Subscribe to Updates
Get the latest creative news from FooBar about art, design and business.
Author: kannadanewsnow09
ರಾಜಸ್ಥಾನ: ಇಲ್ಲಿನ ಟೋಂಕ್ ಜಿಲ್ಲೆಯ ನಿವಾಯಿ ಪಟ್ಟಣದ ಪ್ರಸಿದ್ಧ ತಿಂಡಿ ಅಂಗಡಿಯಿಂದ ಖರೀದಿಸಿದ ಸಮೋಸಾದಲ್ಲಿ ವ್ಯಕ್ತಿಯೊಬ್ಬರು ಶೇವಿಂಗ್ ಬ್ಲೇಡ್ನ ತುಂಡು ಸಿಕ್ಕಿದೆ. ಬ್ಲೇಡ್ ತುಂಬಿದ ಸಮೋಸಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೋಮ್ ಗಾರ್ಡ್ ಜವಾನ್ ರಮೇಶ್ ವರ್ಮಾ ಅವರು ಜೈನ್ ನಮ್ಕೀನ್ ಭಂಡಾರ್ ಅವರಿಂದ ಕಚೋರಿ, ಮಿರ್ಚಿ ಬಡೆ ಮತ್ತು ಸಮೋಸಾಗಳನ್ನು ಖರೀದಿಸಿದ್ದರು. ಆದಾಗ್ಯೂ, ಅವರು ಮನೆಯಲ್ಲಿ ಸಮೋಸಾವನ್ನು ಒಡೆದು ನೋಡಿದಾಗ ಅದರ ಮಸಾಲಾದಲ್ಲಿ ಬ್ಲೇಡ್ ಹುದುಗಿರುವುದನ್ನು ಕಂಡುಕೊಂಡಾಗ ಬೆಚ್ಚಿ ಬಿದ್ದಿದ್ದಾರೆ. ನಾನು ಅಂಗಡಿಯಿಂದ ಕಚೋರಿ, ಮಿರ್ಚಿ ಬಡೆ ಮತ್ತು ಸಮೋಸಾಗಳನ್ನು ಖರೀದಿಸಿದ್ದೆ. ಮನೆಯಲ್ಲಿ ಸಮೋಸಾವನ್ನು ಒಡೆಯುವಾಗ, ನಾನು ಒಳಗೆ ಬ್ಲೇಡ್ ತುಂಡನ್ನು ಕಂಡುಕೊಂಡೆ. ನಾನು ತಕ್ಷಣ ಪೊಲೀಸರಿಗೆ ಮತ್ತು ಆಹಾರ ಇಲಾಖೆಗೆ ಮಾಹಿತಿ ನೀಡಿದ್ದೇನೆ. ತಂಡವು ಕ್ರಮ ಕೈಗೊಂಡಿದೆ ಎಂದು ವರ್ಮಾ ತಿಳಿಸಿದರು. ಈ ಸಂಪೂರ್ಣ ನಿರ್ಲಕ್ಷ್ಯದಿಂದ ದಿಗ್ಭ್ರಮೆಗೊಂಡ ವರ್ಮಾ ತಕ್ಷಣ ಅಂಗಡಿಯವನನ್ನು ಎದುರಿಸಿದರು. ಅಂಗಡಿಯವನು ದೂರನ್ನು ಪರಿಹರಿಸುವ ಬದಲು, ಅವನನ್ನು ವಜಾಗೊಳಿಸಿ ಹೊರಹೋಗುವಂತೆ ಒತ್ತಾಯಿಸಿದನು. https://twitter.com/ssgoyalat/status/1878096463789490536…
ನವದೆಹಲಿ: ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪ್ರಯಾಗ್ರಾಜ್ ಪ್ರದೇಶದಲ್ಲಿ ಮಹಾಕುಂಭ 2025 ಗೆ ಭಾರತೀಯ ರೈಲ್ವೆಯ ಸನ್ನದ್ಧತೆಯನ್ನು ಹೆಚ್ಚಿಸಲು ಹಲವಾರು ಪ್ರಮುಖ ಉಪಕ್ರಮಗಳನ್ನು ಉದ್ಘಾಟಿಸಿದ್ದಾರೆ. ಈ ಕ್ರಮಗಳು ಲಕ್ಷಾಂತರ ಯಾತ್ರಾರ್ಥಿಗಳಿಗೆ ಸುರಕ್ಷಿತ, ತಡೆರಹಿತ ಮತ್ತು ತಾಂತ್ರಿಕವಾಗಿ ಸುಧಾರಿತ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ಪ್ರಮುಖ ಘೋಷಣೆಗಳು ಮತ್ತು ಉದ್ಘಾಟನೆಗಳು: ಕುಂಭ ವಾರ್ ರೂಮ್ ಪ್ರಾರಂಭ ರೈಲ್ವೆ ಮಂಡಳಿ ಮಟ್ಟದಲ್ಲಿ ಮೀಸಲಾದ ವಾರ್ ರೂಮ್ ಉದ್ಘಾಟಿಸಲಾಗಿದೆ. ವಾರ್ ರೂಮ್ 24×7 ಕಾರ್ಯನಿರ್ವಹಿಸಲಿದೆ, ಇದರಲ್ಲಿ ಕಾರ್ಯಾಚರಣೆ, ವಾಣಿಜ್ಯ, RPF, ಮೆಕ್ಯಾನಿಕಲ್, ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ವಿಭಾಗಗಳ ಅಧಿಕಾರಿಗಳು ಮೇಲ್ವಿಚಾರಣೆ ಮತ್ತು ಚಟುವಟಿಕೆಗಳನ್ನು ಸಮನ್ವಯಗೊಳಿಸುತ್ತಾರೆ. 9 ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ 1,176 CCTV ಕ್ಯಾಮೆರಾಗಳು ನೈಜ-ಸಮಯದ ಮೇಲ್ವಿಚಾರಣೆಗಾಗಿ ಲೈವ್ ಫೀಡ್ಗಳನ್ನು ಒದಗಿಸುತ್ತವೆ. ಮಾನಿಟರಿಂಗ್ ರಚನೆ: ಪ್ಲಾಟ್ಫಾರ್ಮ್ → ನಿಲ್ದಾಣ → ವಿಭಾಗೀಯ → ಜಿಲ್ಲೆ → ವಲಯ → ರೈಲ್ವೆ ಮಂಡಳಿ. ವಾರ್ ರೂಮ್, ಜಿಲ್ಲಾ ಅಧಿಕಾರಿಗಳು ಮತ್ತು ರೈಲ್ವೆ ಅಧಿಕಾರಿಗಳ ನಡುವೆ ಪರಿಣಾಮಕಾರಿ…
