Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆ, ಟ್ರಸ್ಟ್, ಕಂಪನಿ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಇತರ ಆಸ್ತಕರು ನಿಗಧಿತ ಅರ್ಜಿ ನಮೂನೆಗಳಲ್ಲಿ ಏಪ್ರೀಲ್ 30, 2025 ರೊಳಗಾಗಿ https://pue.karnataka.gov.in/ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದು. ಮೇ 1, 2025 ರ ನಂತರ ಸಲ್ಲಿಸಿದ ಪ್ರಸ್ತಾವನೆಗಳನ್ನು 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದಿಲ್ಲಾ. ಇಂತಹ ಪ್ರಸ್ತಾವನೆಗಳನ್ನು ಪರಿಶೀಲಿಸಿ ನಿಯಾಮಾನುಸಾರ ಇದ್ದಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪರಿಗಣಿಸಲಾಗುವುದು. https://dpue-pragathi.karnataka.gov.in/newcollege2025 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಎದುರು, ಕಾಲೇಜು ರಸ್ತೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕೆಂದು…
ನವದೆಹಲಿ: ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾಗಿ ಶುಭಾಶಯ ಕೋರಿ, ಆಶೀರ್ವಾದ ಪಡೆದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು ಎಂದಿದ್ದಾರೆ. ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಮಾನ್ಯ ಅಮಿತ್ ಶಾ ಜೀ ಯವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ…
ಬಳ್ಳಾರಿ : ಕುರುಗೋಡು ಜೆಸ್ಕಾಂ ವ್ಯಾಪ್ತಿಯ ಬಾದನಹಟ್ಟಿ ಶಾಲೆಯ ಮೇಲೆ ಹಾದು ಹೋಗುವ ಅಪಾಯಕಾರಿ 110ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/33/11 ಕೆವಿ ಕುರುಗೊಡು ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ವಿವಿಧ 11ಕೆ.ವಿ ಮಾರ್ಗಗಳಲ್ಲಿ ಜ.03 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಕುರುಗೋಡು ಅರ್ಬನ್ ಮಾರ್ಗದ ಉಜ್ಜಲ್ಪೇಟೆ, ನೀಲಮ್ಮನ ಮಠ, ಸುಣ್ಣದ ಬಟ್ಟಿ, ಇಂದಿರಾನಗರ, ಬಳ್ಳಾರಿ ರಸ್ತೆ, ಸೂರ್ಯ ನಾರಾಯಣ ರೆಡ್ಡಿ ಕಾಲೋನಿ, ಬಾದನಹಟ್ಟಿ ರಸ್ತೆ, ಹರಿಕೃಪಾ ಕಾಲೋನಿ, ಸದಾಶಿವ ನಗರ, ಗೌಡರ ಓಣಿ. ಎಫ್-2 ಗೆಣಿಕೆಹಾಳ್ ಐಪಿ ಫೀಡರ್ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಬಸವಪುರ, ಅನ್ನಪೂರ್ಣೇಶ್ವರಿ ಕ್ಯಾಂಪ್, ವದ್ದಟ್ಟಿ ಕ್ರಾಸ್ ಗ್ರಾಮಗಳು. ಎಫ್-3 ಕಲ್ಲುಕಂಬ ಐಪಿ ಫೀಡರ್ ಮಾರ್ಗದ ಯಲ್ಲಾಪುರ ಕ್ರಾಸ್, ಮಾರುತಿ ಕ್ಯಾಂಪ್, ಶ್ರೀನಿವಾಸ ಕ್ಯಾಂಪ್, ಲಕ್ಷ್ಮೀ ಪುರ, ಕಲ್ಲುಕಂಭ, ಕೆರೆಕೆರೆ, ಮುಷ್ಟಗಟ್ಟ ಗ್ರಾಮಗಳು. ಎಫ್-4 ಹೆಚ್.ವೀರಾಪುರ ಎನ್.ಜೆ.ವೈ…
ಶಿವಮೊಗ್ಗ: ಕಾಮಗಾರಿ ನಡೆಸಿದ್ದಂತ ಬಾಕಿ ಬಿಲ್ ಬಿಡುಗಡೆಗಾಗಿ 1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಕರ್ನಾಟಕ ನಿರಾವರಿ ನಿಗಮದ ಸೆಕ್ಷನ್ ಆಫೀಸರ್, ಲೈಟ್ ಮಜದೂರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದಲ್ಲಿ ಕರ್ನಾಟಕ ನಿರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತ, ಬಿಆರ್ ಪಿ ವ್ಯಾಪ್ತಿಯ ಭದ್ರಾವತಿ ತಾಲ್ಲೂಕು ಗೋಂಧಿ ಬಲದಂಡೆ ನಾಲೆಯ ಶೀಲ್ಡ್ ತೆಗೆಯಲು ಇ-ಟೆಂಡರ್ ಪಡೆದು, 2023ರಲ್ಲಿ ಡಿಸೆಂಬರ್ ನಲ್ಲಿ ಗುತ್ತಿಗೆದಾರ ವಿ.ರವಿ ಎಂಬುವರು ಪಡೆದಿದ್ದರು. 2023ರ ಡಿಸೆಂಬರ್ ನಲ್ಲೇ ಕೆಲಸ ಪ್ರಾರಂಭಿಸಿ 2024ರ ಜನವರಿಗೆ ಕಾಮಗಾರಿ ಮುಕ್ತಾಯಗೊಳಿಸಿದ್ದರು. ಆದರೇ ಬಾಕಿ ಬಿಲ್ ಪಾವತಿ ಮಾಡಿರಲಿಲ್ಲ. ದಿನಾಂಕ 27-12-2024ರಂದು ಡಿಬಿ ಹಳ್ಳಿಯ ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಚೇರಿಗೆ ಹೋಗಿ, ಕಚೇರಿಯಲ್ಲಿದ್ದಂತ ಸೆಕ್ಷನ್ ಆಫೀಸರ್ ಕೊಟ್ರಪ್ಪ.ಟಿ ಭೇಟಿ ಮಾಡಿ, ಮಂಜೂರು ಮಾಡುವಂತೆ ಕೋರಿದ್ದರು. ಸೆಕ್ಷನ್ ಆಫೀಸರ್ ಬಾಕಿ ಕಾಮಗಾರಿ ಬಿಲ್ ಬಿಡುಗಡೆಗೆ 1.20 ಲಕ್ಷ ಲಂಚಕ್ಕೆ ಭೇಡಿಕೆ ಇಟ್ಟಿದ್ದರು. ಇದನ್ನು ಗುತ್ತಿಗೆದಾರ ರವಿ ವಾಯ್ಸ್ ರೆಕಾರ್ಡ್ ಮಾಡಿಕೊಂಡು ದಾಖಲೆ ಸಹಿತ…
