Author: kannadanewsnow09

ಬೆಂಗಳೂರು: ಇಂದು ನಟ ಪುನೀತ್ ರಾಜ್ ಕುಮಾರ್ ಅವರಿಗೆ 50ನೇ ವರ್ಷದ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಪವರ್ ಸ್ಟಾರ್ ಕುಟುಂಬದ ಅಪರೂಪದದ ವೀಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ. ಇಂದು ಅಪ್ಪು ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳ ಕಂಠೀರವ ಸ್ಟೂಡಿಯೋದಲ್ಲಿ ಅಭಿಮಾನಿಗಳ ದಂಡೇ ನೆರೆದಿದೆ. ಇಂದು ಬೆಳಿಗ್ಗೆಯಿಂದ ಅಪ್ಪು ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಸ್ಥಳವನ್ನು ಬಗೆ ಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ದೇವಸ್ಥಾನದ ಮಾದರಿಯಲ್ಲಿ ಮಂಡವನ್ನು ಅಲಂಕರಿಸಲಾಗಿದೆ. 50ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ದಂಪತಿ, ರಾಘಣ್ಣ ದಂಪತಿ ಮತ್ತು ಮಕ್ಕಳು ಸೇರಿದಂತೆ ರಾಜ್ ಕುಟುಂಬದ ಹಲವರು ಅಪ್ಪು ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು. ಇನ್ನೂ ಡಾ.ಪುನೀತ್ ರಾಜ್ ಕುಮಾರ್ 50ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ ರಾಘವೇಂದ್ರ…

Read More

ಶಿವಮೊಗ್ಗ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು 50ನೇ ಹುಟ್ಟು ಹಬ್ಬ. ಈ ಹಿನ್ನಲೆಯಲ್ಲಿ ಅಪ್ಪುವಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರತ್ನ, ಅಭಿಮಾನಿಗಳ ಮೆಚ್ಚಿನ ಅಪ್ಪು ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಗಳು ಅಂತ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿ ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು. ಅಪ್ಪು ಅಭಿಮಾನಿಗಳ ದಂಡೇ ನೆರೆದು ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನವನ್ನು ಪಡೆಯುತ್ತಿದೆ. ಈ ಹೊತ್ತಿನಲ್ಲಿ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಡಾ.ಪುನೀತ್ ರಾಜ್ ಕುಮಾರ್ ಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. https://kannadanewsnow.com/kannada/shivamogga-upa-lokayukta-justice-k-n-phanindra-to-visit-shivamogga-district-from-march-18-to-21/ https://kannadanewsnow.com/kannada/moral-policing-in-belagavi-district-man-attacked-by-group-of-youths-four-arrested/

Read More

ಶಿವಮೊಗ್ಗ : ರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು. ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾ.19ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷಾö್ಯಧಾರಗಳೊಂದಿಗೆ ಸಲ್ಲಿಸಬಹುದಾಗಿದೆ. ಮಾ.20 ರಂದು ಬೆಳಿಗ್ಗೆ 11.00 ರಿಂದ 11.30 ರವರೆಗೆ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ…

Read More

ಬೆಂಗಳೂರು: ಇಂದು ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬ. ಇಂದಿನ ಪುನೀತ್ ರಾಜ್ ಕುಮಾರ್ ಜನ್ಮದಿನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ನಿಷ್ಕಲ್ಮಷ ಮನಸಿನ ಹಸನ್ಮುಖಿ ವ್ಯಕ್ತಿಯಾಗಿದ್ದ ಅಪ್ಪುವಿಗೆ ನನ್ನ ನಮನಗಳು ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನಟನೆಯ ಜೊತೆಗೆ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಪುನೀತ್ ರಾಜ್‍ಕುಮಾರ್ ನೂರಾರು ದುರ್ಬಲ ಜೀವಗಳಿಗೆ ಬದುಕಿನ ಹಾದಿ ತೋರಿದ್ದರು. ಬಡವ, ಬಲ್ಲಿದನೆನ್ನದೆ ಸರ್ವರನ್ನೂ ಪ್ರೀತಿಸುತ್ತಿದ್ದ, ಸದಾ ಹಸನ್ಮುಖಿಯಾಗಿದ್ದ ಅಪ್ಪುವಿನ ಜೀವನ ಯುವಜನರಿಗೆ ಸಂದೇಶದಂತಿದೆ. ಅಪ್ಪುವಿನ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳು ಎಂದಿದ್ದಾರೆ. https://twitter.com/siddaramaiah/status/1901495562739830933 https://kannadanewsnow.com/kannada/another-death-due-to-monkey-disease-in-karnataka-woman-dies-in-chikkamagaluru/ https://kannadanewsnow.com/kannada/moral-policing-in-belagavi-district-man-attacked-by-group-of-youths-four-arrested/

