Author: kannadanewsnow09

ಬೆಳಗಾವಿ: ಪತ್ನಿಯ ಚಿಕಿತ್ಸೆಗಾಗಿ ಹಣ ಕೊಡದ ಸಿಟ್ಟಿನಿಂದಲೇ ಆಕೆಯ ತಾಯಿಯನ್ನೇ ಅಳಿಯ ಚಾಕುವಿನಿಂದ ಏಣ್ಣೆ ಏಟಲ್ಲಿ ಇರಿದು ಹತ್ಯೆ ಮಾಡಿರುವಂತ ಘಟನೆ ಬೆಳಗಾವಿಯ ಖಾಸಾಬಾಗ್ ನಲ್ಲಿ ನಡೆದಿದೆ. ಬೆಳಗಾವಿಯ ಖಾಸಬಾಗ್ ನಲ್ಲಿ ಏಣ್ಣೆ ಏಟಲ್ಲಿ ಇಂದು ಸಂಕ್ರಾಂತಿಯ ಸಂದರ್ಭದಲ್ಲಿಯೇ ಅತ್ತೆಗೆ ಎಳ್ಳು ಬೆಲ್ಲ ಕೊಡೋದಕ್ಕೆ ತೆರಳಿದಂತ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಚಾಕು ಇರಿತಕ್ಕೆ ಒಳಗಾದಂತ ರೇಣುಕಾ ಶ್ರೀಧರ್ ಎಂಬಾಕೆ ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವ ಉಂಟಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಪತ್ನಿಯ ಚಿಕಿತ್ಸೆಗಾಗಿ ಅತ್ತೆ ರೇಣುಕಾ ಶ್ರೀಧರ್ ಗೆ ಹಣ ನೀಡುವಂತೆ ಅಳಿಯ ಶುಭಂ ಕಾಟ ಕೊಡುತ್ತಿದ್ದನಂತೆ. ಆದರೂ ಅತ್ತೆ ರೇಣುಕಾ ಹಣವನ್ನು ನೀಡಿರಲಿಲ್ಲವಂತೆ. ಇಂದು ಸಂಕ್ರಾಂತಿಯಂದು ಎಳ್ಳುಬೆಲ್ಲ ಕೊಡಲು ಹೋಗಿ, ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಈ ಸಂಬಂಧ ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/6-soldiers-injured-in-blast-along-loc-in-jammu-and-kashmir/ https://kannadanewsnow.com/kannada/is-swarna-prashana-helpful-for-the-sound-health-of-children-heres-the-complete-information/

Read More

ರಾಜೌರಿ : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭವಾನಿ ಸೆಕ್ಟರ್ ನ ಮಕ್ರಿ ಪ್ರದೇಶದ ನಿಯಂತ್ರಣ ರೇಖೆಯ ಉದ್ದಕ್ಕೂ ಮಂಗಳವಾರ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಕನಿಷ್ಠ ಆರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೈನಿಕರು ನಿಯಂತ್ರಣ ರೇಖೆಯ ಬಳಿ ವಾಡಿಕೆಯ ಗಸ್ತು ನಡೆಸುತ್ತಿದ್ದಾಗ ಅವರಲ್ಲಿ ಒಬ್ಬರು ಆಕಸ್ಮಿಕವಾಗಿ ಗಣಿಯ ಮೇಲೆ ಕಾಲಿಟ್ಟರು. ಇದು ಸ್ಫೋಟಕ್ಕೆ ಕಾರಣವಾಯಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಸ್ಫೋಟದ ಪರಿಣಾಮವಾಗಿ ಆರು ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಸ್ಥಳಾಂತರಿಸಿ ವೈದ್ಯಕೀಯ ಚಿಕಿತ್ಸೆಗಾಗಿ ರಾಜೌರಿಯ 150 ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತು. ಸೈನಿಕರಿಗೆ ಆಗಿರುವ ಗಾಯಗಳು ಸಣ್ಣದಾಗಿದ್ದು, ಎಲ್ಲಾ ಆರು ಮಂದಿಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. “ಸೈನಿಕರಿಗೆ ಸಮಯೋಚಿತ ವೈದ್ಯಕೀಯ ನೆರವು ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಳನುಸುಳುವಿಕೆಯನ್ನು ಎದುರಿಸಲು ಮತ್ತು ಗಡಿ ಭದ್ರತೆಯನ್ನು ಕಾಪಾಡಿಕೊಳ್ಳಲು ಭದ್ರತಾ ಕ್ರಮಗಳ ಭಾಗವಾಗಿ ರಾಜೌರಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ನಿಯಂತ್ರಣ ರೇಖೆಯನ್ನು ಭಾರಿ ಪ್ರಮಾಣದಲ್ಲಿ ಗಣಿಗಾರಿಕೆ…

