೂರ್ವ ಸಂಖ್ಯೆಯ ಯಾತ್ರಾರ್ಥಿಗಳನ್ನು ನಿರ್ವಹಿಸುತ್ತಿದೆ, ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಮತ್ತು ಅಲ್ಲಿಂದ 350 ರಿಂದ 400…
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯವೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನುಡಿದರು. ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ; ಏನಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. ಯತ್ನಾಳ್ರಿಗೆ ನೋಟಿಸ್ ಕೊಡಲು ತಾಕತ್ತಿಲ್ಲ ಎಂಬ ರಾಜಣ್ಣನವರ ಹೇಳಿಕೆ ಕುರಿತು ಗಮನ ಸೆಳೆದಾಗ, ರಾಜಣ್ಣನವರು ನಮ್ಮ ಪಕ್ಷದವರೇ? ಅವರು ಕಾಂಗ್ರೆಸ್ ಪಕ್ಷದವರು. ಅವರ…














