Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ ; 2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನ.15ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. https://kannadanewsnow.com/kannada/good-news-for-passengers-special-train-service-between-bengaluru-and-barauni/ https://kannadanewsnow.com/kannada/bengaluru-minister-ishwar-khandre-orders-legal-action-against-those-who-felled-trees-on-hmt-forest-land/
ಬೆಂಗಳೂರು: ಛತ್ ಪೂಜೆಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ – ಬಿಹಾರ ರಾಜ್ಯದ ಬರೌನಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06237/06238 ಎಸ್ಎಂವಿಟಿ ಬೆಂಗಳೂರು-ಬರೌನಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್) ನವೆಂಬರ್ 4 ರಂದು ರೈಲು ಸಂಖ್ಯೆ 06237 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಬರೌನಿ ನಿಲ್ದಾಣಕ್ಕೆ ನವೆಂಬರ್ 6 ರಂದು ರಾತ್ರಿ 8 ಗಂಟೆಗೆ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ನವೆಂಬರ್ 9 ರಂದು ರೈಲು ಸಂಖ್ಯೆ 06238 ಬರೌನಿಯಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಕ್ಕೆ ನವೆಂಬರ್ 11 ರಂದು ಮಧ್ಯಾಹ್ನ 1:30 ಗಂಟೆಗೆ ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಧರ್ಮಾವರಂ, ಅನಂತಪುರ, ಡೋನ್, ಕರ್ನೂಲ್ ಸಿಟಿ, ಮಹಬೂಬ್ನಗರ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹೆಚ್ ಎಂ ಟಿ ವಶಪಡಿಸಿಕೊಂಡಿದ್ದಂತ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಇನ್ನೂ ಅರಣ್ಯಭೂಮಿ ಇದ್ದು, ಅದರಲ್ಲಿನ ಮರಗಳನ್ನು ಅನುಮತಿಯಿಲ್ಲದೇ ಅಕ್ರಮವಾಗಿ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಈ ಕುರಿತಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದು, ಇದನ್ನು 1960ರ ದಶಕದಲ್ಲಿ ಡಿನೋಟಿಫಿಕೇಷನ್ ಮಾಡದೆ ಕಾನೂನು ಬಾಹಿರವಾಗಿ ಎಚ್.ಎಂ.ಟಿ. ಸಂಸ್ಥೆಗೆ ದಾನ, ಮಂಜೂರು ಹೆಸರಲ್ಲಿ ಹಸ್ತಾಂತರಿಸಲಾಗಿರುತ್ತದೆ. ಸುಪ್ರೀಂಕೋರ್ಟ್ ‘Once a forest is always a forest unless de-notified’ ಎಂದು ಹೇಳಿದ್ದು, ಡಿ ನೋಟಿಫಿಕೇಷನ್ ಆಗದ ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯವೇ ಆಗಿರುತ್ತದ. ಜೊತೆಗೆ ತನ್ನ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ…
ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ, ಸೋಮವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅ.30 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವ ಇದ್ದು, ಅದನ್ನು ಬಲಪಡಿಸುವತ್ತ ಗಮನಹರಿಸಬೇಕು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಎಂದು ಹೇಳಿದರು. ನಗರದ ಜಿಪಂ ನ ಹಳೆಯ ನಜೀರ್ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದವು ಪುರಾತನ ಕಾಲದಿಂದಲೂ ಮಹತ್ವ ಪಡೆದುಕೊಂಡಿದೆ. ಪರಿಸರದಲ್ಲಿ ದೊರೆಯುವ…
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ. ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ…
ಬೆಂಗಳೂರು: ಕಲಾವಿದರು ಮತ್ತು ಕಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. https://twitter.com/KarnatakaVarthe/status/1851205699906515185 ಇನ್ನೂ ಕಲಾವಿದರು ಮತ್ತು ಕಲೆಗಳಿಗೆ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಶಾಸನದ ಮೊತ್ತವನ್ನ 3,000ಕ್ಕೆ ಹೆಚ್ಚಿಸಲಾಗುತ್ತದೆ. ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ಒಂದು ಕೋಟಿಯವರೆಗೂ ಅನುದಾನವನ್ನು ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅಗತ್ಯದ ಅನುದಾನ ನೀಡಲಾಗುತ್ತಿದೆ. ಈ ಮೂಲಕ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು. ಕಳೆದ ಸರ್ಕಾರದಲ್ಲಿ ಅಕಾಡೆಮಿ – ಪ್ರಾಧಿಕಾರ ನಿಷ್ಕ್ರಿಯ ಇಂದಿನ ಸರ್ಕಾರದಲ್ಲಿ ಅಕಾಡೆಮಿಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ…