ಬಳ್ಳಾರಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್ಗಾರ್ ಮೇಳ ಅಡಿ ಜ.03 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ರಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-farmers-in-the-state-details-of-rabi-crop-survey-allowed-to-be-recorded-through-mobile-app/ https://kannadanewsnow.com/kannada/hubballi-miscreants-stab-yuka-to-death-on-new-years-day/
ಬಳ್ಳಾರಿ : ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಿ, ಬೆಳೆಯ ನಿಖರ ಮಾಹಿತಿ ನಮೂದು ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು: ರೈತರು ತಮ್ಮ ಮೊಬೈಲ್ನಲ್ಲಿ ಗೂಗಲ್ ಪ್ಲೇ-ಸ್ಟೋರ್ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ “ಫಾರ್ಮರ್ ಆಪ್ ಕ್ರಾಪ್ ಸರ್ವೇ ರಬಿ 2024” (Farmer App Crop Survey Rabi 2024) ಆಪ್ನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 242520 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ಮೊಬೈಲ್ ಆಪ್ನಲ್ಲಿ ಜಿಯೋ ರೆಫೆರೆನ್ಸ್ಡ್ ಅಂಡ್…
ರಾಜ್ಯದ PU ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್, ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೊತ್ತರ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜ.10 ರ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರAಶದ https;//shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8277799990 (24×7) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/hubballi-miscreants-stab-yuka-to-death-on-new-years-day/ https://kannadanewsnow.com/kannada/sagarotsava-2025-to-be-held-at-sagar-on-jan-5-bhoomanni-basket-competition-miracle-show-to-be-held/
ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೊಸ ವರ್ಷದ ದಿನವೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಹಾಡ ಹಗಲೇ ಯುಕವನೊಬ್ಬನಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಇಂದು ಹಾಡ ಹಗಲೇ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಆ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದೆ. ಚಾಕು ಇರಿತಕ್ಕೆ ಒಳಗಾದಿದ್ದಂತ ಮಾರುತಿ ಎಂಬ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-government-announces-development-and-environmental-journalism-awards-for-2017-to-2023/ https://kannadanewsnow.com/kannada/mother-four-sisters-murder-arshad-wanted-to-become-hindu/
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ. ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ವಿಜೇತರ ವಿವರ ಹೀಗಿದೆ… ವಿಜಯಲಕ್ಷ್ಮಿ ಶಿಬರೂರು (2017) : ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ…
ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪಿಹೆಚ್ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನಲ್ಲಿ ಪ್ರಥಮ ಪೂರ್ಣಾವಧಿ ಪಿಎಚ್ಡಿ ಅಧ್ಯಯನಲ್ಲಿ ಪ್ರಾರಂಭಿಸಿರುವ (ಜ. 10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್ಡಿ ಪ್ರಾರಂಭಿಸಿರಬೇಕು) ಹಾಗೂ ಕರ್ನಾಟಕ ಶಾಸನ ಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಜ.20 ಕಡೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಆನ್ಲೈನ್ ಅರ್ಜಿ ಪ್ರತಿಯೊಂದಿಗೆ ಒಂದು ಸೆಟ್ ಅಧಿಕೃತ ದಾಖಲೆಗಳನ್ನು ಸಂಬAಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ https://www.bcwd.karnataka.gov.in , ಸಹಾಯವಾಣಿ : 8050770004 ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ…










