Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ (ಎಸ್ ಎಲ್ ಬಿ ಸಿ) ಯ ಅಧಿಕಾರಿಗಳೊಂದಿಗೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿಗೆ ತಾವು ಕೇಂದ್ರ ಸಚಿವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಪಡೆದ ಭರವಸೆಯಂತೆ ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು, ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಏರ್ಪಡಲಿದೆ. ಎಸ್ ಎಲ್ ಬಿ ಸಿ ಈ ನಿಟ್ಟಿನಲ್ಲಿ ಕೂಡಲೇ ತನ್ನ ಅಧೀನದ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದಿದ್ದಾರೆ. ಶೀಘ್ರದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆಯನ್ನು ಒದಗಿಸುವ ಮೂಲಕ ಬ್ಯಾಂಕುಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕುಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ ವಿವರವಾದ ಸೂಚನೆಗಳನ್ನು ನೀಡಲಾಗುತ್ತದೆ ಎಂದ ಡಾ.ಬಿಳಿಮಲೆ…
ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಪಾಕಿಸ್ತಾನಕ್ಕೆ ದೊಡ್ಡ ಹೊಡೆತವಾಗಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ ಕಾರ್ಯನಿರ್ವಾಹಕ ಆದೇಶದ ಮೂಲಕ ಯುನೈಟೆಡ್ ಸ್ಟೇಟ್ಸ್ ಸಹಾಯವನ್ನು ಸ್ಥಗಿತಗೊಳಿಸಿದೆ ಎಂದು ಕರಾಚಿಯಲ್ಲಿರುವ ಯುಎಸ್ ದೂತಾವಾಸದ ಅಧಿಕಾರಿಯನ್ನು ಉಲ್ಲೇಖಿಸಿ ಪಾಕಿಸ್ತಾನದ ಮಾಧ್ಯಮ ಜಿಯೋ ನ್ಯೂಸ್ ವರದಿ ಮಾಡಿದೆ. ಯಾವುದೇ ದೇಶವನ್ನು ಉಲ್ಲೇಖಿಸದೆ, ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ನ ವಕ್ತಾರ ಟಮ್ಮಿ ಬ್ರೂಸ್ ಕೂಡ ಈ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದಾರೆ. ಯಾವುದೇ ದೇಶವನ್ನು ಉಲ್ಲೇಖಿಸದೆ, ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ನ ವಕ್ತಾರ ಟಮ್ಮಿ ಬ್ರೂಸ್ ಕೂಡ ಈ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದಾರೆ. ಕಳೆದ 3-4 ವರ್ಷಗಳಿಂದ ಪಾಕಿಸ್ತಾನವು ಅಭೂತಪೂರ್ವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವುದರಿಂದ ದೊಡ್ಡ ಹೊಡೆತ ಬಿದ್ದಿದೆ. ಹಣದುಬ್ಬರವು ಶೇಕಡಾ 37 ಕ್ಕಿಂತ ಹೆಚ್ಚಾಗಿರುವುದರಿಂದ ನಾಗರಿಕರು ಮೂಲಭೂತ ಅಗತ್ಯಗಳಿಗಾಗಿ ಹೆಣಗಾಡುತ್ತಿದ್ದಾರೆ. “ಯುನೈಟೆಡ್ ಸ್ಟೇಟ್ಸ್ ವಿದೇಶಿ ನೆರವನ್ನು ಮರುಮೌಲ್ಯಮಾಪನ ಮಾಡುವ ಮತ್ತು ಮರುಹೊಂದಿಸುವ ಅಧ್ಯಕ್ಷ ಟ್ರಂಪ್ ಅವರ ಕಾರ್ಯನಿರ್ವಾಹಕ ಆದೇಶಕ್ಕೆ ಅನುಗುಣವಾಗಿ, ಕಾರ್ಯದರ್ಶಿ ರುಬಿಯೊ ಅವರು ಸ್ಟೇಟ್ ಡಿಪಾರ್ಟ್ಮೆಂಟ್ ಮತ್ತು ಯುಎಸ್ ಏಜೆನ್ಸಿ…
ಬೆಂಗಳೂರು : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು , ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ ಬ್ಯಾಕ್ ಲಾಗ್ ಹಾಗೂ…
ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ…
ಬೆಂಗಳೂರು: “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 30.01.2025 (ಗುರುವಾರ) ರಂದು ಬೆಳಗ್ಗೆ 11:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜ.30ರಂದು ಈ ಕೆಳಗಿನ ಪ್ರದೇಶಗಳಲ್ಲಿ ಪವರ್ ಕಟ್ ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್ ನಲ್ಲಿ ಕರೆಂಟ್ ಇರೋದಿಲ್ಲ. ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್,…