ಬೆಂಗಳೂರು: ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ದೊಡ್ಡ ಯೋಜನೆಯಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಕಷ್ಟು ಶ್ರಮ ಹಾಕಿದ್ದಾರೆ. ಇದರ ರೂವಾರಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ನಾನು ಇಟ್ಟ ನಂಬಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮರ್ಥವಾಗಿ ನಿಭಾಯಿಸಿದ ಫಲವಾಗಿ ಇಂದು ರಾಜ್ಯದ 1.26 ಕೋಟಿ ಗೃಹಣಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಂದಾಯವಾಗುತ್ತಿದ್ದು, ಈ ಯೋಜನೆಗೆ ವಾರ್ಷಿಕ 33 ಸಾವಿರ ಕೋಟಿ ಮೀಸಲಿಡಲಾಗುತ್ತಿದೆ. ಇದರ ಸಂಪೂರ್ಣ ಕ್ರೆಡಿಟ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಲ್ಲಬೇಕು ಎಂದರು. ಇದೇ ವೇಳೆ ಮಾತನಾಡಿದಂತ ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜವಾಬ್ದಾರಿ ನೀಡಿ, ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೇ ಅತೀ ದೊಡ್ಡದಾಗಿರುವ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುವ ಭಾಗ್ಯವನ್ನು, ಅವಕಾಶವನ್ನು ಒದಗಿಸಿಕೊಟ್ಟ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯವರಿಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅವರು ಈ ಅವಕಾಶ…
ಬೆಂಗಳೂರು: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು ಎಂದು ಸಿಎಂ ವ್ಯಂಗ್ಯವಾಡಿದರು. ಇವತ್ತು “ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದರು. ಮನಸಾಕ್ಷಿಗೆ…
ಬಳ್ಳಾರಿ : ವಿಜಯನಗರ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ್ ನೆಹರು ನವೋದಯ ಶಾಲೆಯ 2025-26 ನೇ ಸಾಲಿನ ಪ್ರವೇಶ ಪರೀಕ್ಷೆಯ ದಿನಾಂಕ ನಿಗಧಿಯಾಗಿದ್ದು, ಜ.18 ರಂದು ಬೆಳ್ಳಿಗೆ 11 ಗಂಟೆಗೆ ಜಿಲ್ಲೆಯ ಆಯಾ ತಾಲೂಕಿನಲ್ಲಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ವೆಬ್ಸೈಟ್ https://cbseitms.rcil.gov.in/nvs/AdminCard ನಲ್ಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/cm-siddaramaiah-presents-bengaluru-press-club-special-award-to-minister-lakshmi-hebbalkar/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/
ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ 2024ನೇ ಸಾಲಿನ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್,ಕೆ.ಎಚ್.ಮುನಿಯಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪದಾಧಿಕಾರಿಗಳು, ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.…
