Author: kannadanewsnow09

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರೈಲು ಸಂಖ್ಯೆ 07301/07302 ಬೆಳಗಾವಿ-ಮಿರಜ್-ಬೆಳಗಾವಿ ಮತ್ತು ರೈಲು ಸಂಖ್ಯೆ 07303/07304 ಬೆಳಗಾವಿ-ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಎಕ್ಸ್ಪ್ರೆಸ್ ಸೇವೆಗಳನ್ನು ಜನವರಿ 31, 2025 ರವರೆಗೆ ವಿಸ್ತರಿಸಿದೆ. ಈ ಸೇವೆಗಳನ್ನು ಈ ಹಿಂದೆ ಡಿಸೆಂಬರ್ 31, 2024 ರವರೆಗೆ ಓಡಿಸಲು ನಿರ್ಧರಿಸಲಾಗಿತ್ತು. ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ. ಬೀರೂರು ನಿಲ್ದಾಣದಲ್ಲಿ ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ ಈ ಕೆಳಗಿನಂತೆ ಬೀರೂರು ನಿಲ್ದಾಣದಲ್ಲಿ ರೈಲುಗಳಿಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ: ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ವಾರಕ್ಕೆರಡು ಬಾರಿ ಬೀರೂರು ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯ ಜನವರಿ 01 ರಿಂದ ಜೂನ್ 30, 2025 ರವರೆಗೆ ಇನ್ನೂ ಆರು ತಿಂಗಳ ಕಾಲ ಮುಂದುವರಿಯುತ್ತದೆ. https://kannadanewsnow.com/kannada/new-years-eve-bmtc-buses-to-ply-in-bengaluru-till-late-tonight/ https://kannadanewsnow.com/kannada/in-a-tragic-incident-a-girl-who-went-to-anganwadi-in-the-state-died-after-being-bitten-by-a-snake/

Read More

ಮುಂಡಗೋಡ: ಅಂಗನವಾಡಿಗೆ ತೆರಳಿದ್ದಂತ ಬಾಲಕಿಯೊಬ್ಬಳಿಗೆ ಹಾವು ಕಡಿದು, ಸಾವನ್ನಪ್ಪಿರುವಂತ ಧಾರುಣ ಘಟನೆ ಮುಂಡಗೋಡಿನ ಮಾರಿಕಾಂಬಾ ನಗರದಲ್ಲಿ ನಡೆದಿದೆ. ಮುಂಡಗೋಡ ಪಟ್ಟಣದ ಮಾರಿಕಾಂಬಾ ನಗರದಲ್ಲಿರುವಂತ ಅಂಗನವಾಡಿಗೆ ಐದು ವರ್ಷದ ಬಾಲಕಿ ಮಯೂರಿ ಸುರೇಶ ಕಂಬಳೆಪ್ಪನವರು ತೆರಳಿದ್ದಳು. ಮಂಗಳವಾರದಂದು ಮಯೂರಿ ಮೂತ್ರ ವಿಸರ್ಜನೆಗಾಗಿ ಅಂಗನವಾಡಿ ಕೇಂದ್ರದ ಹಿಂಬದಿಗೆ ತೆರಳಿದ್ದಳು. ಈ ವೇಳೆ ಪುಟ್ಟ ಬಾಲಕಿಗೆ ಹಾವು ಕಡಿದೆ. ಇದರಿಂದ ರಕ್ತಸ್ತ್ರಾವ ಉಂಟಾಗಿದೆ. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತ ವೇಳೆ ಮಾರ್ಗ ಮಧ್ಯದಲ್ಲೇ ಮಯೂರಿ ಕೊನೆಯುಸಿರು ಎಳೆದಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/new-years-eve-bmtc-buses-to-ply-in-bengaluru-till-late-tonight/ https://kannadanewsnow.com/kannada/bengaluru-cs-licence-holders-yet-to-get-cs-licence-for-1-day-party/

Read More

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ತೊಡಗುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಟಿಸಿ ಮಹತ್ವದ ಕ್ರಮ ಕೈಗೊಂಡಿದೆ. ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2024 ರಂದು ತಡರಾತ್ರಿಯವರೆಗೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. 1       G-3     ಬ್ರಿಗೇಡ್ ರಸ್ತೆ    ಎಲೆಕ್ಟ್ರಾನಿಕ್ಸ್ ಸಿಟಿ 2       G-4           ಜಿಗಣಿ 3       G-2   ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ       ಸರ್ಜಾಪುರ 4      G-6           ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್ 5       G-7            ಜನಪ್ರಿಯ ಟೌನ್ ಶಿಪ್ 6       G-8           ನೆಲಮಂಗಲ 7       G-9           ಯಲಹಂಕ ಉಪನಗರ 5ನೇ ಹಂತ 8       G-10         …