Read More

ಬೆಳಗಾವಿ: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯೊಂದು ನಡೆದಿದ್ದಾಗಿ ತಿಳಿದು ಬಂದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದೆ. ಅಲ್ಲಾವುದ್ದೀನ್ ಫೀರ್ ಜಾಧೆ ಎಂಬುವರ ಮೇಲೆ ನಮ್ಮ ಸಮಾಜದ ಯುವತಿ ಜೊತೆಗೆ ಏಕೆ ಮಾತನಾಡುತ್ತೀಯ ಅಂತ ಹೇಳಿ ಯುವಕರ ಗುಂಪೊಂದು ಹಲ್ಲೆ ಮಾಡಲಾಗಿದೆ. ಅಲ್ಲಾವುದ್ದೀನ್ ಹರಿದ ಬಟ್ಟೆಯಲ್ಲೇ ಠಾಣೆಗೆ ತೆರಳಿ ದೂರು ನೀಡಿದ್ದರ ಪರಿಣಾಮ ಪ್ರಕರಣ ದಾಖಲಾಗಿದೆ. ಬೆಳಗಾವಿ ಗ್ರಾಮಾಂತರ ಠಾಣೆಯ ಪೊಲೀಸರು ಗ್ಯಾಂಗ್ ವಿರುದ್ಧ ದೂರು ದಾಖಲಿಸಿಕೊಂಡು, ತಡರಾತ್ರಿಯೇ ನಾಲ್ವರು ಯುವಕನ್ನು ಬಂಧಿಸಿದ್ದಾರೆ. ಸಂತೋಷ್ ಜಾಧ್ ಸಮಿತ್, ವೀರೇಶ್, ಜಯ ಎಂಬುದಾಗಿ ಗುರುತಿಸಲಾಗಿದೆ. ಪರಾರಿಯಾಗಿರುವಂತ ಮತ್ತಿಬ್ಬರಿಗಾಗಿ ಪೊಲೀಸರು ಹುಟುಕಾಟವನ್ನು ಮುಂದುವರೆಸಿದ್ದಾರೆ. https://kannadanewsnow.com/kannada/another-death-due-to-monkey-disease-in-karnataka-woman-dies-in-chikkamagaluru/ https://kannadanewsnow.com/kannada/pfi-joins-list-of-67-banned-terror-outfits-home-ministry-updates-list-of-67-banned-terror-outfits/

Read More

ಚಿಕ್ಕಮಗಳೂರು: ಮಂಗನಕಾಯಿಲೆ ಮಲೆನಾಡಿನಲ್ಲಿ ಉಲ್ಬಣಗೊಳ್ಳುತ್ತಿದೆ. ಇಂದು ಮಂಗನಕಾಯಿಲೆಯಿಂದ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರಿನ ಎನ್ ಆರ್ ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬುವರೇ ಸಾವನ್ನಪ್ಪಿದಂತ ಮಹಿಳೆಯಾಗಿದ್ದಾರೆ. ಮಂಗನಕಾಯಿಲೆಯಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಕಮಲಾ ಸಾವನ್ನಪ್ಪಿದ್ದಾರೆ. ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್ ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/pfi-joins-list-of-67-banned-terror-outfits-home-ministry-updates-list-of-67-banned-terror-outfits/ https://kannadanewsnow.com/kannada/no-property-registration-without-e-khata-state-govt/