ಬೆಂಗಳೂರು: ಪ್ರತಿ ವರ್ಷ ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಸಚಿವ ಎಂ.ಬಿ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಪ್ರಭಾಕರ್ , ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ ಮತ್ತಿತರರು ಇದ್ದರು. https://kannadanewsnow.com/kannada/cow-slaughter-case-minister-jamir-promises-to-get-three-cows-himself/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/
ಬೆಂಗಳೂರು: ಪ್ರಾಣಿಗಳಿಗೆ ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷವಿದ್ದರೂ, ಗಲಾಟೆ ಇದ್ದರೂ ಹೀಗೆ ಮಾಡಬಾರದು. ನಾನೇ ಮೂರು ಹಸುಗಳನ್ನು ಕೊಡಿಸುವುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಭರವಸೆಯನ್ನು ನೀಡಿದರು. ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಘಟನೆ ವಿಷಯ ತಿಳಿದಾಗ ನಾನು ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ಕೂಡಲೇ ಸಿಎಂ ಕಮೀಷನರ್ ಗೆ ಕರೆ ಮಾಡಿ, ಈ ಕೆಲಸ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಸೂಚಿಸಿದ್ದಾರೆ ಎಂದರು. ನಾನು ಕೂಡ ಪೋಲಿಸರಿಗೆ ಇಂತಹ ಕೆಲಸ ಮಾಡಿದಂತ ದುಷ್ಕರ್ಮಿಗಳನ್ನು ಬಂಧಿಸೋದಕ್ಕೆ ಹೇಳಿದ್ದೇನೆ. ಯಾರೇ ಆದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. ನಾನೇ ಮೂರು ಹೊಸ ಹಸುಗಳನ್ನು ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನಿದ್ದೇನೆ. ಯಾವುದೇ ಭಯಬೇಡ. ಆತಂಕ ಬೇಡ ಎಂಬುದಾಗಿ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಧೈರ್ಯ ತುಂಬಿ ಭರವಸೆ ನೀಡಿದರು. https://kannadanewsnow.com/kannada/union-minister-hdk-demands-strict-action-against-miscreants-who-harvested-cow-dung/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/
ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಹಸುಗಳ ಕೆಚ್ಚಲು ಕೊಯ್ದ ಘಟನೆ ಬಗ್ಗೆ ಬೆಳಗ್ಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯ ಸಮೇತ ವರದಿಗಳು ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಇದು ರಾಕ್ಷಸೀ ಕೃತ್ಯ. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಎಂಬುದಕ್ಕೆ ಇದುವೇ ಸಾಕ್ಷಿ. ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಹಸುವನ್ನು ನಾವು ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುತ್ತಿದ್ದೇವೆ. ಅಂಥ ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನನ್ನಬೇಕು? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿಣ…
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು. ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು. ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ…