Read More

ಬೆಂಗಳೂರು: ನಗರದಲ್ಲಿ ಅನೇಕರು ಇಂದು ರಾತ್ರಿ ಒಂದು ದಿನ ಹೊಸ ವರ್ಷಾಚರಣೆಯ ಕಾರಣದಿಂದ ಹಲವೆಡೆ ಪಾರ್ಟಿ ಆಯೋಜಿಸಲಾಗಿದೆ. ಹೀಗೆ ಪಾರ್ಟಿ ಆಯೋಜಿಸಿರೋರಿಗೆ ಬಿಗ್ ಶಾಕ್ ಎನ್ನುವಂತೆ ಇನ್ನೂ ಅನೇಕರಿಗೆ ಒಂದು ದಿನದ ಮಟ್ಟಿಗೆ ಮಧ್ಯದಂಗಡಿ ತೆರೆದು ಎಣ್ಣೆ ಮಾರಾಟಕ್ಕೆ ಲೈಸೆನ್ಸ್ ದೊರೆತಿಲ್ಲ ಎಂಬುದಾಗಿ ತಿಳಿದು ಬಂದಿದೆ.  ಬೆಂಗಳೂರಿನ ಹಲವೆಡೆ ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜಿಸಲಾಗಿದೆ. ಈ ಪಾರ್ಟಿಯಲ್ಲಿ ಮಧ್ಯ ಸರಬರಾಜು ಮಾಡುವುದಾಗಿಯೂ ಆಯೋಜಕರು ಟಿಕೆಟ್ ಮಾರಾಟ ಮಾಡಿದ್ದಾರೆ. ಹೊಸ ವರ್ಷಾಚರಣೆಯ ಪಾರ್ಟಿಗಾಗಿ ಈಗಾಗಲೇ ಹಲವರು ಆಯೋಜಿಸಿರುವಂತ ಕಾರ್ಯಕ್ರಮದ ಟಿಕೆಟ್ ಸೋಲ್ಡ್ ಔಟ್ ಆಗಿದ್ದಾವೆ. ಪಾರ್ಟಿಗೆ ತೆರಳೋದಕ್ಕೂ ಕೆಲವರು ಹೊರಟು ಸಿದ್ಧರಾಗಿದ್ದಾರೆ. ಹೀಗೆ ಪಾರ್ಟಿಗೆ ಹೊರಟವರಿಗೆ ನಿರಾಸೆ, ಶಾಕ್ ಎನ್ನುವಂತೆ ಒಂದು ದಿನದ ಮಟ್ಟಿಗೆ ಸಿಎಸ್ ತೆರೆದು, ಮದ್ಯ ಮಾರಾಟಕ್ಕೆ ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದ ಅನೇಕ ಪಾರ್ಟಿ ಆಯೋಜಕರಿಗೆ ಅನುಮತಿ ದೊರೆತಿಲ್ಲ. ಹೀಗಾಗಿ ಮದ್ಯ ಮಾರಾಟದ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳೋದಕ್ಕೆ ಸಾಧ್ಯವಾಗಿಲ್ಲ. ಜೊತೆಗೆ ಪಾರ್ಟಿ ಆಯೋಜಕರಿಗೆ ಒಂದು ತಲೆ ಬಿಸಿ…

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಈ ರೀತಿಯಾಗಿ ಪೋಸ್ಟರ್ ಅಂಟಿಸುತ್ತಿದ್ದಂತ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ತೊಡಗಿದ್ದ ಎಲ್ಲರನ್ನೂ ಇದೇವೇಳೆ ಬಂಧಿಸಲಾಯಿತು. https://kannadanewsnow.com/kannada/the-state-government-has-issued-an-order-to-control-stray-dogs-inside-and-outside-the-hospital-premises/ https://kannadanewsnow.com/kannada/cbi-probe-necessary-to-bring-supari-honeytrap-issues-to-come-out-narayanasamy/