Read More

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ತಮ್ಮ ಕುಟುಂಬ ಸಮೇತವಾಗಿ ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿಕೊಳ್ಳಲು ಈ ಸಿಬ್ಬಂದಿ, ರಾಜ್ಯದ ಎಲ್ಲಾ ಭಾಗಗಳಿಂದ ಬಂದಿದ್ದರು ಹಾಗೂ ಹಬ್ಬದ ದಿನ ಕುಮಾರಸ್ವಾಮಿ ಅವರು ಎಲ್ಲಿರುತ್ತಾರೋ ಅಲ್ಲಿಗೆ ಬಂದು ತಮ್ಮ ಮಕ್ಕಳ ಜತೆ ಸೇರಿಕೊಂಡು ಹಬ್ಬ ಆಚರಿಸುತ್ತಾರೆ. ಕಳೆದ ಆರು ವರ್ಷಗಳಿಂದ ಅವರು ಇದನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ. ಈ ಹಬ್ಬಕ್ಕೆ ಉದ್ಯೋಗಿಗಳೆಲ್ಲ ಮಂಗಳವಾರ ಸಚಿವರ ಬೆಂಗಳೂರಿನ ಜೆ.ಪಿ.ನಗರದ ನಿವಾಸಕ್ಕೆ ಬಂದು ಹಬ್ಬ ಆಚರಿಸಿದರು. ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದ ಸಚಿವರು: ಈ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಸಚಿವ ಕುಮಾರಸ್ವಾಮಿ ಅವರು; ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು…

Read More

ಬೆಂಗಳೂರು: ನಗರದ ಬಿಎಂಟಿಸಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ನಾಳೆಯಿಂದ ಜನವರಿ.30ರವರೆಗೆ “ನಮ್ಮ ಬಿಎಂಟಿಸಿ” ಮೊಬೈಲ್ ಅಪ್ಲಿಕೇಶನ್ನ ತಾತ್ಕಾಲಿಕ ಅಲಭ್ಯವಾಗಲಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025 ರ ಜನವರಿ 15 ರಿಂದ 30 ರವರೆಗೆ “ನಮ್ಮ ಬಿಎಂಟಿಸಿ” ಮೊಬೈಲ್ ಅಪ್ಲಿಕೇಶನ್ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಸಾರ್ವಜನಿಕರಿಗೆ ತಿಳಿಯಪಡಿಸುತ್ತಿರುವುದಾಗಿ ಹೇಳಿದೆ. ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ (Karnataka State Data Centre -KSDC) ಮೈಗ್ರೆಂಟ್ ಕೆಲಸ ನಡೆಯುತ್ತಿದೆ. ಈ ಕಾರಣದಿಂದ ಸಮಸ್ಯೆ ಎದುರಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮ ( Bangalore Metropolitan Transport Corporation -BMTC) ಈ ಅವಧಿಯಲ್ಲಿ ಉಂಟಾದ ಯಾವುದೇ ಅನಾನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತದೆ. ಪ್ರಯಾಣಿಕರ ತಿಳಿಯ ಪಡಿಸಲು ಬಯಸುತ್ತಿದ್ದೇವೆ ಎಂಬುದಾಗಿ ತಿಳಿಸಿದೆ. ನಮ್ಮ ಬಿಎಂಟಿಸಿ ಅಪ್ಲಿಕೇಷನ್ ತಾತ್ಕಾಲಿಕವಾಗಿ ಸ್ಥಗಿತದಿಂದ ಏನೆಲ್ಲ ಅಲಭ್ಯತೆ.? 1. ಲೈವ್ ಬಸ್ ಟ್ರ್ಯಾಕಿಂಗ್ ಲಭ್ಯವಿರಲ್ಲ 2. ಜರ್ನಿ ಪ್ಲ್ಯಾನರ್ ಸಿಗಲ್ಲ 3. ಶುಲ್ಕ ಕ್ಯಾಲ್ಕುಲೇಟರ್ ಮಾಡೋಕೆ ಆಗಲ್ಲ. 4.…

Read More

ಬೆಂಗಳೂರು : ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯೂಸಿಯಾಗಿದ್ದೇನೆ ಎಂದರು. ಇದೇವೇಳೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ರಘುಮೂರ್ತಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕೂಡ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ.ಮೋಹನ್…

Read More

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು. 1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂದು ಕಡೆ ಅವರ ಕಡೆಯವರೇ ನೀಡುವ ಹಸುವನ್ನು ಕತ್ತರಿಸುತ್ತಾರೆ. ನನಗೀಗ…