Read More

ಬೆಂಗಳೂರು: ನಗರದ ಸಂಚಾರಿ ಪೊಲೀಸರು ಅಮಾನವೀಯ ನಡೆಯನ್ನು ತೋರಿದ್ದಾರೆ. ಬೈಕ್ ಸವಾರನೊಬ್ಬನಿಗೆ ಬೂಟು ಕಾಲಿನಿಂದ ಮೂರ್ಛೆ ಹೋಗುವಂತೆ ಥಳಿಸಿದಂತ ಘಟನೆ ವಿಜಯನಗರ ಸಂಚಾರಿ ಠಾಣೆಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರನೊಬ್ಬ ಈ ಗಂಭೀರ ಆರೋಪವನ್ನು ಮಾಡಿದ್ದಾನೆ. ವಿಜಯನಗರ ಸಂಚಾರ ಠಾಣೆಯ ಎಸ್ಐ ಶಾಂತರಾಮ್ ಹಾಗೂ ಸಿಬ್ಬಂದಿ ಸಿದ್ಧಿಕಿ ಎಂಬುವರು ತಮಗೆ ಬೂಟು ಕಾಲಿನಿಂದ ಒದ್ದು ಥಳಿಸಿದ್ದಾಗಿ ಆರೋಪಿಸಿದ್ದಾನೆ. ವಿಜಯನಗರ ಸಂಚಾರಿ ಠಾಣೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಥಳಿತದಿಂದ ಬೈಕ್ ಸವಾರ ಮೂರ್ಛೆ ಹೋಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂಚಾರಿ ಪೊಲೀಸರ ಈ ಅಮಾನವೀಯ ಕೃತ್ಯಕ್ಕೆ ಸಾರ್ವಜನಿಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ. https://kannadanewsnow.com/kannada/pfi-joins-list-of-67-banned-terror-outfits-home-ministry-updates-list-of-67-banned-terror-outfits/ https://kannadanewsnow.com/kannada/sensex-gains-280-points-nifty-closes-at-22450/

Read More

ನವದೆಹಲಿ: ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ನಿಷೇಧವನ್ನು ಎದುರಿಸುತ್ತಿರುವ 67 ಭಯೋತ್ಪಾದಕ ಸಂಘಟನೆಗಳು ಮತ್ತು ಕಾನೂನುಬಾಹಿರ ಸಂಘಗಳ ಗುಂಪನ್ನು ಗೃಹ ಸಚಿವಾಲಯದ (ಎಂಎಚ್ಎ) ನವೀಕರಿಸಿದ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಗೃಹ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಯುಎಪಿಎ ಸೆಕ್ಷನ್ 35 ರ ಅಡಿಯಲ್ಲಿ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆಗಳು ಎಂದು ವರ್ಗೀಕರಿಸಲಾದ ಮತ್ತು ಕಾಯ್ದೆಯ ಮೊದಲ ಶೆಡ್ಯೂಲ್ನಲ್ಲಿ ಸೇರಿಸಲಾದ 45 ಸಂಘಟನೆಗಳ ಹೆಸರುಗಳಿವೆ. ಉಳಿದ 22 ಗುಂಪುಗಳನ್ನು ಯುಎಪಿಎ ಸೆಕ್ಷನ್ 3 (1) ರ ಅಡಿಯಲ್ಲಿ ಕಾನೂನುಬಾಹಿರ ಸಂಘಗಳು ಎಂದು ವರ್ಗೀಕರಿಸಲಾಗಿದೆ. ಈ ಸಂಘಟನೆಗಳಲ್ಲಿ ಅನೇಕವು ಭಾರತದಾದ್ಯಂತ ಉಗ್ರಗಾಮಿತ್ವ, ಪ್ರತ್ಯೇಕತಾವಾದ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿವೆ. ಎಂಎಚ್ಎ ಅಂತಹ ಪಟ್ಟಿಯನ್ನು ನವೀಕರಿಸುತ್ತಲೇ ಇರುತ್ತದೆ. ಈ ನಿಷೇಧಿತ ಸಂಘಟನೆಗಳ ಘೋಷಣೆಯು ತನ್ನ ಗಡಿಯೊಳಗೆ ಭಯೋತ್ಪಾದನೆ ಮತ್ತು ಉಗ್ರಗಾಮಿ ಚಟುವಟಿಕೆಗಳನ್ನು ನಿಗ್ರಹಿಸುವ ಭಾರತದ ನಿರಂತರ ಪ್ರಯತ್ನಗಳ ಭಾಗವಾಗಿದೆ. ಯುಎಪಿಎ ಅಡಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳು ಆಸ್ತಿ ಮುಟ್ಟುಗೋಲು ಮತ್ತು ಕಾನೂನುಬಾಹಿರ…

