Author: kannadanewsnow09

ಜೀವನದಲ್ಲಿ ಎಲ್ಲ ರೀತಿಯ ಸವಲತ್ತುಗಳನ್ನು ಪಡೆದು ಮಾನಸಿಕ ಸಂತೋಷದಿಂದ ಬದುಕುವವನು ಸಕಲ ಸಂಪತ್ತಿನಿಂದ ಬಾಳುತ್ತಾನೆ ಎಂದು ಹೇಳಲಾಗುತ್ತದೆ. ಯಶಸ್ಸಿನ ನಂತರ ನಾವು ಎಲ್ಲಾ ಸಂಪತ್ತು ಮತ್ತು ಯಶಸ್ಸನ್ನು ಪಡೆಯಲು ವಿವಿಧ ರೀತಿಯ ಪೂಜೆಗಳಿವೆ. ಅದರಲ್ಲಿ ಡಂಬಳ ದೀಪಾರಾಧನೆಯೂ ಒಂದು. ಈ ಪೂಜೆಯನ್ನು ಸರಿಯಾಗಿ ನಡೆಸುವುದು ಹೇಗೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಐಶ್ವರ್ಯಮ್…

Read More

ಬೆಂಗಳೂರು 22: 66/11 kV ಬ್ಯಾಟರಾಯನಪುರ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.12.2024 ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿ.24ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ L&T ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, L&T ಅಪಾರ್ಟ್‌ಮೆಂಟ್, ಸೆಂಚುರಿ ಅಪಾರ್ಟ್‌ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂವಿ ಲೇಔಟ್, ಪಾರ್ಕ್, ತೀಂಡ್ಲು ಗ್ರಾಮ ಬಡಾವಣೆ ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗ್ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. https://kannadanewsnow.com/kannada/shivamogga-power-outage-in-these-areas-of-the-district-from-10-am-tomorrow/ https://kannadanewsnow.com/kannada/one-nation-one-election-bills-unlikely-to-be-passed-in-parliament-digvijaya-singh/

Read More

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೇ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಾದ ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಗಣಿತ ದಿನಾಚರಣೆ ಶ್ರೀನಿವಾಸ ರಾಮಾನುಜನ್, ಗಣಿತ ಶಾಸ್ತ್ರಜ್ಞರು ಇವರ ಹುಟ್ಟುಹಬ್ಬದ ಸವಿನೆನಪಿಗಾಗಿ ಡಿಸೆಂಬರ್ 22 ರಂದು ದೇಶಾದ್ಯಂತ ರಾಷ್ಟ್ರೀಯ ಗಣಿತ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ಇವರ ಸಹಯೋಗದೊಂದಿಗೆ ಡಿ.23 ರಂದು ಬೆಳಗ್ಗೆ 10.30 ಯಿಂದ ಮದ್ಯಾಹ್ನ 1.00ಗಂಟೆಯವರೆಗೆ ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಂದು ಕೇಶವ ಪ್ರಸಾದ್ ಎಸ್. ಸಹ ಶಿಕ್ಷಕರು (ಗಣಿತ), ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜು (ಪ್ರೌಡಶಾಲಾ ವಿಭಾಗ),…

Read More

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ‌ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 31 ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1288 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1288 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್…