Read More

ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡು ಪ್ರಿಯಾಂಕ್ ಖರ್ಗೆಯವರು ಬಿಜೆಪಿ ಮತ್ತು ನಮ್ಮ ನಾಯಕರಿಗೆ ಸವಾಲು ಹಾಕಿದ್ದಾರೆ. ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡುವುದಿಲ್ಲ ಎಂದಿದ್ದಾರೆ. ಇದರರ್ಥ ಏನು? ಹೋರಾಟಕ್ಕೆ ಬೆಲೆ ಇಲ್ಲವೇ? ನ್ಯಾಯ ಕೇಳುವುದು ತಪ್ಪೇ ಎಂದು ಪ್ರಶ್ನಿಸಿದರು. ಪ್ರಕರಣದ ಹಿಂದೆ ಎಲ್ಲ ಪ್ರಿಯಾಂಕ್ ಖರ್ಗೆಯವರ ಎಡಗೈ (ಲೆಫ್ಟ್ ಹ್ಯಾಂಡ್) ಬಲಗೈ (ರೈಟ್ ಹ್ಯಾಂಡ್) ಜನರೇ ಇದ್ದಾರೆ. ಆ ಕಾರಣದಿಂದ ನೀವು ವೈಯಕ್ತಿಕವಾಗಿ ಇದನ್ನು ತೆಗೆದುಕೊಳ್ಳದಿರಿ. ನನ್ನ ಮೇಲೆ ಆಪಾದನೆ ಬಂದುದು ಹಿಡಿಸಿಲ್ಲ; ಆದ್ದರಿಂದ ಯಾವುದೇ ರೀತಿಯ…

Read More

ಬೆಂಗಳೂರು: ರಾಜ್ಯಾಧ್ಯಂತ ಆಸ್ಪತ್ರೆ ಒಳ ಹಾಗೂ ಹೊರ ಆವರಣದಲ್ಲಿ ಬೀದಿ ನಾಯಿಗಳು ಓಡಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಲ್ಲದೇ ಇವುಗಳ ನಿಯಂತ್ರಣಕ್ಕೆ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಕಟ್ಟು ನಿಟ್ಟಾಗಿ ಪಾಲಿಸುವಂತೆ ಆದೇಶದಲ್ಲಿ ಖಡಕ್ ಸೂಚನೆ ನೀಡಲಾಗಿದೆ. ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲೆಯ ಡಿಹೆಚ್ಓ ಹಾಗು ಟಿಹೆಚ್ಓ ಹಾಗೂ ವೈದ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಿನಪತ್ರಿಕೆಗಳಲ್ಲಿ ನಾಯಿಗಳು ಆಸ್ಪತ್ರೆಯ ಒಳ ಹಾಗೂ ಹೊರ ಆವರಣಗಳಲ್ಲಿ ಬೀದಿ ನಾಯಿಗಳು ಪುವೇಶ ಮಾಡಿ ಒಳರೋಗಿ, ಹೊರರೋಗಿ, ಗರ್ಭಿಣಿಯರು, ಹಾಗೂ ತಾಯಿ-ಮಕ್ಕಳಿಗೆ ಅಪಾಯ ಉಂಟುಮಾಡುವ ಸಂಭವದ ಬಗ್ಗೆ, ದಿನಪತ್ರಿಕೆಗಳು, ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ವರದಿಗಳು ಪಕಟವಾಗುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ. ಆರೋಗ್ಯ ಸಂಸ್ಕೃಗಳಿಗೆ ಭೇಟಿ ನೀಡಿದ ಸಾರ್ವಜನಿಕರಿಗೆ ದಿನನಿತ್ಯ ತುರ್ತು ವಿಭಾಗ, ಹೊರ ಹಾಗೂ ಒಳರೋಗಿಗಳ ವಿಭಾಗ, ಗರ್ಭಿಣಿಯರು, ತಾಯಂದಿರು, ಹಾಗೂ ಮಕ್ಕಳಿಗೆ ಪ್ರಸೂತಿ ವಿಭಾಗದಲ್ಲಿ ಅವಶ್ಯ ವೈದ್ಯಕೀಯ ಸೇವೆಯನ್ನು ನಿರಂತರ ಒದಗಿಸಲಾಗುತ್ತಿರುತ್ತದೆ. ಆದುದರಿಂದ…

