Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಸಂಕ್ರಾಂತಿ ಹಬ್ಬದ ಹಿನ್ನೆಲೆ ದಿನಾಂಕ: 14-01-2025 ರ ಮಂಗಳವಾರ ಸಹ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿ ಜ.14 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಇದರ ಸದುಪಯೋಗ ಪಡೆಯಬೇಕೆಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/shivamogga-anjani-tigress-found-dead-in-thyavarekoppa/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಶಿವಮೊಗ್ಗ : ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸುಮಾರು 17 ವರ್ಷದ ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ಜ.08 ರ ರಾತ್ರಿ ವಯೋಸಹಜವಾದ ಬಹು ಅಂಗಾAಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಮೃಗಾಲಯದ ಪಶು ವೈದ್ಯಾಧಿಕಾರಿಗಳು ತಿಳಿಸಿರುತ್ತಾರೆ. ಈ ಬಗ್ಗೆ ಕಾನೂನು ರೀತ್ಯಾ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯಕೀಯ ಕಾಲೇಜಿನ ಪಶು ವೈದ್ಯರ ತಂಡ ಜರುಗಿಸಿ, ಹುಲಿಯ ದೇಹವನ್ನು ವಿಲೇ ಮಾಡಲಾಗಿರುತ್ತದೆ ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/the-6th-edition-of-the-inter-state-hockey-cup-begins-in-bengaluru-from-today-with-20-teams-participating/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಚಿಕ್ಕಮಗಳೂರು: ನಗರದಲ್ಲಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜು ವತಿಯಿಂದ ಜ.9ರ ಗುರುವಾರ ಕನ್ನಡ ಸ್ನಾತಕೋತ್ತರ ಮತ್ತು ಸ್ನಾತಕ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ‘ವಿಶ್ವಮಾನವ ದಿನ ಆಚರಣೆ’ ಮತ್ತು ‘ಕುವೆಂಪು ಬದುಕು ಬರಹ ಕುರಿತ ವಿದ್ಯಾರ್ಥಿ ವಿಚಾರ ಸಂಕಿರಣ’ ಕಾರ್ಯಕ್ರಮವನ್ನು ನಡೆಸಲಾಯಿತು. ಪ್ರಾಂಶುಪಾಲರಾದ ಡಾ. ಪುಷ್ಟಭಾರತಿ ಆರ್.ಎ. ಅವರು ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು, ಕುವೆಂಪು ಎಂದರೇ ನಮಗೆ ಮೈ ರೋಮಾಂಚನವಾಗುತ್ತದೆ. ಕುವೆಂಪುವನ್ನು ಮತ್ತೆ ಮತ್ತೆ ಓದಲು ಅವರ ಚಿಂತನೆಗಳನ್ನು ಮರುಮನನ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶ. ಅದರಲ್ಲೂ ಈ ಕಾರ್ಯಕ್ರಮದಲ್ಲಿ ಕುವೆಂಪು ಬದುಕು-ಬರಹಗಳ ಅವಲೋಕನಕ್ಕೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ನನಗೆ ಹೆಚ್ಚು ಸಂತಸ ತಂದಿದೆ ಎಂದು ಅಭಿಪ್ರಾಯಪಟ್ಟರು. ಸುಮಾರು ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು “ಕುವೆಂಪು ಬದುಕು-ಬರಹ” ಕುರಿತು ತಮ್ಮ ಪ್ರಬಂಧಗಳನ್ನು ಮಂಡಿಸಿದರು. ಕುವೆಂಪುರವರ ಮಹಾಕಾವ್ಯ, ಎರಡು ಕಾದಂಬರಿಗಳು, ನಾಟಕಗಳು, ಕಥೆಗಳು, ಅವರ ಭಾಷಣ, ವಿಮರ್ಶೆ, ಮೀಮಾಂಸೆ…
ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ. ಕರ್ನಾಟಕ ಹಾಕಿ ಅಸೋಸಿಯೇಷನ್ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ. ಹಾಕಿ ಕಪ್ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ. ಇಂದಿನಿಂದ ಜನವರಿ 12ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ. ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ. ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್ ಪಿಳ್ಳೈ ವಿತರಿಸಲಿದ್ದಾರೆ. ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಆದಂತ ಸಂಪ್ರದಾಯ, ಆಚರಣೆಗಳ ಮೂಲಕ ಗುರ್ತಿಸಿಕೊಂಡಿರುವಂತ ಸಮುದಾಯ ಕಾಡುಗೊಲ್ಲ ಬುಡಕಟ್ಟು ಸಮುದಾಯವಾಗಿದೆ. ಈ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ ಹಲವು ದಿನಗಳ ಹಿಂದಿನದ್ದು. ಇಂದು ಮತ್ತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಈ ಒತ್ತಾಯವನ್ನು ಮಾಡಲಾಗಿದೆ. ಈ ವೇಳೆ ಮಾತನಾಡಿದಂತ ಎಂಎಲ್ಸಿ ನಾಗರಾಜ್ ಯಾದವ್ ಅವರು, ಈ ಜನಾಂಗ ಹಿಂದುಳಿದೆ. ಈ ಜನಾಂಗವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ನೀವೇ ಮುಂದಾಗಬೇಕು. ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸಲ್ಲಿಸುವ ಕೆಲಸವಾಗಬೇಕು. ಅಲೆ ಮಾರಿ ಪಟ್ಟಿಗೆ ಸೇರಿಸುವ ಕೆಲಸ ಆಗಬೇಕು. ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ಈ ಕೂಡಲೇ ಮಾಡಬೇಕು ಎಂದು ಆಗ್ರಹಿಸಿದರು. ಆ ಬಳಿಕ ಮಾತನಾಡಿದಂತ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಧ್ಯಕ್ಷರಾದಂತ ಸಿ.ಶಿವು ಯಾದವ್ ಮಾತನಾಡಿ, 2010ರಲ್ಲಿ ಕುಲಶಾಸ್ತ್ರ ಅಧ್ಯಯ ಮಾಡಿಸಿ, 2014ರಲ್ಲಿ ನಿಮ್ಮ ಸಚಿವ ಸಂಪುಟದ ಮುಂದೆ ತಂದು, ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದಕ್ಕಾಗಿ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ…
ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು. ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದರು. ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ…
ಧಾರವಾಡ: : 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ ರೂ.6.34 ಕೋಟಿ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ…
ಬೆಂಗಳೂರು: ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು. • ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. • ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ.…
ಕಾಂಚಿಪುರಂ : “ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿದರು. “400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ”ಎಂದು ತಿಳಿಸಿದರು. ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ “ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ…
ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಬಲಿಯಾದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗುರುವಾರ ಪ್ರಕಟಿಸಿದ್ದಾರೆ. ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ವಿಫಲವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವ ಮೂಲಕ ಸಿಎಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ತಿರುಪತಿಯ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ ಎಂದು ಸಿಎಂ ನಾಯ್ಡು ಕಾಲ್ತುಳಿತದ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಗಮ ಕಾರ್ಯಾಚರಣೆ ನಡೆಸಲು ವಿಫಲರಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ತಿರುಪತಿ ಎಸ್ಪಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಇನ್ನೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು. ಘಟನೆಯಿಂದ ತನಗೆ ನೋವಾಗಿದೆ ಎಂದು ಹೇಳಿದ ಆಂಧ್ರ ಸಿಎಂ, ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದರು. 33 ಮಂದಿ ಗಾಯಗೊಂಡಿದ್ದಾರೆ. ಅವರಿಗೆ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು…