ರಾಮನಗರ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತತ್ ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಶಾಸಕರುಗಳಾದ ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್ ಅವರೊಂದಿಗೆ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ತಾವು ಸಚಿವರಾದ ತರುವಾಯ ರಾಮನಗರ ಜಿಲ್ಲೆಗೆ ಒಟ್ಟು 35 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು ಮಾಡಿದ್ದು, ಈಗಾಗಲೇ 25 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. 24 ಗಂಟೆ ಎಚ್ಚರಿಕೆ ವ್ಯವಸ್ಥೆ: ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ ವಿಭಾಗ 85 ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ ಮತ್ತು ಮಧ್ಯಮ ಸಂಘರ್ಷದ 40 ವಿಭಾಗಗಳಿವೆ…
ಬೆಂಗಳೂರು: ಜನವರಿ.30, 2025ರಂದು ಸರ್ವೋದಯ ದಿನದ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 30-01-2025 ಗುರುವಾರದಂದು “ಸರ್ವೋದಯ ದಿನ “ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ. https://kannadanewsnow.com/kannada/new-delhi-covid-19-cases-in-maharashtra-rises-to-111-gbs-number-of-infected-people-rises-to-111/ https://kannadanewsnow.com/kannada/are-there-cockroaches-lizards-and-ants-in-your-house-just-do-this-elimination-is-guaranteed/
ನವದೆಹಲಿ: ಮಹಾರಾಷ್ಟ್ರದಲ್ಲಿ ಜನರಲ್ಲಿ ಆತಂಕವನ್ನು ಹೊಸ ಡೆಡ್ಲಿ ಸೋಂಕು ಜಿಬಿಎಸ್ ಸೃಷ್ಠಿಸಿದೆ. ದಿನೇ ದಿನೇ ಈ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪುಣೆಯ 41 ವರ್ಷದ ಚಾರ್ಟರ್ ಅಕೌಂಟೆಂಟ್ ಗೂ ಜಿಪಿಎಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಚಾಲ್ತಿಯಲ್ಲಿರುವ ಗುಲ್ಲೆನ್-ಬ್ಯಾರಿ ಸಿಂಡ್ರೋಮ್ (Guillain-Baree Syndrome – GBS) ಪ್ರಕರಣಗಳ ಮಧ್ಯೆ, ಪಶ್ಚಿಮ ಬಂಗಾಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಹೇಳಿಕೆ ನೀಡಿದ್ದು, ಡಿಸೆಂಬರ್ ಅಂತ್ಯದಿಂದ ಇಲ್ಲಿಯವರೆಗೆ ಪಶ್ಚಿಮ ಬಂಗಾಳದಲ್ಲಿ ಜಿಬಿಎಸ್ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಹೇಳಿದೆ. “ಗುಲ್ಲೆನ್-ಬ್ಯಾರಿ ಸಿಂಡ್ರೋಮ್ ಹೊಸ ಅಥವಾ ಅಪರೂಪದ ರೀತಿಯ ಕಾಯಿಲೆಯಲ್ಲ. ನಮ್ಮ ದೇಶ ಮತ್ತು ರಾಜ್ಯದಲ್ಲಿ ವಿರಳ ಪ್ರಕರಣಗಳು ಸಂಭವಿಸುತ್ತಲೇ ಇವೆ. ಇದು ತೀವ್ರವಾದ ಫ್ಲಾಸಿಡ್ ಪಾರ್ಶ್ವವಾಯುವಿಗೆ (ಎಎಫ್ಪಿ) ಕಾರಣವಾಗುವ ರೋಗಗಳಲ್ಲಿ ಒಂದಾಗಿದೆ. ಇದನ್ನು ಪೋಲಿಯೊ ಕಣ್ಗಾವಲಿನ ಭಾಗವಾಗಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತದೆ. ಡಿಸೆಂಬರ್ ಅಂತ್ಯದಿಂದ ಇಲ್ಲಿಯವರೆಗೆ ಪಶ್ಚಿಮ ಬಂಗಾಳದಲ್ಲಿ ಎಎಫ್ಪಿ…
ಬೆಂಗಳೂರು: “ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ. ಶಿವಕುಮಾರ್ ಅವರು, ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “2014 ರಿಂದ ಇಲ್ಲಿಯ ತನಕ ಅಂದರೆ 11 ವರ್ಷಗಳಿಂದ ನಗರದಲ್ಲಿ ನೀರಿನ ಬಿಲ್ ಅನ್ನು ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬಿಡ್ಬ್ಯೂಎಸ್ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿಯಾಗುತ್ತಿತ್ತು. ಈ ಬಾರಿ 75 ಕೋಟಿಯಾಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ…
ಬೆಂಗಳೂರು: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಜನರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಅದೇ ನೇಮಕಾತಿ ಸಂಬಂಧ ಮಹತ್ವದ ಬದಲಾವಣೆಯ ನಿರ್ಧಾರವನ್ನು ಕೈಗೊಂಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಅಂತ ಸೂಚಿಸಿದರು. ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂದರು. ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ…