Read More

ಹುಬ್ಬಳ್ಳಿ: ಹೊಟ್ಟೆಯಲ್ಲೇ 8 ತಿಂಗಳ ಗರ್ಭಿಣಿಯಾಗಿದ್ದಂತ ಬಾಣಂತಿಯ ಮಗು ಸಾವನ್ನಪ್ಪಿತ್ತು. ಈ ಸುದ್ದಿಯನ್ನು ಕೇಳಿದಂತೆ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 6 ಬಾರಿ ಫಿಟ್ಸ್ ಗೆ ತುತ್ತಾಗಿದ್ದಂತ ಗರ್ಭಿಣಿ ರಾಧಿಕಾ ಎಂಬುವರಿಗೆ ತುರ್ತು ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲೇ 8 ತಿಂಗಳ ಮಗು ಸಾವನ್ನಪ್ಪಿತ್ತು. ಅವರನ್ನು ಕಿಮ್ಸ್ ಆಸ್ಪತ್ರೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದ್ದ ಕಾರಣ, ಗಂಭೀರಗೊಂಡಿತ್ತು. ಆದರೇ ಚಿಕಿತ್ಸೆ ಫಲಿಸದೇ ರಾಧಿಕಾ ಸಾವನ್ನಪ್ಪಿದ್ದರು. ಪತ್ನಿ ಸಾವಿನ ಸುದ್ದಿಯನ್ನು ಕೇಳಿದಂತ ರಾಧಿಕಾ ಪತಿ ಮಲ್ಲೇಶ್ (25) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/bengaluru-applications-invited-for-renewal-of-bmtc-bus-passes-at-concessional-rates/ https://kannadanewsnow.com/kannada/tight-security-arrangements-in-shivamogga-high-alert-sounded-for-new-year-celebrations-sp-mithun-kumar/

Read More

ಬೆಂಗಳೂರು: ನಗರದ ವಿಕಲಚೇತನರಿಗೆ ಮಹತ್ವದ ಮಾಹಿತಿಯನ್ನು ಬಿಎಂಟಿಸಿ ಹಂಚಿಕೊಂಡಿದ್ದೆ. 2025 ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ವಿತರಿಸುವ/ನವೀಕರಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂ.ಮ.ಸಾ.ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರ್ಕಾರದ ನಿರ್ದೇಶನದಂತೆ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಕೋರಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ವಿಕಲಚೇತನ ಫಲಾನುಭವಿಗಳಿಗೂ ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿತರಿಸುತ್ತಿದೆ ಎಂದಿದೆ. 2025 ನೇ ಸಾಲಿನ ವಿಕಲಚೇತನರ ಪಾಸಿಗಾಗಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ: 30.12.2024 ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ತದನಂತರ ತಾವು ಆಯ್ಕೆ ಮಾಡಿಕೊಂಡ ಬಸ್ ನಿಲ್ದಾಣಗಳಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ, ಪಾಸುಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ. 2025 ನೇ ಸಾಲಿನ ವಿಕಲಚೇತನರ ರಿಯಾಯಿತಿ ಪಾಸುಗಳನ್ನು ದಿನಾಂಕ 30.12.2024 ರಿಂದ ಕೆಳಕಂಡಂತೆ ವಿತರಿಸಲು/ನವೀಕರಿಸಲು ಕ್ರಮ ಕೈಗೊಳ್ಳಲಾಗಿದೆ. ವಿಕಲಚೇತನರ ನೂತನ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಡಿ.31ರ ಇಂದು ರಾತ್ರಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ ಎಲ್ಲೆಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಇಂದು ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಹೋಂ ಸ್ಟೇ, ಹೋಟೆಲ್ ಮಾಲೀಕರ ಜೊತೆಗೆ ಎಸ್ಪಿ ಮಿಥುನ್ ಕುಮಾರ್ ಸಭೆ ನಡೆಸಿದರು. ಈ ಸಭೆಯಲ್ಲಿ ಯಾವೆಲ್ಲ ನಿಯಮ ಅನುಸರಿಸಬೇಕೆಂದು ಮಾಲೀಕರಿಗೆ ಸೂಚನೆಯನ್ನು ನೀಡಿದರು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಲಾಗಿದೆ. ಹೋಟೆಲ್ ಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಜನಸಂದಣೆ ಇರುವ ಕಡೆ ಸಿಸಿ ಕ್ಯಾಮರಾ ಅಳವಡಿಸಿ. ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು. ಮಧ್ಯರಾತ್ರಿ 1 ಗಂಟೆಯವರೆಗೆ ಹೊಸ ವರ್ಷಾಚರಣೆಗೆ ಅವಕಾಶವಿದೆ. ಮಧ್ಯ ರಾತ್ರಿ 2 ಗಂಟೆಯವರೆಗೆ ಪೊಲೀಸರ ಗಸ್ತು ವ್ಯವಸ್ಥೆ ಮಾಡಲಾಗಿದೆ. ಜನರಿಗೆ ತೊಂದರೆ ಕೊಡುವವ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ…

Read More