Read More

ಮಂಡ್ಯ : ಫೆ.2 ರಂದು ನಿಗಧಿಯಾಗಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆಗೆ ಮದ್ದೂರು ತಾಲೂಕಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಮುಖಂಡ ಹಾಗೂ ಹಾಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಭಾನುವಾರ ಬೆಳಿಗ್ಗೆ ಕೇಂದ್ರ ಸಚಿವ ಹಾಗೂ ಮಂಡ್ಯ ಕ್ಷೇತ್ರದ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿದ್ದಾರೆ. ಬಿಡದಿ ಬಳಿಯ ಕುಮಾರಸ್ವಾಮಿ ಅವರ ತೋಟದ ಮನೆಗೆ ಭಾನುವಾರ ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ ಭೇಟಿ ನೀಡಿದ ಅವರು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಕೆಲಕಾಲ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಬಳಿಕ, ಎಸ್.ಪಿ.ಸ್ವಾಮಿ ಮನವಿಗೆ ಹೆಚ್.ಡಿ.ಕೆ ಸಕಾರಾತ್ಮಕ ಸ್ಪಂದಿಸಿದ್ದು, ಬೆಂಬಲ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಕದನ ಈಗಾಗಲೇ ರಂಗೇರಿದ್ದು, ಕಲಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮದ್ದೂರು ತಾಲೂಕಿನಿಂದ 5 ಮಂದಿ ಪ್ರಭಾವಿ ವ್ಯಕ್ತಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕದಲೂರು ರಾಮಕೃಷ್ಣ, ಮಾರಸಿಗನಹಳ್ಳಿ ಹರೀಶ್ ಹಾಗೂ ಜೆಡಿಎಸ್…

Read More

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ವಡದ ಪ್ರಾಧಿಕಾರಿಗಳ ಮತ್ತು ರಂಟೆ ಯೋಜನಗಳ ಅನುಷ್ಠಾನ ಪ್ರಾಧಿಕಾರದ ದಿರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಮೂಲಕ ಗುತ್ತಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ನಡಾವಳಿಯನ್ನು ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ / ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಆಪ್ತ ಖಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮೇಲೆ ಓದಲಾದ…

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ ಗ್ರೂಪ್-ಬಿ ಕ್ಲಿನಿಕಲ್ ಇನ್ ಸ್ಟ್ರಕ್ಟರ್ – 01 ಸಹಾಯಕ ಕೀಟಶಾಸ್ತ್ರಜ್ಞರು – 07 ಮೈಕ್ರೋಬಯಾಲಜಿಸ್ಟ್ – 12…

Read More

ಬೆಂಗಳೂರು: ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರದಿಂದ ಬಾಕಿ ಉಪಧನ, ಗಳಿಕೆ ರೆಜ ನಗಧೀಕರಣಕ್ಕೆ ರೂ.224.05 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದು ಸಾಂಕೇತಿಕವಾಗಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚೆಕ್ ವಿತರಿಸಿದರು. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, 2020ರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿವೃತ್ತ ಸಿಬ್ಬಂದಿಗಳಿಗೆ ನೀಡಬೇಕಾಗಿದ್ದ ಬಾಕಿ ಹಣವನ್ನು ಇಂದು ದಿನಾಂಕ 21.12.2024 ರಂದು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ಸಾಂಕೇತಿಕವಾಗಿ ಮೂವರಿಗೆ ಸಿಬ್ಬಂದಿಗಳಿಗೆ ಬಾಕಿ ಉಪಧನ ಹಾಗೂ ಗಳಿಕೆ ರಜೆ ನಗದೀಕರಣ ಮೊತ್ತದ ಚೆಕ್ ಅನ್ನು ವಿತರಿಸಿ, ʼನುಡಿದಂತೆ ನಡೆದಿದ್ದೇವೆ ಎಂಬುದನ್ನು ನಾವು ಮತ್ತೊಮ್ಮೆ ಸಾಬೀತುಪಡಿಸಿರುತ್ತೇವೆ ಎಂದು ತಿಳಿಸಿದರು. ಈ ಹಿಂದೆ ನೌಕರರ ಸಂಘಟನೆಗಳೊಂದಿಗೆ ನಡೆದ ಸಭೆಯಲ್ಲಿ ಅವರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿ, ಅವುಗಳಲ್ಲಿ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವುದಾಗಿ ನೀಡಿದ್ದ ಭರವಸೆಯಂತೆ, ಈ ಪೈಕಿ ನಾಲ್ಕು ಸಾರಿಗೆ…