Read More

ಪೋಷಕರು ತಮ್ಮ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಮಾಡುತ್ತಿರುತ್ತಾರೆ, ಭವಿಷ್ಯದಲ್ಲಿ ಉನ್ನತಿ ಹೊಂದಲಿ ಎಂದು ಬಯಸುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಪದೇಪದೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇದಕ್ಕಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದದಲ್ಲಿ ತಿಳಿಸಿರುವ ಸ್ವರ್ಣ ಪ್ರಾಶನ ಸಂಸ್ಕಾರ ಉತ್ತಮ ಆಯ್ಕೆಯಾಗಿದೆ. ಸ್ವರ್ಣಪ್ರಾಶನ ಎಂದರೇನು? ಸ್ವರ್ಣಪ್ರಾಶನವು ಆಯುರ್ವೇದದಲ್ಲಿ ವಿವರಿಸಲಾದ 16 ಸಂಸ್ಕಾರಗಳಲ್ಲಿ ಒಂದಾಗಿದೆ. ಅದು ಮಕ್ಕಳ ಸರ್ವತೋಮುಖವಾದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಶುದ್ಧೀಕರಿಸಿದ ಸ್ವರ್ಣವನ್ನು(ಚಿನ್ನ) ಇತರೆ ಔಷದ ದ್ರವ್ಯಗಳೊಂದಿಗೆ ಸೇವನೆಯೋಗ್ಯವಾದ ರೂಪದಲ್ಲಿ ತಯಾರಿಸಿ, ನಿರ್ದಿಷ್ಟ ದಿನದಂದು (ಪುಷ್ಯ ನಕ್ಷತ್ರ) ಅಥವಾ ನಿತ್ಯವೂ ಸೇವಿಸುವುದರಿಂದ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯವನ್ನು ಉತ್ತಮಗೊಳಿಸಬಹುದಾಗಿದೆ. ಸ್ವರ್ಣ ಪ್ರಾಶನದಿಂದ ಆಗುವ ಪ್ರಯೋಜನಗಳು ‌ಮಕ್ಕಳ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ‌ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ‌ಸೋಂಕುಗಳನ್ನು ತಡೆಗಟ್ಟುತ್ತದೆ – ಪದೇ ಪದೇ…

Read More

ಬೆಳಗಾವಿ: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ಎನ್ನುವುದೇ ಬಹುತೇಕರ ಕುತೂಹಲವಾಗಿದೆ. ಇದಕ್ಕೆ ರಾಜ್ಯ ಚುನಾವಣಾ ಆಯುಕ್ತರು ತೆರೆ ಎಳೆದಿದ್ದಾರೆ. ಏಪ್ರಿಲ್ ಒಳಗೆ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಡಿಸಿ ಕಚೇರಿಗೆ ಭೇಟಿ ನೀಡುತ್ತಿದ್ದೇನೆ. ಮತದಾರರ ಪಟ್ಟಿ ಲಭ್ಯವಾದ ತಕ್ಷಣ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸುವುದಾಗಿ ತಿಳಿಸಿದರು. ಇನ್ನೂ ಚುನಾವಣಾ ಆಯೋಗಕ್ಕೆ ಮೀಸಲಾತಿ ಪಟ್ಟಿ ಕೊಟ್ಟ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಪ್ರವೃತ್ತರಾಗಲಿದ್ದೇವೆ. ಎಲ್ಲಿ ಹೋದ್ರೂ ಜನರು ಚುನಾವಣೆ ಯಾವಾಗ ಅಂತ ಕೇಳುತ್ತಿದ್ದಾರೆ ಎಂದರು. ಏಪ್ರಿಲ್ ಒಳಗೆ ಚುನಾವಣೆ ನಡೆಸಿ ಅಧಿಕಾರ ಕೊಡಬೇಕೆಂದು ಕೊಂಡಿದ್ದೇವೆ ಎಂಬುದಾಗಿ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು ತಿಳಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಚುನಾವಣಾ ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮೀಸಲಾತಿ ಪಟ್ಟಿ ಕೈಸೇರುತ್ತಿದ್ದಂತೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಏಪ್ರಿಲ್ ಒಳಗೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆ…

Read More

ಬೆಳಗಾವಿ: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಏಪ್ರಿಲ್ ಒಳಗೆ, ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು. ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು. ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ…

Read More

ಬೆಂಗಳೂರು: ಸೋನಿಯಾ ಗಾಂಧಿ ಅವರು ಅಧಿಕಾರವನ್ನೇ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹೀಗಾಗಿ ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಅಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಇಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದಂತ ಅವರು, ದೇಶದ ಸ್ವಾತಂತ್ರ್ಯ ಹೋರಾಟ, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಮುಖ್ಯಮಂತ್ರಿಗಳು RSS ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ ಚರಿತ್ರೆಯನ್ನು ಸಭೆಯಲ್ಲಿ ಸ್ಮರಿಸಿದರು. ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ…

Read More