ಬೆಂಗಳೂರು: ನಗರದ ಸಿಸಿಹೆಚ್ ನ್ಯಾಯಾಲಯದಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೀಗಾಗಿ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ನಾಳೆಗೆ ಮಧ್ಯಂತರ ಜಾಮೀನು ಆದೇಶ ಪ್ರಕಟಿಸುವುದಾಗಿ ತೀರ್ಪು ಕಾಯ್ದರಿಸಿದೆ. ಹೀಗಾಗಿ ದೀಪಾವಳಿ ಹಬ್ಬಕ್ಕಾದರೂ ದಾಸನಿಗೆ ಸಿಗುತ್ತಾ ರಿಲೀಫಅ ಅನ್ನೋದನ್ನು ಕಾದು ನೋಡಬೇಕಿದೆ. ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ನ್ಯಾಯಪೀಠವು ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ನಾಗೇಶ್ ಅವರು ವಾದಿಸಿ, ಅನಾರೋಗ್ಯದ ಕಾರಣದಿಂದ, ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿದರು. ಇದಕ್ಕೆ ಪ್ರತಿಯಾಗಿ ವಾದಿಸಿದಂತ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು, ಅನಾರೋಗ್ಯದ ಕಾರಣದಿಂದ ಜಾಮೀನು ನೀಡುವುದಕ್ಕೆ ಆಕ್ಷೇಪಿಸಿದರು. ಅಲ್ಲದೇ ಮೆಡಿಕಲ್ ಬೋರ್ಡ್ ರಚಿಸಿ, ಅಲ್ಲಿ ತೀರ್ಮಾನಿಸಿ ನಿರ್ಧಾರ ಪ್ರಕಟಿಸುವಂತೆ ನ್ಯಾಯಪೀಠದ ಗಮನಕ್ಕೆ ತಂದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಟ ದರ್ಶನ್…
ಬೆಂಗಳೂರು: BBMP ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ನಂತ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿಯಲ್ಲಿ 1,02,41,226 ಮತದಾರರಿದ್ದಾರೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಕಾರ್ಯಚಟುವಟಿಕೆಗಳ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ಪ್ರಕಟಿಸಿದ ಬಳಿಕ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯಲ್ಲಿ 1,02,41,226 ಮತದಾರರಿದ್ದು, ಈ ಪೈಕಿ 52,69,188 ಪುರುಷರು, 49,70,207 ಮಹಿಳೆಯರು ಹಾಗೂ 1,831 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಹೇಳಿದರು. ಮತದಾರರ ಕರಡು ಪ್ರತಿಯನ್ನು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ರವರ ವೆಬ್ಸೈಟ್ www.ceokarnataka.kar.nic.in ಮತ್ತು…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ನಡೆಸಲಾಯಿತು. ಇಂದು ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು ನಟ ದರ್ಶನ್ ಮಧ್ಯಂತರ ಜಾಮೀನು ಆದೇಶದ ತೀರ್ಪನ್ನು ನಾಳೆಗೆ ಕಾಯ್ದಿರಿಸಿತು. ಇಂದು ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿ, ಅನಾರೋಗ್ಯದ ಸಂದರ್ಭದಲ್ಲಿ ಹೈಕೋರ್ಟ್ ಕೂಡ ಜಾಮೀನು ಮಂಜೂರು ಮಾಡಿದೆ ಎಂಬುದಾಗಿ ವಿವಿಧ ಪ್ರಕರಣಗಳನ್ನು ಉಲ್ಲೇಘಿಸಿದರು. ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ವೈದ್ಯರು ಶಸ್ತ್ರ ಚಿಕಿತ್ಸೆಗೆ ಸೂಚಿಸಿದ್ದಾರೆ. ಶಸ್ತ್ರ ಚಿಕಿತ್ಸೆಯ ನಂತ್ರ ಕಾಲು ಸ್ವಾಧೀನವಾದರೂ ಆಗಬಹುದು. ಮೂತ್ರ ವಿಸರ್ಜನೆ ನಿಯಂತ್ರಣಕ್ಕೂ ಕಷ್ಟವಾಗಬಹುದು. ಹೀಗಾಗಿ ಸ್ವ ಕೆಲಸಗಳನ್ನು ಮಾಡಿಕೊಳ್ಳಲು ಕಷ್ಟವಾಗಲಿದೆ. ಅವರಿಗೆ ಉತ್ತಮ ಚಿಕಿತ್ಸೆಯ ಅಗತ್ಯವಿದೆ. ಈ ಕಾರಣಕ್ಕೆ ಜಾಮೀನು…
ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದ್ದು, ಈ ಸಂಬಂಧ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಾದಿಗ ಸಮುದಾಯಕ್ಕೆ ಒಳಮೀಸಲು ಆದಷ್ಟು ಶೀಘ್ರ ಜಾರಿಗೆ ತರಬೇಕು ಎಂದು ಮಾಜಿ ಸಚಿವರಾದ ಎಚ್ ಆಂಜನೇಯ, ಶಿವಣ್ಣ, ರಾಜ್ಯಸಭೆ ಸದಸ್ಯ ಎಲ್ ಹನುಮಂತಯ್ಯ, ಮಾಜಿ ಸಂಸದ ಚಂದ್ರಪ್ಪ ಅವರ ನೇತೃತ್ವದ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಸಮಿತಿಗೆ ಮೂರು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ನೀಡಬಾರದು. ಮೂರು ತಿಂಗಳ ನಂತರ ಶೀಘ್ರ ಒಳಮೀಸಲಾತಿ ಜಾರಿಯಾಗಬೇಕು ಎಂದು ನಿಯೋಗವು ಉಪಮುಖ್ಯಮಂತ್ರಿಗಳ ಬಳಿ ಮನವಿ ಮಾಡಿತು. ನಂತರ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ವಿಚಾರವಾಗಿ…