Read More

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…

Read More

ನವದೆಹಲಿ: ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ 50 ಸೂಚ್ಯಂಕಗಳು ಸೋಮವಾರ ಬೆಳಿಗ್ಗೆ ಸಕಾರಾತ್ಮಕವಾಗಿಯೇ ಪ್ರಾರಂಭವಾದವು. ಬಿಎಸ್ಇ ಸೆನ್ಸೆಕ್ಸ್ 280 ಪಾಯಿಂಟ್ಗಳ ಏರಿಕೆಯೊಂದಿಗೆ 74,100 ಮಟ್ಟದಲ್ಲಿ 73,830 ಕ್ಕೆ ಪ್ರಾರಂಭವಾಯಿತು. ಎನ್ಎಸ್ಇ ನಿಫ್ಟಿ 50 ಸೂಚ್ಯಂಕವು 80 ಪಾಯಿಂಟ್ಸ್ ಏರಿಕೆಗೊಂಡು 22,480 ಮಟ್ಟಕ್ಕೆ ತಲುಪಿದೆ. ಸಕಾರಾತ್ಮಕ ಸ್ಥೂಲ ಅಂಶಗಳು ದಲಾಲ್ ಸ್ಟ್ರೀಟ್ ನಲ್ಲಿ ಮಾರುಕಟ್ಟೆ ಭಾವನೆಯನ್ನು ಹೆಚ್ಚಿಸಲು ಸಹಾಯ ಮಾಡಿದ ನಂತರ ಬೆಂಚ್ ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಸೋಮವಾರ ಏರಿಕೆ ಕಂಡವು. ಬಿಎಸ್ಇ ಸೆನ್ಸೆಕ್ಸ್ 362.75 ಪಾಯಿಂಟ್ಸ್ ಏರಿಕೆಗೊಂಡು 74,191.66 ಕ್ಕೆ ತಲುಪಿದ್ದರೆ, ಎನ್ಎಸ್ಇ ನಿಫ್ಟಿ 50 121 ಪಾಯಿಂಟ್ಸ್ ಏರಿಕೆಗೊಂಡು 22,518.20 ಕ್ಕೆ ತಲುಪಿದೆ. ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ನ ಮುಖ್ಯ ಹೂಡಿಕೆ ತಂತ್ರಜ್ಞ ಡಾ.ವಿ.ಕೆ.ವಿಜಯಕುಮಾರ್ ಮಾತನಾಡಿ, ಹತ್ತಿರದ ಮಾರುಕಟ್ಟೆ ಪ್ರವೃತ್ತಿಯು ಸಕಾರಾತ್ಮಕ ಪಕ್ಷಪಾತದೊಂದಿಗೆ ಸ್ಥಿರವಾಗಿರುವ ಸಾಧ್ಯತೆಯಿದೆ. https://kannadanewsnow.com/kannada/girls-should-not-blindly-believe-that-they-will-not-file-false-sexual-assault-cases-hc/ https://kannadanewsnow.com/kannada/gram-panchayat-member-arrested-on-charges-of-sexual-assault/

Read More