Read More

ಶಿವಮೊಗ್ಗ: ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರು ವಿದ್ಯಾರ್ಥಿಗಳು, ಪೋಷಕರಿಂದ ಹಲ್ಲೆಗೊಳಗಾಗಿದ್ದರು. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಹಲ್ಲೆಗೊಳಗಾಗಿದ್ದ ಉಪನ್ಯಾಸಕರನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರ ಸೂಚನೆಯ ಮೇರೆಗೆ ಇಂದು ಆಸ್ಪತ್ರೆಗೆ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಅಲ್ಲದೇ ಉಪನ್ಯಾಸಕ ರಾಜು ಅವರಿಗೆ ಧೈರ್ಯವನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತುಂಬಿದರು. ಆನಂತ್ರ ಸಾಗರ ತಾಲ್ಲೂಕು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರನ್ನು ಭೇಟಿಯಾದಂತ ಸಂಘದ ಪದಾಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೂ ಮನವಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ.ಡಿ.ಕೆ, ಸುರೇಶ್ ಜಂಬಾನಿ, ವಿಜಯ್ ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದಂತ ಸಣ್ಣಹನುಮಂತಪ್ಪ ಸೇರಿದಂತೆ ಇತರರು ಹಾಜರಿದ್ದರು.…

Read More

ಪುಣೆ: ಈ ತಿಂಗಳ ಆರಂಭದಲ್ಲಿ ಪ್ರಮಾಣವಚನ ಸಮಾರಂಭದ ನಂತರ ಮಹಾರಾಷ್ಟ್ರ ಸರ್ಕಾರವು ಬಹುನಿರೀಕ್ಷಿತ ಕ್ಯಾಬಿನೆಟ್ ಖಾತೆಗಳ ಹಂಚಿಕೆಯನ್ನು ಶನಿವಾರ ಪ್ರಕಟಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗೃಹ, ಇಂಧನ (ನವೀಕರಿಸಬಹುದಾದ ಇಂಧನವನ್ನು ಹೊರತುಪಡಿಸಿ), ಕಾನೂನು ಮತ್ತು ನ್ಯಾಯಾಂಗ, ಸಾಮಾನ್ಯ ಆಡಳಿತ ಮತ್ತು ಮಾಹಿತಿ ಮತ್ತು ಪ್ರಚಾರ ಸೇರಿದಂತೆ ಮಹತ್ವದ ಸಚಿವಾಲಯಗಳನ್ನು ಉಳಿಸಿಕೊಂಡಿದ್ದಾರೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ, ಉಪಮುಖ್ಯಮಂತ್ರಿ ಮತ್ತು ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರಿಗೆ ರಾಜ್ಯ ಅಬಕಾರಿ ಇಲಾಖೆಯ ಜೊತೆಗೆ ನಿರ್ಣಾಯಕ ಹಣಕಾಸು ಮತ್ತು ಯೋಜನಾ ಖಾತೆಗಳನ್ನು ವಹಿಸಲಾಗಿದೆ. ಅಜಿತ್ ಪವಾರ್ ಅವರ ಹಣಕಾಸು ಉಸ್ತುವಾರಿ ಸ್ಥಾನವು ಸಮ್ಮಿಶ್ರ ಸರ್ಕಾರದ ಅಧಿಕಾರ ರಚನೆಯಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಮಾಜಿ ಮುಖ್ಯಮಂತ್ರಿ ಮತ್ತು ಈಗ ಇಬ್ಬರು ಉಪಮುಖ್ಯಮಂತ್ರಿಗಳಲ್ಲಿ ಒಬ್ಬರಾದ ಏಕನಾಥ್ ಶಿಂಧೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ (ಸಾರ್ವಜನಿಕ ಉದ್ಯಮಗಳು) ಸಚಿವಾಲಯಗಳನ್ನು ವಹಿಸಲಾಗಿದೆ. ಗೃಹ ಖಾತೆಯನ್ನು ಭದ್ರಪಡಿಸಿಕೊಳ್ಳಲು ಅವರು ಉತ್ಸುಕರಾಗಿದ್ದಾರೆ ಎಂದು ಈ ಹಿಂದೆ ವರದಿಗಳು ಸೂಚಿಸಿದ್ದರೂ, ಅದು…

Read More